ಕರ್ನಾಟಕದ ಸಾಂಸ್ಕೃತಿಕ ನಾಯಕ: ಬಸವಣ್ಣನಿಂದ ಬದುಕಿತ್ತೀ ಲೋಕವೆಲ್ಲ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.
ಸರ್ಕಾರವು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವುದು ಈ ನೆಲಕ್ಕೆ ಮತ್ತು ಈ ನಾಡಿಗೆ ಅರ್ಪಿಸಿದ ಒಂದು ಉತ್ಕೃಷ್ಟ ಗೌರವ ಆಗಿದೆ. ಪ್ರಸ್ತುತದಲ್ಲಿ ಇದು ಯಾವ ರೀತಿಯಾಗಿ ಔಚಿತ್ಯಪೂರ್ಣವಾಗಿದೆ ಎಂಬುದನ್ನು ಇಲ್ಲಿ ಚರ್ಚೆಗೆ ಎತ್ತಿಕೊಳ್ಳಲಾಗಿದೆ. ಮೊದಲಿಗೆ ಸಂಸ್ಕೃತಿಯ ಪರಿಭಾಷೆ ವ್ಯಾಖ್ಯಾನಿಸುವುದಾದರೆ; ಸಂಸ್ಕೃತಿ ಎಂದರೆ ಒಂದು ಸಮುದಾಯದ ಜೀವನ ವಿಧಾನ, ರೀತಿ-ನೀತಿ, ನಂಬಿಕೆ, ಆಚಾರ-ವಿಚಾರ, ಸಂಪ್ರದಾಯ, ಮೌಲ್ಯಗಳು, ನೈತಿಕತೆ ಇವೆಲ್ಲವುಗಳ ಒಟ್ಟಾರೆ ಮೊತ್ತ. ಡಿ. ವಿ. ಜಿ ಅವರ ಪ್ರಕಾರ ಪ್ರಕೃತಿ ಸಿದ್ಧವಾದ ಪದಾರ್ಥವನ್ನು ಮನುಷ್ಯ ವಿವೇಕದಿಂದ ಸೊಗಸುಗೊಳಿಸಿದರೆ ಅದು ಸಂಸ್ಕೃತಿ. ಸಂಸ್ಕೃತಿಯು ಬರೀ ಬಾಯಿ ಮಾತಿನ…






Total views : 62562