ಚಿನ್ಮಯಜ್ಞಾನಿ ಚನ್ನಬಸವಣ್ಣನವರು./ಡಾ. ವಿಜಯಕುಮಾರ ಕಮ್ಮಾರ.
ಕಂಗಳ ನೋಟ ಹೃದಯದ ಜ್ಞಾನ,ಮನದೊಳಗೆ ಮಾತನಾಡುತಿರ್ದೆನಯ್ಯಾ!ಜೇನ ಮಳೆಗಳು ಕರೆದವು,ಅಮೃತದ ಬಿಂದುಗಳು ಸುರಿದವು.ಕೂಡಲಚೆನ್ನಸಂಗನೆಂಬರಸಸಾಗರದೊಳಗೋಲಾಡುತಿರ್ದೆನಯ್ಯಾ.(ಸಮಗ್ರ ವಚನ ಸಂಪುಟ: ಮೂರು-2021/ಪುಟ ಸಂಖ್ಯೆ-507/ವಚನ ಸಂಖ್ಯೆ-1111) 12 ನೇಯ ಶತಮಾನದಲ್ಲಿ ಅದ್ಭುತವಾದ ಸಾಮಾಜಿಕ, ಆರ್ಥಿಕ, ಆಧ್ಯಾತ್ಮಿಕ ಕ್ರಾಂತಿಯೊಂದು ನಡೆಯಿತು. ಈ ಕ್ರಾಂತಿಯನ್ನು ಹುಟ್ಟುಹಾಕಿದವರು ಬಸವಣ್ಣನವರು. ಬಸವಣ್ಣನವರು ನಡೆ-ನುಡಿ ಸಿದ್ಧಾಂತಕ್ಕೆ ಶಕ್ತಿಯಾದರೆ, ಅಲ್ಲಮಪ್ರಭುದೇವರು ಜ್ಞಾನ ವೈರಾಗ್ಯಕ್ಕೆ ಶಕ್ತಿಯಾದರು. ಬಸವಣ್ಣನವರ ಸೋದರಳಿಯ ಚನ್ನಬಸವಣ್ಣನವರು ಅರಿವಿನ ಜ್ಞಾನಕ್ಕೆ ಭಾಷ್ಯವಾಗಿ ಜೀವಿಸಿದರು. ಬಸವಣ್ಣ, ಚನ್ನಬಸವಣ್ಣ, ಅಲ್ಲಮ ಪ್ರಭುಗಳು ಶರಣ ಸಂಸ್ಕೃತಿಯ ಮೂರು ಮುಖ್ಯ ಅಂಗಗಳಾಗಿ ಕೈಂಕರ್ಯಗೊಳ್ಳುತ್ತಾರೆ. ಬಸವಣ್ಣನವರು ಸಾಮಾಜಿಕ ಪರಿವರ್ತನೆಗೆ ಒತ್ತುಕೊಟ್ಟರೆ, ಅಲ್ಲಮರು ಆಧ್ಯಾತ್ಮಿಕ ಚಿಂತನೆಗೆ ಒತ್ತುಕೊಟ್ಟರು. ಚನ್ನಬಸವಣ್ಣನವರು ಲಿಂಗಾಯತ…