ಶ್ರೀಮನ್ಮಹಾದಾಸೋಹಿ ಪರಮ ಪೂಜ್ಯ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು | ಡಾ. ಡಿ. ಎನ್. ಯೋಗೀಶ್ವರಪ್ಪ | ತುಮಕೂರು.
ಜನಮಾನಸದಲ್ಲಿ ನಡೆದಾಡುವ ದೇವರೆಂದೇ ಭಾವಿಸಲ್ಪಟ್ಟ ಪದ್ಮಭೂಷಣ ಕರ್ನಾಟಕ ರತ್ನ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾಗಿ ಇಂದಿಗೆ ಆರು ವರ್ಷಗಳು ಕಳೆದಿದೆ. ಕರ್ನಾಟಕ ಸರ್ಕಾರ ಸ್ವಾಮೀಜಿಯವರು ಸಮಾಜದ ಉನ್ನತಿಗಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗೌರವಿಸಿ ಜನವರಿ 21 ನ್ನು ದಾಸೋಹ ದಿನವೆಂದು ಘೋಷಿಸಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ದಾಸೋಹ ಎಂಬುದು ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರಿಂದ ರೂಪುಗೊಂಡ ವಿಶಿಷ್ಟವಾದ ಪರಿಕಲ್ಪನೆ. ಇದು ದಾನಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡ ವ್ಯವಸ್ಥೆಯಾಗಿದೆ. ಅಂದು ವ್ಯಕ್ತಿಯೊಬ್ಬ ತನ್ನ ಜೀವನದಲ್ಲಿ ತಾನು ಗಳಿಸಿದ್ದರಲ್ಲಿ ಒಂದು ಪಾಲನ್ನು ದೇವರಿಗಾಗಲೀ ಅಥವಾ ಪುರೋಹಿತ ವರ್ಗಕ್ಕಾಗಲೀ ದಾನ…