ಶರಣ ಅಜಗಣ್ಣ ತಂದೆಗಳ ವಚನ  ನಿರ್ವಚನ | ಶ್ರೀಮತಿ. ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ವಚನ;ಅಂತರಂಗದಲ್ಲಿ ಆಯತವನರಿದವಂಗೆ,ಬಹಿರಂಗದಲ್ಲಿ ಹಮ್ಮೆಲ್ಲಿಯದಯ್ಯಾ.ಅಂತರಂಗದಲ್ಲಿ ಅನುಮಿಷನಾಗಿನಿರಂತರ ಲಿಂಗಸುಖಿ ನೋಡಯ್ಯಾ.ಸರ್ವೇಂದ್ರಿಯ ಸಮ್ಮತವಾಯಿತ್ತುಮಹಾಘನ ಸೋಮೇಶ್ವರ ಮುಂತಾಗಿ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-115/ವಚನ ಸಂಖ್ಯೆ-295)  ನಿರ್ವಚನ;ಅಜಗಣ್ಣ ತಂದೆಯವರ ವಚನಗಳು ತತ್ವಜ್ಞಾನ, ಜ್ಞಾನಮಾರ್ಗ ಮತ್ತು ಆರೂಢ ಸ್ಥಿತಿಯನ್ನು ಬಿಂಬಿಸುತ್ತವೆ. ಇಷ್ಟಲಿಂಗ ಪೂಜೆ, ಸದ್ಭಕ್ತಿ ಮತ್ತು ಕಾಯಕದ ಮಹತ್ವವನ್ನು ಇವರ ವಚನಗಳಲ್ಲಿ ಕಾಣಬಹುದು. ತನ್ನ ಅಂತರಂಗದ ಸತ್ಯವನ್ನು, ಆತ್ಮಸ್ವರೂಪವನ್ನು ಅರಿತವನಿಗೆ ಹೊರಗಿನ ಆಡಂಬರ, ಅಹಂಕಾರ, ಪ್ರದರ್ಶನಗಳ ಅವಶ್ಯಕತೆ ಇರುವುದಿಲ್ಲ. ಅವನು ಪ್ರತಿಕ್ಷಣವೂ ಶಿವಸ್ಮರಣೆಯಲ್ಲಿ, ಲಿಂಗಾನುಭವದಲ್ಲಿ ನೆಲೆಸಿರುತ್ತಾನೆ. ಆಗ ಅವನ ಮನಸ್ಸು, ಬುದ್ಧಿ ಹಾಗೂ ಇಂದ್ರಿಯಗಳೆಲ್ಲವೂ ಸಮನ್ವಯಗೊಂಡು ದೈವಿಕ ಶಾಂತಿಯನ್ನು ಅನುಭವಿಸುತ್ತವೆ. "ಅಂತರಂಗದಲ್ಲಿ ಆಯತವನರಿದವಂಗೆ" ಇಲ್ಲಿ "ಆಯತ"…

0 Comments

ಶರಣ ಅಜಗಣ್ಣ ತಂದೆಗಳ ವಚನ  ನಿರ್ವಚನ | ಶ್ರೀಮತಿ. ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ವಚನ;ಅಂತರಂಗದಲ್ಲಿ ಆಯತವನರಿದವಂಗೆ,ಬಹಿರಂಗದಲ್ಲಿ ಹಮ್ಮೆಲ್ಲಿಯದಯ್ಯಾ.ಅಂತರಂಗದಲ್ಲಿ ಅನುಮಿಷನಾಗಿನಿರಂತರ ಲಿಂಗಸುಖಿ ನೋಡಯ್ಯಾ.ಸರ್ವೇಂದ್ರಿಯ ಸಮ್ಮತವಾಯಿತ್ತುಮಹಾಘನ ಸೋಮೇಶ್ವರ ಮುಂತಾಗಿ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-115/ವಚನ ಸಂಖ್ಯೆ-295)  ನಿರ್ವಚನ;ಅಜಗಣ್ಣ ತಂದೆಯವರ ವಚನಗಳು ತತ್ವಜ್ಞಾನ, ಜ್ಞಾನಮಾರ್ಗ ಮತ್ತು ಆರೂಢ ಸ್ಥಿತಿಯನ್ನು ಬಿಂಬಿಸುತ್ತವೆ. ಇಷ್ಟಲಿಂಗ ಪೂಜೆ, ಸದ್ಭಕ್ತಿ ಮತ್ತು ಕಾಯಕದ ಮಹತ್ವವನ್ನು ಇವರ ವಚನಗಳಲ್ಲಿ ಕಾಣಬಹುದು. ತನ್ನ ಅಂತರಂಗದ ಸತ್ಯವನ್ನು, ಆತ್ಮಸ್ವರೂಪವನ್ನು ಅರಿತವನಿಗೆ ಹೊರಗಿನ ಆಡಂಬರ, ಅಹಂಕಾರ, ಪ್ರದರ್ಶನಗಳ ಅವಶ್ಯಕತೆ ಇರುವುದಿಲ್ಲ. ಅವನು ಪ್ರತಿಕ್ಷಣವೂ ಶಿವಸ್ಮರಣೆಯಲ್ಲಿ, ಲಿಂಗಾನುಭವದಲ್ಲಿ ನೆಲೆಸಿರುತ್ತಾನೆ. ಆಗ ಅವನ ಮನಸ್ಸು, ಬುದ್ಧಿ ಹಾಗೂ ಇಂದ್ರಿಯಗಳೆಲ್ಲವೂ ಸಮನ್ವಯಗೊಂಡು ದೈವಿಕ ಶಾಂತಿಯನ್ನು ಅನುಭವಿಸುತ್ತವೆ. "ಅಂತರಂಗದಲ್ಲಿ ಆಯತವನರಿದವಂಗೆ" ಇಲ್ಲಿ "ಆಯತ"…

1 Comment

ಎಣ್ಣೆ ಬೇರೆ  ಬತ್ತಿ ಬೇರೆ | ವ್ಯೋಮಕಾಯ ಅಲ್ಲಮ ಪ್ರಭುಗಳ ವಚನ ವಿಶ್ಲೇಷಣೆ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.

ಎಣ್ಣೆ ಬೇರೆ  ಬತ್ತಿ ಬೇರೆ,ಎರಡೂ ಕೂಡಿ ಸೊಡರಾಯಿತ್ತು.ಪುಣ್ಯ ಬೇರೆ ಪಾಪ ಬೇರೆ,ಎರಡೂ ಕೂಡಿ ಒಡಲಾಯಿತ್ತು.ಮಿಗಬಾರದು ಮಿಗದಿರಬಾರದುಒಡಲಿಚ್ಚೆಯ ಸಲಿಸದೆ ನಿಮಿಷವಿರಬಾರದು.ಕಾಯಗುಣವಳಿದು ಮಾಯಾ ಜ್ಯೋತಿವಾಯು ಕೂಡುವ ಮುನ್ನಭಕ್ತಿ ಮಾಡಬಲ್ಲಾತನೆ ದೇವ ಗುಹೇಶ್ವರಾ.(ಸಮಗ್ರ ವಚನ ಸಂಪುಟ: ಎರಡು-2021/ವಚನ ಸಂಖ್ಯೆ-1239) ಒಂದು ಶಬ್ದಾತೀತವಾದ ಅನುಭಾವಿಕ ವಿಷಯವನ್ನು ನಿರೂಪಿಸುವಲ್ಲಿ ಎರಡು ವೈರುಧ್ಯತೆಗಳ ಮಧ್ಯೆ ಒಂದು ಬೆಡಗನ್ನು ಸೃಷ್ಟಿಸಿ ತನ್ಮೂಲಕ ವಿಷಯ ಪ್ರಸ್ತಾವನೆ ಮಾಡುವಲ್ಲಿ ಅಲ್ಲಮ ಪ್ರಭುಗಳು ನಿಸ್ಸೀಮರು. ಸೃಷ್ಟಿಯ ಸಕಲ ಚರಾಚರಗಳಲ್ಲಿಯೂ ದೃಷ್ಟಿಗೆ ಅಗೋಚರವಾದ ಒಂದು ಸೂಕ್ಷ್ಮ ಸಂಬಂಧವಿದೆ. ಅದನ್ನೇ ಅಲ್ಲಮ ಪ್ರಭುಗಳು ಹೀಗೆ ವ್ಯಕ್ತಪಡಿಸಿದ್ದಾರೆ. ಎತ್ತಣ ಮಾಮರ ಎತ್ತಣ ಕೋಗಿಲೆ,ಎತ್ತಣಿಂದೆತ್ತ ಸಂಬಂಧವಯ್ಯಾ.ಬೆಟ್ಟದ ನೆಲ್ಲಿಕಾಯಿ…

0 Comments

ಸಿಂಹ ಮದಕರಿಯ ಮೇಲಲ್ಲದೆ | ಶಿವಯೋಗಿ ಸಿದ್ಧರಾಮೇಶ್ವರರ ವಚನ ವಿಶ್ಲೇಷಣೆ | ಶ್ರೀಮತಿ, ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ವಚನ:ಸಿಂಹ ಮದಕರಿಯ ಮೇಲೆ ಹಾರುವುದಲ್ಲದೆ,ಮದಮಹಿಷಿಯ ಮೇಲೆ ಹಾರುವುದೆ ಅಯ್ಯಾ?ಪಕ್ಷಿ ಆಕಾಶದಲ್ಲಿ ಹಾರುವುದಲ್ಲದೆ,ಪಂಜರದಲ್ಲಿ ಹಾರದು ನೋಡಯ್ಯಾ!ನಮ್ಮ ಕಪಿಲಸಿದ್ಧಮಲ್ಲೇಶನನರಿವವರುಜ್ಞಾನದ ಮೇಲೆ ಹಾರುವರಲ್ಲದೆಅಜ್ಞಾನದ ಮೇಲೆ ಹಾರರು.(ಸಮಗ್ರ ವಚನ ಸಂಪುಟ: ನಾಲ್ಕು-2021/ವಚನ ಸಂಖ್ಯೆ-1239) ಶಿವಯೋಗಿ ಸಿದ್ಧರಾಮೇಶ್ವರರು ಭಕ್ತಿ, ಕಾಯಕ, ದಾಸೋಹ ಮತ್ತು ಸಮಾನತೆಯ ಆದರ್ಶಗಳನ್ನು ಜನರಿಗೆ ಬೋಧಿಸಿದ ಮಹಾನ್ ಶರಣರು. ಅವರ ವಚನಗಳು ಮಾನವೀಯತೆ, ಆತ್ಮಜ್ಞಾನ ಮತ್ತು ಸಾಮಾಜಿಕ ಸಮರತೆಯ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅಮೂಲ್ಯ ಕೊಡುಗೆಯನ್ನು ನೀಡಿವೆ. ಇಂದಿನ ಸಮಾಜಕ್ಕೂ ಅವರ ಚಿಂತನೆಗಳು ಪ್ರಸ್ತುತ ಮತ್ತು ಪ್ರೇರಣಾದಾಯಕವಾಗಿವೆ. ಈ ವಚನವೂ ಕೂಡ ಅದೇ ನಿಟ್ಟಿನಲ್ಲಿ ಅಂದರೆ…

0 Comments

ಮೃತ್ತಿಕೆಯೊಂದರಲ್ಲಿ ಮಡಿಕೆಗಳು ನೂರಾರು | ಶಿವಯೋಗಿ ಸಿದ್ಧರಾಮೇಶ್ವರರ ವಚನ ವಿಶ್ಲೇಷಣೆ | ಶ್ರೀಮತಿ, ಶಾಲಿನಿ ರುದ್ರಮುನಿ, ಹುಬ್ಬಳ್ಳಿ.

ವಚನ:ಮೃತ್ತಿಕೆಯೊಂದರಲ್ಲಿ ಮಡಕೆಗಳು ನೂರಾರು,ಮನವೊಂದರಲ್ಲಿ ಕ್ರಿಯಾಗಳು ನೂರಾರು,ಜನಕನೊಬ್ಬನಲ್ಲಿ ಸಂತತಿಗಳು ನೂರಾರು,ಘನಕ್ಕೆ ಘನನಾದ ಚಿನ್ಮಯ ಕಪಿಲಸಿದ್ಧಾಮಲ್ಲಿಕಾರ್ಜುನನಲ್ಲಿಜಗತ್ತುಗಳು ನೂರಾರು.(ಸಮಗ್ರ ವಚನ ಸಂಪುಟ: ನಾಲ್ಕು-2021/ವಚನ ಸಂಖ್ಯೆ-1953) ಈ ವಚನದ ತಾತ್ಪರ್ಯ ನೋಡುವುದಾದರೆ ಒಂದೇ ಮಣ್ಣಿನಿಂದ ಅನೇಕ ವಿಧದ ಮಡಕೆಗಳು ರೂಪುಗೊಳ್ಳುತ್ತವೆ. ಒಂದೇ ಮನಸ್ಸಿನಿಂದ ಅನೇಕ ಆಲೋಚನೆಗಳು ಮತ್ತು ಕಾರ್ಯಗಳು ಹುಟ್ಟುತ್ತವೆ. ಒಬ್ಬ ತಂದೆಯಿಂದ ಅನೇಕ ಮಕ್ಕಳು ಜನಿಸುತ್ತವೆ. ಹಾಗೆಯೇ ಪರಮ ಚೈತನ್ಯ ಸ್ವರೂಪಿಯಾದ ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಅನೇಕ ಜಗತ್ತುಗಳು ಅಸ್ತಿತ್ವ ಪಡೆದಿವೆ ಎಂಬುದಾಗಿದೆ. ಈ ವಚನವು ಏಕತ್ವ ಮತ್ತು ಅನೇಕತ್ವದ ಸಂಬಂಧವನ್ನು ವಿವರಿಸುತ್ತದೆ. ಏಕತ್ವ (Oneness) ಮತ್ತು ಅನೇಕತ್ವ (Diversity) ಎಂಬುವುದು ಭಾರತೀಯ ತತ್ತ್ವಶಾಸ್ತ್ರದ…

0 Comments

ಕಾಗೆಯ ತಿಂದವನಲ್ಲದೆ ಭಕ್ತನಲ್ಲ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಕಾಗೆಯ ತಿಂದವನಲ್ಲದೆ | ಭಕ್ತನಲ್ಲಕೋಣವ ತಿಂದವನಲ್ಲದೆ | ಮಹೇಶ್ವರನಲ್ಲಕೋಡಗ ತಿಂದವನಲ್ಲದೆ | ಪ್ರಸಾದಿಯಲ್ಲನಾಯ ತಿಂದವನಲ್ಲದೆ | ಪ್ರಾಣಲಿಂಗಿಯಲ್ಲಹೇಯವ ತಿಂದವನಲ್ಲದೆ | ಶರಣನಲ್ಲಇಂತೈವರ ತಿಂದವನಲ್ಲದೆ | ಲಿಂಗೈಕ್ಯನಲ್ಲ ಗುಹೇಶ್ವರಾ ||(ಸಮಗ್ರ ವಚನ ಸಂಪುಟ: ಐದು-2016/ಪುಟ ಸಂಖ್ಯೆ-256/ವಚನ ಸಂಖ್ಯೆ-1061) ಅಲ್ಲಮಪ್ರಭುಗಳ ಈ ವಚನವು ಷಟ್‌ಸ್ಥಲ ವಿಮರ್ಶೆಯ ಮೂಲಕ ಸಾಮಾಜಿಕ ವಾಸ್ತವಗಳನ್ನು ಬೆಡಗಿನ ಮನಸ್ತಿತಿ ಮೂಲಕ ಪ್ರವೇಶಿಸುವ ಪ್ರಯತ್ನವನ್ನು ಇಲ್ಲಿ ಕಾಣಬಹುದು. ಮನುಷ್ಯರ ಶರೀರದಲ್ಲಿ ಮೃಗ. ಮತ್ತು ಪಕ್ಷಿಯ ಸ್ವಭಾವಗಳು ವಾಸವಾಗಿರುತ್ತವೆ. ಪ್ರಾಣಿ ಪಕ್ಷಿ ಸಂಕುಲಗಳನ್ನು ಆಧ್ಯಾತ್ಮಿಕ ಮನೋಲೋಕದಲ್ಲಿ "ಕಾಗೆಯನ್ನು ತಿಂದವನಲ್ಲದೆ ಭಕ್ತನಾಗಲು ಸಾಧ್ಯವಾಗವಾಗುವುದಿಲ್ಲ” ಎನ್ನುವ ವ್ಯಂಗೋಕ್ತಿಯ ಪರಿಕ್ರಮವಿಲ್ಲಿ ಕಾಣಬಹುದು. ಪಕ್ಷಿ…

0 Comments

ಲದ್ದೆಯ ಸೋಮಯ್ಯ ಶರಣರ ವಚನ – ನಿರ್ವಚನ | ಶ್ರೀಮತಿ. ಲಕ್ಷ್ಮಿ ಪಾಟೀಲ, ಕಲಬುರಗಿ.

ವಚನ:ಆವ ಕಾಯಕವಾದಡೂ ಸ್ವಕಾಯಕವ ಮಾಡಿ,ಗುರು ಲಿಂಗ ಜಂಗಮರ ಮುಂದಿಟ್ಟು,ಒಕ್ಕುದ ಹಾರೈಸಿ, ಮಿಕ್ಕುದ ಕೈಕೊಂಡು,ವ್ಯಾಧಿ ಬಂದಡೆ ನೆರಳು, ಬೇನೆ ಬಂದಡೆ ಒರಲು,ಜೀವ ಹೋದಡೆ ಸಾಯಿ, ಇದಕ್ಕಾ ದೇವರ ಹಂಗೇಕೆ,ಭಾಪು ಲದ್ದೆಯ ಸೋಮಾ?(ಸಮಗ್ರ ವಚನ ಸಂಪುಟ-9/2001/ಪುಟ. ಸಂ-8/ವಚನ. ಸಂ. 20) ಅನುಭವ ಮಂಟಪದ ಅನುಭಾವಿ ಶರಣರು ಲದ್ದೆಯ ಸೋಮಯ್ಯನವರು. ಇವರು ಬೀದರ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಲಾದಾ ಗ್ರಾಮದವರು.  ಮಡದಿ ಹೆಸರು ಮಂಗಮ್ಮ. ಹುಲ್ಲು ಮಾರುವ ಕಾಯಕ ಕೈಕೊಳ್ಳುವ ಇವರು ತಮ್ಮ ಗ್ರಾಮದಲ್ಲಿ ಹುಲ್ಲು ಕೊಯಿದು ಹುಲಸೂರಿನಲ್ಲಿ ತಂದು ಮಾರುತ್ತಿದ್ದರು. ಹುಲಸೂರು ಗ್ರಾಮದಲ್ಲಿ ಇವರ ಹೆಸರಿನಲ್ಲಿ ಗುಡಿಯೊಂದು ಇದೆ. ಇವರ…

0 Comments

ಆದಯ್ಯ ಶರಣರ ವಚನ – ನಿರ್ವಚನ ವಚನ | ಶ್ರೀಮತಿ ಸುರೇಖಾ ಶೀರಪಾಟೀಲ, ಕಲಬುರಗಿ.

ತನುವಿನಲ್ಲಿ ನಿರ್ಮೋಹ, ಮನದಲ್ಲಿ ನಿರಹಂಕಾರ,ಪ್ರಾಣದಲ್ಲಿ ನಿರ್ಭಯ, ಚಿತ್ತದಲಿ ನಿರಪೇಕ್ಷೆ.ವಿಷಯಗಳಲ್ಲಿ ಉದಾಸೀನ, ಭಾವದಲ್ಲಿ ದಿಗಂಬರ,ಜ್ಞಾನದಲ್ಲಿ ಪರಮಾನಂದವೆಡೆಗೊಂಡ ಬಳಿಕಸೌರಾಷ್ಟ್ರ ಸೋಮೇಶ್ವರನೆಂಬ ಲಿಂಗವು ಬೇರಿಲ್ಲ ಕಾಣಿರೋ.(ಸಮಗ್ರ ವಚನ ಸಂಪುಟ-ಆರು/2021/ಪುಟ. ಸಂ-346/ವಚನ. ಸಂ. 954) ಶರಣ ಆದಯ್ಯನವರು 12 ನೇ ಶತಮಾನದ ಅನುಭವ ಮಂಟಪದ ಅನುಭಾವಿಗಳಲ್ಲಿ ಒಬ್ಬರಾಗಿದ್ದಾರೆ. ಇವರು ತಮ್ಮ ವಚನಗಳಲ್ಲಿ ಬಸವಣ್ಣ, ಮಡಿವಾಳ, ಅಲ್ಲಮಪ್ರಭುದೇವರು, ಮಡಿವಾಳ ಮಾಚಿದೇವರು ಮುಂತಾದ ಶರಣರನ್ನು ಸ್ಮರಿಸಿರುವದರಿಂದ ಇವರು ಬಸವಣ್ಣನವರ ಸಮಕಾಲೀನರು ಎನ್ನಬಹುದು. ಶರಣ ಆದಯ್ಯನವರು ಮೂಲತ ಸೌರಾಷ್ಟ್ರ ಅಂದರೆ ಗುಜರಾತಿನವರು. ತಂದೆ ಪಾರದತ್ತ, ತಾಯಿ ಪುಣ್ಯವತಿ. ಇವರ ಕಾಯಕ ಚಿನ್ನ ಮುತ್ತಿನ (ಹರದಿಕೆ) ವ್ಯಾಪಾರ. ಈ…

0 Comments

ಶಿವಶರಣ ಮಾದಾರ ಚೆನ್ನಯ್ಯನವರ ವಚನ ನಿರ್ವಚನ | ಡಾ. ಸಾರಿಕಾದೇವಿ ಎಲ್. ಕಾಳಗಿ, ಕಲಬುರಗಿ.

ನಡೆನುಡಿ ಸಿದ್ಧಾಂತವಾದಲ್ಲಿ, ಕುಲ ಹೊಲೆ ಸೂತಕವಿಲ್ಲ.ನುಡಿ ಲೇಸು, ನಡೆಯಧಮವಾದಲ್ಲಿ,ಅದು ಬಿಡುಗಡೆಯಿಲ್ಲದ ಹೊಲೆ.ಕಳವು ಪಾರದ್ವಾರಂಗಳಲ್ಲಿ ಹೊಲಬನರಿಯದೆ,ಕೆಟ್ಟು ನಡೆವುತ್ತ, ಮತ್ತೆ ಕುಲಜರೆಂಬ ಒಡಲವರುಂಟೆ?ಆಚಾರವೆ ಕುಲ, ಅನಾಚಾರವೆ ಹೊಲೆ,ಇಂತೀ ಉಭಯವ ತಿಳಿದರಿಯಬೇಕು.ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ,ಅರಿ ನಿಜಾ[ತ್ಮ]ರಾಮ ರಾಮನಾ.(ಸಂಕೀರ್ಣ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-447 /ವಚನ ಸಂಖ್ಯೆ-1153) ಶಿವಶರಣ ಮಾದಾರ ಚೆನ್ನಯ್ಯನವರು 12 ನೇ ಶತಮಾನದ  ಶ್ರೇಷ್ಠ ವಚನಕಾರರು ಮತ್ತು ಇವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿಯಲ್ಲಿ ಜನಿಸಿದರು ಎಂದು ತಿಳಿದು ಬರುತ್ತದೆ. ಇವರು ಬಸವಣ್ಣನವರ ಹಿರಿಯ ಸಮಕಾಲೀನರಾಗಿದ್ದರು. ಇವರು ಅನುಭವ ಮಂಟಪದ ಅನುಭಾವಿಗಳಾಗಿದ್ದರು. ಇವರು ತಮಿಳುನಾಡಿನ ಕರಿಕಾಲ ಚೋಳರಾಜನ ಕುದುರೆ…

0 Comments

ಶರಣ ಕೀಲಾರದ ಭೀಮಣ್ಣನವರ ವಚನ-ನಿರ್ವಚನ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.

ವಚನ:ನಾನಾ ವರ್ಣದ ಗೋವುಗಳೆಲ್ಲವೂ ಕೂಡಿಒಂದೇ ಹೊಲದಲ್ಲಿ ಮೇದು,ಆರು ಕೆರೆಯ ನೀರ ಕುಡಿದು,ಒಂದೇ ದಾರಿಯಲ್ಲಿ ಬಂದು,ಮೂರು ಕೊಟ್ಟಿಗೆಯ ಗೊತ್ತಿಂಗೊಳಗಾದುವು.ಬಿಟ್ಟು ಕರೆಯಲಾಗಿ ಗೋವಿಂಗೆ ಹಲವು,ಹಾಲಿಗೆ ಏಕವರ್ಣ.ಹಾಲ ತಂದು ಭಾಜನದಲ್ಲಿ ನೀಡಿ ಕಾಸುವಲ್ಲಿಚಟ್ಟಿ ಹತ್ತದೆ, ಹಸುಕು ನಾರದೆ,ಕೌರು ಏಳದೆ, ನೀರ ರಸ ತಪ್ಪಿ ಮಧುರ ರಸ ತುಂಬಿಕಾಸಿ ಉಣಬಲ್ಲಡೆ ಆತನೆ ಭೋಗಿ.ಆತ ನಿರತಿಶಯಾನುಭಾವ ಶುದ್ಧಾತ್ಮನು,ಕಾಲಕರ್ಮವಿರಹಿತ ತ್ರಿಪುರಾಂತಕಲಿಂಗ ತಾನೆ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-37/ವಚನ ಸಂಖ್ಯೆ-75)ಈ ವಚನದಲ್ಲಿ ಬರುವ ಪಾರಿಭಾಷಿಕ ಶಬ್ದಗಳ ಅರ್ಥ:ಕೊಟ್ಟಿಗೆ: ದನಕರುಗಳನ್ನು ಕಟ್ಟುವ ಸ್ಥಳ.ಭಾಜನ: ಪಾತ್ರೆ.ಚಟ್ಟಿ: ಮಣ್ಣಿನ ಪಾತ್ರೆ, ಮಡಿಕೆ.ಕೌರು: ಸುಟ್ಟ ವಾಸನೆ, ಹೊಗೆ, ನಾತ.ನಿರತಿಶಯ: ಹೆಚ್ಚಳವಿಲ್ಲದೆ, ಅಸಾಧಾರಣವಲ್ಲದ. ಇದು ಶರಣ ಕೀಲಾರದ…

0 Comments