“ಶರಣ ಸಂಸ್ಕೃತಿಯ ಆರ್ಥಿಕ ಮೌಲ್ಯಗಳು”

ಆನೆ ಕುದುರೆ ಭಂಡಾರವಿರ್ದಡೇನೊ?ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ.ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ.ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1523 / ವಚನ ಸಂಖ್ಯೆ-1504) ವಚನ ಸಾಹಿತ್ಯದ ಅಧ್ಯಯನ ಇಂದಿನ ಪೀಳಿಗೆಯ ಬಹಳಷ್ಟು ವಿದ್ವಾಂಸರುಗಳನ್ನು, ವಿದ್ಯಾರ್ಥಿಗಳನ್ನು ಹಾಗೂ ಲೇಖಕರನ್ನು ಆಕರ್ಷಿಸಿದ್ದು ಒಂದು ಉತ್ತಮ ಬೆಳವಣಿಗೆ. ಬಾಲ್ಯದಿಂದಲೂ ಅಂದರೆ ಸುಮಾರು ನಾನು 12 ವರ್ಷದವನಾಗಿದ್ದಾಗಿನಿಂದ ವಚನ ಸಾಹಿತ್ಯದ ಕಡೆಗಿನ ಒಲವು ಮೂಡಿಸಿದ್ದು…

0 Comments

ವಚನಗಳಲ್ಲಿ ಯೋಗ – ಶಿವಯೋಗ / ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ವಚನಗಳು ಕನ್ನಡ ಸಾಹಿತ್ಯಕ್ಕೆ ಒಲಿದು ಬಂದ ವರ. 12 ನೇ ಶತಮಾನದ ವರ್ತಮಾನದ ತಲ್ಲಣಗಳಿಗೆ ನಾಂದಿಯಾದ ವಚನಗಳು ನಡೆ-ನುಡಿ ಸಾಮರಸ್ಯದಿಂದಾಗಿ ೨೧ನೇ ಶತಮಾನದಲ್ಲೂ ಪ್ರಸ್ತುತವಾಗುತ್ತವೆ, ಮೊಗೆ ಮೊಗೆದಷ್ಟು ನವ ನವೀನ ವಿಚಾರಗಳಿಗೆ ಅವಾಸ್ಥಾನವಾದ ವಚನಗಳು ತಮ್ಮ ಒಡಲಲ್ಲಿ ಹೊಸ ಅಚ್ಚರಿಗಳನ್ನು ಮುಚ್ಚಿಟ್ಟುಕೊಂಡಿವೆ. ಈ ಕಾರಣದಿಂದ ವಚನಗಳನ್ನು ಓದಿದಷ್ಟು ಹೊಸ ಹೊಳಹುಗಳು ವಚನ ಅಭ್ಯಾಸಗಳಿಗೆ, ಸಂಶೋಧಕರಿಗೆ ಒದಗುತ್ತಲೇ ಇವೆ. ಕಾಲ ದೂರ ಸರಿದಂತೆ ಜೀವನ ಶೈಲಿಯಲ್ಲಿ, ಮನುಷ್ಯರ, ಆಲೋಚನೆಗಳಲ್ಲಿ, ಅನುಸರಿಸುವ ಮೌಲ್ಯಗಳಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣುತ್ತಿದ್ದೇವೆ. ಬದಲಾದ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ವಚನಗಳು ನೀಡುವ ಬೆಳಕು ಮಾತ್ರ ಕ್ಷೀಣವಾಗಿಲ್ಲ. ಸಾರ್ವಕಾಲಿಕ…

0 Comments

ವಚನ ಸಾಹಿತ್ಯದಲ್ಲಿ ಸಂಘರ್ಷ ನಿರ್ವಹಣೆಯ ಜ್ಞಾನಶಿಸ್ತು / ಡಾ. ಶೀಲಾದೇವಿ ಮಳಿಮಠ.

Research Article Main Topic: ವಚನ ಸಾಹಿತ್ಯದಲ್ಲಿ ಸಂಘರ್ಷ ನಿರ್ವಹಣೆಯ ಜ್ಞಾನಶಿಸ್ತು Specialization Topic: ವಿಶೇಷ ವಿಷಯ: “ಕಾಳವ್ವೆ ವಚನಗಳು – ಸಾಹಿತ್ಯ ಸಂವೇದನೆ ಮತ್ತು ಸಾಮಾಜಿಕ ವೇದನೆ – ಸಂಘರ್ಷ ನಿರ್ವಹಣೆಯ ಜ್ಞಾನಶಿಸ್ತು. ಅರ್ಥಪ್ರಾಣಭಿಮಾನದ ಮೇಲೆ ಬಂದಡೂ ಬರಲಿ,ವೃತಹೀನನ ನೆರೆಯಲಾಗದು.ನೋಡಲು ನುಡಿಸಲು ಎಂತೂ ಆಗದು.ಹರಹರಾ, ಪಾಪವಶದಿಂದ ನೋಡಿದಡೆ,ರುದ್ರಜಪ ಮಾಹೇಶ್ವರಾರಾಧನೆಯ ಮಾಳ್ಪುದು.ಇಂತಲ್ಲದವರ ಉರಿಲಿಂಗಪೆದ್ದಿಗಳರಸ‌ ನಕ್ಕು ಕಳೆವನವ್ವಾ(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-868 / ವಚನ ಸಂಖ್ಯೆ-729) ವೃತ ಹೋದಾಗಳೆ ಇಷ್ಟಲಿಂಗದ ಕಳೆ ನಷ್ಟವವ್ವಾ,ಅವರು ಲಿಂಗವಿದ್ದೂ ಭವಿಗಳು.ಅದು ಹೇಗೆಂದಡೆ ಪ್ರಾಣವಿಲ್ಲದ ದೇಹದಂತೆ.ಉರಿಲಿಂಗಪೆದ್ದಿಗಳರಸ ಬಲ್ಲನೊಲ್ಲನವ್ವಾ.(ಸಮಗ್ರ ವಚನ ಸಂಪುಟ:…

0 Comments

Fiscal Policy: ವಚನಕಾರರು ಕಂಡಂತೆ ವಿತ್ತೀಯ ಕಾರ್ಯನೀತಿ ಒಂದು ಅನುಪಮ ಸಮಕಾಲೀನ ಚಿತ್ರಣ

ಅಮರಾವತಿಯ | ಪಟ್ಟಣದೊಳಗೆ ||ದೇವೇಂದ್ರನಾಳುವ | ನಂದನವನವಯ್ಯಾ ||ಅತ್ತ ಸಾರಲೆ ಕಾಮಯ್ಯ | ಮೋಹವೇ ನಿನಗೆ? ||ಲೋಕಾದಿಲೋಕವೆಲ್ಲವ | ಮರುಳು ಮಾಡಿದೆ ||ಕಾಮಾ | ಗುಹೇಶ್ವರಲಿಂಗವನರಿಯೊ ||(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-149 / ವಚನ ಸಂಖ್ಯೆ-131) ದೇವೇಂದ್ರನ ರಾಜಧಾನಿ ಅಮರಾವತಿಯು ಅಮರರಾದ ದೇವಾನು-ದೇವತೆಗಳ ವಾಸಸ್ಥಾನ ಎನ್ನುವುದು ದ್ವೈತ ತತ್ವವನ್ನು ನಂಬುವ ಜನಗಳ ಕಲ್ಪನೆ. ಅದು ಫಲಭರಿತ ಹಣ್ಣುಗಳು, ಸುಗಂಧ ಸುವಾಸನೆ ಬೀರುವ ಹೂವುಗಳು ಮತ್ತು ಸೇವಕಿಯರು ಮುಂತಾದವುಗಳಿಂದ ಕೂಡಿ ಪಂಚೇಂದ್ರಿಯಗಳಿಗೆ ಆನಂದದ ಅನುಭವವನ್ನು ನೀಡುವ ಲೋಕ. ಕಾಮನೇ, ಮೋಹದಿಂದೊಡಗೂಡಿದ ಲೋಕದ ಜನರನ್ನು ಕಾಡುವ…

0 Comments

ಪಾರ್ಲಿಮೆಂಟ್‌, ಮ್ಯಾಗ್ನಾ ಕಾರ್ಟಾ ಮತ್ತು ಬಸವೇಶ್ವರ/ಶ್ರೀ.ವಿಜಯಕುಮಾರ ಕಮ್ಮಾರ

ಮ್ಯಾಗ್ನಾ ಕಾರ್ಟಾದ ಉಳಿದಿರುವ ನಾಲ್ಕು ದಾಖಲೆಗಳಲ್ಲಿ ಒಂದರ ಚಿತ್ರ.(ಸಾಂದರ್ಭಿಕ ಚಿತ್ರ: ಅಂತರ್ಜಾಲ ಕೃಪೆ) ಸ್ವತಂತ್ರ ಭಾರತದ ಇತಿಹಾಸದಲ್ಲಿ ಸಂಸತ್‌ ಭವನ ಒಂದು ಐತಿಹಾಸಿಕ ಕಟ್ಟಡ ಮತ್ತು ಈ ದೇಶದ ಶಕ್ತಿಕೇಂದ್ರ. ಪ್ರಸಿದ್ಧ ಬ್ರಿಟೀಷ್‌ ವಾಸ್ತುಶಿಲ್ಪಿಗಳಾದ ಸರ್‌ ಎಡ್ವಿನ್‌ ಲುಟೆಯನ್ಸ್‌ ಮತ್ತು ಸರ್‌ ಹರ್ಬರ್ಟ್‌ ಬೇಕರ್‌ ಅವರ ವಿನ್ಯಾಸದಲ್ಲಿ ರೂಪುಗೊಂಡ ಕಟ್ಟಡ. ದಿನಾಂಕ 12.02.1921 ರಲ್ಲಿ ಶಂಕುಸ್ಥಾಪನೆಯಾಗಿ ಇದರ ನಿರ್ಮಾಣಕ್ಕೆ ಸುಮಾರು ಆರು ವರ್ಷಗಳ ಕಾಲ ತೆಗೆದುಕೊಂಡಿತು. ಅಂದಿನ ಲೆಕ್ಕದಲ್ಲಿ 83 ಲಕ್ಷ ರೂಪಾಯಿಗಳಲ್ಲಿ ನಿರ್ಮಾಣವಾದ ಈ ಕಟ್ಟಡವನ್ನು ಗವರ್ನರ್‌ ಜನರಲ್‌ ಆಗಿದ್ದಂಥ ಲಾರ್ಡ್‌ ಐರ್ವಿನ್‌ ದಿನಾಂಕ 18.01.1927…

1 Comment

“ವಚನಗಳು ವಿಜ್ಞಾನಿಗಳ ತತ್ವ ಪ್ರತಿಪಾದನೆಗಳ ಭವಿಷ್ಯವಾಣಿ”/ಗುರುಲಿಂಗಪ್ಪ ಸಜ್ಜನ,ಬೆಂಗಳೂರು

ಶರಣರ ವಚನಗಳು ವಿಜ್ಞಾನಿಗಳ ದ್ವಂದಗಳನ್ನು ನಿವಾರಿಸಬಹುದಾದ ಮಾರ್ಗದರ್ಶಕ ಸೂತ್ರಗಳು-6 ಅನಾದಿ ಮತ್ತು ಆದಿ - ಶಕ್ತಿಕ್ಷೇತ್ರಗಳು (Fields)  ಅಲ್ಲಮಪ್ರಭುದೇವರ ವಚನ ಸತ್ಯವೂ ಇಲ್ಲ, ಅಸತ್ಯವೂ ಇಲ್ಲ, ಸಹಜವೂ ಇಲ್ಲ, ಅಸಹಜವೂ ಇಲ್ಲ, ನಾನೂ ಇಲ್ಲ, ನೀನೂ ಇಲ್ಲ. `ಇಲ್ಲ' `ಇಲ್ಲ' ಎಂಬುದು ತಾನಿಲ್ಲ ಗುಹೇಶ್ವರನೆಂಬುದು ತಾ ಬಯಲು! ಕಡಕೋಳ ಮಡಿವಾಳಪ್ಪನವರ ವಚನಭಾಗ ಆ ಪರಶಿವನ ನಿಜಸ್ವರೂಪವೇ ಬ್ರಹ್ಮಾಂಡವಾಗಿ, ಪಿಂಡಾಂಡವಾಗಿ, ಕರಣಂಗಳಾಗಿ, ಕರ್ಮಂಗಳಾಗಿ,ಸೃಷ್ಟಿ ಸ್ಥಿತಿ ಲಯಂಗಳಾಗಿ, ನೋವು ಸಾವುಗಳಾಗಿ,ತಾನೇ ಇದ್ದದ್ದು, ಸರ್ವವು ತಾನೆಂಬುದು ತಾನೇ ಮರೆತು,-------ಆ ಬಯಲಿಗೆ ಸಾವು ಇಲ್ಲವು.ತಾವು ಮಾಡಿದರೆ ಆಗುವುದೆ ? ತಾನೇ ಆಗಲರಿಯದು.ಎಷ್ಟು ನಿಜ ತಿಳಿದರೇನೋ…

0 Comments

ಉಭಯ ಭ್ರಷ್ಟ ಲಜ್ಜೆಗೇಡಿಗಳಿಗೊಂದು ಹೆಸರು ಕೊಡಿ./ಡಾ. ಬಸವರಾಜ ಸಾದರ, ಬೆಂಗಳೂರು.

     ಕಣ್ಣು ನೋಡಲು, ಕಿವಿ ಕೇಳಲು, ಮೂಗು ವಾಸಿಸಲು, ಬಾಯಿ ರುಚಿ ನೋಡಲು ಮತ್ತು ಚರ್ಮ ಸ್ಪರ್ಶಿಸಲು-ಹೀಗೆ ಮನುಷ್ಯನ ಪಂಚೇಂದ್ರಿಯಗಳು, ತಮಗೆ ಅವಕಾಶವಿರುವ ಮಾರ್ಗಗಳ ಮೂಲಕ ತಮ್ಮ ಆಸೆ-ಆಕಾಂಕ್ಷೆಗಳನ್ನು ಈಡೇರಿಸಿಕೊಳ್ಳಲು ಸದಾ ಪಹಪಿಸುತ್ತಿರುತ್ತವೆ ಮತ್ತು ಹವಣಿಸುತ್ತಿರುತ್ತವೆ. ಮನಸ್ಸೆಂಬ ಮಹಾನಿಯಂತ್ರಕಶಕ್ತಿಯು ಪಂಚೇಂದ್ರಿಯಗಳ ಮೂಲಕವೇ ತನ್ನ ಸಕಾರಾತ್ಮಕ ಮತ್ತು ನಕಾರಾತ್ಮಕ, ಎರಡೂ ಬಗೆಯ ಅಪೇಕ್ಷೆಗಳನ್ನು ಈಡೇರಿಸಿಕೊಳ್ಳುತ್ತದೆ. ಮನುಷ್ಯನ ಭಾವಕೋಶದೊಂದಿಗೆ ಬಿಡಿಸಿಕೊಳ್ಳಲಾರದಂತೆ ಬೆಸೆದುಕೊಂಡಿರುವ ಈ ಮನಸ್ಸು ಮತ್ತು ಪಂಚೇಂದ್ರಿಯಗಳ ಬೇಡಿಕೆಗಳನ್ನು ನಿರಾಕರಿಸುವುದು ಅಷ್ಟೇನೂ ಸುಲಭದ ಕೆಲಸವಲ್ಲ. ಈ ಕಾರಣಕ್ಕಾಗಿಯೇ ಮನುಷ್ಯ ಅವುಗಳ ಬೇಡಿಕೆಗಳನ್ನು ಈಡೇರಿಸಲು ಒಳ್ಳೆಯ ಕೆಲಸಗಳಂತೆಯೇ ಕೆಟ್ಟ ಕೆಲಸಗಳನ್ನೂ ಮಾಡುತ್ತಾನೆ.…

1 Comment

ವಚನಗಳು ಮತ್ತು ವ್ಯಕ್ತಿತ್ವ ವಿಕಸನ / ಸಿದ್ದು ಯಾಪಲಪರವಿ, ಕಾರಟಗಿ, ಕೊಪ್ಪಳ ಜಿಲ್ಲೆ.

ಮನುಷ್ಯನ ಮನಸ್ಸಿನ ಮೇಲೆ ಸಾವಿರಾರು ವರ್ಷಗಳಿಂದ ಅಧ್ಯಯನ ಸಾಗಿಯೇ ಇದೆ. ಆದರೆ ಇನ್ನೂ ನೆಲೆ ನಿಂತಿಲ್ಲ, ನಿಲ್ಲುವುದೂ ಇಲ್ಲ. ಆರು ಸಾವಿರ ವರ್ಷಗಳ ಹಿಂದೆ ಬೋಧಿಸಲಾದ ಕೃಷ್ಣನ ಭಗವದ್ಗೀತಾ, ಬುದ್ಧನ ವಿಪಸನ, ಆಯುರ್ವೇದ ಶಾಸ್ತ್ರದ ಕಾಯ ಚಿಕಿತ್ಸಾ ಮತ್ತು ಬಸವಾದಿ ಶರಣರ ವಚನಗಳು ಆಲೋಚನಾ ಕ್ರಮವನ್ನು ಮುಂದುವರೆಸಿಕೊಂಡು ಸಾಗಿವೆ. ಆಧುನಿಕ ಮನೋವಿಜ್ಞಾನ ವಿದೇಶಗಳಲ್ಲಿ ತನ್ನ ಮನೋ ಸಂಶೋಧನೆಯನ್ನು ಮಾಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಶರಣರು ಅನುಭವ ಮಂಟಪದ ಮೂಲಕ ಬದುಕಿನ ಸಾಮಾಜಿಕ, ಧಾರ್ಮಿಕ, ಆರ್ಥಿಕ ಮತ್ತು ಮನೋವೈಜ್ಞಾನಿಕ ಸಂಗತಿಗಳ ಮೇಲೆ ಬೆಳಕು ಚೆಲ್ಲುವ ಚರ್ಚೆ ಮಾಡಿ,…

0 Comments

ಆರೋಗ್ಯಕ್ಕೆ ವಚನಾಮೃತ / ಡಾ. ಸಿ. ಆರ್.‌ ಚಂದ್ರಶೇಖರ, ಬೆಂಗಳೂರು.

ಪ್ರಸಕ್ತ ಸಮಾಜದಲ್ಲಿ ನಮ್ಮ ಬದುಕು ಸಂಕೀರ್ಣ ಮತ್ತು ಸಂಕಷ್ಟಮಯವಾಗುತ್ತಿದೆ. ಭೋಗ ಭಾಗ್ಯಗಳ “ಕಂಸ್ಯೂಮರ್”‌ ಜಗತ್ತಿನಲ್ಲಿ ʼಹಣ-ವಸ್ತು-ರಂಜನೆʼಯಿಂದಲೆ ಸುಖ-ಸಂತೋಷವೆಂಬ ಸೂತ್ರ ನಮ್ಮನ್ನು ಬಂಧಿಸಿದೆ. Marks-Materials-Money ಈ ಮೂರೂ ʼಎಂʼಗಳೂ ಬಾಲ್ಯದಿಂದ ಮುಪ್ಪಿನವರೆಗೆ ನಮ್ಮನ್ನು ಕಾಡುತ್ತಿವೆ. ಶಾಲಾ-ಕಾಲೇಜು ವಿದ್ಯಾಭ್ಯಾಸದಲ್ಲಿ Marks (ಅಂಕಗಳು) ನಂತರ ಹಣ ಸಂಪಾದನೆ-ಬೇರೆಯವರಿಗಿಂತ ಹೆಚ್ಚಾಗಿ ನಮಗೇ ಸಿಗಬೇಕು. ಹಾಗೆಯೇ ಐಷಾರಾಮಿ ವಸ್ತುಗಳು (Materials) ಎಷ್ಟಿದ್ದರೂ ಸಾಲದು. ಮನೆಯೊಳಗಿನ ಸ್ನೇಹ ಸಂಬಂಧಗಳು ಮನೆಯ ಹೊರಗಿನ ಸ್ನೇಹ ಸಂಬಂಧಗಳು ಶಿಥಿಲವಾಗುತ್ತಿವೆ. ಯಾರಿಗೆ ಯಾರೋ ಎರವಿನ ಸಂಸಾರ. ನಾನು ಕಂಡ ಹಲವಾರು ಕುಟುಂಬಗಳಲ್ಲಿ ಗಂಡನಿಗೆ ಹೆಂಡತಿಯ ಆಸರೆ ಇಲ್ಲ. ಹೆಂಡತಿಗೆ ಗಂಡನ…

1 Comment

ಗಾಂಧೀ ಗಿಡ / ಶ್ರೀ. ಬಸವರಾಜ ಚಿನಗುಡಿ, ಚನ್ನಮ್ಮನ ಕಿತ್ತೂರ, ಬೆಳಗಾವಿ ಜಿಲ್ಲೆ.

ಚನ್ನಮ್ಮನ ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದ ಗಾಂಧೀ ಮಡ್ಡಿಯಲ್ಲಿ ಬೃಹಾದಾಕಾರದಲ್ಲಿ ಬೆಳೆದು ನಿಂತ ಗಾಂಧೀ ಗಿಡ (ಆಲದ ಮರ). ದಾರವಾಡ ಮತ್ತು ಬೆಳಗಾವಿ ನಗರಗಳ ಮಧ್ಯ ಮಲೆನಾಡಿನ ಅಂಚಿನಲ್ಲಿ ಪೂಣೆ-ಬೆಂಗಳೂರು ರಾಷ್ಟೀಯ ಹೆದ್ದಾರಿ-4 ರಿಂದ ಸುಮಾರು 7 ಕಿ.ಮೀ ದೂರದಲ್ಲಿ ತಿಗಡೊಳ್ಳಿ ಎಂಬ ಗ್ರಾಮ ಇದೆ. ಈ ಗ್ರಾಮ ಸ್ವಾತಂತ್ರ್ಯ ಪೂರ್ವದಿಂದಲೂ ಮಹೋನ್ನತ ಇತಿಹಾಸ ಹೊಂದಿದೆ. ಸ್ವಾತಂತ್ರ ಹೋರಾಟ, ಆರ್ಥಿಕವಾಗಿ, ಸಾಹಿತ್ಯಿಕವಾಗಿ, ರಾಜಕೀಯವಾಗಿ ವೈಭವದಿಂದ ಮೆರೆದ ಗ್ರಾಮ. ತಿಗಡೊಳ್ಳಿ ಗ್ರಾಮವು ಸ್ವಾತಂತ್ರ ಹೋರಾಟದಲ್ಲಿ ತನ್ನದೆ ಆದ ಛಾಪು ಮೂಡಿಸಿ 1942 ರ ಚಲೇಜಾವ್ ಚಳುವಳಿಯ ಕಾಲದಲ್ಲಿ ಮಹತ್ವದ…

0 Comments