ಕರಗಿ ಮಾಡಲಿಬಲ್ಲ ಒರೆದು ನೋಡಲಿಬಲ್ಲ / ಮೌನೇಶ್ವರರ ವಚನ / ಡಾ. ವೀರೇಶ ಬಡಿಗೇರ, ಹಂಪಿ.
ಕರಗಿ ಮಾಡಲಿಬಲ್ಲ ಒರೆದು ನೋಡಲಿಬಲ್ಲಪರಿಪರಿಯ ವಸ್ತು ಒಡವೆ ದೇವರಾಭರಣಜಡಿದು ಮಾಡುವ ಗುಣಮಣಿ ಚಿಂತಾಮಣಿಧರೆಗಿಳಿದ ಚೆನ್ನಬಸವಣ್ಣ, ಬಸವಣ್ಣ.(ತಿಂತಿಣಿ ಮೌನೇಶ್ವರರ ವಚನಗಳು-2016 / ಡಾ. ವೀರೇಶ ಬಡಿಗೇರ / ಪುಟ ಸಂ. 7 / ವ. ಸಂ. 14) ಕಾಸಿ ನೋಡಲಿ ಬಲ್ಲ ಕೀಸಿ ನೋಡಲಿಬಲ್ಲ. ವಿಶ್ವಕರ್ಮರ ಕುಲಕಸುಬುಗಳು ಜ್ಞಾನ ಮತ್ತು ಕೌಶಲ್ಯದ ರೂಪಗಳು. ಲೋಹವನ್ನು ಕರಗಿಸುವ, ಅರಗಿಸುವ, ಒರೆದು ನೋಡುವ, ಬಡಿದು ಬಗ್ಗಿಸುವ ಮೂಲಕ ಹಲವು ಬಗೆಯ ವಸ್ತು ಒಡವೆ, ದೇವರ ಆಭರಣಗಳನ್ನು ಸೃಜಿಸುವ, ಆಕೃತಿಗೊಳಿಸುವ ಗುಣಮಣಿಗಳು. ಬೇಡಿದ್ದನ್ನು ಕೌಶಲ್ಯಯುತವಾಗಿ ಮಾಡಿ ಕೊಡುವ ಚಿಂತಾಮಣಿಗಳು. ಅಕ್ಕಸಾಲಿಯರ ಪ್ರತಿನಿಧಿಯಾದ ಮೌನಯ್ಯನವರು…






Total views : 65582