“ವೈಚಾರಿಕ ಶರಣ ಹಡಪದ ಅಪ್ಪಣ್ಣ”/ ಡಾ.ರಾಜೇಶ್ವರಿ ವೀ.ಶೀಲವಂತ, ಬೀಳಗಿ.

ಹನ್ನೆರಡನೆಯ ಶತಮಾನದಲ್ಲಿ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ ದುಡಿಯುವ ವರ್ಗದ ಅಸ್ಮಿತೆಯ ಪ್ರತೀಕವಾಗಿ ಹುಟ್ಟಿಕೊಂಡಿದ್ದು ಶರಣ ಚಳುವಳಿ. ಈ ಚಳುವಳಿಯಲ್ಲಿ ಶತಶತಮಾನಗಳಿಂದ ಜಾತಿಯ ಹೆಸರಿನಲ್ಲಿ ಶೋಷಣೆ,ಅವಮಾನಕ್ಕೊಳಗಾಗಿದ್ದ ಕಷ್ಟಸಹಿಷ್ಣುಗಳು, ಶ್ರಮಜೀವಿಗಳೆಲ್ಲರೂ ಒಂದಾಗಿ ಇದಕ್ಕೆಲ್ಲ ಕಾರಣವಾದ ಚಾತುರ್ವರ್ಣ ವ್ಯವಸ್ಥೆಯ ವಿರುದ್ಧ ಸೆಟೆದು ನಿಂತರು. ಜಾತಿ,ವರ್ಣ,ವರ್ಗ,ಲಿಂಗಗಳನ್ನು ಆಧರಿಸಿ ಅಸಮಾನತೆಯಿಂದ ನಿರ್ಮಾಣಗೊಂಡಿದ್ದ ಸಮಾಜವನ್ನು ಧಿಕ್ಕರಿಸಿ, ಪ್ರತಿಯಾಗಿ ಸಹಬಾಳ್ವೆ, ಸಮಾನತೆ, ಪರಸ್ಪರ ಸಹಕಾರ, ಸಹಾನುಭೂತಿ, ಅರಿವು, ಆಚಾರ, ನಡೆನುಡಿ ಸಿದ್ಧಾಂತಗಳ ಆಧಾರದ ಮೇಲೆ ಜನಮುಖಿ ಸಮಾಜವನ್ನು ನಿರ್ಮಿಸಿದರು. ಅಂದಿನ ಸಮಾಜವು ತಮ್ಮಲ್ಲಿ ಬಿತ್ತಿದ ಕಿಳರಿಮೆ,ಭಯ,ಅವೈಚಾರಿಕತೆಗಳನ್ನು ಕಿತ್ತೊಗೆದರು. ಕಸಬುದಾರರು,ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಅಸ್ಪೃಶ್ಯರು ಅಕ್ಷರಜ್ಞಾನವನ್ನು, ವೈಚಾರಿಕತೆಯ ಮನೋಭಾವವನ್ನು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು,…

0 Comments

“ವಚನಗಳಲ್ಲಿ ಪ್ರಸಾದ ತತ್ವ” / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ

12 ನೇ ಶತಮಾನವು ಮನುಕುಲದ ಇತಿಹಾಸದಲ್ಲಿ ವಿಶೇಷವಾದಂತಹ ಕಾಲ, ಅದು ಪಾರಮಾರ್ಥವನ್ನು ಸಕಲ ಮಾನವರಿಗೆ ಉಣಬಡಿಸಿದಂತಹ ಶತಮಾನ. ಮಾನವ ಕುಲಕ್ಕೆ ಬದುಕನ್ನು ಕಲಿಸಿದ ಶತಮಾನ ಭವ-ಭವದಲ್ಲಿ ಬೇಯುತ್ತಿದ್ದ ಮಾನವರು ಶರಣಾಗುವ ಮಾರ್ಗ ಕಲಿಸಿದಂತಹ, ಬೆಳಕಿಗೆ ಬಂದಂತಹ ಶತಮಾನ ದೇವನ ಹಂಬಲವುಳ್ಳವರಿಗೆ ಗುರು ಕಾರುಣ್ಯವು ಲಭಿಸಿದಂತಹ ಕಾಲ. ಅದು ಬಸವಣ್ಣನವರು ಅವತರಿಸಿದ ಕಾಲ ಕನಿಷ್ಠವೆನಿಸಿದ ವ್ಯಕ್ತಿಗಳನ್ನು ಆಧ್ಯಾತ್ಮಿಕದ ತುಟ್ಟ ತುದಿಗೆ ಕರೆದೊಯ್ಯವುವ ಅಸ್ಸಿಮ ಶಕ್ತಿ ಬಸವಣ್ಣನವರ ಬೋಧನೆಯಲ್ಲಿ ತುಂಬಿತ್ತು. ಪ್ರತಿಯೊಬ್ಬರ ನಡೆ-ನುಡಿ, ಆಚಾರ-ವಿಚಾರ ಮನೋಭಾವ ಗುಣಗಳು, ಬದುಕುವ ರೀತಿ ಇತ್ಯಾದಿಗಳೆಲ್ಲವನ್ನು ತಿದ್ದಿ ತೀಡಿ, ಅವರನ್ನು ಆದ್ಯಾತ್ಮಿಕದ ನೆಲೆಯಲ್ಲಿ ಮೇಲಕ್ಕೇರಿರಿಸಿ,…

0 Comments

“ಅಂಜಿದರಾಗದು, ಅಳುಕಿದರಾಗದು”/ ಲಿಂ. ಶ್ರೀ. ಈಶ್ವರಗೌಡ ಪಾಟೀಲ, ನರಗುಂದ.

ಅಂಜಿದಡೆ ಮಾಣದು, ಅಳುಕಿದಡೆ ಮಾಣದು,ವಜ್ರಪಂಜರದೊಳಗಿದ್ದಡೆ ಮಾಣದು, ತಪ್ಪದುವೋ ಲಲಾಟಲಿಖಿತ.ಕಕ್ಕುಲತೆಗೆ ಬಂದಡೆ ಆಗದು ನೋಡಾ.ಧೃತಿಗೆಟ್ಟು, ಮನ ಧಾತುಗೆಟ್ಟಡೆ ಅಪ್ಪುದು ತಪ್ಪದು,ಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-63 / ವಚನ ಸಂಖ್ಯೆ-688) ಬಸವಣ್ಣನವರು ಜೀವನದಲ್ಲಿ ಯಾವದಕ್ಕೂ ಅಂಜದೆ ಅಳುಕದೆ ಬಂದದ್ದನ್ನ ಎದುರಿಸಿ ಸಾಧನೆಯಲ್ಲಿ ಮುಂದುವರೆಯಬೇಕು ಎಂಬುದನ್ನ ಇಲ್ಲಿ ಹೇಳುತ್ತಿದ್ದಾರೆ. ಲಲಾಟ ಲಿಖಿತ ಅಂದರೆ ಹಣೆಯ ಬರಹವನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಅದು ಅಂಜಿದರೂ ಬುಡುವದಿಲ್ಲ, ಅಳುಕಿದರೂ ಬಿಡುವದಿಲ್ಲ, ವಜ್ರ ಪಂಜರದೊಳಗಿದ್ದರೂ ಬಿಡುವದಿಲ್ಲ. ಬರಬೇಕಾಗಿದ್ದು ಬಂದೆ ಬರುತ್ತದೆ. ಇದು ವಿಧಿವಾದವನ್ನ ಎತ್ತಿ ಹಿಡಿಯುವಂತೆ ಕಂಡರೂ ಆ ಹಣೆಬರಹಕ್ಕೆ ಎಲ್ಲವನ್ನೂ…

0 Comments

“ಶರಣ ಸಿದ್ದರಾಮೇಶ್ವರರ ವಚನಗಳಲ್ಲಿ ಲಿಂಗ ದರ್ಪಣ”/ ಡಾ. ಸರ್ವಮಂಗಳ ಸಕ್ರಿ

ವ್ಯಕ್ತಿ ಮತ್ತು ಮಾನವ ಸಂಬಂಧಗಳ ಸಮಾಜದಲ್ಲಿ ಆಧ್ಯಾತ್ಮಕ್ಕೆ ವಿಶೇಷವಾದ ಸ್ಥಾನವಿದೆ. ಶರಣರ ಸಾಮಾಜಿಕ ಕಾಳಜಿ ಸ್ವತಂತ್ರ ವಚನಗಳು ನಮಗೆ ಮುಖಾಮುಖಿಯಾಗುತ್ತವೆ. ಇಂದ್ರಿಯ ಅಗೋಚರ ಭೌತಿಕ ಪ್ರಪಂಚವನ್ನು ಮೀರಿದ ಜ್ಞಾನದ ಹರವು ಹಾಗು ಆಧ್ಯಾತ್ಮದ ತಿಳುವಳಿಕೆ ಧರ್ಮವಾಗಿದೆ. ವಚನ ಧರ್ಮ ಭಾಷೆಯ ಹಿಂದೆ ಧಾರ್ಮಿಕ ನಂಬಿಕೆ ತಾತ್ವಿಕ ಆ‍ಚರಣೆಗಳು ಶರಣ ಸಂಸ್ಕ್ರತಿಯ ಸಂಗಮವೆಂದು ಸ್ಪಷ್ಟ ಪಡಿಸಬಹುದು. ಯಾವುದೇ ಧರ್ಮ ಶೂನ್ಯದಿಂದ ಹುಟ್ಟಿರುವುದಿಲ್ಲ. ಚರಿತ್ರೆಯ ನಿರ್ಧಿಷ್ಟ ಒತ್ತಡಗಳಿಂದ ಹುಟ್ಟಿರುತ್ತದೆ. 12 ನೇ ಶತಮಾನದ ಲಿಂಗಾಯತ ಧರ್ಮ ಇದಕ್ಕೆ ಹೊರತಲ್ಲ. ಅನೇಕ ಧಾರ್ಮಿಕ ಪಂಥಗಳ ದಶ೯ನಗಳನ್ನು ಒಡಲಲ್ಲಿಟ್ಟುಕೊಂಡು ಅಷ್ಟಾವರಣ ತತ್ವಗಳನ್ನು ಜೋಪಾನ…

0 Comments

“ಸಿದ್ದರಾಮೇಶ್ವರರ ವಚನಗಳಲ್ಲಿ ಸ್ತ್ರೀ ಸಂವೇದನೆಯ ಅಂಶಗಳು”/ ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಸೊನ್ನಲಿಗೆಯ ಸಿದ್ಧರಾಮೇಶ್ವರರು ಕಾಯಕಜೀವಿ. ಸಾಮಾಜಿಕ ಜವಾಬ್ದಾರಿಗಳನ್ನು ಜತನದಿಂದ ಕೈಗೊಂಡ ಕರ್ಮಯೋಗಿ. ಲೋಕ ಕಲ್ಯಾಣಾರ್ಥವಾಗಿ ತಮ್ಮ ಬದುಕನ್ನು ಸವೆಸಿದ ಸಿದ್ಧ ಶಿವಯೋಗಿ. ಸಿದ್ಧರಾಮೇಶ್ವರರು ತಮ್ಮ ಇಡಿ ಬದುಕಿನುದ್ದಕ್ಕೂ ಕಾಯಕವನ್ನೇ ಉಸಿರಾಗಿರಿಸಿಕೊಂಡಿದ್ದರು. ಬದ್ಧತೆಗೆ ತುಡಿದ ಸಿದ್ಧರಾಮೇಶ್ವರರು ಶರಣ ತತ್ವಗಳನ್ನು ರೂಢಿಸಿಕೊಂಡವರು. ಮಾನವೀಯತೆಯ ಮೌಲ್ಯಗಳಿಂದ ವ್ಯಷ್ಟಿಯಿಂದ ಸಮಷ್ಟಿಯನ್ನು ಬೆಸೆದವರು. ತಮ್ಮ ವಚನಗಳ ಮೂಲಕ ಶ್ರೇಷ್ಠ ಮಾನವೀಯ ಸಂವೇದನೆಗಳನ್ನು ಹಂಚಿದವರು ಮತ್ತು ಚಿಂತಿಸಿದವರು. ಇವರದು ಅಪರೂಪದಲ್ಲೇ ಅಪರೂಪದ ವ್ಯಕ್ತಿತ್ವ. ಸಕಲ ಚರಾ-ಚರ ಚೇತನವನ್ನು ಪ್ರೀತಿಸಿದ ಇವರಲ್ಲಿ ತಾಯ್ತನವಿದೆ. ಹೆಂಗರುಳಿದೆ. ಈ ಕಾರಣದಿಂದಲೇ ಸಿದ್ಧರಾಮೇಶ್ವರರು ಪಶು, ಪಕ್ಷಿ ಮುಂತಾದ ಜೀವ ಚೇತನಗಳಿಗಾಗಿ ಕೆರೆ-ಕಟ್ಟೆ ಬಾವಿಗಳನ್ನು,…

0 Comments

“ಬಸವಣ್ಣ”-ಭಾಗ ೨/ ಡಾ. ನೀಲಾಂಬಿಕಾ ಪೊಲೀಸ ಪಾಟೀಲ

ಬಸವಣ್ಣನವರು ಪ್ರಧಾನಿಯಾಗಿ ಕೇವಲ ಭೋಗಿಯಾಗಿ ಕೂಡಲಿಲ್ಲ. ತ್ಯಾಗಿಯಾಗಿ, ಯೋಗಿಯಾಗಿ ಲಿಂಗಾಂಗಿಯಾಗಿ ಒಂದೆಡೆ ಸಮಾಜೋದ್ಧಾರ, ಇನ್ನೊಂದೆಡೆ ಆತ್ಮೋದ್ಧಾರಕ್ಕಾಗಿ ಕಂಕಣ ಬದ್ಧರಾದರು. ಲಿಂಗಾಂಗಿಯಾಗಿ ಲಿಂಗಾಯತ ಧರ್ಮಕಟ್ಟಿ, ಸಮಾನತೆ ಅದರ ಕುರುಹು ಮಾಡಿದರು. ನಮ್ಮವ ನಮ್ಮವರು ಎನ್ನುತಾ ಬಸವಣ್ಣಒಮ್ಮನದಿ ಎಲ್ಲರ ಅಪ್ಪಿಕೊಂಡು | ಅಳಿಸ್ಯಾರನಾನು ನಿನ್ನೆಂಬ ಬೇಧವ ಬಸವಣ್ಣನವರ ಮನಸ್ಸನ್ನು ಈ ಜಗತ್ತು ಬಹು ಬೇಗನೆ ಅರಿತುಕೊಂಡಿತು ಎನ್ನುತ್ತಾರೆ ಜನಪದರು. ಅವರದು ತಾಯಿ ಹೃದಯ, ಎಲ್ಲರನ್ನು ಕೈಮಾಡಿ ಕರೆಯಿತು ಅದು. ಅವರ ಅಯ್ಯಾ ಅಪ್ಪಾ ಎನ್ನುವ ಮನಸ್ಸಿಗೆ ನಾಟು ವಂತಹ ನುಡಿ ಮತ್ತುಗಳು ಎಲ್ಲ ಜಾತಿಯವರನ್ನು ಕಲ್ಯಾಣದತ್ತ ಕರೆದ್ಯೋಯದವು. ಸಾಗಿ ಬಂದಾರ…

0 Comments

“ಬಸವಣ್ಣ”/ ಡಾ. ನೀಲಾಂಬಿಕಾ ಪೊಲೀಸ ಪಾಟೀಲ

ಶರಣೆಂದೆ ಶಿವನಿಗೆ ಶರಣೆಂದೆಗುರುವಿಗೆಶರಣೆಂದೆಜಗದಗುರುವಿಗೆ | ಬಸವಗಶರಣೆಂದುಕೈಯ ಮುಗದೇನ. ಜನಪದ ಸಾಹಿತ್ಯದ ಜೀವ ಜೀವಾಳವಾಗಿದ್ದಾರೆ ಬಸವಣ್ಣನವರು. ಆ ಜನಪದರಿಗೆ ಅವರು ಎಲ್ಲವೂ ಆಗಿದ್ದಾರೆ. ದೇವರು, ಗುರು, ಮಾರ್ಗದರ್ಶಕ, ಅರಿವು ಕೊಟ್ಟವರು, ಕಾಯಕ ದಾಸೋಹ ಪರಿಕಲ್ಪನೆ ಅಷ್ಟೇ ಅಲ್ಲ ಸುಖಕ್ಕೂ ದುಃಖಕ್ಕೂ ಎಲ್ಲಕ್ಕೂ ಅವರಿಗೆ ಆಧಾರ ಬಸವಣ್ಣನವರು. ಬಸವ ಎಂಬ ನುಡಿ ಬಾಯಿಗೆ ಬಂದರಸೂಸಾಡ್ಯಾವ ಶಿವನುಡಿ ಮನದಾಗ | ಎಲೆ ಮನವೆಬಸವ ಎಂಬುದು ಬಿಡಬ್ಯಾಡ ಎಂದು ಹರಿದಾಡುವ ಮನಸ್ಸಿಗೆ ಬೇಡಿಕೊಳ್ಳುತ್ತಾ ಕಲ್ಲಿಗೆ ಮುಕ್ಹಾಕಿ ಎಲ್ಲ ದೇವರ ನೆನೆದೆಕಲ್ಯಾಣದ ಬಸವಗ ಮೊದಲಿಗೆ | ನೆನೆದರಕಲ್ಲೆಂಬುದು ನಮಗ ಹಗುರಾಗಿ ಎಂದು ಬಸವಣ್ಣನವರನ್ನು ನೆನೆಯುತ್ತಾರೆ.…

0 Comments

“ಪೈರಿಗೆ ನೀರು ಬೇಕೆಂಬಲ್ಲಿ”/ ಚನ್ನಪ್ಪ ಅಂಗಡಿ,ಧಾರವಾಡ

ವೃಷ್ಟಿಮೂಲ ಕೃಷಿಃ ಸರ್ವಾ ವೃಷ್ಟಿಮೂಲಂ ಚ ಜೀವನಮ್ |ತಸ್ಮಾದಾದೌ ಪ್ರಯತ್ನೇನ ವೃಷ್ಟಿಜ್ಞಾನಂ ಸಮಾಚರೇತ್ ||(ಕೃಷಿ ಪರಾಶರ - ಪರಾಶರ ಮುನಿ: 10 ನೇ ಶ್ಲೋಕ) ಮೂಲತಃ ಕೃಷಿಯು ಮಳೆಯನ್ನು ಅವಲಂಬಿಸಿದೆ. ಹಾಗೆ ನೋಡಿದರೆ ಸಮಗ್ರ ಜೀವನವೇ ಮಳೆಯನ್ನು ಅವಲಂಬಿಸಿದೆ. ಆದ್ದರಿಂದ ಮೊಟ್ಟಮೊದಲನೆಯದಾಗಿ ಮಳೆಯ ಬಗ್ಗೆ ಕೆಲವು ವಿಷಯಗಳನ್ನು ತಿಳಿದುಕೊಳ್ಳುವುದು ಅವಶ್ಯವೆಂದು ಪ್ರಾಚೀನ ಋಷಿ ಪರಾಶರ ಹೇಳಿದ್ದಾನೆ. ಕೃಷಿ ಮಳೆಯನ್ನು ಅವಲಂಬಿಸುವುದೆಂದರೆ ನೀರನ್ನು ಅವಲಂಬಿಸುವುದೆಂದೇ ಅರ್ಥ. ‘ಮಣ್ಣು-ನೀರು-ಸಸ್ಯ-ಆಹಾರ’ ಇಷ್ಟು ಹೇಳಿಬಿಟ್ಟರೆ ಅದು ಪ್ರಕೃತಿಯಾಗುತ್ತದೆ. ‘ಕೃಷಿ’ ಎಂದು ಬಿಟ್ಟರೆ ಅದು ಮಾನವ ನಿರ್ಮಿತವಾಗುತ್ತದೆ. ಮನುಷ್ಯನ ಪ್ರವೇಶಿಕೆ ಎಂದರೆ ನಿಸರ್ಗದ ನಿಯತಿಯನ್ನು…

0 Comments

“ಜನಪದ ಸಾಹಿತ್ಯದಲ್ಲಿ ಕುಂಬಾರ ಗುಂಡಯ್ಯ”/ ಡಾ. ನೀಲಾಂಬಿಕಾ ಪೊಲೀಸ ಪಾಟೀಲ.

ಕುಂಬಾರ ಗುಂಡಯ್ಯ ತುಂಬಿ ತಿಗರಿಗ ಕೆಸರಶಂಭು ಹರನೆಂದು ತಿರುಗಿಸಲು | ಶಿವಕುಣಿದಹಂಬಲಿಸಿ ಜಂಗ ಕಟಗೊಂಡು12 ನೇಯ ಶತಮಾನದ ವಚನ ಚಳುವಳಿಯ ಸಂದರ್ಭದಲ್ಲಿ ಬಸವಾದಿ ಶಿವಶರಣರು ತೋರಿದ ಸಮಾನತೆ ತತ್ವ ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ ಒಕ್ಕಟ್ಟಿನಲ್ಲಿ ಬಲವಿದೆಯೆಂಬುದನ್ನು ತೋರಿಸಿಕೊಟ್ಟವರು ಬಸವಾದಿ ಪ್ರಮಥರು. ಮೇಲು-ಕೀಳು, ಹೆಣ್ಣು-ಗಂಡು, ಸ್ತ್ರೀ-ಪುರುಷ, ಬಡವ-ಬಲ್ಲಿದವೆಂಬ ಭೇದಗಳನ್ನೆಲ್ಲ ತೊಲಗಿಸಿ ಸಮಾನತೆ ತತ್ವದ ಅನುಭವ ಮಂಟಪದಲ್ಲಿ ಒಂದಾಗಿ ಕುಳಿತು ಎಲ್ಲರೂ ಅನುಭಾವಿಗಳಾಗಿ ಶರಣರೆನಿಸಿಕೊಂಡರು. ಅಂತಹ ಶರಣರತ್ನಗಳಲ್ಲಿ ಕುಂಬಾರ ಗುಂಡಯ್ಯ ಶರಣರು ಒಬ್ಬರು. ಕುಂಬಾರ ಗುಂಡಯ್ಯ ಮುಗ್ಧ ಶರಣರು, ಕಾಯಕ ಜೀವಿಗಳು, ದಾಸೋಹ ನಿಷ್ಠರಾಗಿದ್ದ ಈ ಶರಣರ ಶಿವಭಕ್ತಿ ಅಪಾರವಾದುದು.…

0 Comments

“ಅಧ್ಯಾತ್ಮ ಮತ್ತು ವಿಜ್ಞಾನಗಳ ಸಾಮ್ಯತೆಯ ಪ್ರಾಯೋಗಿಕ ಪ್ರತಿಪಾದನೆ” ಲೇಖಕರು: ಡಾ. ಬಸವರಾಜ ಸಾದರ.

ಧರ್ಮಕ್ಕೂ, ವಿಜ್ಞಾನಕ್ಕೂ ಎಂಥ ಸಂಬಂಧವಿದೆ? ಎಂಬ ಪ್ರಶ್ನೆ ಹಲವಾರು ವಿಜ್ಞಾನಿಗಳನ್ನೂ, ಧಾರ್ಮಿಕ ಚಿಂತಕರನ್ನೂ ನಿರಂತರ ಕಾಡುತ್ತ ಬಂದಿದೆ. ಶ್ರೇಷ್ಠ ವಿಜ್ಞಾನಿಗಳನೇಕರು ಧರ್ಮದಲ್ಲಿ ವಿಜ್ಞಾನವನ್ನೂ, ವಿಜ್ಞಾನದಲ್ಲಿ ಧರ್ಮವನ್ನೂ ಕಂಡಿದ್ದಾರೆ. ಹಾಗೆಯೇ ವೈಚಾರಿತೆಯನ್ನು ಗೌರವಿಸುವ ಕೆಲವು ‘ನಿಜ’ ಧಾರ್ಮಿಕರೂ ಅದೇ ಅಭಿಪ್ರಾಯದವರಾಗಿದ್ದಾರೆ. ಆದರೆ, ಇವರೆಲ್ಲ ತಮ್ಮ ಈ ಅಭಿಪ್ರಾಯಗಳ ಪ್ರತಿಪಾದನೆಯಲ್ಲಿ ಪ್ರಾಯೋಗಿಕ ಕ್ರಮವನ್ನು ಅನುಸರಿಸಿಲ್ಲವೆನಿಸುತ್ತದೆ. ನಂಬಿಗೆ ಹಾಗೂ ಭಾವನಾತ್ಮತ ನೆಲೆಯಲ್ಲಿ ಇವರೆಲ್ಲ ಈ ಸಂಬಂಧ ಕುರಿತು ಮಾತಾಡಿದ್ದಾರೆಯೇ ಹೊರತು, ಪ್ರಯೋಗಾತ್ಮಕ ಕ್ರಮ ಇಲ್ಲಿಲ್ಲ. ಅದನ್ನು ಹಾಗೆ ತೋರಿಸುವುದು ಕಷ್ಟದ ಕೆಲಸವೂ ಹೌದು. ಅಚ್ಚರಿಯೆಂದರೆ, ಇಂಥ ಕಷ್ಟದ ಕೆಲಸವನ್ನೂ ಹನ್ನೆರಡನೆಯ ಶತಮಾನದ…

1 Comment