“ವೈಚಾರಿಕ ಶರಣ ಹಡಪದ ಅಪ್ಪಣ್ಣ”/ ಡಾ.ರಾಜೇಶ್ವರಿ ವೀ.ಶೀಲವಂತ, ಬೀಳಗಿ.
ಹನ್ನೆರಡನೆಯ ಶತಮಾನದಲ್ಲಿ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ದುಡಿಯುವ ವರ್ಗದ ಅಸ್ಮಿತೆಯ ಪ್ರತೀಕವಾಗಿ ಹುಟ್ಟಿಕೊಂಡಿದ್ದು ಶರಣ ಚಳುವಳಿ. ಈ ಚಳುವಳಿಯಲ್ಲಿ ಶತಶತಮಾನಗಳಿಂದ ಜಾತಿಯ ಹೆಸರಿನಲ್ಲಿ ಶೋಷಣೆ,ಅವಮಾನಕ್ಕೊಳಗಾಗಿದ್ದ ಕಷ್ಟಸಹಿಷ್ಣುಗಳು, ಶ್ರಮಜೀವಿಗಳೆಲ್ಲರೂ ಒಂದಾಗಿ ಇದಕ್ಕೆಲ್ಲ ಕಾರಣವಾದ ಚಾತುರ್ವರ್ಣ ವ್ಯವಸ್ಥೆಯ ವಿರುದ್ಧ ಸೆಟೆದು ನಿಂತರು. ಜಾತಿ,ವರ್ಣ,ವರ್ಗ,ಲಿಂಗಗಳನ್ನು ಆಧರಿಸಿ ಅಸಮಾನತೆಯಿಂದ ನಿರ್ಮಾಣಗೊಂಡಿದ್ದ ಸಮಾಜವನ್ನು ಧಿಕ್ಕರಿಸಿ, ಪ್ರತಿಯಾಗಿ ಸಹಬಾಳ್ವೆ, ಸಮಾನತೆ, ಪರಸ್ಪರ ಸಹಕಾರ, ಸಹಾನುಭೂತಿ, ಅರಿವು, ಆಚಾರ, ನಡೆನುಡಿ ಸಿದ್ಧಾಂತಗಳ ಆಧಾರದ ಮೇಲೆ ಜನಮುಖಿ ಸಮಾಜವನ್ನು ನಿರ್ಮಿಸಿದರು. ಅಂದಿನ ಸಮಾಜವು ತಮ್ಮಲ್ಲಿ ಬಿತ್ತಿದ ಕಿಳರಿಮೆ,ಭಯ,ಅವೈಚಾರಿಕತೆಗಳನ್ನು ಕಿತ್ತೊಗೆದರು. ಕಸಬುದಾರರು,ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅಸ್ಪೃಶ್ಯರು ಅಕ್ಷರಜ್ಞಾನವನ್ನು, ವೈಚಾರಿಕತೆಯ ಮನೋಭಾವವನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು,…




Total views : 51421