ಬಸವಣ್ಣನವರು ಪುನರ್ಜನ್ಮವನ್ನು ನಂಬಿದ್ದರೆ? | ಡಾ. ಬಸವರಾಜ ಸಬರದ, ಬೆಂಗಳೂರು.
ಬಸವಣ್ಣನವರು ಪುನರ್ಜನ್ಮವನ್ನು ನಂಬಿದ್ದರೆ? ಇದೊಂದು ಪ್ರಶ್ನೆ. ಆದರೆ ಇಂದು ಇದು ಪ್ರಶ್ನೆಯಾಗಿ ಉಳಿದಿಲ್ಲ. ಬಸವಣ್ಣನವರು ಪುನರ್ಜನ್ಮವನ್ನು ನಂಬಿರಲಿಲ್ಲವೆಂಬುದಕ್ಕೆ ಅನೇಕ ಆಕರಗಳು ಸಿಗುತ್ತವೆ. ಆದರೆ ಕೆಲವರು ಬಸವಣ್ಣನವರ ಪ್ರಕ್ಷಿಪ್ತ ವಚನಗಳನ್ನಿಟ್ಟುಕೊಂಡು ಬಸವಣ್ಣನವರು ಪುನರ್ಜನ್ಮವನ್ನು ನಂಬಿದ್ದರೆಂದು ಹೇಳಿದ್ದಾರೆ. ಬಸವ ತತ್ವದ ಕೇಂದ್ರವಾದ ಭಾಲ್ಕಿ ಹಿರೇಮಠ ಸಂಸ್ಥಾನ ತರುತ್ತಿರುವ "ಶಾಂತಿಕಿರಣ” ಮಾಸಿಕ ಪ್ರತಿಕೆಯಲ್ಲಿ (ಮೇ-2025) “ಬಸವಣ್ಣನವರ ವಚನಗಳಲ್ಲಿ ಜನ್ಮಾಂತರ ವಿಚಾರ" ಎಂಬ ಲೇಖನ ಪ್ರಕಟವಾಗಿದೆ. ಡಾ. ವಿ. ವಿ. ಹೆಬ್ಬಳ್ಳಿ ಎಂಬುವವರು ಈ ಲೇಖನವನ್ನು ಬರೆದಿದ್ದಾರೆ. ಇಂತಹ ಲೇಖನವನ್ನು ಪ್ರಕಟಿಸುವುದರ ಮೂಲಕ ಭಾಲ್ಕಿ ಹಿರೇಮಠ ಸಂಸ್ಥಾನ ಮತ್ತು ಆ ಪತ್ರಿಕೆಯ ಸಂಪಾದಕ…






Total views : 51401