ವಚನ ಸಾಹಿತ್ಯದಲ್ಲಿ ಆರೋಗ್ಯ / ಡಾ ಸುರೇಶ ಸಗರದ, ರಾಯಚೂರು.
ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ತಿಳಿದ ವಿಷಯ. ಆದರೆ ಅನಾರೋಗ್ಯದ ಸಮಯದಲ್ಲಿ ಮಾತ್ರ ನಾವು ಆರೋಗ್ಯದ ಕುರಿತು ಚಿಂತಿಸುತ್ತೇವೆ. ಅನಾರೋಗ್ಯದಿಂದ ಗುಣಮುಖರಾಗುತ್ತಿದ್ದಂತೆ ಮತ್ತೇ ಆ ಕುರಿತು ಚಿಂತಿಸುವುದಿಲ್ಲ. ಇತ್ತೀಚಿನ ಜೀವನಶೈಲಿ, ಅನೇಕ ಅಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಿದೆ. ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯಾಘಾತ, ಕ್ಯಾನ್ಸರ್ ನಿಂದ ಬಳಲುವವರ ಸಂಖ್ಯೆ ಅನೇಕ ಪಟ್ಟು ಹೆಚ್ಚಾಗುತ್ತಿದೆ. ಇದು ಮಧ್ಯ ವಯಸ್ಸಿನವರಲ್ಲಿ ಮತ್ತು ಯುವಕರಲ್ಲಿಯೂ ಹೆಚ್ಚಾಗುತ್ತಿರುವುದು ಕಳವಳಕಾರಿ ವಿಷಯ. ಈ ಆತಂಕಕಾರಿ ಬೆಳವಣಿಗೆಯನ್ನು ತಡೆಗಟ್ಟಲು ಕೂಡಲೇ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ವಿಶ್ವ ಆರೋಗ್ಯ ಸಂಸ್ಥೆ ಸರಕಾರ ಮತ್ತು ಸರಕಾರೇತರ ಸಂಸ್ಥೆಗಳ ಜೊತೆ ಜಾಗೃತಿ ಮೂಡಿಸಲು,…