ವ್ಯೋಮಕಾಯ ಅಲ್ಲಮ ಪ್ರಭುದೇವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ನಿರ್ಣಯವನರಿಯದ ಮನವೆ,ದುಗಡವನಾಹಾರಗೊಂಡೆಯಲ್ಲಾ.ಮಾಯಾ ಸೂತ್ರವಿದೇನೊ!ಕಂಗಳೊಳ[ಗಣ] ಕತ್ತಲೆ ತಿಳಿಯದಲ್ಲಾ!ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು,ಗುಹೇಶ್ವರಾ (ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-19/ವಚನ ಸಂಖ್ಯೆ-45) ಅಲ್ಲಮ ಪ್ರಭುದೇವರು “ಯೌಗಿಕ ಮಹಾಪುರುಷರು” ಹಾಗೂ ಲೋಕ ಸಂಚಾರಿಗಳು. ವಿಶ್ವದ ಉದಾತ್ತ ತತ್ವಜ್ಞಾನಿಗಳಲ್ಲಿ ಪ್ರಭುದೇವರು ಶ್ರೇಷ್ಠರಾದವರು. ಪ್ರಭುಗಳ ವೈಚಾರಿಕತೆ, ಯೌಗಿಕ ನಿಲುವು, ಆಧ್ಯಾತ್ಮದ ಔನ್ನತ್ಯಗಳು ಬೆರಗುಗೊಳಿಸುವಂತಹವು. ಲೋಕ ಸಂಚಾರಿಗಳಾಗಿ ಲೋಕದ ಅನುಭವಗಳ ಮೂಲಕ ಸತ್ಯದರ್ಶನವನ್ನು ಕಂಡುಕೊಂಡ ಸಿದ್ಧಪುರುಷರಿವರು. ಅಲ್ಲಮ ಪ್ರಭುಗಳು ವಚನಗಳ ತಾತ್ವಿಕ ಅಧ್ಯಯನ ಕೈಗೊಂಡವರಿಗೆ ತಿಳಿಯುವ ಸಂಗತಿಯೆಂದರೆ ಪ್ರಭುಗಳ ಭಾವುಕತೆಗೆ ಒಳಗಾಗದ ವೈಚಾರಿಕ ಮನಸ್ಥಿತಿಯವರು ಎಂಬುದು. ಪ್ರಭುದೇವರು ಮೃದಂಗವಾದನದಂತಹ ಕಲೆಯಲ್ಲಿ ನಿಪುಣರಾದ ಒಬ್ಬ ಕಲಾವಿದ. ಹೀಗಾಗಿ ತಮ್ಮ…

0 Comments

ಶಿವಶರಣ ಸೊನ್ನಲಾಪುರದ ಸಿದ್ದರಾಮ ಶಿವಯೋಗಿಗಳು | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸೂಗೂರು.

“ವೈರಾಗ್ಯಕ್ಕೆ ಅಲ್ಲಮ, ಭಕ್ತಿಯೋಗಕ್ಕೆ ಬಸವಣ್ಣ, ಅನುಭಾವಕ್ಕೆ ಅಕ್ಕಮಹಾದೇವಿ, ಕಾಯಕಕ್ಕೆ ಸಿದ್ದರಾಮ” ಜಗತ್ತು ಕಂಡ ಶ್ರೇಷ್ಠ ಕರ್ಮಯೋಗಿಗಳಲ್ಲಿ ಯೋಗತಪಸ್ವಿ ಶಿವಯೋಗಿ ಸಿದ್ದರಾಮೇಶ್ವರರ ಆದರ್ಶಮಯ ಜೀವನ ಚರಿತ್ರೆಯ ಕುರಿತು ಲೇಖನ. ಹನ್ನೆರಡನೇಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣದ ಕ್ರಾಂತಿ ಕರ್ನಾಟಕದ ಇತಿಹಾಸದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಮಹತ್ವಪೂರ್ಣವಾದುದು. ಅದು ಯಾವುದೇ ಒಂದು ವರ್ಗದ ಹಿತ ಕಾಪಾಡುವ ಚಳುವಳಿಯಾಗದೆ, ಸಮಾಜದಲ್ಲಿನ ಕೆಳ ವರ್ಗದವರಿಂದ ಹಿಡಿದು ಎಲ್ಲಾ ವರ್ಗಗಳ ಹಿತವನ್ನು ಕಾಪಾಡಲು ಸಮಾನತೆಯ ತಳಹದಿಯ ಮೇಲೆ ನಡೆಸಿದ ಮುಕ್ತ ಮನಸ್ಸುಗಳ ಒಂದು ವಿಶಿಷ್ಟ ಅಂದೋಲನವಾಗಿತ್ತು. ಬಸವಾದಿ ಶರಣರು ಜನಭಾಷೆಯಲ್ಲಿ ತಮ್ಮ ಕಾಯಕದ…

0 Comments

ಕರ್ಮಯೋಗಿಯಿಂದ ಶಿವಯೋಗಿಯಾದ ಶರಣ ಸಿದ್ಧರಾಮೇಶ್ವರರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಎನ್ನನಾಗಳೆ ಬಂದಿವಿಡಿದೆ ಗಡ ನೀನು.ನಿಮ್ಮ ಹಿಡಿವಡೆ ಹಿಡಿವರು, ತನುವಿರೆ ತನು ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಮನವಿರೆ ಮನ ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಕೈಯಿರೆ ಕೈಬೇರಾದವರು.ಈಸುಳ್ಳವರು ಮೊದಲಾಗಿ ನಿಮ್ಮ ಹಿಡಿಯಲಾರರು.ಕಪಿಲಸಿದ್ಧಮಲ್ಲಿಕಾರ್ಜುನಾನಿಮ್ಮ ಹಿಡಿದು ತಡೆಯಲಾನೇತರವನಲ್ಲ.ಕರುಣದಿಂದ ಬಾರಾ, ಎನ್ನ ದೇವರ ದೇವಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-388/ವಚನ ಸಂಖ್ಯೆ-1246) ಶರಣ ಸಂಕುಲದಲ್ಲಿ ಶಿವಯೋಗಿ ಸಿದ್ಧರಾಮರದು ತುಂಬಾ ಮಹತ್ವದ ಪಾತ್ರವಾಗಿದೆ. ವಿಶಿಷ್ಟ ಆಲೋಚನೆಯುಳ್ಳ ಸಿದ್ಧರಾಮೇಶ್ವರರು ಅದ್ಭುತ ಕನಸುಗಾರರು. “ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ಶಿವಯೋಗಿಯ ಶರೀರಂ ವೃಥಾ ಸವೆಯಲಾಗದು, ಅನುಗೊಂಬನಿತು ಕಾಯಕ ನಡೆಯಬೇಕು” ಎಂಬುದು ಇವರ ಧ್ಯೇಯವಾಕ್ಯವಾಗಿತ್ತು. ಅಂಗಕ್ಕೆ ಲಿಂಗೋಪದೇಶ ಮನಕ್ಕೆ ಮಂತ್ರೋಪದೇಶವಾದ…

0 Comments

ಮಹಾಮಹಿಮ, ಕಾಯಕಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಪರಿಚಯ ಲೇಖನ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ,

ಬಸವಣ್ಣನೇ ತಾಯಿ, ಬಸವಣ್ಣನೇ ತಂದೆಬಸವಣ್ಣನೇ ಪರಮಬಂಧುವೆನಗೆ.ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನ,ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಎಂಬುದು ವಚನ ಸಾಹಿತ್ಯದ ಒಂದು ಪ್ರಸಿದ್ಧ ವಚನ. ಸಿದ್ದರಾಮರು ಬಸವಣ್ಣನವರಲ್ಲಿಯೇ ತಂದೆ, ತಾಯಿ, ಬಂಧು, ಬಳಗ ಎಲ್ಲರನ್ನ ಕಾಣುವ ಭಕ್ತಿ ಭಾವನೆಯನ್ನು ಸೂಚಿಸುವ ವಚನ. 12 ನೇಯ ಶತಮಾನದ ಶಿವ-ಶರಣರಲ್ಲಿ ಅಲ್ಲಮಪ್ರಭುಗಳು ಜಂಗಮಲಿಂಗ ಎಂದು, ಬಸವಣ್ಣನವರು ಭಕ್ತಿ ಭಂಡಾರಿ ಎಂದು, ಅಕ್ಕಮಹಾದೇವಿಯವರಿಗೆ ವೀರ ವಿರಾಗಿಣಿ ಎಂದು, ಚನ್ನಬಸವಣ್ಣನವರು ಷಟ್‌ಸ್ಥಳ ಜ್ಞಾನಿ ಎಂದು ಪ್ರಸಿದ್ಧರಾಗಿದ್ದರೆ ಶರಣ ಸಿದ್ದರಾಮಯ್ಯನವರು ಶಿವಯೋಗಿ ಎಂದು ಪ್ರಸಿದ್ಧರಾಗಿದ್ದಾರೆ. ಅನುಭವ ಮಂಟಪದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುತ್ತಾ ಸೊಡ್ಡಳ…

0 Comments

ಸರಳತೆ ಮತ್ತು ಉದಾರತೆಯ ಹರಿಕಾರ: ಹರ್ಡೇಕರ ಮಂಜಪ್ಪನವರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ತನುವ ತೋಂಟವ ಮಾಡಿ, ಮನವ ಗುದ್ದಲಿ ಮಾಡಿ,ಅಗೆದು ಕಳೆದೆನಯ್ಯಾ ಭ್ರಾಂತಿನ ಬೇರ.ಒಡೆದು ಸಂಸಾರದ ಹೆಂಟೆಯ,ಬಗಿದು ಬಿತ್ತಿದೆನಯ್ಯಾ ಬ್ರಹ್ಮಬೀಜವ.ಅಖಂಡಮಂಡಲವೆಂಬ ಬಾವಿ, ಪವನವೆ ರಾಟಾಳ,ಸುಷುಮ್ನನಾಳದಿಂದ ಉದಕವ ತಿದ್ದಿ,ಬಸವಗಳೈವರು ಹಸಗೆಡಿಸಿಹವೆಂದುಸಮತೆ ಸೈರಣೆಯೆಂಬ ಬೇಲಿಯನಿಕ್ಕಿ,ಆವಾಗಳೂ ಈ ತೋಂಟದಲ್ಲಿ ಜಾಗರವಿದ್ದುಸಸಿಯ ಸಲಹಿದೆನು ಕಾಣಾ ಗುಹೇಶ್ವರಾ.(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-95/ವಚನ ಸಂಖ್ಯೆ-231) ಜಂಗಮ ಜ್ಯೋತಿಯಾಗಿ ಲೋಕಪರ್ಯಟನೆಯ ಮೂಲಕ ಸತ್ಯದ ಕಾಣಿಕೆಯನ್ನು ಗುರುತಿಸಿ ಸಕಲರ ಎದೆಯಲ್ಲಿ ಅರಿವಿನ ಬೀಜ ಬಿತ್ತಿದ ವ್ಯೋಮಕಾಯ ಮೂರ್ತಿಗಳಾದ ಅಲ್ಲಮ ಪ್ರಭುಗಳ ವಚನದಂತೆ ಸತ್ಯದ ಬದುಕನ್ನು ಬದುಕಿದ ಹರ್ಡೇಕರ ಮಂಜಪ್ಪನವರು ಸರಳತೆ ಮತ್ತು ಉದಾರತೆ ಎಂಬ ತತ್ವಗಳಡಿಯಲ್ಲಿ ತಮ್ಮ ಬದುಕನ್ನು ಸವೆಯಿಸಿದವರು.…

1 Comment

ಚಿಙ್ಮಯಜ್ಞಾನಿ ಚೆನ್ನಬಸವಣ್ಣನವರ ವಚನ – ನಿರ್ವಚನ | ಶ್ರೀಮತಿ. ಲಲಿತಾ ಇಬ್ರಾಹಿಂಪೂರ, ಕಲಬುರಗಿ.

ಆಕಾಶದಲ್ಲಾಡುವ ಪಟಕ್ಕಾದಡೆಯೂಮೂಲಸೂತ್ರವಿರಬೇಕು.ಕಲಿಯಾದಡೆಯೂ ಕಜ್ಜವಿಲ್ಲದೆ ಆಗದು.ಭೂಮಿಯಿಲ್ಲದೆ ಬಂಡಿ ನಡೆವುದೆ?ಅಂಗಕ್ಕೆ ಲಿಂಗವಿಲ್ಲದೆ ನಿಸ್ಸಂಗವಾಗಬಾರದು.ಕೂಡಲಚೆನ್ನಸಂಗಮದೇವರಲ್ಲಿ ಸಂಗವಿಲ್ಲದೆನಿಸ್ಸಂಗಿಯೆಂದು ನುಡಿಯಬಹುದೆ ಪ್ರಭುವೆ?(ಸಮಗ್ರ ವಚನ ಸಂಪುಟ: ಮೂರು-2021/ಪುಟ ಸಂಖ್ಯೆ-419/ವಚನ ಸಂಖ್ಯೆ-990) ಷಟ್‌ಸ್ಥಲ ಚಕ್ರವರ್ತಿಯೆಂದೇ ಪ್ರಸಿದ್ಧರಾಗಿರುವ ಮಹಾಜ್ಞಾನಿ ಚೆನ್ನಬಸವಣ್ಣನವರ ವಚನವಿದು. ಇವರು ಶರಣೆ ಅಕ್ಕನಾಗಮ್ಮನವರ ಮತ್ತು ಶರಣ ಶಿವಸ್ವಾಮಿಯವರ ಸುಪುತ್ರರು. ಬಸವಣ್ನನವರ ಸೋದರಳಿಯ. ಕೂಡಲಸಂಗಮದಲ್ಲಿ ಜನಿಸಿದ ಇವರು ಕಲ್ಯಾಣದಲ್ಲಿ ಅನುಭವ ಮಂಟಪದ ಜವಾಬ್ದಾರಿಯನ್ನು ಹೊತ್ತಿದ್ದವರು. ಕಲ್ಯಾಣ ಕ್ರಾಂತಿಯ ನಂತರ ವಚನ ಸಾಹಿತ್ಯದ ಉಳುವಿಗಾಗಿ ಹೋರಾಟ ಮಾಡಿದವರು. ಉಳುವಿಯಲ್ಲಿ ಲೀಂಗೈಕ್ಯರಾದವರು. ಕೂಡಲ ಚೆನ್ನಸಂಗಮದೇವಾ ಎನ್ನುವ ವಚನಾಂಕಿತದಿಂದ ವಚನಗಳನ್ನು ಬರೆದಿದ್ದಾರೆ. ಇಲ್ಲಿಯವರೆಗೆ 1792 ವಚನಗಳು ಲಭ್ಯವಾಗಿವೆ.   ನಿರ್ವಚನ:ಅಲ್ಲಮ ಪ್ರಭುಗಳು…

0 Comments

ಶರಣೆ ಆಮುಗೆ ರಾಯಮ್ಮ | ಡಾ. ಸರ್ವಮಂಗಳ ಸಕ್ರಿ, ರಾಯಚೂರು,

ಭಕ್ತಿ ಜ್ಞಾನ ವೈರಾಗ್ಯದಿಂದ ವಿರಕ್ತನಾಗಿನನ್ನವರು ತನ್ನವರೆಂದು ನುಡಿವ ಕುನ್ನಿಗಳವಿರಕ್ತರೆಂಬೆನೆ ಅಯ್ಯಾ?ಪಕ್ಷ ಪರಪಕ್ಷಂಗಳನರಿತುಹೇಹಂಗಳ ಜರಿಯಬಲ್ಲಡೆ ವಿರಕ್ತನೆಂಬೆನು.ತ್ರಿವಿಧವನತಿಗಳೆದು ವಿರಕ್ತನಾದ ಬಳಿಕತ್ರಿವಿಧವ ಹಿಡಿದ ಗುರುವ ಕಂಡಡೆ,ಅವನ ಅಡಿಗೆರಗಿದೆನಾದಡೆಅಘೋರ ನರಕ ತಪ್ಪದು, ಅದೇನು ಕಾರಣವೆಂದಡೆಭವಪಾಶಂಗಳ ಹರಿದು ಅವಿರಳನಾದ ಕಾರಣ,ವ್ರತಭ್ರಷ್ಟ ಲಿಂಗಬಾಹ್ಯನ ಮುಖವ ನೋಡೆನು.ಹೊನ್ನು ಹೆಣ್ಣು ಮಣ್ಣು ಹಿಡಿವರ ಕಂಡಡೆ,ಎನ್ನ ಗುರುವೆಂದು ಅಡಿಗೆರಗೆನು,ಬಸವಣ್ಣನೆ ಸಾಕ್ಷಿಯಾಗಿ ಅಮುಗೇಶ್ವರಲಿಂಗವೆ.(ಸಮಗ್ರ ವಚನ ಸಂಪುಟ: ಐದು-2021/ಪುಟ ಸಂಖ್ಯೆ-255/ವಚನ ಸಂಖ್ಯೆ-668)  ಶರಣೆ ಆಮುಗೆ ರಾಯಮ್ಮ: ಶರಣ ಅಮುಗೆ ದೇವಯ್ಯನವರ ಧರ್ಮಪತ್ನಿ ಶರಣೆ ಅಮುಗೆ ರಾಯಮ್ಮನವರು ವಿಜಯಪುರ ಜಿಲ್ಲೆಯ ಪುಳಜೆ ಎಂಬ ಗ್ರಾಮದವರು. ಇವರು ಕಂಬಳಿ ನೇಯಗೆ ಕಾಯಕದಲ್ಲಿ ತೊಡಗಿಸಿಕೊಂಡವರು. ಶರಣೆ ಅಮಗೆ ರಾಯಮ್ಮನವರ ಮೊದಲ ಹೆಸರು…

0 Comments

ಹಡಪದ ಅಪ್ಪಣ್ಣನವರ ವಚನ – ನಿರ್ವಚನ | ಶ್ರೀಮತಿ. ಶಿವಲೀಲಾ ಭೀಮಳ್ಳಿ, ಕಲಬುರಗಿ.

ವಂದನೆಗೆ ನಿಲ್ಲಬೇಡ, ನಿಂದೆಗಂಜಿ ಓಡಲಿಬೇಡ.ಹಿಂದು ಮುಂದು ಆಡಲಿಬೇಡ, ಸಂದೇಹಗೊಳಲಿಬೇಡ.ದ್ವಂದ್ವಬುದ್ಧಿಯ ಕಳೆದು ನಿಂದಿರೆ,ಬಸವಪ್ರಿಯ ಕೂಡಲಚೆನ್ನಬಸವಣ್ಣ.(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-423/ವಚನ ಸಂಖ್ಯೆ-1030) ಬಸವಣ್ಣನವರ ಮಹಾಮನೆಯ ಮೇಲ್ವಿಚಾರಕರಾಗಿ ಅವರಿಗೆ ಅತ್ಯಂತ ಸಮೀಪದಲ್ಲಿದ್ದು ಬಸವಣ್ಣನವರು ಲಿಂಗೈಕ್ಯರಾಗುವತನಕವೂ ಅವರೊಂದಿಗಿದ್ದ ಮಹಾಶರಣರು ಹಡಪದ ಅಪ್ಪಣ್ಣನವರು. ಇವರು ಮೂಲತಃ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಮುಸಬಿನಾಳ ಗ್ರಾಮದವರು. ಇವರ ತಂದೆಯ ಹೆಸರು ಚೆನ್ನವೀರಪ್ಪ ಮತ್ತು ತಾಯಿಯವರ ಹೆಸರು ದೇವಕ್ಕಮ್ಮ. ಮಡದಿ ಸುಪ್ರಸಿದ್ಧ ವಚನಕಾರ್ತಿ ಲಿಂಗಮ್ಮ ತಾಯಿ. ಇವರ ಅಂಕಿತನಾಮ “ಬಸವಪ್ರಿಯ ಕೂಡಲ ಚೆನ್ನಬಸವಣ್ಣ”. ಸಿಕ್ಕ ಒಟ್ಟು ವಚನಗಳು 250. ಕಾಯಕ ಕ್ಷೌರಿಕ ವೃತ್ತಿ. ನಿರ್ವಚನ:ಹಡಪದ ಅಪ್ಪಣ್ಣನವರು…

0 Comments

ಕಾಯಕವೇ ಪ್ರಾಣವಾದ ಶರಣ ಮೇದಾರ ಕೇತಯ್ಯನವರು | ಶ್ರೀ. ಗುರುಪ್ರಸಾದ ಕುಚ್ಚಂಗಿ, ಬೆಂಗಳೂರು.

ಪತ್ನಿ: ಸಾತವ್ವೆ.ಕಾಯಕ: ಗವರಿಗೆ / ಬಿದಿರು ಹೆಣೆಯುವ ಕಾಯಕಸ್ಥಳ: ಉಳವಿ ಬೆಟ್ಟ, ಬೇಲೂರು ತಾಲ್ಲೂಕುಜಯಂತಿ: ಬನದ ಹುಣ್ಣಿಮೆಯಂದು. ಲಭ್ಯವಿರುವ ವಚನಗಳ ಸಂಖ್ಯೆ: 18ಅಂಕಿತ: ಗವರೇಶ್ವರಲಿಂಗ. ಬಸವಯುಗದ ಧೃವತಾರೆ ಕಾಯಕವನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಕಾಯಕ ಜೀವಿ  ಬಸವಣ್ಣನವರ ಜೀವಪರ ಸಾಮಾಜಿಕ ಶೈಕ್ಷಣಿಕ ಹೋರಾಟಕ್ಕೆ ಮನಸೋತು ಬಂದ ಮೇರು ವ್ಯಕ್ತಿತ್ವವೇ ಶಿವಶರಣ ಮೇದಾರ ಕೇತಯ್ಯನವರು. ಇವರು ಬಸವಣ್ಣನವರಿಂದ ಪ್ರಭಾವಿತರಾಗಿ ಅತ್ಯಂತ ಉತ್ಸಾಹಿಗಳಾಗಿ ಶರಣರ ಚಳುವಳಿಯಲ್ಲಿ ಪಾಲ್ಗೊಂಡವರು ಕೇತಯ್ಯ ಶರಣರು. ಇವರು ಬಸವಣ್ಣನವರನ್ನು ಗುರುವಾಗಿ ಸ್ವೀಕರಿಸಿದವರು. ಬಸವಣ್ಣನವರ ಪ್ರಭಾವದಿಂದ ಗುರು-ಲಿಂಗ-ಜಂಗಮದಲ್ಲೇ ನಿಜಸುಖವನ್ನು ಕಂಡವರು. ಭಕ್ತರಾಗಿ, ಶರಣರಾಗಿ  ಕಾಯಕದಲ್ಲೇ ಕೈಲಾಸವನ್ನು ಕಂಡವರು.…

0 Comments

ಕಾಯಕಯೋಗಿ ಶಿವಶರಣ ಮೇದಾರ ಕೇತಯ್ಯನವರು | ಶ್ರೀಮತಿ. ಅನುಪಮ ಪಾಟೀಲ, ಹುಬ್ಬಳ್ಳಿ.

ಸಾವಿರಾರು ವರ್ಷಗಳಿಂದ ಬೇರೂರಿದ ವರ್ಣಾಶ್ರಮ, ಅಂಧಶೃಧ್ಧೆ, ಶೋಷಣೆ ಮುಂತಾದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಡಿ ಸಾಮಾಜಿಕ ಕ್ರಾಂತಿಯನ್ನು ಮಾಡಿದವರು ಯುಗಪ್ರವರ್ತಕ ಬಸವಣ್ಣನವರು. ಈ ಕ್ರಾಂತಿಯಲ್ಲಿ ಬಸವಣ್ಣನವರ ಜೊತೆಗೆ ಕೈ ಜೋಡಿಸಿದವರು ಅನೇಕ ಶತಮಾನಗಳಿಂದ ಸಮಾಜದ ಅಲಕ್ಷ್ಯಕ್ಕೆ ಒಳಗಾದ ಕೆಳ ವರ್ಗದವರು, ದೀನದಲಿತರು. ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ನುಲಿಯ ಚಂದಯ್ಯ, ಅಂಬಿಗರ ಚೌಡಯ್ಯ, ಮಡಿವಾಳ ಮಾಚಯ್ಯ ಮುಂತಾದವರು. ಅಂತಹ ಅಗ್ರಗಣ್ಯ ಶರಣರಲ್ಲಿ ಮೇದರ ಕೇತಯ್ಯನವರೂ ಕೂಡ ಒಬ್ಬರು. ಬಸವಣ್ಣನವರಿಂದ ಪ್ರಭಾವಿತರಾಗಿ ಅವರನ್ನು ಗುರುವಾಗಿ ಸ್ವೀಕರಿಸಿ ತನು-ಮನ-ಧನಗಳನ್ನು ಗುರು-ಲಿಂಗ-ಜಂಗಮರಲ್ಲಿ ಅರ್ಪಿಸಿ ನಿಜಸುಖವನ್ನ ಕಂಡವರು ಶರಣ ಮೇದಾರ ಕೇತಯ್ಯನವರು. ಶುದ್ಧ…

0 Comments