ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ: ಸಂಕಷ್ಟದ ಬದುಕು ಹಾಗೂ ಅವರ ಸಾಧನೆಗಳು | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.

ರಾವ್‌ ಬಹಾದ್ದೂರ ಡಾ. ಫ. ಗು. ಹಳಕಟ್ಟಿಯವರ ಪೂರ್ವಜರು ಮೂಲತಃ ಸವದತ್ತಿ ತಾಲೂಕಿನ ಹಳಕಟ್ಟಿ ಗ್ರಾಮದವರು. ಧಾರವಾಡಕ್ಕೆ ವಲಸೆ ಬಂದ ನೇಕಾರ ಕುಟುಂಬ ಅವರದಾಗಿತ್ತು. ಅವರ ಪೂರ್ಣ ಹೆಸರು ಫಕೀರಪ್ಪ. ಡಾ. ಫ. ಗು. ಹಳಕಟ್ಟಿಯವರ ತಂದೆ ಸಾಹಿಗಳು ಮತ್ತು ಶಿಕ್ಷಕರಾಗಿದ್ದ ಶ್ರೀ ಗುರುಬಸಪ್ಪ ಹಳಕಟ್ಟಿ ಮತ್ತು ತಾಯಿ ಶ್ರೀಮತಿ ದಾನಾದೇವಿ. 02.07.1880 ರಂದು ಧಾರವಾಡದಲ್ಲಿ ಜನಿಸಿದ ಅವರು ತಮ್ಮ ಮೂರನೇಯ ವಯಸ್ಸಿನಲ್ಲಿದ್ದಾಗ ತಾಯಿಯನ್ನು ಕಳೆದುಕೊಳ್ಳುತ್ತಾರೆ. ಧಾರವಾಡದಲ್ಲಿ ತಮ್ಮ ಪ್ರಾಥಮಿಕ ಹಾಗೂ 1896 ರಲ್ಲಿ ಮೆಟ್ರಿಕ್ ಪರೀಕ್ಷೆ ಪಾಸಾಗುತ್ತಾರೆ. ನಂತರ ಉನ್ನತ ಶಿಕ್ಷಣಕ್ಕಾಗಿ ಮುಂಬೈಗೆ ತೆರಳಿ 1901…

0 Comments

ವಚನಗಳಲ್ಲಿ ವೀರಶೈವ ಮತ್ತು ಲಿಂಗಾಯತ (ಲಿಂಗವಂತ) ಪದಬಳಕೆ: ಒಂದು ಪರಾಮರ್ಶೆ | ಡಾ. ವೀರಣ್ಣ ರಾಜೂರ, ಧಾರವಾಡ.

ವಚನ ಸಾಹಿತ್ಯ ನನ್ನ ವಿಶೇಷ ಆಸಕ್ತಿಯ ಅಧ್ಯಯನ ಕ್ಷೇತ್ರ. ಸುಮಾರು 45 ವರ್ಷಗಳಿಂದ ಈ ಕ್ಷೇತ್ರದಲ್ಲಿ ನಿರಂತರ ಸಂಶೋಧನೆ, ಬರವಣಿಗೆ, ಗ್ರಂಥ ಪ್ರಕಟಣೆ ಕಾರ್ಯ ಮಾಡುತ್ತ ಬಂದಿದ್ದೇನೆ. ಇದುವರಗೆ ನಾನು 125 ಗ್ರಂಥಗಳನ್ನು ಪ್ರಕಟಿಸಿದ್ದು ಅವುಗಳಲ್ಲಿ 80 ಕ್ಕೂ ಹೆಚ್ಚು ಕೃತಿಗಳು ವಚನ ಸಾಹಿತ್ಯಕ್ಕೆ ಸಂಬಂಧಿಸಿವೆ. ಕರ್ನಾಟಕ ಸರ್ಕಾರ ಡಾ. ಎಂ. ಎಂ. ಕಲಬುರ್ಗಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟಿಸಿದ ಸಮಗ್ರ ವಚನ ಸಾಹಿತ್ಯದ 15 ಸಂಪುಟಗಳಲ್ಲಿ ನಾನು 5 ಸಂಪುಟಗಳನ್ನು ಸಂಪಾದಿಸಿದ್ದೇನೆ. ಹೀಗಾಗಿ ವಚನ ಸಾಹಿತ್ಯದ ಹಸ್ತಪ್ರತಿಗಳ ನಿರಂತರ ಒಡನಾಟದಿಂದ ಅವುಗಳ ಸ್ವರೂಪ, ಪರಂಪರೆ, ಪರಿಷ್ಕರಣೆ,…

1 Comment

ಮುಲ್ಕಿ ಪರೀಕ್ಷೆ ಪಾಸಾಗದ ಹಾಲಯ್ಯ ಚಿತ್ರದುರ್ಗದ ಬೃಹನ್ಮಠ ಕೈ ತಪ್ಪಿದ್ದಕ್ಕೆ ವೀರಶೈವ ಮಹಾಸಭಾ ಸ್ಥಾಪನೆ | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.

ಬಸವಣ್ಣನೆ ತಾಯಿ, ಬಸವಣ್ಣನೆ ತಂದೆ,ಬಸವಣ್ಣನೆ ಪರಮ ಬಂಧುವೆನಗೆ,ವಸುಧೀಶ ಕಪಿಲಸಿದ್ದಮಲ್ಲಿಕಾರ್ಜುನಾನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಸೊನ್ನಲಗಿಯ ಸಿದ್ದರಾಮೇಶ್ವರರ ಈ ವಚನದ ತಾತ್ಪರ್ಯದಂತೆ ಅಂದಿನ ಧಾರವಾಡ ಜಿಲ್ಲೆಯ ರಾಣೆಬೆಣ್ಣೂರು ತಾಲ್ಲೂಕಿನ ಜೋಯಿಸರ ಹರಳಹಳ್ಳಿಯಲ್ಲಿ ಬಸವಯ್ಯ ಮತ್ತು ನೀಲಮ್ಮ ಎಂಬ ದಂಪತಿಗಳಿದ್ದರು. ಅಪ್ಪಟ ಬಸವ ಭಕ್ತರು. ಬಸವಾದಿ ಪ್ರಮಥರ ಅನುಯಾಯಿಗಳು. ಶರಣ ಪರಂಪರೆ ಅವರ ದೈನಂದಿನ ಬದುಕಿನಲ್ಲಿ ಹಾಸುಹೊಕ್ಕಾಗಿತ್ತು. ಅವರದು ಮೂಲತಃ ಕಡುಬಡತನದ ಕುಟುಂಬವಾದರೂ ಶರಣಧರ್ಮ ಆಚರಿಸುವಲ್ಲಿ ಬಡತನ ಇರಲಿಲ್ಲ. ಗ್ರಾಮದ ಮುಗ್ಧರಿಗೆ ಹಾಗೂ ಶಾಲಾ ಮಕ್ಕಳಿಗೆ ವಚನ ಪಾಠ ಕಲಿಸುವ ಕಾಯಕದಲ್ಲಿ ತೊಡಗಿದ್ದರು.…

0 Comments

ತಾಡೋಲೆಗಳಲ್ಲಿ ವಚನಗಳ ಸಂಗ್ರಹ | ಡಾ. ಜಿ ವಿ ಮಂಜುನಾಥ, ಹೊಳಲ್ಕೆರೆ, ಚಿತ್ರದುರ್ಗ ಜಿಲ್ಲೆ.

ದೈವದೊಡನೆ ಸಂಸ್ಕೃತ ಭಾಷೆಯಲ್ಲೇ ಸಂವಾದ ಸಾಧ್ಯ ಎನ್ನುವ ಕಾಲ ಘಟ್ಟದಲ್ಲಿ ದೈವದೊಡನೆ ಕನ್ನಡ ಭಾಷೆಯ ಮೂಲಕವೂ ಸಂವಾದ ಮಾಡಬಹುದು, ಅವನೊಂದಿಗೆ ಜನಸಾಮಾನ್ಯರ ಮಾತಿನಲ್ಲೇ ಸಂಭಾಷಣೆ ಮಾಡಬಹುದು ಎಂದು ಜಗತ್ತಿಗೆ ತೋರಿಸಿದವರು 12 ನೇ ಶತಮಾನದ ಶರಣರು.  ಶ್ರೇಣಿಕೃತ ಸಾಮಾಜಿಕ ವ್ಯವಸ್ಥೆಯು ಮಾನವರನ್ನು ವರ್ಗ ವರ್ಗವಾಗಿ ಹಂಚಿತ್ತು. ಕೆಲವರು ಶುದ್ಧ, ಕೆಲವರು ಅಶುದ್ಧ ಎಂದು ಹೇಳಿದ್ದ ವ್ಯವಸ್ಥೆಗೆ ಶರಣರು ಧಿಕ್ಕಾರ ಹೇಳಿದರು. ಸಾಮಾಜಿಕ ಮೌಲ್ಯಗಳನ್ನೇ ಧಾರ್ಮಿಕ ಮೌಲ್ಯಗಳನ್ನಾಗಿ ರೂಪಾಂತರಿಸಿ ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರು, ಅಂದರೆ ಇಹಲೋಕದಲ್ಲಿ ನೀತಿಯುತವಾಗಿ, ದಯೆಯಿಂದ, ಕಾಯಕದಿಂದ, ಬಾಳಿ ಬದುಕಿದರೆ ಸ್ವರ್ಗ ಸ್ಥಿತಿ ಇಲ್ಲಿಯೇ…

0 Comments

ಪ್ರವಚನ ಪಿತಾಮಹ ಪರಮ ಪೂಜ್ಯ ಶ್ರೀ. ಲಿಂಗಾನಂದ ಸ್ವಾಮೀಜಿ | ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ.

ಬಸವ ಬಳ್ಳಿ ಹಬ್ಬಿಸಿ, ಪ್ರವಚನ ಪಿತಾಮಹರಾದ ಮಣಿಗವಳ್ಳಿಯ ಮಾಣಿಕ್ಯ ಆನೆಯೂ ಆ ದಾರಿಯಲ್ಲಿ ಹೋುತ್ತೆಂದಡೆ,ಆಡೂ ಆ ದಾರಿಯಲ್ಲಿ ಹೋುತ್ತೆನ್ನಬಹುದೆ?ಸಂಗನ ಶರಣರಿಗೆ ಆನು ಸರಿಯೆಂದು ಗಳಹಲಿಬಹುದೆ?ಜಂಗಮಕ್ಕೆ ಮಾಡುವ ಭಕ್ತರಿಗೆ ಆನು ಸರಿಯೆಹೇಳಾ, ಕೂಡಲಸಂಗಮದೇವಾ?(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-87/ವಚನ ಸಂಖ್ಯೆ-329) ಲಿಂಗಾಯತ ಧರ್ಮ ಮತ್ತು ಬಸವ ತತ್ವ ಬೆಳೆಸಲು ಆನೆಯಾಗಿ ಶರಣರ ಚಳುವಳಿಯ ಮಾರ್ಗ ಹಿಡಿದು ಸಾದನೆಯ ಶಿಖರಕ್ಕೇರಿದ ಪೂಜ್ಯ ಲಿಂಗಾನಂದ ಸ್ವಾಮೀಜಿಗಳು ತಮ್ಮ ಪ್ರಖರ ಪ್ರವಚನದ ಮೂಲಕ ಶರಣರ ಬದುಕನ್ನು ಜೀವಂತವಾಗಿ ಸಾಕ್ಷಿಕರಿಸಿದರು. ವಚನ ಸಾಹಿತ್ಯಕ್ಕೆ ಮರುಜನ್ಮ ನೀಡುವಲ್ಲಿ ಹಾಗೂ ಲಿಂಗಾಯತ ಧರ್ಮಕ್ಕೆ ಹೊಸ ಪಥ ಸೃಷ್ಠಿಸುವಲ್ಲಿ…

0 Comments

ಶಿವಶರಣ ಸೊನ್ನಲಾಪುರದ ಸಿದ್ದರಾಮ ಶಿವಯೋಗಿಗಳು | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸೂಗೂರು.

“ವೈರಾಗ್ಯಕ್ಕೆ ಅಲ್ಲಮ, ಭಕ್ತಿಯೋಗಕ್ಕೆ ಬಸವಣ್ಣ, ಅನುಭಾವಕ್ಕೆ ಅಕ್ಕಮಹಾದೇವಿ, ಕಾಯಕಕ್ಕೆ ಸಿದ್ದರಾಮ” ಜಗತ್ತು ಕಂಡ ಶ್ರೇಷ್ಠ ಕರ್ಮಯೋಗಿಗಳಲ್ಲಿ ಯೋಗತಪಸ್ವಿ ಶಿವಯೋಗಿ ಸಿದ್ದರಾಮೇಶ್ವರರ ಆದರ್ಶಮಯ ಜೀವನ ಚರಿತ್ರೆಯ ಕುರಿತು ಲೇಖನ. ಹನ್ನೆರಡನೇಯ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕಲ್ಯಾಣದ ಕ್ರಾಂತಿ ಕರ್ನಾಟಕದ ಇತಿಹಾಸದಲ್ಲಷ್ಟೇ ಅಲ್ಲ ಜಾಗತಿಕ ಮಟ್ಟದಲ್ಲಿಯೂ ಮಹತ್ವಪೂರ್ಣವಾದುದು. ಅದು ಯಾವುದೇ ಒಂದು ವರ್ಗದ ಹಿತ ಕಾಪಾಡುವ ಚಳುವಳಿಯಾಗದೆ, ಸಮಾಜದಲ್ಲಿನ ಕೆಳ ವರ್ಗದವರಿಂದ ಹಿಡಿದು ಎಲ್ಲಾ ವರ್ಗಗಳ ಹಿತವನ್ನು ಕಾಪಾಡಲು ಸಮಾನತೆಯ ತಳಹದಿಯ ಮೇಲೆ ನಡೆಸಿದ ಮುಕ್ತ ಮನಸ್ಸುಗಳ ಒಂದು ವಿಶಿಷ್ಟ ಅಂದೋಲನವಾಗಿತ್ತು. ಬಸವಾದಿ ಶರಣರು ಜನಭಾಷೆಯಲ್ಲಿ ತಮ್ಮ ಕಾಯಕದ…

0 Comments

ಕರ್ಮಯೋಗಿಯಿಂದ ಶಿವಯೋಗಿಯಾದ ಶರಣ ಸಿದ್ಧರಾಮೇಶ್ವರರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಎನ್ನನಾಗಳೆ ಬಂದಿವಿಡಿದೆ ಗಡ ನೀನು.ನಿಮ್ಮ ಹಿಡಿವಡೆ ಹಿಡಿವರು, ತನುವಿರೆ ತನು ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಮನವಿರೆ ಮನ ಬೇರಾದವರು.ನಿಮ್ಮ ಹಿಡಿವಡೆ ಹಿಡಿವರು, ಕೈಯಿರೆ ಕೈಬೇರಾದವರು.ಈಸುಳ್ಳವರು ಮೊದಲಾಗಿ ನಿಮ್ಮ ಹಿಡಿಯಲಾರರು.ಕಪಿಲಸಿದ್ಧಮಲ್ಲಿಕಾರ್ಜುನಾನಿಮ್ಮ ಹಿಡಿದು ತಡೆಯಲಾನೇತರವನಲ್ಲ.ಕರುಣದಿಂದ ಬಾರಾ, ಎನ್ನ ದೇವರ ದೇವಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-388/ವಚನ ಸಂಖ್ಯೆ-1246) ಶರಣ ಸಂಕುಲದಲ್ಲಿ ಶಿವಯೋಗಿ ಸಿದ್ಧರಾಮರದು ತುಂಬಾ ಮಹತ್ವದ ಪಾತ್ರವಾಗಿದೆ. ವಿಶಿಷ್ಟ ಆಲೋಚನೆಯುಳ್ಳ ಸಿದ್ಧರಾಮೇಶ್ವರರು ಅದ್ಭುತ ಕನಸುಗಾರರು. “ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ಶಿವಯೋಗಿಯ ಶರೀರಂ ವೃಥಾ ಸವೆಯಲಾಗದು, ಅನುಗೊಂಬನಿತು ಕಾಯಕ ನಡೆಯಬೇಕು” ಎಂಬುದು ಇವರ ಧ್ಯೇಯವಾಕ್ಯವಾಗಿತ್ತು. ಅಂಗಕ್ಕೆ ಲಿಂಗೋಪದೇಶ ಮನಕ್ಕೆ ಮಂತ್ರೋಪದೇಶವಾದ…

0 Comments

ಮಹಾಮಹಿಮ, ಕಾಯಕಯೋಗಿ ಶಿವಯೋಗಿ ಸಿದ್ಧರಾಮೇಶ್ವರರ ಪರಿಚಯ ಲೇಖನ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ,

ಬಸವಣ್ಣನೇ ತಾಯಿ, ಬಸವಣ್ಣನೇ ತಂದೆಬಸವಣ್ಣನೇ ಪರಮಬಂಧುವೆನಗೆ.ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನ,ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಎಂಬುದು ವಚನ ಸಾಹಿತ್ಯದ ಒಂದು ಪ್ರಸಿದ್ಧ ವಚನ. ಸಿದ್ದರಾಮರು ಬಸವಣ್ಣನವರಲ್ಲಿಯೇ ತಂದೆ, ತಾಯಿ, ಬಂಧು, ಬಳಗ ಎಲ್ಲರನ್ನ ಕಾಣುವ ಭಕ್ತಿ ಭಾವನೆಯನ್ನು ಸೂಚಿಸುವ ವಚನ. 12 ನೇಯ ಶತಮಾನದ ಶಿವ-ಶರಣರಲ್ಲಿ ಅಲ್ಲಮಪ್ರಭುಗಳು ಜಂಗಮಲಿಂಗ ಎಂದು, ಬಸವಣ್ಣನವರು ಭಕ್ತಿ ಭಂಡಾರಿ ಎಂದು, ಅಕ್ಕಮಹಾದೇವಿಯವರಿಗೆ ವೀರ ವಿರಾಗಿಣಿ ಎಂದು, ಚನ್ನಬಸವಣ್ಣನವರು ಷಟ್‌ಸ್ಥಳ ಜ್ಞಾನಿ ಎಂದು ಪ್ರಸಿದ್ಧರಾಗಿದ್ದರೆ ಶರಣ ಸಿದ್ದರಾಮಯ್ಯನವರು ಶಿವಯೋಗಿ ಎಂದು ಪ್ರಸಿದ್ಧರಾಗಿದ್ದಾರೆ. ಅನುಭವ ಮಂಟಪದಲ್ಲಿ ಕ್ರಿಯಾತ್ಮಕವಾಗಿ ಭಾಗವಹಿಸುತ್ತಾ ಸೊಡ್ಡಳ…

0 Comments

ಸರಳತೆ ಮತ್ತು ಉದಾರತೆಯ ಹರಿಕಾರ: ಹರ್ಡೇಕರ ಮಂಜಪ್ಪನವರು | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ತನುವ ತೋಂಟವ ಮಾಡಿ, ಮನವ ಗುದ್ದಲಿ ಮಾಡಿ,ಅಗೆದು ಕಳೆದೆನಯ್ಯಾ ಭ್ರಾಂತಿನ ಬೇರ.ಒಡೆದು ಸಂಸಾರದ ಹೆಂಟೆಯ,ಬಗಿದು ಬಿತ್ತಿದೆನಯ್ಯಾ ಬ್ರಹ್ಮಬೀಜವ.ಅಖಂಡಮಂಡಲವೆಂಬ ಬಾವಿ, ಪವನವೆ ರಾಟಾಳ,ಸುಷುಮ್ನನಾಳದಿಂದ ಉದಕವ ತಿದ್ದಿ,ಬಸವಗಳೈವರು ಹಸಗೆಡಿಸಿಹವೆಂದುಸಮತೆ ಸೈರಣೆಯೆಂಬ ಬೇಲಿಯನಿಕ್ಕಿ,ಆವಾಗಳೂ ಈ ತೋಂಟದಲ್ಲಿ ಜಾಗರವಿದ್ದುಸಸಿಯ ಸಲಹಿದೆನು ಕಾಣಾ ಗುಹೇಶ್ವರಾ.(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-95/ವಚನ ಸಂಖ್ಯೆ-231) ಜಂಗಮ ಜ್ಯೋತಿಯಾಗಿ ಲೋಕಪರ್ಯಟನೆಯ ಮೂಲಕ ಸತ್ಯದ ಕಾಣಿಕೆಯನ್ನು ಗುರುತಿಸಿ ಸಕಲರ ಎದೆಯಲ್ಲಿ ಅರಿವಿನ ಬೀಜ ಬಿತ್ತಿದ ವ್ಯೋಮಕಾಯ ಮೂರ್ತಿಗಳಾದ ಅಲ್ಲಮ ಪ್ರಭುಗಳ ವಚನದಂತೆ ಸತ್ಯದ ಬದುಕನ್ನು ಬದುಕಿದ ಹರ್ಡೇಕರ ಮಂಜಪ್ಪನವರು ಸರಳತೆ ಮತ್ತು ಉದಾರತೆ ಎಂಬ ತತ್ವಗಳಡಿಯಲ್ಲಿ ತಮ್ಮ ಬದುಕನ್ನು ಸವೆಯಿಸಿದವರು.…

1 Comment

ಕಾಯಕವೇ ಪ್ರಾಣವಾದ ಶರಣ ಮೇದಾರ ಕೇತಯ್ಯನವರು | ಶ್ರೀ. ಗುರುಪ್ರಸಾದ ಕುಚ್ಚಂಗಿ, ಬೆಂಗಳೂರು.

ಪತ್ನಿ: ಸಾತವ್ವೆ.ಕಾಯಕ: ಗವರಿಗೆ / ಬಿದಿರು ಹೆಣೆಯುವ ಕಾಯಕಸ್ಥಳ: ಉಳವಿ ಬೆಟ್ಟ, ಬೇಲೂರು ತಾಲ್ಲೂಕುಜಯಂತಿ: ಬನದ ಹುಣ್ಣಿಮೆಯಂದು. ಲಭ್ಯವಿರುವ ವಚನಗಳ ಸಂಖ್ಯೆ: 18ಅಂಕಿತ: ಗವರೇಶ್ವರಲಿಂಗ. ಬಸವಯುಗದ ಧೃವತಾರೆ ಕಾಯಕವನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಕಾಯಕ ಜೀವಿ  ಬಸವಣ್ಣನವರ ಜೀವಪರ ಸಾಮಾಜಿಕ ಶೈಕ್ಷಣಿಕ ಹೋರಾಟಕ್ಕೆ ಮನಸೋತು ಬಂದ ಮೇರು ವ್ಯಕ್ತಿತ್ವವೇ ಶಿವಶರಣ ಮೇದಾರ ಕೇತಯ್ಯನವರು. ಇವರು ಬಸವಣ್ಣನವರಿಂದ ಪ್ರಭಾವಿತರಾಗಿ ಅತ್ಯಂತ ಉತ್ಸಾಹಿಗಳಾಗಿ ಶರಣರ ಚಳುವಳಿಯಲ್ಲಿ ಪಾಲ್ಗೊಂಡವರು ಕೇತಯ್ಯ ಶರಣರು. ಇವರು ಬಸವಣ್ಣನವರನ್ನು ಗುರುವಾಗಿ ಸ್ವೀಕರಿಸಿದವರು. ಬಸವಣ್ಣನವರ ಪ್ರಭಾವದಿಂದ ಗುರು-ಲಿಂಗ-ಜಂಗಮದಲ್ಲೇ ನಿಜಸುಖವನ್ನು ಕಂಡವರು. ಭಕ್ತರಾಗಿ, ಶರಣರಾಗಿ  ಕಾಯಕದಲ್ಲೇ ಕೈಲಾಸವನ್ನು ಕಂಡವರು.…

0 Comments