ಬೆಳಗಾವಿ ಜಿಲ್ಲೆಯಲ್ಲಿ ಶರಣರ ಹೆಜ್ಜೆ ಗುರುತುಗಳು / ಪ್ರಕಾಶ ಗಿರಿಮಲ್ಲನವರ, ಬೆಳಗಾವಿ.
ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶಿವಶರಣರು ಮಾಡಿದ ಕ್ರಾಂತಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಿಂದ ಬರೆಯಲ್ಪಟ್ಟಿದೆ. ಬಸವಣ್ಣನವರು ಸರ್ವಸಮಾನತೆ, ಕಾಯಕ, ದಾಸೋಹ ತತ್ವಗಳ ಮೂಲಕ ಸರ್ವಾಂಗ ಸುಂದರ ಸಮಾಜ ನಿರ್ಮಾಣಕ್ಕಾಗಿ ಮಾಡಿದ ಈ ಕ್ರಾಂತಿ ಮನುಕುಲದ ಏಕತೆಗಾಗಿ ನಡೆದ ಮೊದಲ ಪ್ರಯತ್ನವಾಗಿದೆ. ಸಾವಿರಾರು ವರ್ಷಗಳಿಂದ ಶೋಷಿತ, ದಮನಿತ ಸಮುದಾಯಕ್ಕೆ ಧ್ವನಿಯನ್ನು ಕೊಟ್ಟ ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ. ಬಸವಣ್ಣನವರ ಕೀರ್ತಿ, ವಾರ್ತೆಗಳನ್ನು ಕೇಳಿ ಕಾಶ್ಮೀರದಿಂದ, ಗುಜರಾತದಿಂದ, ದೂರದ ಕಂದಹಾರದಿಂದ, ಮಹಾರಾಷ್ಟ್ರದಿಂದ ಹೀಗೆ ದೇಶ-ವಿದೇಶಗಳಿಂದ ಅಭಿಮಾನಿ ಶರಣರು ಕಲ್ಯಾಣಕ್ಕೆ ಬಂದರು. ಕಲ್ಯಾಣ ಪಟ್ಟಣ ಭೂ ಕೈಲಾಸವಾಯಿತು. ಬಸವಣ್ಣನವರು ಸ್ಥಾಪಿಸಿದ “ಅನುಭವ ಮಂಟಪ” ಜಗತ್ತಿನ ಮೊಟ್ಟ…