ಗೋಲ್ಲಾಳೇಶ್ವರ ಶರಣರ ವಚನ ನಿರ್ವಚನ | ಶ್ರೀಮತಿ ರೇಣುಕಾ ಮೈಸಲಿಗೆ, ಕಲಬುರಗಿ.
ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು.ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು.ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು.ಇಂತಿವನೆಲ್ಲವನರಿವ ಚಿತ್ತ ದೇವರಲ್ಲ.ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು.ಇಂತಿವ ಕಳೆದುಳಿದ ವಸ್ತುವಿಪ್ಪೆಡೆ ಯಾವುದೆಂದಡೆ:ಕಂಡವರೊಳಗೆ ಕೈಕೊಂಡಾಡದೆ,ಕೊಂಡ ವ್ರತದಲ್ಲಿ ಮತ್ತೊಂದನೊಡಗೂಡಿ ಬೆರೆಯದೆ,ವಿಶ್ವಾಸ ಗ್ರಹಿಸಿ ನಿಂದಲ್ಲಿ ಆ ನಿಜಲಿಂಗವಲ್ಲದೆ,ಮತ್ತೊಂದು ಪೆರತನರಿಯದೆ ನಿಂದಾತನೆ ಸರ್ವಾಂಗಲಿಂಗಿ,ವೀರಬೀರೇಶ್ವರಲಿಂಗದೊಳಗಾದ ಶರಣ.(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-35/ವಚನ ಸಂಖ್ಯೆ-88) ಅನುಭವ ಮಂಟಪದ ಮೇರು ಅನುಭಾವಿ ಶರಣರು ಗೋಲ್ಲಾಳೇಶ್ವರರು. ಇವರ ಜನ್ಮ ಸ್ಥಳ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗೋಲಗೇರಿ ಎಂಬ ಗ್ರಾಮ. ತಂದೆ ಬಲ್ಲುಗ ತಾಯಿ ದುಗ್ಗಳೆ. ಇವರ ಕಾಯಕ ಕುರಿ ಕಾಯುವದು. "ವೀರ ಬೀರೇಶ್ವರ"…





Total views : 54639