ರಗಳೆ ಕವಿ ಹರಿಹರನ “ಬಸವರಾಜದೇವರ ರಗಳೆ: ಒಂದು ಸಾಂಸ್ಕೃತಿಕ ಮುಖಾಮುಖಿ” | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಮತ್ತೆ ಕೇಳಲೆ ಕುಮಾರವ್ಯಾಸ ಬಸವನಿಪ್ಪತ್ತೈದು ಸ್ಥಲದ ರಗಳೆಯ ಮಾಡಿ ನಲಿವುತ್ತುದಾತ್ತಭಕ್ತಿಯೊಳಾ ವಿರೂಪಾಕ್ಷ ನೆಡೆಗೊಯ್ಯಲಿನಿದು ಮಿಗಿಲಾದುದೆಂದುಹೊತ್ತಗೆಯ ತೆಗೆದುಕೊಂಡುರೆ ನುಂಗಿದಂ ಚೆನ್ನೆಯಿತ್ತ ಪಾಲ್ಗುಡಿದಂತೆ ಸರ್ವರುಂ ಪೊಗಳಿದರುಚಿತ್ತಜಮದಾರಣ್ಯದಾವ ಹರಿಹರದೇವ ಕವಿಚಕ್ರವರ್ತಿಯೆಂದು(ಹರಿಹರ ಕವಿಯ ಬಸವರಾಜದೇವರ ರಗಳೆ/ಟಿ. ಎಸ್.‌ ವೆಂಕಣ್ಣಯ್ಯ/ಪೀಠಿಕೆ/ಪುಟ ಸಂಖ್ಯೆ. xiii) 12 ನೇ ಶತಮಾನದ ಬಸವಾದಿ ಶರಣರ ಪಕ್ಷಿನೋಟ ಕಣ್ಣೆದುರಿಗೆ ಬಂದಾಗಲೆಲ್ಲಾ ಕನ್ನಡದ ಕವಿ ಹರಿಹರ ಮತ್ತು ತೆಲುಗು ಭಾಷೆಯ ಕವಿ ಪಾಲ್ಕುರಿಗೆ ಸೋಮನಾಥ ಹಾಗೂ ಮಲ್ಲಿಕಾರ್ಜುನ ಪಂಡಿತಾರಾಧ್ಯರು ಕೋಲ್ಮಿಂಚಿನಂತೆ ಬೆಳಗುತ್ತಾರೆ. ಶರಣರ ಇತಿಹಾಸ ಮತ್ತು ಲಿಂಗಾಯತ ಧರ್ಮತತ್ವಗಳ ಅನ್ವೇಷಣೆಯಲ್ಲಿ ಪೂರಕವಾಗುವಂತೆ ತೆಲುಗಿನಲ್ಲಿ ಬರೆದ ಮೂರು ಉತ್ಕೃಷ್ಠ ಗ್ರಂಥಗಳೆಂದರೆ ಹರಿಹರನ ರಗಳೆಗಳು,…

0 Comments

ವಚನ ಪಯಣದ ಬೆಳಗು | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ನಮ್ಮ ಬದುಕಿನ ತಲ್ಲಣಗಳನ್ನು  ಸಂಘರ್ಷಗಳನ್ನು ತರ್ಕಿಸುವಾಗ  ಅನೇಕ ತಾತ್ವಿಕ ಧಾರೆಗಳು ಮುಖಮುಖಿಯಾಗುತ್ತವೆ, ಶರಣರ ಹಣತೆ ಬೆಳಕು ಜ್ಯೋತಿ ಒಂದು ವ್ಯವಸ್ಥಿತವಾದ  ವೈಚಾರಿಕ  ಆಕರವದು. ಭೌತಿಕ ಮತ್ತು ಅಧ್ಯಾತ್ಮದಲ್ಲಿ  ಇದಕ್ಕೆ ನಾನಾ ಅರ್ಥಗಳಿವೆ. ನಮ್ಮ ಸಂಸ್ಕೃತಿಯನ್ನು ಎತ್ತರಿಸುವ, ವಿಶಾಲವಾಗಿಸುವ ಪರಿಕ್ರಮವು ಇದರಲ್ಲಿ ಅಡಗಿದೆ. ದೀಪವನ್ನು ಹಚ್ಚುವುದು ಕೇವಲ ಆಚರಣೆಯಲ್ಲ. ನಮ್ಮ ಅಂತರಂಗದ ಜ್ಯೋತಿಯನ್ನು ಹೊರಗೆ ಬೆಳಗಿಸುವ ಒಂದು ಅವಕಾಶವದು. ಹಣತೆ ಎಂಬ ಪದವೇ ಶರಣರ ಬಯಲಿನಲ್ಲಿ  ಮನುಷ್ಯರು ಕಂಡುಕೊಂಡ ಸಂಸ್ಕೃತಿಯಾಗಿರಬಹುದು. ಪಂಚಭೂತಗಳಿಂದಾದ ಮನುಷ್ಯನ ಈ ದೇಹವನ್ನು ಹಣತೆಗೆ ಹೋಲಿಸಿ  ಅದರಂತೆ ಪರೋಪಕಾರಿಯಾಗಿ ಬೆಳಗಬೇಕು. ವಚನಕಾರರು ಪ್ರಣತಿ ಜ್ಯೋತಿ ತೈಲವನ್ನು ವಿಶೇಷವಾಗಿ ಕಂಡಿದ್ದಾರೆ. ಅರಿವಿನ…

0 Comments

ಶರಣ ವೈದ್ಯ ಸಂಗಣ್ಣನವರ ವಚನ ವಿಶ್ಲೇಷಣೆ | ಶ್ರೀಮತಿ. ಗೌರಿ ಓಂಪ್ರಕಾಶ ಕರಣಗಿ, ಕಲಬುರಗಿ.

ಕಣ್ಣು ಕಳೆದ ಮತ್ತೆ ಅಂಜನಕ್ಕೆ ತಿಳಿವುದೇ?ಆತ್ಮನಿದ್ದಲ್ಲಿ ಅರಿಯದೆ ಅಸುಸತ್ತ ಮತ್ತೆ ಮೋಕ್ಷವನರಸಲುಂಟೆ?ಎಚ್ಚರಿಕೆ ತನಗಿದ್ದಲ್ಲಿ ನಾನೊಂದು ನಿಶ್ಚಯದ ಮದ್ದು ತಂದೆ,ಆ ಮದ್ದಿನ ಭೇದ ಘಟಕ್ಕೆ ಕೇಡಿಲ್ಲ.ಆತ್ಮಂಗೆ ಭವವಿಲ್ಲ, ಅರಿವಿಂಗೆ ತುದಿ ಮೊದಲಿಲ್ಲ.ಇದು ನಿರಿಗೆ ಕೊಳಬಲ್ಲಡೆ,ಗುರುವಿಂಗೆ ತನು, ಲಿಂಗಕ್ಕೆ ಮನ, ಜಂಗಮಕ್ಕೆ ಧನರೋಗ ಹೋಯಿತ್ತು, ಬೇಗ ಅರಿದುಕೊಳ್ಳಿ,ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗ ಸಾಕ್ಷಿಯಾಗಿ.(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-56/ವಚನ ಸಂಖ್ಯೆ-116) ಶರಣ ವೈದ್ಯ ಸಂಗಣ್ಣನವರು 12 ನೇ ಶತಮಾನದ ಅನುಭವ ಮಂಟಪದ ಮಹಾನುಭಾವಿಯಾಗಿದ್ದ ವಚನಕಾರರು. ಇವರ ವೈಯಕ್ತಿಕ ಅಂಶಗಳ ಮಾಹಿತಿ ಲಭ್ಯವಿರುವುದಿಲ್ಲ. ಕೆಲವು ವಿಧ್ವಾಂಸರ ಪ್ರಕಾರ ಇವರು ಮೂಲತಃ ಆಸ್ಸಾಂದವರಾಗಿರಬಹುದೆಂಬುದು. ಆದರೆ ವಚನ…

0 Comments

ಮಹಾನವಮಿ|ವಿಜಯದಶಮಿ: ಸತ್ಯ ಶರಣರ ಕಗ್ಗೊಲೆಯಾದ ದಿನ | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಸತ್ಯ ಶರಣರ ಕಗ್ಗೊಲೆಯಾದ ದಿನ. ವೈದಿಕರ ವಂಚನೆಗೆ ಸತ್ಯ ಸತ್ತ ದಿನ. ಶರಣರಿಗೆ ಮರಣವು ಮಹಾನವಮಿಯಾಯಿತು! ವೈದಿಕರಿಗೆ ವಿಜಯೋತ್ಸವವಾಯಿತು! ಲಿಂಗಾಯತ ಧರ್ಮದವರಾದ ನಾವು ವಿಜಯೋತ್ಸವ ಆಚರಿಸುವುದು ಸತ್ಸಂಪ್ರದಾಯವೋ ಅಥವಾ ಸತ್ತ ಸಂಪ್ರದಾಯದವೋ ಸ್ವಲ್ಪ ಯೋಚಿಸಿ. ಭಾರತ ಅಷ್ಟೇ ಅಲ್ಲಾ ಇಡೀ ಪ್ರಪಂಚದ ಇತಿಹಾಸದಲ್ಲಿ 12 ನೆ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ, ಮತಾಂಧತೆ, ಶೋಷಣೆ, ಮೌಡ್ಯಗಳಿಂದ ಮುಳುಗಿಹೋಗಿದ್ದ ಸಮಾಜವನ್ನು ಮೇಲೆತ್ತಲು ಬಸವಣ್ಣನವರು ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿಯ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶ ಎನ್ನುವುದನ್ನು ನಾವು ಗಮನಿಸಬೇಕು. ಕನ್ನಡ…

0 Comments

ಅರಿವಿನ ಮಂಟಪ: ಅನುಭವ ಮಂಟಪ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

“ಮಂಟಪ” ದ ಪರಿಕಲ್ಪನೆ ಸ್ಥಾವರವೆನಿಸಿದರೂ “ಅನುಭವ” ವೆಂಬುದು ಸದಾ ಚಲನಶೀಲವಾದುದು. 12 ನೇ ಶತಮಾನದ ಸಂದರ್ಭವಂತೂ ಅನುಭವಗಳ ದಾಖಲೀಕರಣ. ಅದು ಅರಿವಿನ ಸ್ಪೋಟವಾದ ಯುಗ, ಮಾನವರ ಬದುಕಿನಲ್ಲಿ ಅನುಭವವೆಂಬುದು ಅರಿವಿನ ಮೂಲಸ್ಥಾನ. ಯಾರು ಬದುಕನ್ನು ಅನುಭವಿಸುತ್ತಾ ಬದುಕುತ್ತಾರೋ ಅಂತಹವರಿಗೆ ಮಾತ್ರ ಅನುಭವದ ನಿಜದ್ರವ್ಯ ದೊರೆಕಿಕೊಳ್ಳಲು ಸಾಧ್ಯ. ಒಂದು ಸಮುದಾಯ ಇನ್ನೊಂದು ಸಮುದಾಯದ ಅಶೋತ್ತರಗಳಿಗೆ ಸ್ಪಂದಿಸುತ್ತಾ ತಾನು ಬದುಕುತ್ತಾ ಇತರಿಗೂ ಆ ಬದುಕು ದೊರೆಯಲಿ ಎಂದು ಬಯಸುವ ಸಹಜೀವನದ ಈ ಸರಳ ವಿಧಾನದ ಬದುಕು 12 ನೇ ಶತಮಾನದ ಶರಣರದಾಗಿತ್ತು. ಇವರೆಲ್ಲ ಕಾಯಕ ಜೀವಿಗಳಾಗಿದ್ದರು. ವಿವಿಧ ವೃತ್ತಿಗಳನ್ನು ಅವಲಂಬಿಸಿದ…

0 Comments

ಬಸವಣ್ಣನವರ ವಚನ ವಿಶ್ಲೇಷಣೆ |  ಡಾ. ನೀಲಾಂಬಿಕಾ ಪೋಲಿಸ ಪಾಟೀಲ, ಕಲಬುರಗಿ.

ಉದಕದೊಳಗೆ ಬಯ್ಚಿಟ್ಟ ಬಯ್ಕೆಯ ಕಿಚ್ಚಿನಂತಿದ್ದಿತ್ತು.ಸಸಿಯೊಳಗಣ ರಸದ ರುಚಿಯಂತಿದ್ದಿತ್ತು.ನನೆಯೊಳಗಣ ಪರಿಮಳದಂತಿದ್ದಿತ್ತು.ಕೂಡಲಸಂಗಮದೇವ ಕನ್ನೆಯ ಸ್ನೇಹದಂತಿದ್ದಿತ್ತು. (ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-5/ವಚನ ಸಂಖ್ಯೆ-1) ಬಸವಣ್ಣನವರು ವಿಶ್ವ ಕಂಡ ಮಹಾನ್ ದಾರ್ಶನಿಕರು ಮತ್ತು ಮಹಾನ್ ಮಾನವತಾವಾದಿಗಳು. ಮಾನವ ಇಹ-ಪರ ಎರಡನ್ನೂ ಹೇಗೆ ಸಾಧಿಸಕೊಳ್ಳಬೇಕೆಂಬುದನ್ನು ತಮ್ಮ ನಡೆ ಮತ್ತು ನುಡಿಯಿಂದ ತೋರಿಸಿ ಕೊಟ್ಟವರು. ಹುಟ್ಟಿದ್ದು ವಿಜಯಪುರ ಜಿಲ್ಲೆಯ ಬಾಗೇವಾಡಿ, ಸಾಧನಾ ಭೂಮಿ ಅದೇ ಜಿಲ್ಲೆಯ ಕೂಡಲ ಸಂಗಮ, ಕಾಯಕ ಭೂಮಿ ಬೀದರ ಜಿಲ್ಲೆಯ ಬಸವಕಲ್ಯಾಣ. ತಂದೆ ಮಾದರಸ ತಾಯಿ ಮಾದಲಾಂಬಿಕೆ. ಅಕ್ಕ ಶರಣೆ ಅಕ್ಕನಾಗಮ್ಮ, ಮಡದಿಯರು ಶರಣಿ ಗಂಗಾಂಬಿಕೆ ಮತ್ತು ಶರಣಿ ನೀಲಾಂಬಿಕಾ,…

1 Comment

ಪರಿಶುದ್ಧ ಅಂತಃಕರಣದ ಶರಣೆ ಸೂಳೆ ಸಂಕವ್ವೆ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.

12 ನೇ ಶತಮಾನದ ಶರಣ ಚಳುವಳಿ ಎಂಬುದು ಜಗತ್ತು ಕಂಡ ಅಪರೂಪದ ಕಾಲಘಟ್ಟ.  ಶತ-ಶತಮಾನಗಳಿಂದಲೂ ವರ್ಗ, ವರ್ಣ, ಲಿಂಗ ಭೇದದಿಂದ ಶೋಷಿತ ಜನಾಂಗದವರು ತತ್ತರಿಸಿ ಹೋಗಿದ್ದರು. ಬಸವ ಬೆಳಗಿನಲ್ಲಿ ಸ್ವಾತಂತ್ರ್ಯದ ಕಿಟಕಿಗಳನ್ನು ತೆರೆದು ಪರಿಶುದ್ಧವಾದ ಗಾಳಿ, ಬೆಳಕು ಪಡೆದು ಸರ್ವ ಸಮಾನವಾದ ಹಕ್ಕುಗಳಿಗೆ ಭಾಜನರಾಗಿದ್ದು ಇಂದಿಗೂ ಒಂದು ಬೆರಗು. ಅತ್ಯಂತ ನಿಕೃಷ್ಟವಾಗಿ ಕಾಣುತ್ತಿದ್ದ ಹಡಪದ, ಮಾದರ, ಡೋಹರ, ಅಂಬಿಗ, ಮಡಿವಾಳರಂಥ ಕಾಯಕ ಜೀವಿಗಳು ಇಲ್ಲಿ ಸಮಾನ  ಗೌರವವನ್ನು ಕಂಡು ಸ್ವಾಭಿಮಾನದ ಬದುಕಿನ ಭಾಷ್ಯವನ್ನು ಬರೆದರು. ಇನ್ನೂ ಮುಂದುವರೆದು ಕಳ್ಳರು ಸಾರಾಯಿ ಮಾರುವವರು ಕೂಡ ಇಲ್ಲಿ ತಮ್ಮ ಮನಸ್ಸನ್ನು…

0 Comments

ಕಾಯಕ ನಿಷ್ಠೆಯಿಂದ ಅಂತರಂಗದ ಚೈತನ್ಯವನ್ನರಳಿಸಿದ ಶರಣ ಹೂಗಾರ ಮಾದಯ್ಯ ಮತ್ತು ಶರಣೆ ಮಾದೇವಿಯವರು | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ವಚನಾಂಕಿತ : ವಚನಗಳು ಲಭ್ಯವಾಗಿಲ್ಲ.ಜನ್ಮಸ್ಥಳ    : ತಿಳಿದು ಬಂದಿಲ್ಲ.ಕಾಯಕ    : ಹೂಗಾರ (ಶರಣರ ಮನೆಗಳಿಗೆ ಹೂ-ಪತ್ರೆಗಳನ್ನು ನೀಡುವುದು).ಐಕ್ಯಸ್ಥಳ    : ಬಸವ ಕಲ್ಯಾಣ, ಬೀದರ ಜಿಲ್ಲೆ. ಶರಣರ ನೆನೆದಾರ | ಸರಗೀಯ ಇಟ್ಟಾಂಗ ||ಅರಳು ಮಲ್ಲಿಗೆ | ಮುಡಿದ್ಹಾಂಗ ||ಕಲ್ಯಾಣ ಶರಣರ | ನೆನೆಯೋ ನನ ಮನವೇ || ನಮ್ಮ ಜನಪದರು ಎಷ್ಟು ಸೊಗಸಾಗಿ ಶರಣರನ್ನು ನೆನಪಿಸಿಕೊಂಡು ಹಾಡಿದ್ದಾರೆ. ಮುಗ್ಧ ಜನಪದರಿಗೆ ಶರಣರನ್ನು ಕುರಿತು ಹಾಡುವುದೆಂದರೆ ಎಲ್ಲಿಲ್ಲದ ಪ್ರೀತಿ. ಅನುಭಾವದ ಹಿನ್ನೆಲೆಯಲ್ಲಿ ಮುಗ್ಧ ಶರಣರ ಕುರಿತು ರಚಿಸಿದ ಹಾಡು ಯಾವುದೇ ವಿಚಾರದಲ್ಲಿ ಶಿವನ ಪ್ರಕಾಶದಂತೆ…

0 Comments

ವೀರಗಂಟಿ ಮಡಿವಾಳ ಮಾಚಯ್ಯನವರು | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.

12 ನೆಯ ಶತಮಾನದಲ್ಲಿ ಶರಣರು ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಒದಗಿಸಲು ಸಾಮಾಜಿಕ ಕ್ರಾಂತಿಯನ್ನೇ ಮಾಡಿದರು. ಅಂತಹ ಶರಣರ ಅಗ್ರಗಣ್ಯರಲ್ಲಿ ಮಡಿವಾಳ ಮಾಚಯ್ಯನವರು ಒಬ್ಬರು. ಶರಣರ ಸಮುದಾಯದಲ್ಲಿ ಅತ್ಯಂತ ಪ್ರಕಾಶಮಾನವಾಗಿ ಬೆಳಗಿದವರು. ಮಡಿವಾಳ ಮಾಚಯ್ಯನವರದು ಬಹುಮುಖ ವ್ಯಕ್ತಿತ್ವ. ವೀರಶ್ರೀ, ಜ್ಞಾನಪ್ರಭೆ, ಸತ್ಯ, ನಿಷ್ಠೆ, ನ್ಯಾಯನಿಷ್ಟೂರತೆ, ನಿರಹಂಕಾರ,  ನಿರ್ವಂಚಕತ್ವ ಮುಂತಾದ ಸತ್ವಗಳ ಸಂಕಲನವೇ ಮಡಿವಾಳ ಮಾಚಯ್ಯನವರು. ಸಾಮಾನ್ಯವಾಗಿ ಎಲ್ಲ ಶರಣರು ಮಡಿವಾಳ ಮಾಚಯ್ಯನವರನ್ನು ಮಾಚಿತಂದೆ ಎಂದೇ ಕರೆದಿದ್ದಾರೆ. ಶರಣರಲ್ಲಿ ಪ್ರಮುಖರೆನಿಸಿದ ಮಾಚಿತಂದೆಯವರು  ಬಸವಣ್ಣನವರ ಎಲ್ಲ ಕಾಯಕದಲ್ಲಿಯೂ ಸಹಕಾರ ನೀಡಿದರು. ದಾಸೋಹ, ಕಾಯಕ, ವಚನ ನಿರ್ಮಾಣ, ಸಾಮಾಜಿಕ ಪರಿವರ್ತನೆ…

0 Comments

ಆಧುನಿಕ ವಚನಕಾರರ ಸಾಮಾಜಿಕ ಚಿಂತನೆಗಳು | ಪ್ರೊ. ರಾಜಶೇಖರ ಜಮದಂಡಿ, ಮೈಸೂರು.

ಸಾಮಾನ್ಯವಾಗಿ “ವಚನ” ಎಂಬುದಕ್ಕೆ ಮಾತು, ನುಡಿ, ಪ್ರತಿಜ್ಞೆ, ಭಾಷೆ, ಕೊಟ್ಟಮಾತು, ಉಪದೇಶ, ನುಡಿಗಟ್ಟು, ಸಲಹೆ ಎಂದೆಲ್ಲಾ ಕರೆಯಬಹುದು. ಆಗ 12 ನೇ ಶತಮಾನದ ಬಸವಾದಿ ಶರಣರ ವಚನಗಳು ನೆನಪಾಗುತ್ತವೆ. ಅವರು ಸಮಾಜವನ್ನು ತಿದ್ದುವುದಕ್ಕಾಗಿ ವಚನ ರಚನೆ ಮಾಡಿದರೇ ಹೊರತು ಸಾಹಿತ್ಯಕ್ಕಾಗಿ ಅಲ್ಲ. ಅವರ ವಚನಗಳು ದೇಶಕಾಲಾತೀತವಾಗಿರುವುದಲ್ಲದೆ ಈಚೆಗೆ ಭಾಷಾತೀತವಾಗಿ ದೇಶವಿದೇಶಗಳ ಭಾಷೆಗಳಲ್ಲಿ ಅನುವಾದವಾಗಿ ಎಲ್ಲರೂ ಓದುವಂತೆ ಅನುಕೂಲ ಕಲ್ಪಿಸಿರುವುದು ಸ್ತುತ್ಯಾರ್ಹ. ಇದರ ಜಾಡನ್ನು ಹಿಡಿದು 20 ನೇ ಶತಮಾನದಲ್ಲಿ ಆಧುನಿಕ ಕನ್ನಡ ವಿದ್ವಾಂಸರು ಪ್ರಸ್ತುತ ಸಮಾಜವನ್ನು ತಿದ್ದುವ ಪ್ರಯತ್ನದಲ್ಲಿ ತಮ್ಮದೇ ಆದ ವಿಚಾರಗಳನ್ನು ವಚನ ರೂಪದಲ್ಲಿ ಕಟ್ಟಿಕೊಟ್ಟಿದ್ದಾರೆ.…

1 Comment