ಆದಯ್ಯನವರ ವಚನಗಳಲ್ಲಿ ಭೃತ್ಯಾಚಾರ/ಶ್ರೀಮತಿ. ಸವಿತಾ ಮಾಟೂರ,ಇಳಕಲ್ಲ.

ರಾಷ್ಟಕವಿ ಜಿ.ಎಸ್. ಶಿವರುದ್ರಪ್ಪನವರ “ಎಲ್ಲೊ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ ಇಲ್ಲೆ ಇರುವಾ ಪ್ರೀತಿ ಸ್ನೇಹಗಳ ಗುರುತಿಸದಾದೆನು ನಮ್ಮೊಳಗೆ” ಎಂಬ ಕವಿ ವಾಣಿಯಂತೆ ಕಲ್ಲು ಮಣ್ಣುಗಳ ಗುಡಿಯಲ್ಲಿಯೆ ಇನ್ನು ದೇವರನ್ನು ಹುಡುಕಿತ್ತಿದ್ದೆವೆ. “ಒಳಗಿನ ತಿಳಿಯನು ಕಲಕದೆ ಇದ್ದರೆ ಅಮೃತದ ಸವಿ ಇದೆ ನಾಲಗೆಗೆ” ಶರಣರು ಸಾರಿದ ಅಂತರಂಗ ಶುದ್ಧಿಯಾದರೆ ನಿಜವಾದ ಅಮೃತದ ಸವಿಯನ್ನು ಸವಿಯಬಹುದು.  ಶರಣರು ಜಗದೊಳಗೆ ಅನುಶೃತಗೊಂಡ ಅಘಟಿತ ಚರಿತರು. ವಚನದ ಅಮೃತದ ಸಾರವನ್ನು ನಮಗೆಲ್ಲ ಧಾರೆ ಎರೆದವರು. ಆ ವಚನಾಮೃತದ ಸಾಗರದಲ್ಲಿ ಮುಳುಗಿ ಮಿಂದಾಗಲೆ ನಮಗೆ ಅದರ ಆಳ ಅಗಲದ ಅನುಭವವಾಗುವದು.…

0 Comments

ಬಸವಣ್ಣನವರ ವಚನಗಳಲ್ಲಿ “ಗಣಾಚಾರ”/ಶ್ರೀಮತಿ ಸುನಿತಾ ಮೂರಶಿಳ್ಳಿ

ವಿಶ್ವದ ಎಲ್ಲ ಧಾರ್ಮಿಕ ಸಾಂಸ್ಕೃತಿಕ, ಸಾಮಾಜಿಕ, ಸಾಹಿತ್ಯಿಕ ಅಂಶಗಳು ಆಯಾ ಕಾಲದ ಕಟ್ಟಳೆಗೆ, ಆಚರಣೆಗೆ, ವ್ಯವಸ್ಥೆಗೆ ಸೀಮಿತವಾಗಿರುತ್ತವೆ. ಆ ಕಟ್ಟೆಳೆಗಳಿಂದ ವ್ಯವಸ್ಥೆಯಲ್ಲಿರುವ ದೋಷಗಳಿಂದ ಸಿಡಿದೇಳುವುದೂ ಕೂಡಾ ಕಾಲ ಕಾಲಕ್ಕೂ ನಡೆದು ಬಂದಿರುವ ಐತಿಹಾಸಿಕ ಸತ್ಯ. ಹಾಗೆಯೇ 12 ನೇಯ ಶತಮಾನದ ಶರಣರ ಗಣಾಚಾರ ಕೂಡಾ ಇಂತಹ ಒಂದು ಪ್ರತಿಕ್ರಿಯೆ ಎನ್ನಬಹುದು. ಪಂಚ ಆಚಾರಗಳಲ್ಲಿ ಮೊದಲನೆಯ ಮೂರು ಲಿಂಗಾಚಾರ, ಸದಾಚಾರ ಮತ್ತು ಶಿವಾಚಾರಗಳು ವ್ಯಕ್ತಿ ಪರಿವರ್ತನೆಗೆ  ಸಂಬಂಧಿಸಿದ್ದು ಅವುಗಳ ವಿಕಾಸವು ಸಮಷ್ಟಿಯೊಂದಿಗೆ ಬೆಸೆದದ್ದು ಆಗಿದೆ. ನಂತರ ಬರುವ ಗಣಾಚಾರ ಮತ್ತು ಭೃತ್ಯಾಚಾರಗಳು ಪ್ರತಿಫಲನ ರೂಪವಾಗಿ ಬಂದ ಶರಣರ  ಪ್ರಕ್ರಿಯೆಗಳಾಗಿವೆ.…

0 Comments

ವಿಚಾರಪತ್ನಿಯರಾದ ಶಿವಶರಣೆಯರು / ಡಾ. ರಾಜೇಶ್ವರಿ ಶೀಲವಂತ, ಬೀಳಗಿ.

ಪಾರಂಪರಿಕ ಸಮಾಜ ವ್ಯವಸ್ಥೆಯು ಆಚರಣೆ, ಸಂಪ್ರದಾಯ, ಪದ್ಧತಿಗಳ ಹೆಸರಿನಲ್ಲಿ ಶತ ಶತಮಾನಗಳಿಂದ ಪುರುಷ ಪ್ರಧಾನ ಸಮಾಜದಿಂದ ಮಹಿಳೆ ಶೋಷಣೆಗೆ ಒಳಗಾಗುತ್ತಲೆ ಬಂದಿದ್ದಳು. ಮಹಿಳೆಯರನ್ನು ಆ ಶೋಷಣೆಗಳಿಂದ ಮುಕ್ತಗೊಳಿಸಿ, ಅವರನ್ನು ಗೌರವಿಸಿ, ಅವಳಿಗೆ ಸಮಾಜದಲ್ಲಿ ಪುರುಷರಿಗೆ ಸಮಾನವಾದ ಸ್ಥಾನಮಾನ ಕಲ್ಪಿಸಿ, ಅವರ ವಿಚಾರಗಳಿಗೆ ಮನ್ನಣೆಯನ್ನಿತ್ತು, ಅವರನ್ನು ಮನುಷ್ಯರಂತೆ ಕಂಡದ್ದು ಶರಣ ಪರಂಪರೆ. ಶರಣರು ಮಹಿಳೆಯರಿಗೆ ಸಮಾಜದ ಹಲವಾರು ಕ್ಷೇತ್ರಗಳಲ್ಲಿ ದುಡಿಯುವ ಅವಕಾಶವನ್ನು ನೀಡಿ ಅವರು ಸ್ವಾವಲಂಬಿ ಜೀವನವನ್ನು ನಡೆಸಲು ಅನುವು ಮಾಡಿಕೊಟ್ಟರು. ಜಗತ್ತಿನಲ್ಲಿ ಪ್ರಪ್ರಥಮವಾಗಿ ಮಹಿಳೆಯರಿಗೆ ಆಯ್ಕೆ ಸ್ವಾತಂತ್ರ್ಯ ನೀಡುವ ಮೂಲಕ ಅವರನ್ನು ಸ್ವಾವಲಂಬಿಗಳನ್ನಾಗಿಸಿದರು. ಶರಣರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ…

0 Comments

ಪ್ರಾಣಲಿಂಗ ಸ್ಥಲ – ಪ್ರಾಣಲಿಂಗಕ್ಕೆ ಕಾಯವೆ ಸಜ್ಜೆ / ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಷಟ್ ಸ್ಥಲಗಳಲ್ಲಿ ನಾಲ್ಕನೆಯ ಸ್ಥಲವಾದ ಪ್ರಾಣಲಿಂಗಸ್ಥಲ ಶರಣ ಧರ್ಮವನ್ನು ಬಿಂಬಿಸುವ ವಿಶಿಷ್ಟ ಸ್ಥಲವಾಗಿದೆ. ಪ್ರಾಚೀನ ಅದ್ವೈತ ಧರ್ಮದಲ್ಲಿ ಶಂಕರಾಚಾರ್ಯರು ಹೇಳುವ “ಅಹಂ ಬ್ರಹ್ಮಾಸ್ಮಿ” ತತ್ವಕ್ಕೆ ಈ ಸ್ಥಲವನ್ನು ಹೋಲಿಸಬಹುದು. ಶರಣರು ಹೇಳುವ ಪ್ರಾಣಲಿಂಗಿ ಸ್ಥಲವು ಪ್ರಾಣವನ್ನು ಲಿಂಗವನ್ನಾಗಿಸಿ ಕೊಳ್ಳುವ ಪ್ರಕ್ರಿಯೆ ಎಂಬುದು ಗಮನಾರ್ಹ. ಅಲ್ಲಮಪ್ರಭು ಹೇಳುವಂತೆ ಲಿಂಗ ಸಾಧಕರೆಲ್ಲಾ ಭೂ ಬಾಧಕರಾದರು. ಅಂದರೆ ಅಂಗವು ಲಿಂಗವಾಗಿ ದೂರವುಳಿದರೆ ಸಮಾಜಕ್ಕೆ ಪ್ರಯೋಜನವೇನು? ಅದು ಮುಂದುವರಿದು ಸಮಾಜದ ಜಂಗಮದಲ್ಲಿ ಒಂದಾಗಬೇಕು ಏಕವಾಗಬೇಕು. ಅರವಿಂದ ಘೋಷರು ಅಂಗವನ್ನು ಲಿಂಗವಾಗಿಸಿ ಕೊಂಡಿದ್ದರು. ಗಾಂಧೀಜಿಯವರು ಮುಂದುವರಿದು ಸಮಾಜಮುಖಿಯಾಗಿ ವಿಶಾಲವಾಗಿಸಿದರು. ಬಸವಣ್ಣನವರು ಹೇಳಿದಂತೆ ಅರವಿಂದ ಘೋಷರಾಗುವುದಲ್ಲ.…

0 Comments

ಅಂತರಗದ ಆತ್ಮಗುಣಕ್ಕುಂಟೆ ಅಂಗವೈಕಲ್ಯ? / ಡಾ. ಬಸವರಾಜ ಸಾದರ, ಬೆಂಗಳೂರು.

ನಾಡಿನ ಶ್ರೇಷ್ಠ ಸಂಶೋಧಕ ಡಾ. ಎಂ. ಎಂ. ಕಲಬುರ್ಗಿ ಅವರು ಒಂದು ವಿಚಾರ ಸಂಕಿರಣದಲ್ಲಿ, “ವಚನಕಾರರ ಚಿಂತನೆಗಳ ಸಾರ್ವಕಾಲಿಕ ಪ್ರಸ್ತುತತೆ” ಎಂಬ ವಿಷಯ ಕುರಿತು ಮಾತನಾಡಿ, ತಮ್ಮ ಮಾತುಗಳ ಕೊನೆಯಲ್ಲಿ ‘ವರ್ತಮಾನದ ಜಗತ್ತಿನ ನಮ್ಮ ಎಲ್ಲ ಸಮಸ್ಯೆಗಳಿಗೂ ವಚನ ಸಾಹಿತ್ಯದಲ್ಲಿ ಪರಿಹಾರವಿದೆ’ ಎಂದು ಹೇಳಿ ಇನ್ನೇನು ವಿರಮಿಸಲು ಹೊರಟಿದ್ದರು. ಅಷ್ಟರಲ್ಲೇ ಸಭಿಕರಲ್ಲಿ ಒಬ್ಬರು ಎದ್ದು ನಿಂತು, ‘ಸರ್ ಒಂದು ಪ್ರಶ್ನೆ ಕೇಳಬುಹುದೆ?’ ಎಂದಾಗ, ‘ಹಾಂ, ಕೇಳಿ, ಕೇಳಿ’ ಎಂದಿದ್ದರು ಅವರು. ಸರ್, ನೀವು ಹೇಳಿದಂತೆ, ವಚನ ಸಾಹಿತ್ಯದಲ್ಲಿ ಜಗತ್ತಿನ ಏನೆಲ್ಲ ಸಮಸ್ಯೆಗಳಿಗೆ ಪರಿಹಾರವಿರಬಹುದು. ಆದರೆ ನಮ್ಮಂಥ ಅಂಗವಿಕಲರ…

4 Comments

ಅಷ್ಟಾವರಣಗಳಲ್ಲಿ ಪ್ರಸಾದ‌ / ಶ್ರೀಮತಿ. ಅನುಪಮ ಪಾಟೀಲ, ಹುಬ್ಬಳ್ಳಿ.

ಅಷ್ಟಾವರಣಗಳು ಅಂಗವಾದರೆ, ಪಂಚಾಚಾರಗಳು ಪ್ರಾಣ, ಷಟ್ ಸ್ಥಲಗಳು ಆತ್ಮ. ಇವು ಮೂರೂ ಶರಣ ಧರ್ಮದ ಬೆನ್ನೆಲಬುಗಳು. ಲಿಂಗಾಯತ ಧರ್ಮದಲ್ಲಿ ಅಷ್ಟಾವರಣಗಳನ್ನು ಅಂತರಂಗದ ಅರಿವಿನ ಪ್ರಜ್ಞೆಗಳು ಎಂದು ಭಾವಿಸಲಾಗಿದೆ. ಅಷ್ಟಾವರಣಗಳು ಮಾಯೆಯ ಬಾಹ್ಯ ಗೊಂದಲಗಳು ಮತ್ತು ಪ್ರಭಾವಗಳಿಂದ ಭಕ್ತನನ್ನು ರಕ್ಷಿಸುವ ಗುರಾಣಿಗಳು ಅಥವಾ ಹೊದಿಕೆಗಳಾಗಿ ಕಾರ್ಯ ನಿರ್ವಹಿಸುವ 8 ಸದ್ಗುಣಗಳು. ಗುರು, ಲಿಂಗ, ಜಂಗಮ, ಭಸ್ಮ, ರುದ್ರಾಕ್ಷ, ಮಂತ್ರ, ಪ್ರಸಾದ, ಪಾದೊದಕ ಇವು ಅಷ್ಟಾವರಣಗಳು. ಮೊದಲ ಮೂರು ಪೂಜ್ಯವಾದವುಗಳು, ನಂತರದ ಮೂರು ಪೂಜಾ ಸಾಧನಗಳು, ಕೊನೆಯ ಎರಡು ಪೂಜಾ ಪರಿಣಾಮಗಳು. ಬಸವಣ್ಣನವರಿಗಿಂತಲೂ ಹಿಂದೆಯೂ ನಮ್ಮ ನಾಡಿನಲ್ಲಿ ಗುರು ಲಿಂಗ…

0 Comments