ಶರಣಸಂಸ್ಕೃತಿ/ ಪ್ರೊ. ಬಸವರಾಜ ಕಡ್ಡಿ, ಜಮಖಂಡಿ.

ಸಂಸ್ಕಾರಗಳ ಒಟ್ಟು ಮೊತ್ತವೆ ಸಂಸ್ಕೃತಿ. ಸಂಸ್ಕಾರ ಕಾರಣವಾದರೆ, ಸಂಸ್ಕೃತಿ ಅದರ ಪರಿಣಾಮ. ಉದಾಹರಣೆಗೆ ಹಾಲೊಳಗೆ ತುಪ್ಪವಿದೆ. ಆದರೆ, ಅದು ಅವ್ಯಕ್ತವಾಗಿದೆ. ಅದು ವ್ಯಕ್ತವಾಗಬೇಕಾದರೆ ಹಾಲನ್ನು ಕಾಯಿಸಬೇಕು, ಹೆಪ್ಪಿಡಬೇಕು. ಮೊಸರಾದ ನಂತರ ಕಡೆಯಬೇಕು, ಮಜ್ಜಿಗೆಯಲ್ಲಿ ಬರುವ ಬೆಣ್ಣೆಯನ್ನು ಕಾಯಿಸಬೇಕು. ಆಗ ತುಪ್ಪ ಘಮಘಮಿಸುವುದು. ಹೀಗೆ ಹಾಲಿಗೆ ಸಂಸ್ಕಾರ ಕೊಟ್ಟರೆ ತುಪ್ಪವಾಗುವುದು. ಹಾಗೆಯೇ ಶಿಲೆಗೆ ಸಂಸ್ಕಾರ ಕೊಟ್ಟರೆ ಶಿಲ್ಪವಾಗುವುದು. ಶಿಲೆಯಲ್ಲಿ ಸುಂದರ ಮೂರ್ತಿಗೆ ಬೇಕಾದ ಮತ್ತು ಬೇಡವಾದ ಸಂಗತಿಗಳೆರಡೂ ಇವೆ. ಶಿಲ್ಪವಾಗಲು ಬೇಕಾದುದನ್ನು ಮಾತ್ರ ಉಳಿಸಿ ಬೇಡವಾದುದೆಲ್ಲವನ್ನೂ ಶಿಲ್ಪಿಯು ಕೌಶಲದಿಂದ ಉಳಿಯ ಪೆಟ್ಟುಗಳ ಮೂಲಕ ತೆಗೆದು ಹಾಕಿದರೆ ಸುಂದರ ಮೂರ್ತಿ…

0 Comments

ಶರಣರ ದೃಷ್ಟಿಯಲ್ಲಿ ನೇಮ-ಶೀಲ | .ಬಸವರಾಜ ಕಡ್ಡಿ, ಜಮಖಂಡಿ.

ನೇಮವೆಂದರೆ ಕಟ್ಟಾಚರಣೆ. ಕೆಲವರು ದೇವರಿಗೆ ವಿಶೇಷ ಪದಾರ್ಥಗಳನ್ನು ಅರ್ಪಿಸುವ ನೇಮ ಹಿಡಿದರೆ ಮತ್ತೆ ಕೆಲವರು ದೇವರ ಹೆಸರಿನಲ್ಲಿ ಕೆಲವು ಪದಾರ್ಥಗಳ ಬಿಡುವ ನೇಮ ಹಿಡಿದಿರುತ್ತಾರೆ. ಶೀಲವೆಂದರೆ ಮಡಿವಂತಿಕೆ. ಶರಣರು ಅರ್ಥವಿಲ್ಲದ ನೇಮ-ಶೀಲಗಳನ್ನು ನಿರಾಕರಿಸಿ ನಿಜವಾದ ನೇಮ-ಶೀಲಗಳನ್ನು ವಚನಗಳ ಮೂಲಕ ತಿಳಿಸಿದ್ದಾರೆ. ಅನೇಕರು ಅರ್ಥವಿಲ್ಲದ ವ್ರತ, ನೇಮ, ಶೀಲಗಳಲ್ಲಿ ಸಿಲುಕಿ ಅವುಗಳ ಆಚರಣೆಯಲ್ಲಿ ವ್ಯರ್ಥ ಪ್ರಯಾಸ ಪಡುತ್ತಿದ್ದಾರೆ. ಅಂಥವರ ಕುರಿತು ಸತ್ಯಕ್ಕನವರ ವಚನ: ಅರ್ಚನೆ ಪೂಜನೆ ನೇಮವಲ್ಲ;ಮಂತ್ರ ತಂತ್ರ ನೇಮವಲ್ಲ;ಧೂಪ ದೀಪಾರತಿ ನೇಮವಲ್ಲ;ಪರಧನ ಪರಸ್ತ್ರೀ ಪರದೈವಗಳಿಗೆರಗದಿಪ್ಪುದೆ ನೇಮ.ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ.(ಸಮಗ್ರ ವಚನ ಸಂಪುಟ: ಐದು-2021/ಪುಟ ಸಂಖ್ಯೆ-438/ವಚನ ಸಂಖ್ಯೆ-1205)…

0 Comments

ಕಲ್ಯಾಣವೆಂಬ ಪ್ರಣತಿ; ಬಿಂಬ-ಪ್ರತಿಬಿಂಬ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು,ಆಚಾರವೆಂಬ ಬತ್ತಿಯಲ್ಲಿ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು,ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ!ಆ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು.ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ?ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ?ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಕಂಡುಬದುಕಿದೆನು ಕಾಣಾ ಸಿದ್ಧರಾಮಯ್ಯಾ.… … ವ್ಯೋಮಕಾಯ ಅಲ್ಲಮ ಪ್ರಭುಗಳು. ಕಲ್ಯಾಣವನ್ನು ಅವಿಮುಕ್ತ ಕ್ಷೇತ್ರವನ್ನಾಗಿಸಿದ ಬಸವಣ್ಣನವರನ್ನು ಜ್ಞಾನ ವೈರಾಗ್ಯನಿಧಿ ಅಲ್ಲಮ ಪ್ರಭುಗಳು ಗುಹೇಶ್ವರ ಲಿಂಗದಲ್ಲಿ ದರ್ಶಿಸುತ್ತಾರೆ. ಶಿವಯೋಗಿ ಸಿದ್ಧರಾಮೇಶ್ವರರನ್ನು ಉದ್ದೇಶಿಸಿ ಹೇಳಿದ ಮಾತು "ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಕಂಡು ಬದುಕಿದೆನು ಕಾಣಾ ಸಿದ್ಧರಾಮಯ್ಯಾ” ಎನ್ನುವುದು ಇಡೀ ವಚನ ಚಳುವಳಿಯ ನೇತಾರರಾದ ಬಸವಣ್ಣನವರನ್ನು ಕೇಂದ್ರೀಕರಿಸಿಕೊಳ್ಳುತ್ತಾ…

0 Comments

ಅಲೌಕಿಕತೆಯಲ್ಲಿ ಲೌಕಿಕತೆ / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.

ಈ ಜಗತ್ತು ಮಿಥ್ಯ, ನಶ್ವರ, ಸಂಸಾರ ಅನ್ನೊದು ಒಂದು ಘೊರಾರಣ್ಯ ಎಂಬ ವಾದಗಳನ್ನು ಅಲ್ಲಗಳೆದು ಈ ಜಗತ್ತೇ ಒಂದು ಸಾಧನಾ ರಂಗ, ಸಂಸಾರ ಅನ್ನೊದು ಸಾಧನೆಗೆ ವೇದಿಕೆ ಅಂತ ನಂಬಿದೋರು 12 ನೇ ಶತಮಾನದ ಬಸವಾದಿ ಶಿವಶರಣರು. ಪ್ರಪಂಚದಲ್ಲಿದ್ದು ಸಂಸಾರದ ಸುಳಿಯಲ್ಲಿ ಸುತ್ತುತ್ತಲೇ ದಡ ಸೇರಬೇಕೆಂಬುದು ಶರಣರ ಅಭಿಪ್ರಾಯ ಮತ್ತು ಅದೇ ರೀತಿ ನಡೆದಿದ್ದಾರೆ ಕೂಡ. ಗೃಹಸ್ಥ ಜೀವನ ಬೇಡವೆಂದು ಅದಕ್ಕೆ ಬೆನ್ನು ತಿರುಗಿಸಿದ ಕೆಲವೇ ಶಿವಶರಣರಲ್ಲಿ ಸಿದ್ಧರಾಮರು, ಚೆನ್ನಬಸವಣ್ಣನವರು ಮತ್ತು ವೀರ ವಿರಾಗಿಣಿ ಮಹಾದೇವಿಯಕ್ಕ ಪ್ರಮುಖರಾಗಿದ್ದಾರೆ. ಆದರೆ ಇವರ‍್ಯಾರೂ ಸಂಸಾರ ಬಿಟ್ಟು ಸನ್ಯಾಸಿಗಳಾಗಿ ಗುಹಾಂತರ್ಗತರಾಗಿ ಉಳಿಯಲಿಲ್ಲ…

0 Comments

ನಿಜ ಜಂಗಮ ಷಣ್ಮುಖ ಶಿವಯೋಗಿ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.(ಶಿವರಾತ್ರಿಯಂದು ಷಣ್ಮುಖ ಶಿವಯೋಗಿಗಳ ಜಯಂತಿ ನಿಮಿತ್ತ ಈ ಲೇಖನ)

ಶರಣ ಭೂಮಿಯಾದ ಕಲಬುರ್ಗಿಯು ಹಲವಾರು ಶರಣರು ಸಂತರು, ಕವಿಗಳು, ಸಾಹಿತಿಗಳನ್ನು ನಾಡಿಗೆ ಅರ್ಪಿಸಿದ ಪುಣ್ಯ ಭೂಮಿಯಾಗಿದೆ. ಕಡಕೋಳ ಮಡಿವಾಳಪ್ಪ, ಶರಣಬಸಪ್ಪ, ಖೈನೂರಿನ ಕೃಷ್ಣಪ್ಪ, ಚನ್ನೂರಿನ ಜಲಾಲಸಾಬ್ ಹೀಗೇ ಇನ್ನೂ ಅನೇಕರು ಇಲ್ಲಿ ಆಗಿ ಹೋಗಿದ್ದಾರೆ. ಅಖಂಡೇಶ್ವರರ ಕೃಪಾಶೀರ್ವಾದದಿಂದ ಸಗರನಾಡಿನ ಜೇವರ್ಗಿಯಲ್ಲಿ 1639 ರಲ್ಲಿ ಶಿವರಾತ್ರಿಯ ದಿನದಂದು ಜನಿಸಿದ ಷಣ್ಮುಖ ಶಿವಯೋಗಿಗಳು ಬಸವೋತ್ತರ ಯುಗದ ಶರಣರಲ್ಲೇ ಅಗ್ರಪಂಕ್ತಿಯಲ್ಲಿ ನಿಲ್ಲುವರು. ಇವರ ತಾಯಿ ದೊಡ್ಡಮಾಂಬೆ ಹಾಗೂ ತಂದೆ ಮಲ್ಲಶೆಟ್ಟೆಪ್ಪ. ಇವರು ಎರಡು ವರ್ಷದವರಿದ್ದಾಗಿಂದಲೂ ಮಠದತ್ತಲೇ ಓದುತ್ತಿದ್ದು ಅಲ್ಲಿ ಅಖಂಡೇಶ್ವರರ ಸನ್ನಿಧಿಯಲ್ಲಿ ಅಪೂರ್ವವಾದ ಆನಂದವನ್ನು ಅನುಭವಿಸುತ್ತಿದ್ದರು. ಐದನೇ ವರ್ಷಕ್ಕೆ ಅಖಂಡೇಶ್ವರ ಗುರುಗಳ…

0 Comments

ಶಿವಯೋಗ / ಶ್ರೀಮತಿ. ಸವಿತಾ ಮಾಟೂರ, ಇಳಕಲ್ಲ.

ವಚನ ಸಾಹಿತ್ಯ ಶರಣರು ಸಾರಿದ ಮೌಲ್ಯಯುತ, ಘನತೆವೆತ್ತ ಸತ್ಯ ಸಂದೇಶ. ಭಕ್ತಿ ಮಾರ್ಗದಿಂದ ಮುಕ್ತಿ ಮಾರ್ಗದ ಕಡೆಗೆ ನಮ್ಮನ್ನು ಕೊಂಡೊಯ್ಯುವ ಯುಕ್ತ ರೂಪ. ಜಗದೊಂದಿಗೆ ಅನುಶೃತಗೊಂಡ ಜಗದ್ವಂದ್ಯ ಮಾರ್ಗ. “ಲಿಂಗ ಮಧ್ಯೆ ಜಗತ್ ಸರ್ವಂ” ಎಂಬಂತೆ ಲಿಂಗದಲ್ಲಿಯೆ ಸರ್ವವನ್ನು ಕಂಡವರು, ಲಿಂಗವೆ ಸಂಗಯ್ಯನನ್ನು ಸೇರುವ ಮಾರ್ಗವೆಂದು ಅರಿತವರು ನಮ್ಮ ಶರಣರು. ಲಿಂಗನಿಷ್ಟೆಯಿಂದಲೆ ಜಗಕೆ ಮಾದರಿಯಾದವರು. ಅರುಹಿನ ಕುರುಹು “ಲಿಂಗ”. ಲಿಂಗಸಾಮರಸ್ಯದಿ ಪರಶಿವನ್ನು ಕೂಡುವ ಪರಿಯೆ ತ್ರಾಟಕ ಯೋಗ. ಅದುವೆ ಶಿವಯೋಗ. “ಯೋಗ” ಎಂಬ ಪದವು “ಯುಜ್” ಎಂಬ ಧಾತುವಿನಿಂದ ವ್ಯುತ್ಪತ್ತಿಯಾಗಿದೆ. ಅದಕ್ಕೆ ಕೂಟ (ಕೂಡುವದು, ಬೇರೆಯುವದು) ಎಂಬ…

0 Comments

ಶರಣರು ಕಂಡ ಶಿವರಾತ್ರಿ / ಅಮಂಗಳದಿಂದ ಮಂಗಳದ ಕಡೆಗೆ ಸಾಗುವುದೇ ಶಿವರಾತ್ರಿ

ನಾ ದೇವನಲ್ಲದೆ ನೀ ದೇವನೆ?ನೀ ದೇವನಾದಡೆ ಎನ್ನನೇಕೆ ಸಲಹೆ?ಆರೈದು ಒಂದು ಕುಡಿತೆ ಉದಕವನೆರೆವೆ,ಹಸಿವಾದಾಗ ಓಗರವನ್ನಿಕ್ಕುವೆ,ನಾ ದೇವ ಕಾಣಾ ಗುಹೇಶ್ವರಾ!(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-173/ವಚನ ಸಂಖ್ಯೆ-558) ಒಂದು ದೇವರ ಮೂರ್ತಿಯ ಎದುರಿಗೆ ನಿಂತು ಆ ದೇವರ ವಿಗ್ರಹಕ್ಕೆ ಸವಾಲು ಹಾಕಿರುವ ಅಲ್ಲಮಪ್ರಭುದೇವರ ವಚನ ಸಂಪೂರ್ಣವಾಗಿ ಪರಮ ಪೂಜ್ಯ ಶ್ರೀ. ಶ್ರೀ. ಶಿವಕುಮಾರ ಮಹಾಸ್ವಾಮಿಗಳಿಗೆ ಅನ್ವಯವಾಗುತ್ತದೆ. ಏಕೆಂದರೆ ಅವರು ಪ್ರತಿವರ್ಷ ಮಠದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಮತ್ತು ದಾಸೋಹ ನೀಡಿ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿ ಮಠಕ್ಕೆ ಬಂದ ಭಕ್ತರಿಗೆ ಆಶೀರ್ವಾದ ನೀಡುವುದರ ಜೊತೆಗೆ ಪ್ರಸಾದ…

0 Comments

ಶರಣರ ಚಿಂತನೆಯ ಆಧುನಿಕತೆ / ಡಾ. ವೈ. ಎಂ. ಯಾಕೊಳ್ಳಿ ಸವದತ್ತಿ.

ನಮ್ಮ ಸಮಕಾಲೀನ ಬದುಕನ್ನು ಕುರಿತು ಚಿಂತಿಸಲಾರದ ಸಾಹಿತ್ಯ ಅರ್ಥಪೂರ್ಣ ಎನಿಸಲಾರದು. ಇಹದ ಮತ್ತು ಪರದ ಲೌಕಿಕ ಬದುಕಿನ ಬೇಸಾಯಗಾರರಾದ ಶರಣರು ತಮ್ಮ ವರ್ತಮಾನಕ್ಕೆ ಸ್ಪಂದಿಸಿ ಬದುಕಿದವರಾಗಿದ್ದವರು. ಹಾಗೆಯೇ ಬರೆದವರಾಗಿದ್ದರು. ಅಂತೆಯೇ ಅವರ ವಚನಗಳು ಅಂದಿಗೂ ಇಂದಿಗೂ ಮುಖ್ಯವೆನಿಸಿವೆ. ಶರಣರ ವಿಚಾರಗಳು ಇಂದಿನ ಆಧುನಿಕ ಜಗತ್ತಿನ ಹಲವು ಸಮಸ್ಯೆಗಳಿಗೆ ಹೇಗೆ ಪರಿಹಾರವಾಗಿವೆ ಎಂಬುದನ್ನು ಹಿರಿಯ ಸಾಹಿತಿಗಳಾದ ಡಾ. ದೇ. ಜವರೇಗೌಡ ಅವರು ಬಸವಣ್ಣನವರು ಒಂದೇ ಒಂದು ವಚನದಲ್ಲಿ ಸಾರಿರುವದನ್ನು ವಿವರಿಸಿದ್ದಾರೆ. ಸಧ್ಯದ ಬದುಕು ಸಾರ್ಥಕಗೊಳ್ಳುವ ಪರಿ ಯಾವುದು ಎಂಬುದನ್ನು ತಮ್ಮ ಸಪ್ತಸೂತ್ರಗಳನ್ನು ಸಮಾಹಿತಗೊಳಿಸಿರುವ “ಕಳಬೇಡ ಕೊಲಬೇಡ” ಎಂಬ ವಚನದಲ್ಲಿ…

0 Comments

ವ್ಯೋಮಕಾಯ ಅಲ್ಲಮ ಪ್ರಭುಗಳ ವಚನ “ನೆಲದ ಮರೆಯಲಡಗಿದ ನಿಧಾನದಂತೆ” ವಿಶ್ಲೇಷಣೆ / ಡಾ. ಯಲ್ಲಪ್ಪ ಯಾಕೊಳ್ಳಿ, ಸವದತ್ತಿ, ಬೆಳಗಾವಿ ಜಿಲ್ಲೆ.

ನೆಲದ ಮರೆಯಲಡಗಿದ ನಿಧಾನದಂತೆ,ಮುಗಿಲ‌ ಮರೆಯಲಡಗಿದ ಮಿಂಚಿನಂತೆ,ಬಯಲ ಮರೆಯಲಡಗಿದ ಮರೀಚಿಯಂತೆಕಂಗಳ‌ ಮರೆಯಲಡಗಿದೆ ಬೆಳಗಿನಂತೆ-ಗುಹೇಶ್ವರಾ ನಿಮ್ಮ ನಿಲುವು(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-8/ವಚನ ಸಂಖ್ಯೆ-4) ದೈವದ ವಿಸ್ತಾರವನ್ನು ಶರಣರು ವಿವರಿಸಿದ ಹಾಗೆ ಮತ್ತಾರೂ ವಿವರಿಸಿಲ್ಲ. ಎಲ್ಲವೂ ಸಾಧ್ಯವಾಗುವದು ನಡೆಯುವದು, ನಿಲ್ಲುವದು ಪ್ರತಿಬಂಧಿಸುವದು ಇದೆಲ್ಲವೂ ದೈವದಿಂದಲೇ ಎಂದು ಶರಣರು‌ ಪ್ರಖರವಾಗಿ‌ ನಂಬಿದ್ದರು. ಇದನ್ನೆ ಸೃಷ್ಟಿ-ಸ್ಥಿತಿ-ಲಯ ಎನ್ನುವ ಪದಗಳಲ್ಲಿ ವಿವರಿಸಲಾಗುತ್ತದೆ ಈ‌ ಮೂರು‌ ಸಾಧ್ಯವಾಗುವದು ದೈವದಿಂದಲೇ‌ ಹೊರತು‌ ಬೇರಾರಿಂದಲೂ‌ ಸಾಧ್ಯವಿಲ್ಲ ಎನ್ನುವದು ಅವರ ದೃಢ ಅಭಿಪ್ರಾಯ. ನಮ್ಮ‌ ಕಣ್ಣಿನ‌ ಮಿತಿಗೆ ಸಿಗದ ವಿಸ್ತಾರ ದೈವದ್ದು ಎನ್ನುವ ಶರಣರು ಅದನ್ನು ಹಿಡಿಯಲಾಗದು ಎನ್ನುತ್ತಾರೆ. "ಆಕಾಶದಿಂದತ್ತ…

0 Comments

ವಚನ ಸಾಹಿತ್ಯದಲ್ಲಿ ಭಾಷೆ ಮತ್ತು ಭಾಷಾ ಸಂಸ್ಕೃತಿ / ಡಾ. ವಿಜಯಕುಮಾರ ಕಮ್ಮಾರ, ತುಮಕೂರು

.ಶಿರವ ಸೀರೆಯ ಕರವ ಕಂಗಳ ಶಿಶುವನಿಕ್ಕಿಯೆರದರು.ಭಾಷೆ ಬಳಸಿ ಹಂಗು ಹಳಸಿಹೋಯಿತ್ತು.ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗಜಂಗಮಕ್ಕೆಕೊಟ್ಟಿಹೆನೆಂಬ ಶಬ್ದ ಅಳಿದರು ಉಳಿಯಿತು.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-250/ವಚನ ಸಂಖ್ಯೆ-682) ಶರಣ ಚಂದಿಮರಸರ ಈ ವಚನ ಮೇಲ್ನೋಟಕ್ಕೆ ಸರಳವಾಗಿರುವಂತೆ ಕಂಡರೂ ವಿಶ್ಲೇಷಣೆ ಮಾಡುತ್ತಾ ಹೋದಂತೆ ಭಾಷೆ ಅಥವಾ ಮಾತು ಅಥವಾ ನುಡಿ ಎನ್ನುವ ಭಾಷಾ ಕ್ರಾಂತಿಯ ಗುಟ್ಟುಗಳನ್ನು ಮತ್ತು ತತ್ವಗಳನ್ನು ಅಡಗಿಸಿಕೊಂಡಂತೆ ಕಾಣುತ್ತದೆ. ಕೊಟ್ಟಿಹೆನೆಂಬ ಶಬ್ದ ಅಳಿದರೂ ಉಳಿಯಿತ್ತು ಎನ್ನುವುದರ ಮೂಲಕ ದಾಸೋಹ ತತ್ವದ ಪರಿಭಾಷೆಯನ್ನು ಅತ್ಯಂತ ಸಮರ್ಥವಾಗಿ ಬಿಂಬಿಸುತ್ತದೆ. ವಚನ ಸಾಹಿತ್ಯದ ಅಧ್ಯಯನ ಇಂದಿನ ಕಾಲಘಟ್ಟದ ಬಹಳಷ್ಟು ಉಪನ್ಯಾಸಕರನ್ನು, ವಿದ್ವಾಂಸರನ್ನು, ವಿದ್ಯಾರ್ಥಿಗಳನ್ನು…

1 Comment