ಹೇಗಿದ್ದಿರಬಹುದು ಬಸವ ತೊರೆದ ಬಳಿಕ ಕಲ್ಯಾಣ? / ಶ್ರೀ. ಎನ್. ಸಿ. ಶಿವಪ್ರಕಾಶ್, ಮಸ್ಕತ್, ಒಮಾನ್.

ಹೇಗಿದ್ದಿರಬಹುದು ಬಸವ ತೊರೆದ ಬಳಿಕ ಕಲ್ಯಾಣ? ಲಿಂಗವಿಲ್ಲದ ಅಂಗದಂತೆ?ಜಂಗಮವಿಲ್ಲದ ಲಿಂಗದಂತೆ?ರಾಜನಿಲ್ಲದ ರಾಜ್ಯದಂತೆ?ಕರ್ಪೂರದರಿವು ಉರಿದ ಮಹಾ ಮಂಗಳಾರತಿಯಂತೆ? ಹೇಗಿದ್ದಿರಬಹುದು ಬಸವ ತೊರೆದ ಬಳಿಕ ಕಲ್ಯಾಣ? ಕಟ್ಟುತ್ತಿರಬಹುದಲ್ಲಿ ಸಂಜೆಯಅನುಭವ ಮಂಟಪ ಹೊನ್ನಕಲಶವಿಲ್ಲದೆನಡೆಯುತ್ತಿರಬಹುದಲ್ಲಿ ಮಹಾಮನೆದಾಸೋಹ ನಿಜಭಿತ್ತಿಯಿಲ್ಲದೆ ಹೇಗಿದ್ದಿರಬಹುದು ಬಸವ ತೊರೆದ ಬಳಿಕ ಕಲ್ಯಾಣ? ಕಲ್ಯಾಣಕೆ ಆತ್ಮಕಳೆಯ ತಂದವನು ಬಸವಚಾಲುಕ್ಯ ಕಲ್ಯಾಣವ ಕೈಲಾಸವಾಗಿಸಿದವನು ಬಸವಭವಿಯೆಂಬ ಮರಳುಗಾಡಿನಲಿ ಭಕ್ತಿಸುಧೆಯ ಹರಿಸಿದವನು ಬಸವಸಮಸಮಾಜದ ಕನಸ ಸಮುದಾಯದ ಸೆರಗಿಗೆ ಕಟ್ಟಿದವನು ಬಸವ ಹೇಗಿದ್ದಿರಬಹುದು ಬಸವ ತೊರೆದ ಬಳಿಕ ಕಲ್ಯಾಣ? ಬಯಲಿತ್ತು, ಆಲಯವಿತ್ತು ಕಲ್ಯಾಣನಗರಿಯೊಳುಬಯಲು ಆಲಯಗಳ ಭ್ರಮೆಯ ಕಳೆದವನುಆಲಯದೊಳೂ ಇಲ್ಲ, ಬಯಲಲೂ ಇಲ್ಲಬಿಜ್ಜಳನ ಮನ ಮುಂದಣ ಆಸೆ ನುಂಗಿತ್ತೇ…

0 Comments

ಹೊರಗಲ್ಲ; ಒಳಗೇ ಇದೆ ಎಲ್ಲ! (ವಿಕಾಸವಾದದ ಅರ್ಥವನ್ನು ಧ್ವನಿಸುವ ವಚನ) / ಡಾ. ಬಸವರಾಜ ಸಾದರ, ಬೆಂಗಳೂರು.

ನಾವಿರುವ ಈ ಸೃಷ್ಟಿ ನಿತ್ಯ ಪರಿವರ್ತನಶೀಲವಾದದ್ದು. ಪರಿವರ್ತನೆ ಜಗದ ಹಾಗೂ ವಿಜ್ಞಾನದ ಒಂದು ಮುಖ್ಯ ನಿಯಮ. ವಿಕಾಸವಾದದ ಮೂಲ ಚಹರೆಯೇ ಪರಿವರ್ತನೆ. ಇಂಥ ಪರಿವರ್ತನಾ ಪ್ರಕ್ರಿಯೆಯ ವೇಗವು ವಸ್ತು ಮತ್ತು ಜೀವಿಗಳ ಸ್ವರೂಪಗಳನ್ನು ಆಧರಿಸಿ ನಿಗದಿತವಾಗಿರುತ್ತದೆ. ಬದಲಾವಣೆ ಮತ್ತು ಬೆಳವಣಿಗೆ ಎರಡೂ ಅದರ ಅಭಿನ್ನ ಅಂಗಗಳಾಗಿದ್ದು, ಅವೆರಡೂ ಪರಸ್ಪರ ಪೂರಕ ಮತ್ತು ಪ್ರೇರಕ ಗತಿಯಲ್ಲಿಯೇ ನಡೆದಿರುತ್ತವೆ. ಈ ಕಾರಣಕ್ಕಾಗಿ ಅದರ ವೇಗ ಒಂದು ನಿಗದಿತ ನಿಯಂತ್ರಣಾ ಕ್ರಮದಲ್ಲಿರುತ್ತದೆ. ಬದಲಾಗುವುದರ ಮೂಲಕವೇ ಗತಿಶೀಲತೆಯನ್ನು ಸಾಧಿಸುವ ಕಾರಣಕ್ಕೆ ಅದು ತಕ್ಷಣ ನಮ್ಮ ಕಣ್ಣಿಗೆ ಗೋಚರವಾಗುವುದಿಲ್ಲ. ಒಂದು ವಸ್ತು ಅಥವಾ ಜೀವಿಯ…

0 Comments

ಸ್ತ್ರೀ ಸಮಾನತೆ-ವೈಜ್ಞಾನಿಕ ಪ್ರಯೋಗದ ಪ್ರಾತ್ಯಕ್ಷಿಕೆ / ಡಾ. ಬಸವರಾಜ ಸಾದರ, ಬೆಂಗಳೂರು.

ಸಾಮಾಜಿಕ ಅಸಮಾನತೆಯ ಮಾತು ಬಂದಾಗ ನಮ್ಮ ವ್ಯವಸ್ಥೆ ಸಾಮಾನ್ಯವಾಗಿ ಹೆಚ್ಚು ಮಾತನಾಡುವುದು ವರ್ಗ ಮತ್ತು ವರ್ಣ ಅಸಮಾನತೆಗಳ ಬಗ್ಗೆ ಮಾತ್ರ. ಇವುಗಳನ್ನೂ ಒಳಗೊಂಡ ಹಾಗೆ, ಪುರುಷಪ್ರಧಾನ ವ್ಯವಸ್ಥೆಯ ಕ್ರೌರ್ಯ ಮತ್ತು ಶೋಷಣೆಗೆ ಸಿಕ್ಕು ನಿರಂತರ ನಲುಗುತ್ತ ಬಂದ ಮಹಿಳೆಯರ ವಿಷಯಕವಾದ ಅಸಮಾನತೆಯ ಬಗ್ಗೆ ಅದು ಅಷ್ಟಾಗಿ ತಲೆಕೆಡಿಸಿಕೊಳ್ಳುವುದೇ ಇಲ್ಲ. ಇದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದ ಅತ್ಯಂತ ಹೀನ ನಡೆ. “ಮನು” ಕುಲದ ಆರಂಭದಿಂದ ನಡೆದೇ ಇರುವ ಮಹಿಳಾ ಅಸಮಾನತೆಯಾಚರಣೆಯು ಕಾಲ ಕಾಲಕ್ಕೆ ವಿವಿಧ ರೂಪಗಳನ್ನು ತಾಳುತ್ತ ಬಂದಿದೆಯಷ್ಟೇ ಅಲ್ಲ, ಈಗಂತೂ ಕ್ರೌರ್ಯದ ಪರಮಾವಧಿಯನ್ನೇ ಪಡೆದು, ಅವಳ…

3 Comments

ಶರಣ ಸಂಸ್ಕೃತಿಯ ಆರ್ಥಿಕ ಮೌಲ್ಯಗಳು / ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಆನೆ ಕುದುರೆ ಭಂಡಾರವಿರ್ದಡೇನೊ?ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ.ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ.ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1523 / ವಚನ ಸಂಖ್ಯೆ-1504) ವಚನ ಸಾಹಿತ್ಯದ ಅಧ್ಯಯನ ಇಂದಿನ ಪೀಳಿಗೆಯ ಬಹಳಷ್ಟು ವಿದ್ವಾಂಸರುಗಳನ್ನು, ವಿದ್ಯಾರ್ಥಿಗಳನ್ನು ಹಾಗೂ ಲೇಖಕರನ್ನು ಆಕರ್ಷಿಸಿದ್ದು ಒಂದು ಉತ್ತಮ ಬೆಳವಣಿಗೆ. ಬಾಲ್ಯದಿಂದಲೂ ಅಂದರೆ ಸುಮಾರು ನಾನು 12 ವರ್ಷದವನಾಗಿದ್ದಾಗಿನಿಂದ ವಚನ ಸಾಹಿತ್ಯದ ಕಡೆಗಿನ ಒಲವು ಮೂಡಿಸಿದ್ದು…

2 Comments

ಭಾಗ-02: ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರ ಸಂಸ್ಕೃತೀಕರಣದ ಮುನ್ನುಡಿ.

ಸತ್ತವರ ಕಥೆಯಲ್ಲ ಜನನದ |ಕುತ್ತದಲಿ ಕುದಿಕುದಿದು ಕರ್ಮದ |ಕತ್ತಲೆಗೆ ಸಿಲುಕುವರ ಸೀಮೆಯ ಹೊಲಬು ತಾನಲ್ಲ ||ಹೊತ್ತು ಹೋಗದ ಪುಂಡರಾಲಿಪ |ಮತ್ತಮತಿಗಳ ಗೋಷ್ಠಿಯಲ್ಲಿದು |ಸತ್ಯಶರಣರು ತಿಳಿವುದೀ ಪ್ರಭುಲಿಂಗಲೀಲೆಯನು || 13 ||(ಪ್ರಭುಲಿಂಗಲೀಲೆ-ಡಾ. ಬಿ. ವ್ಹಿ. ಮಲ್ಲಾಪೂರ / 2011 / ಕನ್ನಡ ಮತ್ತು ಸಂಸ್ಕೃತಿ ಇಲಾಖೆ / ಪುಟ ಸಂಖ್ಯೆ-5 / ವಚನ ಸಂಖ್ಯೆ-13) https://youtu.be/Jrfi820ao1A ಬಸವಣ್ಣ ಹೇಳಿದ್ದು ವೇದಗಳ ಸಾರವನ್ನೇ ಎನ್ನುವಂಥ ಎಡಬಿಡಂಗಿ ಹೇಳಿಕೆಯ youtube link ನಿಮಗಾಗಿ. ಕುಂಕುಮಧಾರಿ ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ ಅವರು ಮಹಾನ್ ವಿದ್ವಾಂಸರಾಗಿ, ಉಪನ್ಯಾಸಕರಾಗಿ, ಬರಹಗಾರರಾಗಿ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ-ಬೆಂಗಳೂರು…

3 Comments

ಭಾಗ-01: ಮುಖಪುಟ – ವಚನ ದರ್ಶನ ಎನ್ನುವ ಅಪಸವ್ಯ ಹಾಗೂ ಅಧ್ವಾನ

ಆಸನ ಬಂಧನರು ಸುಮ್ಮನಿರರು.ಭಸ್ಮವ ಹೂಸಿ ಸ್ವರವ ಹಿಡಿದವರು ಸಾಯದಿಪ್ಪರೆ?ಸತ್ಯವನೆ ಮರೆದು, ಅಸತ್ಯವನೆ ಹಿಡಿದು,ಸತ್ತುಹೋದರು ಗುಹೇಶ್ವರಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-156 / ವಚನ ಸಂಖ್ಯೆ-224) ಸಂಘ ಪರಿವಾರ ಕೃಪಾ ಪೋಷಿತ ನಾಟಕ ಮಂಡಳಿ ಮತ್ತು ಹಣೆಯಲ್ಲಿ ವಿಭೂತಿ ಬಿಟ್ಟು ಕುಂಕುಮ ಶೋಭಿತರು So Called ಲಿಂಗಾಯತ ಸ್ವಾಮಿಗಳು ಲಿಂಗಾಯತ ಧರ್ಮದ ವಿರುದ್ಧವಾಗಿ ಬಸವ ದ್ರೋಹಿ ಕೆಲಸ ಮಾಡುತ್ತಿರುವುದು ಜನ ಜನಿತವಾದ ವಿಷಯ. ಈ ವಿಷಯ ಯಾಕೆ ಬಂತು ಅಂದರೆ ಕಳೆದೆರಡು ತಿಂಗಳಿಂದ “ವಚನ ದರ್ಶನ” ಎನ್ನುವ ಪುಸ್ತಕವನ್ನು ನೂರಾರು ಕಡೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬಿಡುಗಡೆ…

1 Comment

ವಚನ ಸಾಹಿತ್ಯದಲ್ಲಿ ಲಾಭ ಅಥವಾ ಪ್ರತಿಫಲದ ಪರಿಕಲ್ಪನೆ / ಡಾ. ಗಣಪತಿ ಬಿ ಸಿನ್ನೂರ, ಕಲಬುರಗಿ.

ನಾವು ಆಧುನಿಕ ಅರ್ಥಶಾಸ್ತ್ರ ಹಾಗು ವ್ಯವಹಾರ ಅಧ್ಯಯನ ಮಾಡುವಾಗ ಲಾಭ ಅಥವಾ ಪ್ರತಿಫಲದ ಪರಿಕಲ್ಪನೆಯನ್ನು ಆಧುನಿಕ ಪಾಶ್ಚಿಮಾತ್ಯ ಅರ್ಥಶಾಸ್ತ್ರಜ್ಞರು ರೂಪಿಸಿದ ಪರಿಕಲ್ಪನೆಯ ಹಿನ್ನೆಲೆಯಲ್ಲಿ ಮಾತ್ರ ಅಧ್ಯಯನ ಮಾಡುತ್ತೇವೆ. ಬಹುತೇಕ ಆರ್ಥಿಕ ಚಿಂತಕರು ಮತ್ತು ಬರಹಗಾರರು ಆಧುನಿಕ ಪಾಶ್ಚಿಮಾತ್ಯ ಅರ್ಥಶಾಸ್ತ್ರಜ್ಞರ ಪರಿಕಲ್ಪನೆಯನ್ನು ಮಾತ್ರ ವಿವರಿಸುತ್ತಾರೆ. ಹಾಗಾದರೆ ಲಾಭ ಅಥವಾ ಪ್ರತಿಫಲದ ಪರಿಕಲ್ಪನೆ ಅವರಿಗಿಂತ ಮುಂಚೆ ಇರಲಿಲ್ಲವೇ? ಇದ್ದರೆ ಅದನ್ನು ನೀಡಿದವರು ಯಾರು? ಅದರ ಸ್ವರೂಪ ಎಂಥದ್ದು? ಹೀಗೆ ಅನೇಕ ಪ್ರಶ್ನಗಳು ಹುಟ್ಟಿಕೊಳ್ಳುತ್ತವೆ. ನಾನೊಂದು ದಿನ ಅಲ್ಲಮ ಪ್ರಭುಗಳ “ಬೆವಸಾಯವ ಮಾಡಿ ಮನೆಯ ಬೀಯಕ್ಕೆ ಬತ್ತವಿಲ್ಲದಿರ್ದಡೆ, ಆ ಬೆವಸಾಯದ ಘೋರವೇತಕ್ಕಯ್ಯಾ?”…

0 Comments

ವಚನ ಸಾಹಿತ್ಯ ಹಾಗೂ ಪರಿಸರ ಪ್ರಜ್ಞೆ ಮತ್ತು UN’s Sustainable Goals of Environment

ನಾನು ಮೆಟ್ಟುವ ಭೂಮಿಯ ಭಕ್ತನ ಮಾಡಿದಲ್ಲದೆ ಮೆಟ್ಟೆನಯ್ಯಾ.ನಾ ನೋಡುತಿಹ ಆಕಾಶದ ಚಂದ್ರ ಸೂರ್ಯರಭಕ್ತನ ಮಾಡಿದಲ್ಲದೆ ನಾ ನೋಡೆನಯ್ಯಾ.[ನಾನು ಬಳಸುವ] ಜಲವ ಭಕ್ತನ ಮಾಡಿದಲ್ಲದೆ ನಾನು ಬಳಸೆನಯ್ಯಾ.ನಾನು ಕೊಂಬ ಹದಿನೆಂಟು ಧಾನ್ಯವ ಭಕ್ತನ ಮಾಡಿದಲ್ಲದೆಕೊಳ್ಳೆನು ಕೂಡಲಚನ್ನಸಂಗಾ ನಿಮ್ಮಾಣೆ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-305 / ವಚನ ಸಂಖ್ಯೆ-89) ಈ ಭೂಮಿ ರಚನೆಯಾಗಿದ್ದು “Big Bang Theory” ಯಿಂದ ಅಂತ ಭೌಗೋಳಿಕ ಮತ್ತು ಖಗೋಳ ಭೌತಶಾಸ್ತ್ರಜ್ಞದ ಎಲ್ಲ ವಿಜ್ಞಾನಿಗಳೂ ಖಚಿತವಾಗಿ ನಿರ್ಧಾರ ಮಾಡಿದ್ದಾರೆ. ಹಲವಾರು ವಿಜ್ಞಾನಿಗಳು ತಮ್ಮ ಪುಸ್ತಕಗಳಲ್ಲಿ ಈ ವಿಷಯವನ್ನು ಮಂಡಿಸಿದ್ದಾರೆ.  Stephen Hawking…

1 Comment

“ಅರಿವೇ ಗುರು – ಮನೋವೈಜ್ಞಾನಿಕ ಚಿಂತನೆ”

ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯಾ,ಒರೆಗೆ ಬಣ್ಣಕ್ಕೆ ತಂದೆನ್ನ ಪುಟವನಿಕ್ಕಿ ನೋಡಯ್ಯಾ,ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ,ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲಹುಕೂಡಲಸಂಗಮದೇವಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-29 / ವಚನ ಸಂಖ್ಯೆ-251) ನನಗೆ ಬಸವ ತತ್ವ ಮತ್ತು ವಚನ ಸಾಹಿತ್ಯದ ಶಿವನ ಪ್ರಕಾಶವನ್ನು ತೋರಿಸಿದ್ದ ಶ್ರೀ ಗದಗ ತೋಂಟದಾರ್ಯ ಮಠದ ಲಿಂ. ಡಾ. ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಮತ್ತು ನನ್ನ ಎಲ್ಲ ವಿದೇಶ ಪ್ರವಾಸಗಳಿಗೂ ಬೆನ್ನು ತಟ್ಟಿ ಆಶೀರ್ವದಿಸಿದ್ದ ಸಿದ್ಧಗಂಗೆಯ ಸಿದ್ಧಪುರುಷ ಲಿಂ. ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ…

0 Comments

“ಗಂಗೆಗೆ ಕಟ್ಟಿಲ್ಲ ಲಿಂಗಕ್ಕೆ ಮುಟ್ಟಿಲ್ಲ” / ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ 12 ನೇ ಶತಮಾನ ಒಂದು ಪರ್ವ ಕಾಲ. ಕನ್ನಡ ಸಾಹಿತ್ಯ ಸಂಸ್ಕೃತಿ ಮತ್ತು ಧಾರ್ಮಿಕ ಪ್ರವೃತ್ತಿಗಳ ಕಾಲಘಟ್ಟ. ಧಾರ್ಮಿಕ ಇತಿಹಾಸದಲ್ಲಿ ಬಸವಣ್ಣನವರ ಸ್ಥಾನ ವಿಶಿಷ್ಟವಾದದ್ದು. ಜಾತಿ ಸೂತಕಗಳ ಶಾಪಕ್ಕೆ ನರಳುತ್ತಿರುವ ದೇಶದಲ್ಲಿ 900 ವರ್ಷಗಳ ಹಿಂದೆಯೇ ಜಾತಿ ಸೂತಕಗಳ ನಿರ್ಮೂಲನೆ ಮಾಡಿದ ಮಹಾ ಮಾನವತಾವಾದಿ. ಅಂದು ವರ್ಗ ತಾರತಮ್ಯ, ಅಸಮಾನತೆ, ಲಿಂಗ, ಜಾತಿ ಭೇದ ಪಿಡುಗುಗಳ ವಿರುದ್ಧ ಹೋರಾಡಿದ ಶರಣರು, ವೈದಿಕ ಮತ್ತು ಜೈನ ಧರ್ಮಗಳ ವಿರೋಧವನ್ನು ಕಟ್ಟಿಕೊಳ್ಳಬೇಕಾಯಿತು. ಶರಣರು ಮಾತನಾಡುತ್ತಿರಲಿಲ್ಲ ಅವರ ನಡೆಯೇ ಮಾತಾಗಿತ್ತು. ಕೇವಲ ತತ್ವ ಸಿದ್ಧಾಂತಗಳಿಂದ ಬದಲಾವಣೆ ಅಸಾಧ್ಯವೆಂದು…

0 Comments