“ಬೆಳಗಿನೊಳಗಣ ಬೆಳಗು” / ಡಾ. ಸರ್ವಮಂಗಳ ಸಕ್ರಿ, ರಾಯಚೂರು.
ಶಬ್ದವೆಂಬೆನೆ? ಶ್ರೋತ್ರದೆಂಜಲು. ಸ್ಪರ್ಶವೆಂಬೆನೆ? ತ್ವಕ್ಕಿನೆಂಜಲು.ರೂಪೆಂಬೆನೆ? ನೇತ್ರದೆಂಜಲು. ರುಚಿಯೆಂಬೆನೆ? ಘ್ರಾಣದೆಂಜಲು.ಪರಿಮಳವೆಂಬೆನೆ? ಘ್ರಾಣದೆಂಜಲು. ನಾನೆಂಬೆನೆ? ಅರಿವಿನೆಂಜಲು.ಎಂಜಲೆಂಬೆ ಭಿನ್ನವಳಿದ, ಬೆಳಗಿನೊಳಗಣ ಬೆಳಗುಗುಹೇಶ್ವರನೆಂಬ ಲಿಂಗವು.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-182 / ವಚನ ಸಂಖ್ಯೆ-564) ವಚನ ಸಾಹಿತ್ಯದ ಬೆಡಗಿನ ಭಾಷೆಯ ಹರಿಕಾರ ಅಲ್ಲಮಪ್ರಭುಗಳು. ಅಲ್ಲಮ ಪ್ರಭುಗಳ ವಚನಗಳು ಪಾರಮಾರ್ಥಿಕ, ಸೃಜನಶೀಲತೆಗೆ ಮತ್ತು ವೈಚಾರಿಕ ಬದ್ಧತೆಗೆ ಒಳಗಾಗುತ್ತವೆ. ವಚನ ಸಾಹಿತ್ಯ ಸಂಸ್ಕೃತಿಗೆ ಅಲ್ಲಮ ಪ್ರಭುಗಳಿಗೆ ವಿಶಿಷ್ಟ ಮತ್ತು ಗಂಭೀರ ಸ್ಥಾನವಿದೆ. ಅಲ್ಲಮ ಪ್ರಭುಗಳ ತತ್ವ ಮತ್ತು ಸಿದ್ಧಾಂತವನ್ನು ಪ್ರತಿಕ್ರಿಯಿಸುವಾಗ 12 ನೇ ಶತಮಾನದ ಸಾಮಾನ್ಯ ಭಾಷೆ ಪರಿವರ್ತನಾಶೀಲತೆಯನ್ನು ಪಡೆದುಕೊಳ್ಳುತ್ತದೆ. ವಚನ ಭಾಷೆಯ…