ಶರಣ ಅಮುಗಿದೇವಯ್ಯನವರ ವಚನದ ನಿರ್ವಚನ | ಶ್ರೀ. ಎನ್. ಸಿ. ಶಿವಪ್ರಕಾಶ್, ಮಸ್ಕತ್, ಒಮಾನ್.
ವಚನ:ಜ್ಞಾನದಲರಿದಡೇನಯ್ಯ, ಕ್ರೀಯನಾಚರಿಸದನ್ನಕ್ಕ?ನೆನೆದ ಮಾತ್ರದಲ್ಲಿ ಅಹುದೆ, ಕಾರ್ಯದಲಲ್ಲದೆ?ಕುರುಡ ಕಾಣ ಪಥವ, ಹೆಳವ ನಡೆಯಲರಿಯ.ಒಂದಿಲ್ಲದಿರ್ದಡೊಂದಾಗದು.ಜ್ಞಾನವಿಲ್ಲದಿರ್ದ ಕ್ರೀ ಜಡನು,ಕ್ರೀಯಿಲ್ಲದ ಜ್ಞಾನ ವಾಗ್ಜಾಲ ಭ್ರಾಂತು.ಇದು ಕಾರಣ, ಸಿದ್ಧಸೋಮನಾಥಲಿಂಗವಕೂಡುವ ಶರಣಂಗೆ ಎರಡೂ ಬೇಕು.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-130/ವಚನ ಸಂಖ್ಯೆ-331) ಶರಣ ಅಮುಗಿದೇವಯ್ಯನವರು ಮೂಲತಃ ಪಂಡರಾಪುರ ಸಮೀಪದ ಪುಳಜೆ ಗ್ರಾಮದವರಾಗಿದ್ದು ಅಲ್ಲಿ ನೇಯ್ಗೆ ಕಾಯಕ ಮಾಡಿಕೊಂಡವರಾಗಿದ್ದರು. ಇವರ ಮಡದಿ ಶರಣೆ ಅಮುಗೆ ರಾಯಮ್ಮನವರು ಇಷ್ಟಲಿಂಗಪೂಜಾ ನಿಷ್ಠೆಯುಳ್ಳವರಾಗಿದ್ದ ಅಮುಗಿ ದೇವಯ್ಯನವರಿಗೆ ಸೋಲಾಪೂರದ ಸಿದ್ಧರಾಮ ಶಿವಯೋಗಿಗಳು ಭತ್ತ ಕುಟ್ಟಲು ಹೇಳಿದಾಗ “ನಾವು ಭವಿಗಳ ಸೇವೆ ಮಾಡುವುದಿಲ್ಲ” ಎಂದು ಹೇಳಿ ಮಡದಿ ಅಮುಗಿ ರಾಯಮ್ಮನವರೊಂದಿಗೆ ಕಲ್ಯಾಣಕ್ಕೆ ಬಂದು ಅನುಭವಮಂಟಪದ…




Total views : 69462