ಶರಣ ಅಮುಗಿದೇವಯ್ಯನವರ ವಚನದ ನಿರ್ವಚನ | ಶ್ರೀ. ಎನ್. ಸಿ. ಶಿವಪ್ರಕಾಶ್, ಮಸ್ಕತ್, ಒಮಾನ್.

ವಚನ:ಜ್ಞಾನದಲರಿದಡೇನಯ್ಯ, ಕ್ರೀಯನಾಚರಿಸದನ್ನಕ್ಕ?ನೆನೆದ ಮಾತ್ರದಲ್ಲಿ ಅಹುದೆ, ಕಾರ್ಯದಲಲ್ಲದೆ?ಕುರುಡ ಕಾಣ ಪಥವ, ಹೆಳವ ನಡೆಯಲರಿಯ.ಒಂದಿಲ್ಲದಿರ್ದಡೊಂದಾಗದು.ಜ್ಞಾನವಿಲ್ಲದಿರ್ದ ಕ್ರೀ ಜಡನು,ಕ್ರೀಯಿಲ್ಲದ ಜ್ಞಾನ ವಾಗ್ಜಾಲ ಭ್ರಾಂತು.ಇದು ಕಾರಣ, ಸಿದ್ಧಸೋಮನಾಥಲಿಂಗವಕೂಡುವ ಶರಣಂಗೆ ಎರಡೂ ಬೇಕು.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-130/ವಚನ ಸಂಖ್ಯೆ-331) ಶರಣ ಅಮುಗಿದೇವಯ್ಯನವರು ಮೂಲತಃ ಪಂಡರಾಪುರ ಸಮೀಪದ ಪುಳಜೆ ಗ್ರಾಮದವರಾಗಿದ್ದು ಅಲ್ಲಿ ನೇಯ್ಗೆ ಕಾಯಕ ಮಾಡಿಕೊಂಡವರಾಗಿದ್ದರು. ಇವರ ಮಡದಿ ಶರಣೆ ಅಮುಗೆ ರಾಯಮ್ಮನವರು ಇಷ್ಟಲಿಂಗಪೂಜಾ ನಿಷ್ಠೆಯುಳ್ಳವರಾಗಿದ್ದ ಅಮುಗಿ ದೇವಯ್ಯನವರಿಗೆ ಸೋಲಾಪೂರದ ಸಿದ್ಧರಾಮ ಶಿವಯೋಗಿಗಳು ಭತ್ತ ಕುಟ್ಟಲು ಹೇಳಿದಾಗ “ನಾವು ಭವಿಗಳ ಸೇವೆ ಮಾಡುವುದಿಲ್ಲ” ಎಂದು ಹೇಳಿ ಮಡದಿ ಅಮುಗಿ ರಾಯಮ್ಮನವರೊಂದಿಗೆ ಕಲ್ಯಾಣಕ್ಕೆ ಬಂದು ಅನುಭವಮಂಟಪದ…

0 Comments

ವಚನಗಳಲ್ಲಿ ವೈಚಾರಿಕ ಪ್ರಜ್ಞೆ | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಭಕ್ತಿ ಸುಭಾಷೆಯ ನುಡಿಯ ನುಡಿವೆ,ನುಡಿದಂತೆ ನಡೆವೆ,ನಡೆಯೊಳಗೆ ನುಡಿಯ ಪೂರೈಸುವೆ,ಮೇಲೆ ತೂಗುವ ತ್ರಾಸು ಕಟ್ಟಳೆ ನಿಮ್ಮ ಕೈಯಲ್ಲಿ.ಒಂದು ಜವೆ ಕೊರತೆಯಾದಡೆಎನ್ನನದ್ದಿ ನೀನೆದ್ದು ಹೋಗು,ಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-115/ವಚನ ಸಂಖ್ಯೆ-441) ವಚನಗಳಲ್ಲಿ ವೈಚಾರಿಕ ಪ್ರಜ್ಞೆ ಎನ್ನುವ ಶೀರ್ಷಿಕೆಯಲ್ಲಿ 2 ಶಬ್ದಗಳಿವೆ ಒಂದು "ವಚನ" ಮತ್ತೊಂದು "ವೈಚಾರಿಕತೆ". ಇವೆರಡೂ ಶಬ್ದಗಳ ಅರ್ಥವನ್ನು ನೋಡಿಕೊಂಡು ಮುಂದೆ ಹೋಗೋಣ. ವಚನಗಳ ಅರ್ಥ ಮತ್ತು ಸ್ವರೂಪ:ಒಂದು ಭಾಷೆ, ಅದಕ್ಕೆ ಒಂದು ಲಿಪಿ, ಸಾಕ್ಷರತೆಯಿಂದ ಸಾಹಿತ್ಯ ರಚನೆ, ಸಾಹಿತ್ಯದೊಂದಿಗೆ ಅಕ್ಷರೀಕರಣ ಇವು ಸಮಾಜವನ್ನು ಅಥವಾ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಸಮಷ್ಠಿಯನ್ನೂ ಸಾಮಾಜಿಕವಾಗಿ, ಸಾಂಸ್ಕೃತಿಕವಾಗಿ ಪ್ರಭಾವಶಾಲಿಯಾಗಿ ಒಂದುಗೂಡಿಸುವ…

0 Comments

ವಚನಕಾರರ ದೃಷ್ಟಿಯಲ್ಲಿ ಆತ್ಮ ಸೌಂದರ್ಯ | ಡಾ. ಎಂ. ಮಕ್ತುಂಬಿ, ಭಾಲ್ಕಿ.

ಅಧ್ಯಾತ್ಮ ಸಾಧಕರಾಗಿದ್ದ ವಚನಕಾರರಿಗೆ ಆತ್ಮಸಾಕ್ಷಾತ್ಕಾರವು ಉಳಿದ ಸಾಧನೆಗಳಂತೆ ಮಹತ್ವದ್ದಾಗಿತ್ತು. ಅವರು ಪುರವನ್ನು ಗೆದ್ದಂತೆ; ಪರವನ್ನು ಗೆದ್ದವರು. ಮನೆಯನ್ನು ಗೆದ್ದಂತೆ ಮಾರೂ ಗೆದ್ದವರು; ಆತ್ಮ ಸಾಕ್ಷಾತ್ಕಾರ ಮಾಡಿಕೊಂಡವರಿಗೆ ಎಲ್ಲವೂ ಶಿವಮಯವಾಗಿಯೇ ಕಾಣುತ್ತದೆ; ಸಮಾನವಾಗಯೇ ಕಾಣುತ್ತದೆ. ಈ ದರ್ಶನದ ಹಿನ್ನೆಲೆಯಲ್ಲಿಯೇ ವಚನಕಾರರು ಎಲ್ಲ ತಾರತಮ್ಯಗಳನ್ನು ಮೀರಿ ನಿಂತರು‌. ತಾವು ಬದುಕಿದ್ದ ಯುಗಮಾನವನ್ನು ಎಲ್ಲ ಭೇದಗಳಿಂದ ಬಿಡುಗಡೆ ಮಾಡುವ ಚಳಿವಳಿಯೊಂದನ್ನು ರೂಪಿಸಿದರು‌. ಅದು ಆತ್ಮಸಾಕ್ಷಾತ್ಕಾರದ ಸಾಧನೆಯಾಗಿದ್ದಂತೆ; ಸಮಾಜದಲ್ಲಿದ್ದ ಪರಮಾತ್ಮನ ಶ್ರೇಯ ಸಾಧನೆಯ ಚಳುವಳಿಯೂ ಆಗಿದ್ದಿತು. ಅವರು ಆತ್ಮದ ಆಧಾರದ ಮೇಲೆ ಸಮಾನತೆಯನ್ನು ಸ್ಥಾಪಿಸಲು ಬಯಸಿದರು. ಎಲ್ಲ ಮನುಷ್ಯರಲ್ಲಿಯೂ ಆತ್ಮವಿದೆ. ಅದು ಒಂದೇ…

0 Comments

ಪಂಚಗಣಾಧೀಶರು | ಡಾ. ವಡ್ಡಗೆರೆ ನಾಗರಾಜಯ್ಯ, ಬೆಂಗಳೂರು.

ಬಸವೋತ್ತರ ಕಾಲದಲ್ಲಿ ಪಂಚಗಣಾಧೀಶರು ಕೆರೆಕುಂಟೆ ಗೋಕಟ್ಟೆಗಳನ್ನು ಕಟ್ಟಿಸುವ ಮೂಲಕ ರೈತಾಪಿಗಳಿಗೆ, ಗೋವಳಿಗರಿಗೆ, ಶ್ರಮಜೀವಿಗಳಿಗೆ ಅನ್ನಾಹಾರ ಮತ್ತು ಅಧ್ಯಾತ್ಮ ಗುರುಬೋಧೆ ನೀಡಿದವರು. ಕೂಲಹಳ್ಳಿ ಮದ್ದಾನೇಶ. ಅರಸೀಕೆರೆಯ ಕೋಲಶಾಂತೇಶ. ಹರಪನಹಳ್ಳಿ ಕೆಂಪೇಶ(ಕಣಗಲಿ ಕೆಂಪೇಶ). ಕೊಟ್ಟೂರು ಗುರುಬಸವ (ಕೊಟ್ಟೂರೇಶ, ಕೊಟ್ರೇಶ). ನಾಯಕನಹಟ್ಟಿ ತಿಪ್ಪೇಸ್ವಾಮಿ (ಹಟ್ಟಿ ತಿಪ್ಪಯ್ಯ, ತಿಪ್ಪೇಶ). ಎಂಬ ಈ ಪಂಚಗಣಾಧೀಶರು ಹದಿನಾಲ್ಕು ಹಾಗೂ ಹದಿನೈದನೇ ಶತಮಾನದಲ್ಲಿ ಜನಪದರ ಆದರ್ಶ ಸಾಂಸ್ಕೃತಿಕ ನಾಯಕರಾಗಿ ಆಗಿಹೋಗಿದ್ದು, ಬಸವಾದಿ ಪ್ರಮಥರ ಸಾಂಸ್ಕೃತಿಕ ಆಶಯಗಳಿಗಾಗಿ ದುಡಿದು ಅಮರ ದೈವಗಳಾಗಿ ಜೀವಸಮಾಧಿಯಾಗಿದ್ದಾರೆ. ಹಲವಾರು ಜಾನಪದ ಕಾವ್ಯಗಳ ಹುಟ್ಟುವಳಿಗೂ ಇವರು ಮೆರೆದ ಪವಾಡ ಸಾಹಸಗಳು ವಸ್ತುವನ್ನು ಒದಗಿಸಿವೆ. ಕೂಲಹಳ್ಳಿ…

0 Comments

ಬಯಲು ಬಯಲನೆ ಬಿತ್ತಿದ ಶರಣರು | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ವಚನ ಧರ್ಮದ ಭಕ್ತಿ ಪರಂಪರೆಯಲ್ಲಿ ಬಯಲು ಎಂಬ ಶಬ್ದ ಶರಣರ ವಚನಗಳಲ್ಲಿ ಭಾವನಾತ್ಮಕ ವಿನ್ಯಾಸದ ಮೂಲಕ ಮುಖಾಮುಖಿಯಾಗುತ್ತದೆ. ಶರಣರಲ್ಲಿ ಬಯಲು ಅಗೋಚರ ಇಂದ್ರಿಯಾನಂದಕ್ಕೆ ಮುದ ನೀಡುವ ಶೂನ್ಯವದು. ನಿರಾಳ ಅಗೋಚರ ಶಕ್ತಿಯ ವಿಶಿಷ್ಟ ವಿಶ್ವವದು. ಬೀಜದಲ್ಲಿ ಬೀಜ ಅಡಗಿರುವಂತೆ ಬೆಚ್ಚನೆಯ ಭಾವಾನುಭೂತಿ. ನಿರಾಕಾರದ ಕತ್ತಲೆಯ ಜಗತ್ತು. ವಚನಕಾರರ ಬಯಲು ಎಂದರೆ ಸತ್ಯದ ಪಾವಿತ್ರ್ಯತೆಯನ್ನು ಮುಂದು ಮಾಡುವ ವಿಶೇಷ ರೂಪಕದ ಅವಲೋಕನಕ್ಕೆ ಒಳಪಡಿಸುವ ಮನಸ್ಥಿಯಾಗಿದೆ. ಬಯಲು ಎನ್ನುವ ಸಂವೇದನೆಯನ್ನು ವಚನ ಸಾಹಿತ್ಯದಲ್ಲಿ ಮಾತ್ರ ಕಾಣಲು ಸಾದ್ಯ. ಗ್ರಹಿಕೆಗೆ ಸಿಗದ ಶಬ್ದಗಳಲ್ಲಿ ಬಂಧಿಸಲು ಸಾಧ್ಯವಾಗದ ವಿಸ್ಮಯ ಆಧ್ಯಾತ್ಮಿಕ ಲೋಕ. ಶೂನ್ಯ…

0 Comments

ಮಹಾಪ್ರಸಾದಿ ಶರಣ ಬಿಬ್ಬಿಬಾಚಯ್ಯನವರು | ಶ್ರೀ. ಲೋಕೇಶ್ ಎನ್. ಮಾನ್ವಿ, ರಾಯಚೂರು ಜಿಲ್ಲೆ.

ರಾಯಚೂರು ಜಿಲ್ಲೆ ಬಿಸಿಲನಾಡು ಎಂದೇ ಹೆಸರುವಾಸಿ‌. ಅದರಷ್ಟೇ ಸಾಹಿತ್ಯದಿಂದ ನೆತ್ತಿಯನ್ನು ತಂಪಾಗಿಸಬಲ್ಲ ಶರಣರು, ದಾಸರು, ಸಂತರು, ಮಹಾಂತರ, ಸಾಹಿತಿಗಳ, ನಾಡು ರಾಯಚೂರು. ಆಂಧ್ರಪ್ರದೇಶದ ಗಡಿಭಾಗಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಯಾದರೂ, ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಜಿಲ್ಲೆ ಇದಾಗಿದೆ. ಹನ್ನೆರಡನೇ ಶತಮಾನದ ಬಸವಾದಿ ಶರಣರ ಸಾಲಿನಲ್ಲಿ ಕಾಣಸಿಗುವ ಪ್ರಮುಖ ಶರಣರಾದ ಬಿಬ್ಬಿಬಾಚಯ್ಯನವರು ಕೂಡ ರಾಯಚೂರು ಜಿಲ್ಲೆಯ ಶರಣರೇ ಆಗಿದ್ದಾರೆ. ಶರಣ ಬಿಬ್ಬಿಬಾಚಯ್ಯನವರು ಮೂಲತಃ ರಾಯಚೂರು ಜಿಲ್ಲೆಯ ಗಬ್ಬೂರಿನವರಾಗಿದ್ದು, ಪೂರ್ವಾಶ್ರಮದಲ್ಲಿ ಬ್ರಾಹ್ಮಣರಾದರೂ ಬಸವಣ್ಣನವರ ಪ್ರಭಾವಕ್ಕೆ ಒಳಗಾಗಿ ಕಲ್ಯಾಣಕ್ಕೆ ತೆರಳಿ ಇಷ್ಟಲಿಂಗ ದೀಕ್ಷೆ ಪಡೆದು ಶರಣರಾದವರು, ಅನುಭವ ಮಂಟಪದಲ್ಲಿ ಸಕ್ರಿಯವಾಗಿ…

0 Comments

ನಾಥರು ಹಾಗೂ ಶರಣರು | ಡಾ. ಬಸವರಾಜ ಸಬರದ, ಬೆಂಗಳೂರು.

ಅಧ್ಯಾಯ – 01: ನಾಥರು ಹಾಗೂ ಶರಣರು ಭಾರತದಲ್ಲಿ ಅನೇಕ ಧಾರ್ಮಿಕ ಪಂಥಗಳು ಆಗಿ ಹೋಗಿವೆ. ಧಾರ್ಮಿಕ ಕ್ಷೇತ್ರದಲ್ಲಿ ಅನೇಕ ಬೆಳವಣಿಗೆಗಳಾಗಿವೆ. ಧರ್ಮ ಮತ್ತು ಚಳುವಳಿಗಳು ಒಂದು ಕಡೆ ಕೂಡುವುದಿಲ್ಲವೆಂಬ ನಂಬಿಕೆಯಿದೆ. ಮತ-ಧರ್ಮಗಳ ಉದ್ದೇಶವೇ ಬೇರೆ, ಚಳುವಳಿಗಳ ಉದ್ದೇಶವೇ ಬೇರೆಯೆಂದು ಹೇಳಿಕೊಂಡು ಬರಲಾಗಿದೆ. ಆದರೆ ಹನ್ನೆರಡನೆಯ ಶತಮಾನದಲ್ಲಿ ಕರ್ನಾಟಕದ ಶರಣರು ಧರ್ಮವನ್ನು ಒಂದು ಚಳುವಳಿಯ ಹಾಗೆ ಬೆಳೆಸಿದರು. ಆಗ ಶರಣಧರ್ಮವು ಶರಣ ಚಳುವಳಿಯಾಗಿ ರೂಪಗೊಂಡಿತು. ಧಾರ್ಮಿಕ ಪರಂಪರೆಯಲ್ಲಿ ಹೀಗೆ ಧರ್ಮವೊಂದು ಚಳುವಳಿಯ ರೂಪ ಪಡೆದದ್ದು 12 ನೇಯ ಶತಮಾನದಲ್ಲಿ, ಅದೂ ಕರ್ನಾಟಕದಲ್ಲಿ ಕನ್ನಡದ ವಚನಗಳ ಮೂಲಕವೆಂಬ ಸಂಗತಿಯೇ…

0 Comments

ವಚನ ಪರಂಪರೆ | ಶ್ರೀಮತಿ. ಸುಶೀಲಾ ಸದಾಶಿವಯ್ಯ, ತುಮಕೂರು.

ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಎಂಬ ಪ್ರಕಾರ ಹೆಚ್ಚು ರಚನೆಯಾಗಿ ಅಧಿಕೃತವಾಗಿ ಬೆಳಕಿಗೆ ಬಂದಿದ್ದು 12 ನೇ ಶತಮಾನದ ಶರಣ ಯುಗದಲ್ಲಿ. ಅದಕ್ಕೂ ಮೊದಲು ವಚನಗಳು ರಚನೆಯಾಗಿತ್ತು. ಜೇಡರ ದಾಸಿಮಯ್ಯ ಮೊದಲ ವಚನಕಾರರಾಗಿ ಕಂಡು ಬರುತ್ತಾರೆ. ಶರಣ ಯುಗದಲ್ಲಿ ರಚನೆಯಾದ ವಚನಗಳು ಸ್ವತಂತ್ರ ಭಾಷಾ ರಚನೆಯಿಂದ ಸರಳ, ಅಚ್ಚಗನ್ನಡ ಸೊಗಡಿನಿಂದ ಎಲ್ಲರ ಗಮನ ಸೆಳೆಯುವಂತೆ ಆಯಿತು. ಈ ಯುಗದಲ್ಲಿ ಒಂದು ಇಡೀ ಸಮೂಹವೇ ವಚನಗಳ ರಚನೆಯಲ್ಲಿ ಜಾತಿ, ವರ್ಗ, ವರ್ಣ, ಹೆಣ್ಣು, ಗಂಡು ಎಂಬ ಯಾವ ತಾರತಮ್ಯಕ್ಕೆ ಒಳಗಾಗದೆ ಸಾಮಾಜಿಕ ಕ್ರಾಂತಿಗೆ ವಚನವನ್ನು ಮಾಧ್ಯಮವಾಗಿಸಿಕೊಂಡು ಅಸಂಖ್ಯಾತ ವಚನಗಳನ್ನು…

0 Comments

ಜೇಡರ ದಾಸಿಮಯ್ಯ ಶರಣರ ವಚನ ನಿರ್ವಚನ | ಶ್ರೀಮತಿ. ವಿಜಯಲಕ್ಷ್ಮಿ ಎಂ. ಪಾಟೀಲ, ಕಲಬುರಗಿ.

ವಚನ:ತಾಯ ಗರ್ಭದ ಶಿಶು ತಾಯ ಕುರುಹನರಿಯದು.ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ!ರಾಮನಾಥ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-282/ವಚನ ಸಂಖ್ಯೆ-801) ಆದ್ಯ ವಚನಕಾರರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಚನಕಾರರು ಜೇಡರ ದಾಸಿಮಯ್ಯ ಶರಣರು. ಬಸವಣ್ಣನವರ ಹಿರಿಯ ಸಮಕಾಲೀನರಾದ ಈ ಶರಣರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮುದನೂರು (ಬಿ) ಗ್ರಾಮದಲ್ಲಿ ಜನಿಸಿದವರು. ತಂದೆ ಕಾಮಯ್ಯ ಹಾಗೂ ತಾಯಿ ಶಂಕರಿ ಮತ್ತು ಮಡದಿ ವಚನಕಾರ್ತಿ ಶರಣೆ ದುಗ್ಗಳೆ. ಕುಲ ಕಾಯಕ ನೇಕಾರಿಕೆಯೇ ಈ ಶರಣರ ಕಾಯಕವಾಗಿತ್ತು. “ರಾಮನಾಥ” ಎನ್ನುವ ಅಂಕಿತನಾಮದಲ್ಲಿ ಇವರ…

0 Comments