ಅಲ್ಲಮಪ್ರಭುಗಳ “ಹುಲಿಯ ಬೆನ್ನಲ್ಲಿ ಒಂದು ಹುಲ್ಲೆ” ವಚನ ವಿಶ್ಲೇಷಣೆ / ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ಹುಲಿಯ ಬೆನ್ನಲ್ಲಿ ಒಂದು ಹುಲ್ಲೆ ಹೋಗಿ,ಮೇದು ಬಂದೆನೆಂದಡೆ,ಇದ ಕಂಡು ಬೆರಗಾದೆ.ರಕ್ಕಸಿಯ ಮನೆಗೆ ಹೋಗಿ ನಿದ್ರೆಗೈದು ಬಂದೆನೆಂದಡೆ,ಇದ ಕಂಡು ಬೆರಗಾದೆ.ಜವನ ಮನೆಗೆ ಹೋಗಿ ಸಾಯದೆ ಬದುಕಿ ಬಂದೆನೆಂದಡೆ,ಇದ ಕಂಡು ಬೆರಗಾದೆ, ಗುಹೇಶ್ವರಾ(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-14/ವಚನ ಸಂಖ್ಯೆ-27) ಅಲ್ಲಮಪ್ರಭುಗಳ ಈ ಬೆಡಗಿನ ವಚನ ಮನುಷ್ಯ ಸ್ವಭಾವದ ಒಳ ಸೂಕ್ಷ್ಮತೆಗಳನ್ನು ಸ್ವಾರಸ್ಯಕರ ಮತ್ತು ಪರಿಣಾಮಕಾರಿಯಾಗಿ ಬಿಂಬಿಸುತ್ತದೆ. ಅಜ್ಞಾನದಲ್ಲಿ ಓಲಾಡುವ ಮನಸ್ಸಿಗೆ ಎಚ್ಚರಿಕೆ ಕೊಡುವ ಸಮರ್ಥನೆಯಾಗಿದೆ. ಆಧ್ಯಾತ್ಮದ ಬೆಳಕನ್ನು ಉಜ್ವಲಗೊಳಿಸುವ ಸಮರ್ಥನೆಯದು. ಅಂದಿನ ಧಾರ್ಮಿಕ ಮತ್ತು ಸಾಮಾಜಿಕ ಸನ್ನಿವೇಶಗಳು ಆ ಕಾಲದ ತಾತ್ವಿಕ ಪರಂಪರೆಗಳ ಅಸ್ತಿತ್ವ ಮತ್ತು ಅನಿರೀಕ್ಷಿತವಾದ ನಿಗೂಢತೆ…