ಪ್ರಕೃತಿ ಸಾಂಗತ್ಯದಲ್ಲಿ ಅಕ್ಕ / ಶ್ರೀಮತಿ. ಶಾರದಾ ಕೌದಿ, ಧಾರವಾಡ.
ವನವೆಲ್ಲ ಕಲ್ಪತರು, ಗಿಡವೆಲ್ಲ ಮರುಜಿವಣಿ,ಶಿಲೆಗಳೆಲ್ಲ ಪರುಷ, ನೆಲವೆಲ್ಲ ಅವಿಮುಕ್ತ ಕ್ಷೇತ್ರ,ಜಲವೆಲ್ಲ ನಿರ್ಜರಾಮೃತ ಮೃಗವೆಲ್ಲ ಪುರುಷ ಮೃಗ,ಎಡಹುವ ಹರಳೆಲ್ಲ ಚಿಂತಾಮಣಿ.ಚೆನ್ನಮಲ್ಲಿಕಾರ್ಜುನಯ್ಯನ ನೆಚ್ಚಿನ ಗಿರಿಯ ಸುತ್ತಿ,ನೋಡುತ್ತ ಬಂದುಕದಳಿಯ ಬನವ ಕಂಡೆ ನಾನು.(ಸಮಗ್ರ ವಚನ ಸಂಪುಟ: ಐದು-2021/ಪುಟ ಸಂಖ್ಯೆ-126/ವಚನ ಸಂಖ್ಯೆ-360) ಸಾವಿಲ್ಲದ ಕೇಡಿಲ್ಲದ ರೂಹಿಲ್ಲದ ಚೆನ್ನಮಲ್ಲಿಕಾರ್ಜುನನ್ನು ಅರಸುತ್ತಾ ಕಲ್ಯಾಣದಿಂದ ಶ್ರೀಶೈಲಕ್ಕೆ ಹೊರಟ ಅಕ್ಕ ಮಹಾದೇವಿ ಗಿರಿಯನ್ನು ಸುತ್ತುತ್ತಾ ಹೊರಟಾಗ ಅಲ್ಲಿಯ ಪ್ರಕೃತಿ ಸೌಂದರ್ಯ ಕಂಡು ವಿಸ್ಮಯಳಾಗುತ್ತಾಳೆ. ಅಕ್ಕನ ಆತ್ಮಸಂಗಾತ ಚೆನ್ನಮಲ್ಲಿಕಾರ್ಜುನಯ್ಯನಿರುವ ಗಿರಿಯ ಒಂದೊಂದು ಗಿಡ ಮರ ಬಳ್ಳಿ ಎಲ್ಲವು ಅವಳಿಗೆ ಅಮೂಲ್ಯ. ಅವಳ ಪಾಲಿಗೆ ಅವು ಬೇಡಿದ್ದನ್ನು ನೀಡುವ ಕಲ್ಪತರು. ನಡೆದು…





Total views : 59315