ನಿಜ ಶರಣ ಅಂಬಿಗರ ಚೌಡಯ್ಯನವರು / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.
ಕಲ್ಲದೇವರ ಪೂಜೆಯ ಮಾಡಿ, ಕಲಿಯುಗ[ದ]ಕತ್ತೆಗಳಾಗಿ ಹುಟ್ಟಿದರು.ಮಣ್ಣದೇವರ ಪೂಜಿಸಿ ಮಾನಹೀನರಾದರು.ಮರನ ದೇವರೆಂದು ಪೂಜಿಸಿ ಮಣ್ಣ ಕೂಡಿದರು.[ಇಂತಪ್ಪ] ದೇವರ ಪೂಜಿಸಿ ಸ್ವರ್ಗಕ್ಕೇರದೆ ಹೋದರು!ಜಗದ್ಭರಿತವಾದ ಪರಶಿವನೊಳಗೆ ಕಿಂಕರನಾದಶಿವಭಕ್ತನೆ ಶ್ರೇಷ್ಠನೆಂದಾತ ನಮ್ಮ ಅಂಬಿಗರ ಚೌಡಯ್ಯ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-40/ವಚನ ಸಂಖ್ಯೆ-98) ಅಂಬಿಗರ ಚೌಡಯ್ಯ 12 ನೇ ಶತಮಾನದ ಬಸವಣ್ಣನವರ ಅನುಯಾಯಿ ಸಾವಿರಾರು ವರ್ಷಗಳಿಂದ ಧರ್ಮ–ದೇವರುಗಳ ಬಗ್ಗೆ ಸಮಾಜದಲ್ಲಿ ಬೇರೊರಿಂದ್ದ ಮೂಢ ನಂಬಿಕೆಗಳನ್ನೆಲ್ಲ ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯನವರು ಹೊಡೆದೊಡಿಸಲು ಪ್ರಯತ್ನ ಮಾಡುತ್ತ ವಿಚಾರ ಪರವಾದ ಮತ್ತು ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮಾಡಿಸಲು ಶ್ರಮಪಟ್ಟರು. ಧರ್ಮ–ದೇವರು ಕೇವಲ ಶ್ರೀಮಂತರ ಸೊತ್ತಾಗಿದ್ದ ಅಂದಿನ ಸಂದರ್ಭದಲ್ಲಿ ಪೂಜೆ–ಮೋಕ್ಷ…