ಗಾಂಧೀ ಗಿಡ / ಶ್ರೀ. ಬಸವರಾಜ ಚಿನಗುಡಿ, ಚನ್ನಮ್ಮನ ಕಿತ್ತೂರ, ಬೆಳಗಾವಿ ಜಿಲ್ಲೆ.
ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಗಾಂಧೀ ಮಡ್ಡಿಯಲ್ಲಿ ಬೃಹಾದಾಕಾರದಲ್ಲಿ ಬೆಳೆದು ನಿಂತ ಗಾಂಧೀ ಗಿಡ (ಆಲದ ಮರ). ದಾರವಾಡ ಮತ್ತು ಬೆಳಗಾವಿ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣೆ-ಬೆಂಗಳೂರು ರಾಷ್ಟೀಯ ಹೆದ್ದಾರಿ-4 ರಿಂದ ಸುಮಾರು 7 ಕಿ.ಮೀ ದೂರದಲ್ಲಿ ತಿಗಡೊಳ್ಳಿ ಎಂಬ ಗ್ರಾಮ ಇದೆ. ಈ ಗ್ರಾಮ ಸ್ವಾತಂತ್ರ್ಯ ಪೂರ್ವದಿಂದಲೂ ಮಹೋನ್ನತ ಇತಿಹಾಸ ಹೊಂದಿದೆ. ಸ್ವಾತಂತ್ರ ಹೋರಾಟ, ಆರ್ಥಿಕವಾಗಿ, ಸಾಹಿತ್ಯಿಕವಾಗಿ, ರಾಜಕೀಯವಾಗಿ ವೈಭವದಿಂದ ಮೆರೆದ ಗ್ರಾಮ. ತಿಗಡೊಳ್ಳಿ ಗ್ರಾಮವು ಸ್ವಾತಂತ್ರ ಹೋರಾಟದಲ್ಲಿ ತನ್ನದೆ ಆದ ಛಾಪು ಮೂಡಿಸಿ 1942 ರ ಚಲೇಜಾವ್ ಚಳುವಳಿಯ ಕಾಲದಲ್ಲಿ ಮಹತ್ವದ…