ಲದ್ದೆಯ ಸೋಮಯ್ಯ ಶರಣರ ವಚನ – ನಿರ್ವಚನ | ಶ್ರೀಮತಿ. ಲಕ್ಷ್ಮಿ ಪಾಟೀಲ, ಕಲಬುರಗಿ.

ವಚನ:ಆವ ಕಾಯಕವಾದಡೂ ಸ್ವಕಾಯಕವ ಮಾಡಿ,ಗುರು ಲಿಂಗ ಜಂಗಮರ ಮುಂದಿಟ್ಟು,ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು,ವ್ಯಾಧಿ ಬಂದಡೆ ನೆರಳು, ಬೇನೆ ಬಂದಡೆ ಒರಲು,ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,ಭಾಪು ಲದ್ದೆಯ ಸೋಮಾ?(ಸಮಗ್ರ ವಚನ ಸಂಪುಟ-9/2001/ಪುಟ. ಸಂ-8/ವಚನ. ಸಂ. 20) ಅನುಭವ ಮಂಟಪದ ಅನುಭಾವಿ ಶರಣರು ಲದ್ದೆಯ ಸೋಮಯ್ಯನವರು. ಇವರು ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಾದಾ ಗ್ರಾಮದವರು.  ಮಡದಿ ಹೆಸರು ಮಂಗಮ್ಮ. ಹುಲ್ಲು ಮಾರುವ ಕಾಯಕ ಕೈಕೊಳ್ಳುವ ಇವರು ತಮ್ಮ ಗ್ರಾಮದಲ್ಲಿ ಹುಲ್ಲು ಕೊಯಿದು ಹುಲಸೂರಿನಲ್ಲಿ ತಂದು ಮಾರುತ್ತಿದ್ದರು. ಹುಲಸೂರು ಗ್ರಾಮದಲ್ಲಿ ಇವರ ಹೆಸರಿನಲ್ಲಿ ಗುಡಿಯೊಂದು ಇದೆ. ಇವರ…

0 Comments

ಶರಣ ಬಹುರೂಪಿ ಚೌಡಯ್ಯನವರ ವಚನ ನಿರ್ವಚನ | ಡಾ. ಶೈಲಜಾ ಬಾಗೇವಾಡಿ, ಕಲಬುರಗಿ.

ವಚನ:ಲಿಂಗನಿಷ್ಠೆಯಿಲ್ಲದವರಂಗಳವ ಮೆಟ್ಟಲಾಗದು.ಜಂಗಮಪ್ರೇಮವಿಲ್ಲದವರೊಡನೆ ಮಾತನಾಡಲಾಗದು.ಪ್ರಸಾದವ ಪಡೆಯದವರ ಸಮಪಙ್ಞ್ತಯಲ್ಲಿ ಕುಳಿತುಪ್ರಸಾದ ಭೋಗವ ಮಾಡಲಾಗದು.ಇಂತೀ ಲಿಂಗ ಜಂಗಮ ಪ್ರಸಾದ ವಿಶ್ವಾಸವಿಲ್ಲದವರಿಗೆ ನರಕ ತಪ್ಪದು.ಅಂಥವರ ಸಂಗವ ಸತ್ಯಸಜ್ಜನರು ಮಾಡಲಾಗದು.ಅದೇನು ಕಾರಣವೆಂದಡೆ;ಪ್ರಾಣಲಿಂಗ ಶಿಲಾಭೇದಂ ಚರಲಿಂಗಂತು ಯೋ ನರಃ |ಪ್ರಸಾದಂ ದ್ರವ್ಯ ಭಾವೇನ ರೌರವ ನರಕಂ ವ್ರಜೇತ್ ||ಎಂದುದಾಗಿ, ಇಂತೀ ಲಿಂಗ ಜಂಗಮ ಪ್ರಸಾದ ಸದ್ಭಾವನಂಬುಗೆಯ ಭಕ್ತಿ ಬೆಸುಗೆಯಿಲ್ಲದವರಎನಗೆ ತೋರದಿರಯ್ಯ ರೇಕಣ್ಣಪ್ರಿಯ ನಾಗಿನಾಥಾ.(ಸಮಗ್ರ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-77/ವಚನ ಸಂಖ್ಯೆ-175) ಶರಣ ಬಹುರೂಪಿ ಚೌಡಯ್ಯನವರು ಅಂದಿನ ಕಲ್ಯಾಣದ ಅನುಭವ ಮಂಟಪದ ಅನುಭಾವಿಗಳು. ಇವರು ಮೂಲತಃ ಆಂಧ್ರಪ್ರದೇಶದ ರೇಕಳಿಕೆ ಗ್ರಾಮದ ಬ್ರಾಹ್ಮಣ ದಂಪತಿಗಳಾದ ಜನವಶ್ಯ ಮತ್ತು ಧರ್ಮವತಿ…

0 Comments

ಪುರಾತನ ಕಲ್ಯಾಣದ ಚಿತ್ರಣ ಮತ್ತು ಅವನತಿಯತ್ತ ಶರಣರ ಸ್ಮಾರಕಗಳು | ಡಾ. ಸತೀಶ ಕೆ.ಇಟಗಿ, ಮುದ್ದೇಬಿಹಾಳ.

ಸ್ವಸ್ತಿ ಸಮಸ್ತ ಪ್ರಶಸ್ತಿ ಸಹಿತಂ ಶ್ರೀಮತ್ ಕಲ್ಯಾಣಪುರದ ಮಹಾತ್ಮ್ಯಎಂತೆಂದಡೆ: ವಿಸ್ತರಿಸಿ ಪೇಳುವೆನು;ಎಲ್ಲಾ ಶಿವಗಣಂಗಳು ಕೇಳಿ ಕೃತಾರ್ಥರಾಗಿರಯ್ಯಾ.ಹದಿನಾಲ್ಕು ಭುವನಕ್ಕೆ ಕಳಸವೆಂದೆನಿಸುವ ರುದ್ರಲೋಕವೆ ಮರ್ತ್ಯಕ್ಕಿಳಿತಂದು,ಕಲ್ಯಾಣವೆಂಬ ಪುರವಾಗಿ ಹುಟ್ಟಿತ್ತು ನೋಡಿರಯ್ಯಾ!ಅಲ್ಲಿ ಸತ್ಯರು ಸಾತ್ತ್ವಿಕರು ನಿತ್ಯರು ನಿಜೈಕ್ಯರು ಮಹಾಜ್ಞಾನಿಗಳುಪರಮಶಿವಯೋಗಿಗಳು ಶಿವಾನುಭಾವ ಸಂಪನ್ನರುಶಿವಲಿಂಗ ಪ್ರಾಣಿಗಳು, ಶಿವಪ್ರಸಾದಪಾದೋದಕಸಂಬಂಧಿಗಳುಶಿವಾಚಾರವೇದ್ಯರು ಶಿವಾಗಮ ಸಾಧ್ಯರುಶಿವಸಮಯಪಕ್ಷರುಗಳಲ್ಲದೆ, ಮತ್ತಾರು ಅಲ್ಲಿಲ್ಲ ನೋಡಿರಯ್ಯಾ.ಪಾಪಿಗಳು ಕೋಪಿಗಳು ಅಸತ್ಯರು ಅನಾಚಾರಗಳುಹೊಗಬಾರದು ಕಲ್ಯಾಣವ.ಮೀರಿ ಹೊಕ್ಕೆಹೆವೆಂಬವರಿಗೆ ಬಾಳ ಬಾಯಧಾರೆ ನೋಡಿರಯ್ಯಾ.ಆ ಕಲ್ಯಾಣ ಅಗಮ್ಯ ಅಗೋಚರ ನೋಡಿರಯ್ಯಾ.ಆ ಮಹಾಕಲ್ಯಾಣದ ವಿಸ್ತೀರ್ಣ ತಾನೆಂತೆಂದಡೆ:ಹನ್ನೆರಡು ಯೋಜನ ಪರಿಪ್ರಮಾಣದ ವಿಸ್ತ್ರೀರ್ಣ ಪಟ್ಟಣಕ್ಕೆಮುನ್ನೂರರವತ್ತು ಬಾಗಿಲವಾಡ.ಆ ಬಾಗಿಲಿಂಗೆ ನೂರ ಐವತ್ತೈದು ವಜ್ರದ ಹಾರೆಯ ಕದಂಗಳು.ಇನ್ನೂರ ಇಪ್ಪತ್ತೈದು ಕಲುಗೆಲಸದ ದ್ವಾರವಟ್ಟಕ್ಕೆನಾನೂರ…

0 Comments

ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ, ವಿಜಯಪುರ | ಡಾ. ವಿ. ಡಿ. ಐಹೊಳ್ಳಿ,ವಿಜಯಪುರ.

12 ನೇ ಶತಮಾನದ ವಚನಕಾರರು ತಾವು ಸೃಷ್ಟಿಸಿದ ನೂತನ ಆಯಾಮಗಳನ್ನು ಅನುಷ್ಠಾನಕ್ಕೆ ತಂದು, ನುಡಿದಂತೆ ನಡೆದು ಇಹಲೋಕದಲ್ಲಿಯೇ ಎಲ್ಲವೂ ಅಡಗಿದೆ ಎಂದು ತೋರಿಸಿಕೊಟ್ಟವರು. ಶರಣರು ಸ್ವರ್ಗ, ನರಕಗಳು ಬೇರಿಲ್ಲ ಕಾಣಿರೋ ಎಂದು ತಿಳಿಸಿಕೊಟ್ಟವರು. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದು ಬದುಕಿನ ನೈಜ ಸತ್ಯವನ್ನು ಪ್ರಥಕ್ಕರಿಸಿದವರು. ಕಲ್ಯಾಣ ಕ್ರಾಂತಿಯ ಸಂದರ್ಭದಲ್ಲಿ ಅನುಭವ ಮಂಟಪದಲ್ಲಿ ಚರ್ಚೆಗೆ ಒಳಪಡಿಸಿದ ವಚನದ ತಾಡೋಲೆಗಳನ್ನು ಸಂಗ್ರಹಿಸಿ, ಪರಿಷ್ಕರಿಸಿದ ವಚನದ ಕಟ್ಟುಗಳನ್ನು ಕ್ರಾಂತಿಯ ನೆಪದಲ್ಲಿ ಅವುಗಳನ್ನು ನಾಶಗೊಳಿಸಿದರು. ಅವುಗಳಲ್ಲಿ ಅಳಿದುಳಿದಿದ್ದ ವಚನಗಳು ಮಠ-ಮಂದಿರಗಳಲ್ಲಿ, ಮನೆ-ಮನೆಗಳಲ್ಲಿ, ಶರಣರು ಹೊತ್ತೊಯ್ದು ಗವಿ-ಗಂವರಗಳಲ್ಲಿ ಜೋಕೆಯಾಗಿ ಇಟ್ಟಿರುವುದನ್ನು ಸಂಗ್ರಹಿಸಿ ಏಡೆಯೂರು…

0 Comments

ಧರ್ಮಚಿಂತಕ ಮತ್ತು ವಿಜ್ಞಾನಿ ಎಂದು ಬಿಂಬಿಸಿಕೊಳ್ಳುತ್ತಿರುವ ಚಂದ್ರಶೇಖರ ಎಚ್.‌ ಎನ್. | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಈತನ ಹೆಸರು ಚಂದ್ರಶೇಖರ ಎಚ್‌. ಎನ್‌. (AIವಿಜ್ಞಾನಿಗಳು) ಪಂಚಸೂತ್ರ ಅಕಾಡೆಮಿ, ಲಂಡನ್.‌ AIಅಂದರೆ Artificial Intelligence. ಇದನ್ನು ನಾವು ಆಡು ಭಾಷೆಯಲ್ಲಿ Garbage In Garbage Out (GIGO) ಅಂತೀವಿ. ಕಸ ಹಾಕಿದರೆ ಕಸ ಬರುತ್ತದೆ. ಅಂದರೆ ಇಲ್ಲಿ ಯಾವುದೇ ಸೃಜನಶೀಲತೆ ಇರುವುದಿಲ್ಲ. ನಾವು ಏನು Feedಮಾಡತೀವೋ ಅದು ಹೊರಗ ಬರುತ್ತದೆ ಅಷ್ಟೇ. ಉದಾಹರಣೆಗೆ ಒಂದು ವ್ಯಕ್ತಿಯ ಫೋಟೋ ಮಾಡಬೇಕಾದರೆ 4ನೇ ತರಗತಿಯ ಹುಡುಗ ಕೂಡ Voice Commandನೀಡಿದರೆ ಒಂದು ಫೋಟೋ ಅವನ Voice Commandಗೆ ತಕ್ಕ ಹಾಗೆ ಫೋಟೋ Readyಆಗುತ್ತದೆ. ಇದರಲ್ಲಿ ಯಾವ Rocket Scienceಮಣ್ಣಾಂಗಟ್ಟಿಯೂ…

1 Comment

ಶರಣ ಶಂಕರ ದಾಸಿಮಯ್ಯನವರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

12 ನೇ ಶತಮಾನದಲ್ಲಿ ಬಾಳಿ ಬದುಕಿದ ಒಬ್ಬೊಬ್ಬ ಶರಣರ ಚರಿತ್ರೆ ಅಮೋಘವಾದುದಾಗಿದೆ. ಕಾಯಕಯೋಗಿಗಳಾದ ಅವರು ಕಾಯಕದಿಂದಲೇ ಜೀವನ್ಮುಕ್ತಿಹೊಂದಿದವರು. ಕಾಯಕಯೋಗದಿಂದ ಶಿವಯೋಗ ಸಾಧಿಸಿದ ಮಹಾತ್ಮರವರು. “ಕಾಯಕ” ಮತ್ತು “ಲಿಂಗಪೂಜೆ” ಇವರ ಬಾಹ್ಯ ಮತ್ತು ಅಂತರಂಗದ ಪರಂಜ್ಯೋತಿಗಳಾಗಿದ್ದವು. ಕಾಯಕದಿಂದ ದೊರೆತ “ಅನುಭಾವ” ಲಿಂಗಪೂಜೆಯಿಂದ ದೊರೆತ “ಅನುಭಾವ” ದಿಂದ ಶರಣರು ಅನಿರ್ವಚನೀಯವಾದ ಪರಮಾನಂದ ಅನುಭವಿಸಿದವರು. ಅಂತಹ ಶಿವಶರಣರಲ್ಲಿ “ಶರಣ ಶಂಕರ ದಾಸಿಮಯ್ಯ” ನವರು ಒಬ್ಬರು. ನದಿಗಳೆಲ್ಲವೂ ಹರಿದು ಸಮುದ್ರವನ್ನು ಸೇರುವಂತೆ ಎಲ್ಲ ಶರಣರು ಬಸವಣ್ಣನೆಂಬ ಸಾಗರವನ್ನೇ ಕೂಡಿದರು. ಬಸವಣ್ಣನೆಂಬ ಚುಂಬಕ ಶಕ್ತಿ ಉತ್ತರ-ದಕ್ಷಿಣ ಧ್ರವಗಳನ್ನೆಲ್ಲ ತನ್ನತ್ತ ಸೆಳೆದುಕೊಂಡಿದ್ದು 12 ನೇ ಶತಮಾನದ…

0 Comments

ಶರಣ ಕಂಬಳಿ ನಾಗಿದೇವರ ವೈಚಾರಿಕ ಸ್ವಾತಂತ್ರ‍್ಯ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ವಚನ ಸಾಹಿತ್ಯದ ಉತ್ಕೃಷ್ಟತೆ ಪ್ರಾರಂಭವಾದದ್ದು 12 ನೇ ಶತಮಾನದ ಧಾರ್ಮಿಕ ಮತ್ತು ಸಾಂಸ್ಕೃತಿಕ ರಾಜಕೀಯ ಜೀವನಗಳಲ್ಲಿ ಬದಲಾವಣೆ ತರುವ ಉದ್ದೇಶವದು. ವಚನಗಳ ಸ್ಪಷ್ಟ ಬರವಣಿಗೆ ಅನನ್ಯ ಪದ ಪ್ರಯೋಗಗಳ ಪುನರ್ಸೃಷ್ಟಿ ಅಂದಿನ ವೈಚಾರಿಕ ನೆಲೆಯಲ್ಲಿ ತನ್ನ ಅಸ್ತಿತ್ವವನ್ನು ತೋರಿಸಿಕೊಂಡದ್ದು ಇದೇ ಕಾಲದಲ್ಲಿ. ವರ್ಗ ಮತ್ತು ವರ್ಣಗಳಲ್ಲಿ ಆತ್ಮವಿಶ್ವಾಸ ಮೂಡಿಸಿ ಸ್ವಾಭಿಮಾನದ ಬದುಕನ್ನು ನೀಡಿತ್ತು. ಬಸವಣ್ಣನವರ ಮುಂದಾಳತ್ವದಲ್ಲಿ ಕೈಗೊಂಡ ವ್ಯಕ್ತಿ ಕಲ್ಯಾಣ, ಸಮಾಜ ಕಲ್ಯಾಣ, ತತ್ವ ಕಲ್ಯಾಣದ ಚಳುವಳಿಯನ್ನು ಹುಟ್ಟು ಹಾಕಿತು. ವ್ಯಕ್ತಿ ಕಲ್ಯಾಣವು ಸ್ತ್ರೀಯರಿಗೆ ದುರ್ಬಲರಿಗೆ ಹಿಂದುಳಿದ ವರ್ಗಗಳಿಗೆ ಬೆಂಬಲ ನೀಡುವುದು. ಸಮುದಾಯದ ಜನರ ಯೋಗಕ್ಷೇಮವನ್ನು ನೀಡಿ…

0 Comments

ಊಳಿಡುತ್ತಿರುವ ವೀರಶೈವರ ಶನಿ ಸಂತಾನ ರವಿ ಹಂಜ್‌ ಎನ್ನುವ ತಿರಬೋಕಿ ಬೀದಿ ಶ್ವಾನ |Dr. Vijayakumar Kammar, Tumkur.

ಬಸವಣ್ಣನವರ ಸಾಮಾಜಿಕ ಕ್ರಾಂತಿಯಿಂದ ಸಮ ಸಮಾಜ ನಿರ್ಮಾಣವಾಗಿ ದೇವಾಲಯಗಳಿಗೆ ಪ್ರಜೆಗಳು ಹೋಗುವುದನ್ನು ನಿಲ್ಲಿಸುತ್ತಾರೆ. ವೈದಿಕರಿಗೆ ಈ ಸಾಮಾಜಿಕ ಸಮಾನತೆಯ ಚಳುವಳಿಯಿಂದ ತಮ್ಮ ಆದಾಯವು ನಿಂತು ಹೋಗಿ ಅವರ ಜೀವನ ನಡೆಸುವುದು ಕಷ್ಟವಾದಂಥ ಸಂದರ್ಭದಲ್ಲಿ ಬಸವಾದಿ ಶರಣರನ್ನು ಕಗ್ಗೊಲೆ ಮಾಡುವಂಥ ಹೀನ ಕೃತ್ಯಕ್ಕೂ ಇಳಿದಂಥಾ ಇತಿಹಾಸ ನಮಗೆ ವಚನಗಳ ಮೂಲಕ ವೇದ್ಯವಾಗುತ್ತದೆ. ಶರಣ ತುರಗಾಹಿ ರಾಮಣ್ಣನವರ ಈ ವಚನ ಇದನ್ನು ಪುಷ್ಟೀಕರಿಸುತ್ತದೆ. ಬಂದಿತ್ತು ದಿನ ಬಸವಣ್ಣ ಕಲ್ಲಿಗೆಚನ್ನಬಸವಣ್ಣ ಉಳುವೆಯಲ್ಲಿಗೆಪ್ರಭು ಅಕ್ಕ ಕದಳಿದ್ವಾರಕ್ಕೆಮಿಕ್ಕಾದ ಪ್ರಮಥರೆಲ್ಲರೂ ತಮ್ಮ ಲಕ್ಷ್ಯಕ್ಕೆನಾ ತುರುವಿನ ಬೆಂಬಳಿಯಲ್ಲಿ ಹೋದ ಮರೆಯಲ್ಲಿಅಡಗಿಹರೆಲ್ಲರು ಅಡಗಿದುದ ಕೇಳಿ ನಾಗೋಪತಿನಾಥ ವಿಶ್ವೇಶ್ವರಲಿಂಗದಲ್ಲಿಯೆ ಉಡುಗುವೆನು.(ಸಮಗ್ರ…

1 Comment

ಆದಯ್ಯ ಶರಣರ ವಚನ – ನಿರ್ವಚನ ವಚನ | ಶ್ರೀಮತಿ ಸುರೇಖಾ ಶೀರಪಾಟೀಲ, ಕಲಬುರಗಿ.

ತನುವಿನಲ್ಲಿ ನಿರ್ಮೋಹ, ಮನದಲ್ಲಿ ನಿರಹಂಕಾರ,ಪ್ರಾಣದಲ್ಲಿ ನಿರ್ಭಯ, ಚಿತ್ತದಲಿ ನಿರಪೇಕ್ಷೆ.ವಿಷಯಗಳಲ್ಲಿ ಉದಾಸೀನ, ಭಾವದಲ್ಲಿ ದಿಗಂಬರ,ಜ್ಞಾನದಲ್ಲಿ ಪರಮಾನಂದವೆಡೆಗೊಂಡ ಬಳಿಕಸೌರಾಷ್ಟ್ರ ಸೋಮೇಶ್ವರನೆಂಬ ಲಿಂಗವು ಬೇರಿಲ್ಲ ಕಾಣಿರೋ.(ಸಮಗ್ರ ವಚನ ಸಂಪುಟ-ಆರು/2021/ಪುಟ. ಸಂ-346/ವಚನ. ಸಂ. 954) ಶರಣ ಆದಯ್ಯನವರು 12 ನೇ ಶತಮಾನದ ಅನುಭವ ಮಂಟಪದ ಅನುಭಾವಿಗಳಲ್ಲಿ ಒಬ್ಬರಾಗಿದ್ದಾರೆ. ಇವರು ತಮ್ಮ ವಚನಗಳಲ್ಲಿ ಬಸವಣ್ಣ, ಮಡಿವಾಳ, ಅಲ್ಲಮಪ್ರಭುದೇವರು, ಮಡಿವಾಳ ಮಾಚಿದೇವರು ಮುಂತಾದ ಶರಣರನ್ನು ಸ್ಮರಿಸಿರುವದರಿಂದ ಇವರು ಬಸವಣ್ಣನವರ ಸಮಕಾಲೀನರು ಎನ್ನಬಹುದು. ಶರಣ ಆದಯ್ಯನವರು ಮೂಲತ ಸೌರಾಷ್ಟ್ರ ಅಂದರೆ ಗುಜರಾತಿನವರು. ತಂದೆ ಪಾರದತ್ತ, ತಾಯಿ ಪುಣ್ಯವತಿ. ಇವರ ಕಾಯಕ ಚಿನ್ನ ಮುತ್ತಿನ (ಹರದಿಕೆ) ವ್ಯಾಪಾರ. ಈ…

0 Comments

ಅಮರಗೊಂಡದಲ್ಲಿ ಬಸವ ಪುರಾಣ ಆಲಿಸಿ ಸದ್ಗತಿ ಹೊಂದಿದ ಗುಬ್ಬಿಗಳು | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.

ಶ್ರವಣ ಎಂದರೆ ಆಲಿಸುವಿಕೆ. ಕೇವಲ ಕೇಳುವುದಲ್ಲ, ಅರಿತು ಅಳವಡಿಸಿಕೊಳ್ಳುವುದು. ಶರಣರ ವಚನಗಳಲ್ಲಿ ಶ್ರವಣವು ಶಿವತತ್ವದ ಅರಿವು, ಗುರು ಉಪದೇಶ ಮತ್ತು ಭಕ್ತಿ ಮಾರ್ಗದ ಮೂಲವೆಂದು ಬಣ್ಣಿಸಲಾಗಿದೆ. ವಿಶ್ವಗುರು ಬಸವಣ್ಣನವರ ಪ್ರಕಾರ ಭಕ್ತರು ಪರಮಾತ್ಮನ ಗುಣಗಾನವನ್ನು ಭಕ್ತಿಯಿಂದ ಆಲಿಸಿ ಮನನ ಮಾಡುವುದಾಗಿದೆ. ಅದಕ್ಕೆಂದು ಬಸವಣ್ಣನವರು ಶರಣರ ಉಪದೇಶ ಕೇಳುವುದು, ಅವರ ಸಂಗ ಮಾಡುವುದೇ ನಿಜವಾದ ಭಕ್ತಿ ಎಂದಿದ್ದಾರೆ. ಆಸೆಯೆಂಬ ಪಾಶದಲ್ಲಿ ಭವಬಂಧನನಾಗಿರ್ದೆನಯ್ಯಾ,ಸಕೃತು ನಿಮ್ಮ ನೆನೆಯಲು ಎನಗೆ ತೆರಹಿಲ್ಲಯ್ಯಾ!ಕರುಣಾಕರ, ಅಭಯಕರ, ವರದ, ನೀ ಕರುಣಿಸಯ್ಯಾ.ಸಂಸಾರಬಂಧನವನು ಮಾಣಿಸಿ, ಎನಗೆ ಕೃಪೆಯ ಮಾಡಿ,ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸು,ಭಕ್ತಜನಮನೋವಲ್ಲಭ ಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-22/ವಚನ…

0 Comments