440 ಜಂಗಮರ ಶಿರಚ್ಛೇಧನಕ್ಕೆ ವೀರಶೈವ ಜೋಡಣೆ | ಮೈಸೂರಿನ ಹತ್ಯಾಕಾಂಡ ಸಾರುವ ನಂಜನಗೂಡಿನ ಶಿರೋಭಾವಿ | ಡಾ. ಸತೀಶ ಕೆ.  ಇಟಗಿ, ಮುದ್ದೇಬಿಹಾಳ.

ನಚ್ಚಿದೆನೆಂದಡೆ ಮಚ್ಚಿದೆನೆಂದಡೆ,ಸಲೆ ಮಾರುವೋದೆನೆಂದಡೆತನುವನಲ್ಲಾಡಿಸಿ ನೋಡುವೆ ನೀನು.ಮನವನಲ್ಲಾಡಿಸಿ ನೋಡುವೆ ನೀನು.ಧನವನಲ್ಲಾಡಿಸಿ ನೋಡುವೆ ನೀನು.ಇವಕ್ಕಂಜದಿದ್ದಡೆ ಭಕ್ತಿಕಂಪಿತ [ನೀನು] ಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-58/ವಚನ ಸಂಖ್ಯೆ-214) ಕ್ರಿ. ಶ. 1673 ರಲ್ಲಿ ಮೈಸೂರಿನ ಒಡೆಯರ ಸಂಸ್ಥಾನಕ್ಕೆ 14 ನೆ ಅಧಿಪತಿಯಾಗಿ ಸಿಂಹಾಸನವೇರಿದ ಚಿಕ್ಕದೇವರಾಜ ಒಡೆಯರ ಅವರು ತಮ್ಮ 28 ನೇ ವಯಸ್ಸಿನಿಂದ ರಾಜ್ಯಭಾರ ವಹಿಸಿಕೊಂಡಿದ್ದರು. ಬಾಲ್ಯ ಸ್ನೇಹಿತರಾಗಿದ್ದ ಯಳಂದೂರು ಮೂಲದ ವಿಶಾಲಾಕ್ಷ ಪಂಡಿತ ಮೂಲತಃ ಜೈನ ಮತಾವಲಂಬಿಯಾಗಿ, ಅಪ್ರತಿಮ ರಾಜನೀತಿಯ ಚಾಣಕ್ಯರಾಗಿದ್ದರು. ಇವರನ್ನು ತಮ್ಮ ಮಂತ್ರಿ (ಟ್ಯೂಟರ್) ಯನ್ನಾಗಿ ನೇಮಿಸಿಕೊಂಡ ಚಿಕ್ಕದೇವರಾಜ ಒಡೆಯರ ಅವರು ರಾಜ್ಯಭಾರದ ಮೊದಲ ವರ್ಷಗಳನ್ನು ಕೇವಲ…

0 Comments

ಮಹಾ ಪ್ರಸಾದಿ ಬಿಬ್ಬಿ ಬಾಚಯ್ಯ ಶರಣರ ವಚನ ನಿರ್ವಚನ | ಶ್ರೀಮತಿ ಮೈತ್ರಾ ಎಂ. ಕುಣಚಿ, ಕಲಬುರಗಿ.

ಆಕಾಶದುರಿ, ನೆಲದ ಮಡಕೆಯಲ್ಲಿಬಯಲ ನೀರ ತುಂಬಿ, ಇಲ್ಲದ ಅಕ್ಕಿಯ ಹಾಕಿಮೂರು ನೆಲೆಯಲ್ಲಿ ಕುದಿವುತ್ತಿದ್ದಿತ್ತು.ಪಾವಕನರಿದು ನೀರ ಹೊಯಿದು, ಗಂಜಿ ಅಲ್ಲಿ ಇಂಗಿತ್ತು,ಏಣಾಂಕಧರ ಸೋಮೇಶ್ವರಲಿಂಗಕ್ಕೆ ಓಗರವಾಗಬೇಕೆಂದು.(ಸಮಗ್ರ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-135/ವಚನ ಸಂಖ್ಯೆ-323) ಅನುಭವಮಂಟಪದ ಅನುಭಾವಿಗಳು ಬಿಬ್ಬಿ ಬಾಚಯ್ಯ ಶರಣರು. ಮೊದಲು ಬ್ರಾಹ್ಮಣರಾಗಿದ್ದು ತದನಂತರ ಕಲ್ಯಾಣಕ್ಕೆ ಬಂದು ಶರಣ ಧರ್ಮ ಸ್ವೀಕಾರ ಮಾಡಿ ವಚನಕಾರರಾದವರು. ಇವರು ಮೂಲತಃ ರಾಯಚೂರು ಹತ್ತಿರದ ಗೊಬ್ಬೂರು ಗ್ರಾಮದವರು ಎಂದು ಒಮ್ಮತದ ಅಭಿಪ್ರಾಯವಿದೆ. ಇಲ್ಲಿರುವ ಅರ್ಪಣಾ ಕಟ್ಟೆ ಅದು ಈ ಶರಣರ ಸಮಾಧಿ ಎಂದು ಗುರುತಿಸುತ್ತಾರೆ. ಇವರ ತಂದೆಯ ಹೆಸರು  ಭಾಸ್ಕರ, ಇವರು ತಮ್ಮ ಹುಟ್ಟೂರು…

0 Comments

ಗಡಿಗೆಯ ತುಪ್ಪ ಹೆಡಿಗೆಯ ಮೃಷ್ಟಾನ್ನ | ಶರಣೆ ಅಕ್ಕಮ್ಮನವರ ವಚನ ವಿಶ್ಲೇಷಣೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಶರಣೆ ಅಕ್ಕಮ್ಮನವರು ಯಾದಗಿರಿ ಜಿಲ್ಲೆಯ ಏಲೇರಿ ಗ್ರಾಮದವರೆಂಬುದು ವಿದ್ವಾಂಸರ ಒಮ್ಮತದ ಅಭಿಪ್ರಾಯವಾಗಿದೆ. ಇದೇ ಊರಿನ ಶರಣ ಏಲೇರಿ ಕೇತಯ್ಯನವರ ಪ್ರಭಾವ ಅಕ್ಕಮ್ಮನವರ ಮೇಲೆ ಆಗಿರಬಹುದು. “ಆಚಾರವೇ ಪ್ರಾಣವಾದ ರಾಮೇಶ್ವರಲಿಂಗ” ಅಂಕಿತದಿಂದ 154 ವಚನಗಳು ಪ್ರಕಟವಾಗಿವೆ. ಅಕ್ಕಮ್ಮನ ಜೀವನ ಚರಿತ್ರೆಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ಅಕ್ಕಮ್ಮನವರ ವಚನಗ ಳನ್ನು ಓದಿದರೆ ಕೃಷಿ ಕಾಯಕದ ಶರಣೆ ಆಗಿರಬೇಕೆಂದು ಊಹಿಸಬಹುದು. ಒಡೆಯರ ಕಟ್ಟಳೆಯ ಮಾಡಿಕೊಂಡು ಆಡುವ ತನಕಅಂಗಳ ಬಾಗಿಲಲ್ಲಿ ಗುಡಿಗೂರಿ ಎನಬಹುದೇ?ಒಡೆಯರಂತೆ, ಮನೆಗೊಡೆಯನಂತೆ,ಗಡಿ ತಡಿಯಲ್ಲಿ ಕಾಯಲುಂಟೆ!ಅದು ತುಡುಗುಣಿಕಾರರ ನೇಮ. ಒಡೆಯರತ್ತ ನಾವಿತ್ತ.ಗಡಿಗೆಯ ತುಪ್ಪ, ಹೆಡಿಗೆಯ ಮೃಷ್ಟಾನ್ನ,ತುಡುಗುಣಿಯಂತೆ ತಿಂಬವಂಗೆಮತ್ತೊಡೆಯರ ಕಟ್ಟಳೆಯೆ?ಇಂತೀ ಕೆಡುಕರ…

0 Comments

ನಿಜಸುಖಿ ಹಡಪದ ಅಪ್ಪಣ್ಣನವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಓದಲೇಕೋ ಲಿಂಗದ ಭೇದಾದಿಭೇದವನರಿದವಂಗೆ?ಹಾಡಲೇಕೊ ಹರನ ಕಂಡಾತಂಗೆ?ಬೇಡಿ ಕಾಡಲೇಕೊ ನೋಡುವಕಂಗಳಿಗೆ ತೃಪ್ತಿಯಾದವಂಗೆ?ನೀಡಿ ಮಾಡಲೇಕೊ ಉಡುವಾತನುಉಂಬುವಾತನು ಏಕವಾದ ಮೇಲೆ.ಮುಂದು ನೋಡುವರಾರುಂಟು ಹೇಳಾ,ಬಸವಪ್ರಿಯ ಕೂಡಲ ಚನ್ನಬಸವಣ್ಣಾ?(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-372/ವಚನ ಸಂಖ್ಯೆ-919) ಪ್ರಸ್ತುತ ಅರ್ಥಗರ್ಭಿತವಾದ ವಚನ ನಿಜ ಶರಣರಾದ ಹಡಪದ ಅಪ್ಪಣ್ಣನವರದು. ಹಡಪದರು ಎಂದರೆ ಕ್ಷೌರಿಕರು ಎಂಬ ಸಮಾನ ಪದಗಳು ಬಳಕೆಯಲ್ಲಿವೆ. ಗ್ರಾಮೀಣ ಪ್ರದೇಶಗಳಲ್ಲಿ, ಸಂಕುಚಿತ ಮನದವರಲ್ಲಿ ಹಡಪದರು ಎದುರು ಬಂದರೆ ಅಪಶಕುನವೆಂದು ತರಗುಟ್ಟುತ್ತಿದ್ದ ಕಾಲಘಟ್ಟದಲ್ಲಿ ಹಡಪದ ಅಪ್ಪಣ್ಣನವರನ್ನೇ ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿಸಿಕೊಂಡು ಪ್ರಾಣದಂತೆ ಅವರೊಂದಿಗೆ ಸದಾ ಒಡನಾಡಿದವರು ವಿಶ್ವಗುರು ಬಸವಣ್ಣನವರು. ವ್ಯಕ್ತಿಗೂ ಮತ್ತು ವೃತ್ತಿಗೂ ಏಕಕಾಲಕ್ಕೆ ಗೌರವ ಸಲ್ಲುವಂತಹ…

0 Comments

ವ್ಯೋಮಕಾಯ ಅಲ್ಲಮ ಪ್ರಭುದೇವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಜಂಗಮವೆ ಹೊರಗಿರಲು ಲಿಂಗಾರ್ಚನೆ ಏವುದಯ್ಯಾ?ಪ್ರಾಣನ ಹೊರಗಿರಿಸಿ ಎಡೆಯಾಡುವ ದೇಹವುಂಟೆ?ಶರಣರು ಬಂದು ಬಾಗಿಲಲ್ಲಿ ನಿಂದಿರಲುತನ್ನ ತಾ ಮರೆದಿಪ್ಪವರ ಕಂಡಡೆನಮ್ಮ ಗುಹೇಶ್ವರ ಲಿಂಗ ಒಡೆಯ ಹಾಯ್ಕದೆ ಮಾಣ್ಬನೆ?(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-440/ವಚನ ಸಂಖ್ಯೆ-1184) ಜಂಗಮಮೂರ್ತಿಯಾದ ಅಲ್ಲಮ ಪ್ರಭುಗಳು ಜ್ಞಾನ ವೈರಾಗ್ಯದ ಎತ್ತರ ಶಿಬರ. ಇವರು ನಿಜವಾದ ಅನುಭಾವಿಗಳು. ಇವರು ಉಸುರಿದ ಅನುಭಾವದ ಒಲವಿನ ನಿಲುವಿನ ನುಡಿಗಳು ಅತ್ಯಂತ ಗಹನವಾದುದು. ತಮ್ಮ ಗುರುವಾದ ಅನಿಮಿಷಯೋಗಿಯಿಂದ ಲಿಂಗದೀಕ್ಷೆ ಪಡೆದುಕೊಂಡು ಲಿಂಗದೊಂದಿಗೆ ಅನುಸಂಧಾನಗೊಳ್ಳುತ್ತಾ ಅಲ್ಲಮ ಪ್ರಭುಗಳು ಶಿವಯೋಗಿಯಾಗಿ, ಮಹಾ ಅನುಭಾವಿಯಾಗಿ ರೂಪುಗೊಳ್ಳುತ್ತಾರೆ. ಲೋಕ ಸಂಚಾರ ಮಾಡುತ್ತಾ ದೀನ-ದುರ್ಬಲರನ್ನು ಸಂತೈಸುತ್ತಾ, ಅಜ್ಞಾನಿಗಳನ್ನು ಎಚ್ಚರಿಸುತ್ತಾ, ಸಾಧಕರಿಗೆ…

0 Comments

ಪ್ರವಚನ ಪಿತಾಮಹ ಪರಮ ಪೂಜ್ಯ ಶ್ರೀ. ಲಿಂಗಾನಂದ ಸ್ವಾಮೀಜಿ | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.

ಬಸವ ಬಳ್ಳಿ ಹಬ್ಬಿಸಿ, ಪ್ರವಚನ ಪಿತಾಮಹರಾದ ಮಣಿಗವಳ್ಳಿಯ ಮಾಣಿಕ್ಯ ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ,ಆಡೂ ಆ ದಾರಿಯಲ್ಲಿ ಹೋುತ್ತೆನ್ನಬಹುದೆ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆಹೇಳಾ, ಕೂಡಲಸಂಗಮದೇವಾ?(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-87/ವಚನ ಸಂಖ್ಯೆ-329) ಲಿಂಗಾಯತ ಧರ್ಮ ಮತ್ತು ಬಸವ ತತ್ವ ಬೆಳೆಸಲು ಆನೆಯಾಗಿ ಶರಣರ ಚಳುವಳಿಯ ಮಾರ್ಗ ಹಿಡಿದು ಸಾದನೆಯ ಶಿಖರಕ್ಕೇರಿದ ಪೂಜ್ಯ ಲಿಂಗಾನಂದ ಸ್ವಾಮೀಜಿಗಳು ತಮ್ಮ ಪ್ರಖರ ಪ್ರವಚನದ ಮೂಲಕ ಶರಣರ ಬದುಕನ್ನು ಜೀವಂತವಾಗಿ ಸಾಕ್ಷಿಕರಿಸಿದರು. ವಚನ ಸಾಹಿತ್ಯಕ್ಕೆ ಮರುಜನ್ಮ ನೀಡುವಲ್ಲಿ ಹಾಗೂ ಲಿಂಗಾಯತ ಧರ್ಮಕ್ಕೆ ಹೊಸ ಪಥ ಸೃಷ್ಠಿಸುವಲ್ಲಿ…

0 Comments

ವ್ಯೋಮಕಾಯ ಅಲ್ಲಮ ಪ್ರಭುದೇವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ನಿರ್ಣಯವನರಿಯದ ಮನವೆ,ದುಗಡವನಾಹಾರಗೊಂಡೆಯಲ್ಲಾ.ಮಾಯಾ ಸೂತ್ರವಿದೇನೊ!ಕಂಗಳೊಳ[ಗಣ] ಕತ್ತಲೆ ತಿಳಿಯದಲ್ಲಾ!ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು,ಗುಹೇಶ್ವರಾ (ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-19/ವಚನ ಸಂಖ್ಯೆ-45) ಅಲ್ಲಮ ಪ್ರಭುದೇವರು “ಯೌಗಿಕ ಮಹಾಪುರುಷರು” ಹಾಗೂ ಲೋಕ ಸಂಚಾರಿಗಳು. ವಿಶ್ವದ ಉದಾತ್ತ ತತ್ವಜ್ಞಾನಿಗಳಲ್ಲಿ ಪ್ರಭುದೇವರು ಶ್ರೇಷ್ಠರಾದವರು. ಪ್ರಭುಗಳ ವೈಚಾರಿಕತೆ, ಯೌಗಿಕ ನಿಲುವು, ಆಧ್ಯಾತ್ಮದ ಔನ್ನತ್ಯಗಳು ಬೆರಗುಗೊಳಿಸುವಂತಹವು. ಲೋಕ ಸಂಚಾರಿಗಳಾಗಿ ಲೋಕದ ಅನುಭವಗಳ ಮೂಲಕ ಸತ್ಯದರ್ಶನವನ್ನು ಕಂಡುಕೊಂಡ ಸಿದ್ಧಪುರುಷರಿವರು. ಅಲ್ಲಮ ಪ್ರಭುಗಳು ವಚನಗಳ ತಾತ್ವಿಕ ಅಧ್ಯಯನ ಕೈಗೊಂಡವರಿಗೆ ತಿಳಿಯುವ ಸಂಗತಿಯೆಂದರೆ ಪ್ರಭುಗಳ ಭಾವುಕತೆಗೆ ಒಳಗಾಗದ ವೈಚಾರಿಕ ಮನಸ್ಥಿತಿಯವರು ಎಂಬುದು. ಪ್ರಭುದೇವರು ಮೃದಂಗವಾದನದಂತಹ ಕಲೆಯಲ್ಲಿ ನಿಪುಣರಾದ ಒಬ್ಬ ಕಲಾವಿದ. ಹೀಗಾಗಿ ತಮ್ಮ…

0 Comments

ಶಿವಶರಣ ಸೊನ್ನಲಾಪುರದ ಸಿದ್ದರಾಮ ಶಿವಯೋಗಿಗಳು | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸೂಗೂರು.

“ವೈರಾಗ್ಯಕ್ಕೆ ಅಲ್ಲಮ, ಭಕ್ತಿಯೋಗಕ್ಕೆ ಬಸವಣ್ಣ, ಅನುಭಾವಕ್ಕೆ ಅಕ್ಕಮಹಾದೇವಿ, ಕಾಯಕಕ್ಕೆ ಸಿದ್ದರಾಮ” ಜಗತ್ತು ಕಂಡ ಶ್ರೇಷ್ಠ ಕರ್ಮಯೋಗಿಗಳಲ್ಲಿ ಯೋಗತಪಸ್ವಿ ಶಿವಯೋಗಿ ಸಿದ್ದರಾಮೇಶ್ವರರ ಆದರ್ಶಮಯ ಜೀವನ ಚರಿತ್ರೆಯ ಕುರಿತು ಲೇಖನ. ಹನ್ನೆರಡನೇಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣದ ಕ್ರಾಂತಿ ಕರ್ನಾಟಕದ ಇತಿಹಾಸದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಮಹತ್ವಪೂರ್ಣವಾದುದು. ಅದು ಯಾವುದೇ ಒಂದು ವರ್ಗದ ಹಿತ ಕಾಪಾಡುವ ಚಳುವಳಿಯಾಗದೆ, ಸಮಾಜದಲ್ಲಿನ ಕೆಳ ವರ್ಗದವರಿಂದ ಹಿಡಿದು ಎಲ್ಲಾ ವರ್ಗಗಳ ಹಿತವನ್ನು ಕಾಪಾಡಲು ಸಮಾನತೆಯ ತಳಹದಿಯ ಮೇಲೆ ನಡೆಸಿದ ಮುಕ್ತ ಮನಸ್ಸುಗಳ ಒಂದು ವಿಶಿಷ್ಟ ಅಂದೋಲನವಾಗಿತ್ತು. ಬಸವಾದಿ ಶರಣರು ಜನಭಾಷೆಯಲ್ಲಿ ತಮ್ಮ ಕಾಯಕದ…

0 Comments

ಕರ್ಮಯೋಗಿಯಿಂದ ಶಿವಯೋಗಿಯಾದ ಶರಣ ಸಿದ್ಧರಾಮೇಶ್ವರರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಎನ್ನನಾಗಳೆ ಬಂದಿವಿಡಿದೆ ಗಡ ನೀನು.ನಿಮ್ಮ ಹಿಡಿವಡೆ ಹಿಡಿವರು, ತನುವಿರೆ ತನು ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಮನವಿರೆ ಮನ ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಕೈಯಿರೆ ಕೈಬೇರಾದವರು.ಈಸುಳ್ಳವರು ಮೊದಲಾಗಿ ನಿಮ್ಮ ಹಿಡಿಯಲಾರರು.ಕಪಿಲಸಿದ್ಧಮಲ್ಲಿಕಾರ್ಜುನಾನಿಮ್ಮ ಹಿಡಿದು ತಡೆಯಲಾನೇತರವನಲ್ಲ.ಕರುಣದಿಂದ ಬಾರಾ, ಎನ್ನ ದೇವರ ದೇವಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-388/ವಚನ ಸಂಖ್ಯೆ-1246) ಶರಣ ಸಂಕುಲದಲ್ಲಿ ಶಿವಯೋಗಿ ಸಿದ್ಧರಾಮರದು ತುಂಬಾ ಮಹತ್ವದ ಪಾತ್ರವಾಗಿದೆ. ವಿಶಿಷ್ಟ ಆಲೋಚನೆಯುಳ್ಳ ಸಿದ್ಧರಾಮೇಶ್ವರರು ಅದ್ಭುತ ಕನಸುಗಾರರು. “ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ಶಿವಯೋಗಿಯ ಶರೀರಂ ವೃಥಾ ಸವೆಯಲಾಗದು, ಅನುಗೊಂಬನಿತು ಕಾಯಕ ನಡೆಯಬೇಕು” ಎಂಬುದು ಇವರ ಧ್ಯೇಯವಾಕ್ಯವಾಗಿತ್ತು. ಅಂಗಕ್ಕೆ ಲಿಂಗೋಪದೇಶ ಮನಕ್ಕೆ ಮಂತ್ರೋಪದೇಶವಾದ…

0 Comments

ಮಹಾಮಹಿಮ, ಕಾಯಕಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಪರಿಚಯ ಲೇಖನ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ,

ಬಸವಣ್ಣನೇ ತಾಯಿ, ಬಸವಣ್ಣನೇ ತಂದೆಬಸವಣ್ಣನೇ ಪರಮಬಂಧುವೆನಗೆ.ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನ,ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಎಂಬುದು ವಚನ ಸಾಹಿತ್ಯದ ಒಂದು ಪ್ರಸಿದ್ಧ ವಚನ. ಸಿದ್ದರಾಮರು ಬಸವಣ್ಣನವರಲ್ಲಿಯೇ ತಂದೆ, ತಾಯಿ, ಬಂಧು, ಬಳಗ ಎಲ್ಲರನ್ನ ಕಾಣುವ ಭಕ್ತಿ ಭಾವನೆಯನ್ನು ಸೂಚಿಸುವ ವಚನ. 12 ನೇಯ ಶತಮಾನದ ಶಿವ-ಶರಣರಲ್ಲಿ ಅಲ್ಲಮಪ್ರಭುಗಳು ಜಂಗಮಲಿಂಗ ಎಂದು, ಬಸವಣ್ಣನವರು ಭಕ್ತಿ ಭಂಡಾರಿ ಎಂದು, ಅಕ್ಕಮಹಾದೇವಿಯವರಿಗೆ ವೀರ ವಿರಾಗಿಣಿ ಎಂದು, ಚನ್ನಬಸವಣ್ಣನವರು ಷಟ್‌ಸ್ಥಳ ಜ್ಞಾನಿ ಎಂದು ಪ್ರಸಿದ್ಧರಾಗಿದ್ದರೆ ಶರಣ ಸಿದ್ದರಾಮಯ್ಯನವರು ಶಿವಯೋಗಿ ಎಂದು ಪ್ರಸಿದ್ಧರಾಗಿದ್ದಾರೆ. ಅನುಭವ ಮಂಟಪದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುತ್ತಾ ಸೊಡ್ಡಳ…

0 Comments