“ಶರಣ ಸಂಸ್ಕೃತಿಯ ಆರ್ಥಿಕ ಮೌಲ್ಯಗಳು”
ಆನೆ ಕುದುರೆ ಭಂಡಾರವಿರ್ದಡೇನೊ?ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ.ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ.ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1523 / ವಚನ ಸಂಖ್ಯೆ-1504) ವಚನ ಸಾಹಿತ್ಯದ ಅಧ್ಯಯನ ಇಂದಿನ ಪೀಳಿಗೆಯ ಬಹಳಷ್ಟು ವಿದ್ವಾಂಸರುಗಳನ್ನು, ವಿದ್ಯಾರ್ಥಿಗಳನ್ನು ಹಾಗೂ ಲೇಖಕರನ್ನು ಆಕರ್ಷಿಸಿದ್ದು ಒಂದು ಉತ್ತಮ ಬೆಳವಣಿಗೆ. ಬಾಲ್ಯದಿಂದಲೂ ಅಂದರೆ ಸುಮಾರು ನಾನು 12 ವರ್ಷದವನಾಗಿದ್ದಾಗಿನಿಂದ ವಚನ ಸಾಹಿತ್ಯದ ಕಡೆಗಿನ ಒಲವು ಮೂಡಿಸಿದ್ದು…





Total views : 51410