ಮಹೇಶ್ವರಸ್ಥಲ / ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಧಾರ್ಮಿಕ ಮತ್ತು ವೈಚಾರಿಕ ನಿರ್ಣಯಗಳ ಒಟ್ಟು ಮೊತ್ತ ಮಹೇಶ್ವರಸ್ಥಲದಲ್ಲಿದೆ. ನಿಷ್ಠೆಯಿಂದ ಕೂಡಿದ ಭಕ್ತಿ. ಧರ್ಮದ ಕೊಡುಗೆ ಸುಬುದ್ದಿಯ ಮೂಲಕ ವೀರ ವ್ರತಾಚರಣೆಯನ್ನು ಗುರು-ಲಿಂಗಕ್ಕೆ ಅರ್ಪಿಸುವ ಉಪಾಸನೆಯನ್ನು ಮಹೇಶ್ವರಸ್ಥಲದಲ್ಲಿ ಮಾಡಬೇಕಾಗುತ್ತದೆ. ಮಹೇಶ್ವರನು ಸುಳ್ಳು ಹೇಳುವುದಿಲ್ಲ, ಆಚಾರವನ್ನು ಬಿಡುವುದಿಲ್ಲ. ಇತರರನ್ನು ಹಿಂಸಿಸುವುದಿಲ್ಲ. ಪರಧನ, ಪರಸ್ತ್ರೀ, ಪರನಿಂದೆಗಳನ್ನು ಸಹಿಸದ ಭಕ್ತನಾಗಿರಬೇಕು. ಛಲ ಬೇಕು ಶರಣಂಗೆ ಪರಧನವನೊಲ್ಲೆನೆಂಬ ಮೌಲ್ಯಗಳನ್ನು ಅಪ್ಪಿಕೊಳ್ಳಬೇಕು. ಶುದ್ಧ ಮನಸ್ಸುಳ್ಳ ಮಹೇಶ್ವರಸ್ಥಲದಲ್ಲಿ ಮನ ಮತ್ತು ಇಂದ್ರಿಯ ಬೇರೆಡೆಗೆ ಹೋಗದಂತೆ ಗಟ್ಟಿಯಾಗಿ ಹಿಡಿದಿಡುವ ಪ್ರಯತ್ನ ಈ ಸ್ಥಲದಲ್ಲಿದೆ. ಲಿಂಗದಲ್ಲಿ ಪ್ರೇಮ, ಜಂಗಮದಲ್ಲಿ ದಾಸೋಹ, ಗುರು ಪೂಜೆಯಲ್ಲಿ ಪರಮ ನಿಷ್ಠೆಗಳನ್ನು ಹೊಂದಿದ ಭಕ್ತನಾಗಿರಬೇಕು.…

0 Comments

ಶರಣ ಕಿನ್ನರಿ ಬ್ರಹ್ಮಯ್ಯನವರ ಬದುಕು ಬರಹ | ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.(ಶರಣ ಕಿನ್ನರಿ ಬ್ರಹ್ಮಯ್ಯನವರ ಸ್ಮರಣೋತ್ಸವದ ತನ್ನಿಮಿತ್ಯ ಈ ಲೇಖನ)

ಕಿನ್ನರಿ ಬ್ರಹ್ಮಯ್ಯನವರು 12 ನೇ ಶತಮಾನದ ಶರಣ ಸಮೂಹದಲ್ಲಿ ಗುರುತಿಸಿಕೊಂಡಂಥ ಶರಣರು. ಇವರ ಹುಟ್ಟೂರು ಈಗಿನ ತೆಲಂಗಾಣದ ಪೂಡೂರು ಅನ್ನುವಂಥ ಗ್ರಾಮ. ಇವರ ತಾಯಿ ಕಲಿದೇವಿ. ಇವರು ಅಕ್ಕಸಾಲಿಗ ವೃತ್ತಿಯನ್ನು ಕೈಗೊಂಡಿರುತ್ತಾರೆ. ಅದರ ಜೊತೆ ಜೊತೆಗೆ ದಾಸೋಹವನ್ನು ಕೂಡ ಮಾಡುತ್ತಿರುತ್ತಾರೆ. ಒಮ್ಮೆ ತೂಕದಲ್ಲಿ ಚಿನ್ನವನ್ನು ಕಡಿಮೆ ತೂಗಿ ಮೋಸ ಮಾಡಿದ್ದಾರೆ ಅನ್ನುವ ಆಪಾದನೆಗೊಳಗಾದರು. ಆಗ ಇದು ಆ ಶಿವನದೇ ಇಚ್ಛೆ ಆಗಿರಬೇಕು ಎಂದು ಅಕ್ಕಸಾಲಿಗ ಕಾಯಕವನ್ನು ಬಿಟ್ಟು ಕಿನ್ನರಿ ಬಾರಿಸುವ ಕಾಯಕವನ್ನು ಕೈಗೊಳ್ಳುವರು. ಬಸವಣ್ಣನವರ ಹಿರಿಮೆಯ ಬಗೆಗೆ ಸಾಕಷ್ಟು ಕೇಳಿ ಅವರನ್ನು ಕಾಣಲು ಕಲ್ಯಾಣಕ್ಕೆ ಬಂದು ತ್ರಿಪುರಾಂತಕೇಶ್ವರ…

0 Comments

ಅಣ್ಣನು ನಮ್ಮ ಬೊಮ್ಮಯ್ಯ | ಡಾ. ಶಿವಗಂಗಾ ರಂಜಣಗಿ, ಹುನಗುಂದ.(ಶರಣ ಕಿನ್ನರಿ ಬ್ರಹ್ಮಯ್ಯನವರ ಸ್ಮರಣೋತ್ಸವದ ತನ್ನಿಮಿತ್ಯ ಈ ಲೇಖನ)

12 ನೇ ಶತಮಾನ ಒಂದು ಅದ್ಭುತ ಕಾಲ ಘಟ್ಟ. ಶರಣರ ನಡೆ - ನುಡಿ - ವಚನ ಪ್ರತಿಯೊಂದು ಆದರ್ಶ. ದೊರೆತಿರುವ ಆಧಾರಗಳು ಕೆಲವಾದರೆ ಕಾಲ ಗರ್ಭದಲ್ಲಿ ಅಡಗಿರುವ ಸತ್ಯಾಂಶಗಳೆಷ್ಟೋ ಇವೆ. ಯಾವುದೇ ಶರಣರು ತಮ್ಮ ಜೀವನವನ್ನು ಕುರಿತು ಹೇಳಿಕೊಂಡಿಲ್ಲ ಚರಿತ್ರೆಗಿಂತ ಚಾರಿತ್ರ್ಯ ದೊಡ್ಡದು, ವ್ಯಕ್ತಿಗಿಂತ ಸಮಾಜದ ಹಿತ ದೊಡ್ಡದು. ಶರಣರು ಸರ್ವರ ಏಳಿಗಾಗಿ ಸರ್ವೋದಯದ ತತ್ವವನ್ನು ಅಳವಡಿಸಿಕೊಂಡವರು. ಬಸವಾದಿ ಶರಣರು “ಇರುವ ಕೆಲಸವ ಮಾಡು ಕಿರಿದೆನದೆ, ದೊರೆತುದುದು. ಪ್ರಸಾದವೆಂದುಣ್ಣು” ಎಂಬ ನುಡಿಯಂತೆ ಕೈಲಾಸಕ್ಕಿಂತ ಕಾಯಕವನ್ನು ದೊಡ್ಡದನ್ನಾಗಿ ಮಾಡಿಕೊಂಡಿದ್ದರು. ಅವರ ಕಾಯಕದಿಂದಲೇ ಶರಣರನ್ನು ಗುರುತಿಸುತ್ತೇವೆ. ಅನೇಕ ಶರಣರ…

0 Comments

ಶರಣ ಮಡಿವಾಳ ಮಾಚಿದೇವರ ವಚನಗಳಲ್ಲಿ ಲಿಂಗಾಚಾರ/ಡಾ. ಸರ್ವಮಂಗಳ ಸಕ್ರಿ.ರಾಯಚೂರು.

ವಚನ ಸಂಸ್ಕತಿಯನ್ನು ಗ್ರಹಿಸುವ ಹಿನ್ನೆಲೆಯಲ್ಲಿ ಧರ್ಮದ ಒಳ ಸೂಕ್ಷ್ಮಗಳು ಮತ್ತು ಭಕ್ತಿ ಸಿದ್ದಾಂತಗಳು ನಮಗೆ ಮುಖಾಮುಖಿಯಾಗುತ್ತವೆ. ನಿಜವಾದ ಅರ್ಥದಲ್ಲಿ ಧರ್ಮವೆಂಬುದು ಆದರ್ಶಗಳ ಮೊತ್ತ. ಮಾನವ ಜನಾಂಗದ ಆದರ್ಶಗಳು ಧರ್ಮ ತತ್ವಗಳ ನೆಲೆಯಲ್ಲಿ ಮಾತನಾಡುತ್ತವೆ. ಉದಾರತೆ, ಸಮತಾ ಭಾವ, ಮಾನವೀಯತೆ ಸಕಲರನ್ನು ಒಂದೇ ಎಂದು ಭಾವಿಸುವ ಗುಣ ಶರಣ ಧರ್ಮಕ್ಕೆ ಇರುವ ವಿಶೇಷತೆ. ಧರ್ಮ ಸಾಧನೆಯ ಪ್ರಮುಖ ಉದ್ದೇಶ ಹೊಂದಿದ ಶರಣರು ಲಿಂಗಾಚಾರಕ್ಕೆ ಲಿಂಗಾಂಗ ಸಾಮರಸ್ಯವೆಂದು ಕರೆದರು. ಇಷ್ಟಲಿಂಗವೇ ಆಂತರಿಕ ಪರಮ ಸಾಧನೆ ಎಂದರು. ಧಾರ್ಮಿಕ ಸಾಧನೆಯ ಅರಂಭದಿಂದ ಕೊನೆಯ ಹಂತದವರೆಗೂ ಇಷ್ಟಲಿಂಗ ಅವಿಬಾಜ್ಯ ಅಂಗವಾಯಿತು. ಹೀಗಾಗಿ ಇಷ್ಟಲಿಂಗ…

0 Comments

ಮಹಾ ಪ್ರಸಾದಿ ಶರಣ ಮರುಳಶಂಕರದೇವರು / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.

ಆಕಾರವೆಂಬೆನೆ ನಿರಾಕಾರವಾಗಿದೆನಿರಾಕಾರವೆಂಬೆನೆ ಅತ್ತತ್ತ ತೋರುತ್ತದೆ.ತನ್ನನಳಿದು ನಿಜವುಳಿದಮಹಾಲಿಂಗ ತ್ರಿಪುರಾಂತಕನ ನಿಲವ ಕಂಡು ಒಳಕೊಂಡಮರುಳಶಂಕರದೇವರ ಮೂರ್ತಿಯ ನಿಮ್ಮಿಂದ ಕಂಡುಬದುಕಿದೆನು ಕಾಣಾ ಸಂಗನಬಸವಣ್ಣಾ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-26/ವಚನ ಸಂಖ್ಯೆ-50) ಶರಣ ಕಿನ್ನರಿ ಬ್ರಹ್ಮಯ್ಯನವರ ಈ ವಚನ ಶರಣ ಮರುಳಶಂಕರದೇವರ ಘನವ್ಯಕ್ತಿತ್ವವನ್ನು ಪರಿಚಯಿಸುತ್ತದೆ. ಬಸವಣ್ಣನವರ ಸಾಮಾಜಿಕ ಕ್ರಾಂತಿಯ ಫಲಶೃತಿಯಿಂದ ಹಲವಾರು ಶರಣರು ವಿವಿಧ ಸ್ಥಳಗಳಿಂದ ಕಲ್ಯಾಣಕ್ಕೆ ಆಗಮಿಸಿದ್ದರು. ಹೀಗೆ ಆಗಮಿಸಿದ ಶರಣರಲ್ಲಿ ಅಫಘಾನಿಸ್ತಾನದಿಂದ ಬಂದ ಮರುಳಶಂಕರದೇವರು ಪ್ರಮುಖರು. ಕಲ್ಯಾಣದ ಮಹಾಮನೆಯಲ್ಲಿ ಅಜ್ಞಾತವಾಗಿ ಬದುಕಿದ್ದ ಶರಣ ಮರುಳಶಂಕರದೇವರನ್ನು ವ್ಯೋಮಮೂರ್ತಿ ಅಲ್ಲಮ ಪ್ರಭುಗಳು ಗುರುತಿಸುತ್ತಾರೆ. ಅಲ್ಲಮ ಪ್ರಭುಗಳ ಒಂದು ವಿಶೇಷತೆ ಅಂದರೆ ಅವರ ಲೋಕ…

0 Comments

ಆದ್ಯ ವಚನಕಾರ ಶರಣ ಜೇಡರ ದಾಸಿಮಯ್ಯನವರು / ಶ್ರೀಮತಿ. ಅನುಪಮ ಪಾಟೀಲ, ಹುಬ್ಬಳ್ಳಿ.

ಕನ್ನಡ ಸಾಹಿತ್ಯದ ಇತಿಹಾಸದಲ್ಲಿ 12 ನೇ ಶತಮಾನವು ಒಂದು ವಿಶಿಷ್ಟ ಕಾಲಘಟ್ಟ. ಆ ಕಾಲಘಟ್ಟದ ಸಾಹಿತ್ಯಿಕ, ಸಾಮಾಜಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳು ವಿಶಿಷ್ಟತೆಗೆ ಕಾರಣಗಳು. ಧರ್ಮ, ದರ್ಶನ ಮತ್ತು ಸಾಹಿತ್ಯದ ಹಿನ್ನೆಲೆಯಲ್ಲಿ ಬಸವಾದಿ ಶರಣರ ವಚನಗಳಿಗೆ ಮಹತ್ವದ ಸ್ಥಾನವಿದೆ. ಶಿವ ಶರಣರ ಜೀವನ ಬಹುಮುಖಿಯಾದುದು. ಅವರು ಒಂದೆಡೆ ಸಾಧಕರು ಇನ್ನೊಂದೆಡೆ ಸಮ-ಸಮಾಜದ ನಿರ್ಮಾಪಕರು. ಇಂತಹ ಅಗ್ರಗಣ್ಯ ಶಿವಶರಣರಲ್ಲಿ ಶರಣ ಜೇಡರ ದಾಸಿಮಯ್ಯನವರೂ ಒಬ್ಬರು. ಬಸವಣ್ಣನವರ ಹಿರಿಯ ಸಮಕಾಲೀನರು. ವಚನ ಸಾಹಿತ್ಯದಲ್ಲಿ ಕಂಡು ಬರುವಂತೆ ಬಸವಣ್ಣವರಿಗಿಂತ ಮುಂಚಿತವಾಗಿ ವಚನಗಳನ್ನು ರಚಿಸಿದ ಶರಣ ಜೇಡರ ದಾಸಿಮಯ್ಯನವರು ಒಬ್ಬ ಅದ್ಭುತ…

0 Comments

ಧೀರ ಶರಣ ಅಂಬಿಗರ ಚೌಡಯ್ಯನವರು | ಶ್ರೀಮತಿ. ಅಮರವಾಣಿ ಐದನಾಳ, ಲಿಂಗಸುಗೂರ.

ಅಂಬಿಗರ ಚೌಡಯ್ಯನವರು ಗುರು ಬಸವಣ್ಣನವರ ಸಮಕಾಲೀನರು. ಚೌಡಯ್ಯನವರ ಕಾಯಕ ದೋಣಿ ನಡೆಸುವುದು. ಬಸವಾದಿ ಶರಣರ ಲಿಂಗ ತತ್ವವನ್ನು ಶ್ರದ್ಧೆಯಿಂದ ಪಾಲಿಸಿ ಲಿಂಗಾಂಗ ಸಾಮರಸ್ಯ ಸಂಪಾದಿಸಿದ ಚೌಡಯ್ಯನವರು ಸಾಮಾಜಿಕ ಕಳಕಳಿ ಉಳ್ಳವರಾಗಿದ್ದರು. ಅಂಬಿಗರ ಚೌಡಯ್ಯನವರ ವಚನಗಳು ನಿರ್ಭೀತಿಯಿಂದ ಕಂಡದ್ದನ್ನು ಕಂಡಂತೆಯೇ, ಮುಚ್ಚುಮರೆ ಇಲ್ಲದೆ ಎಚ್ಚರಿಸುವಂಥವು. ಆಡಂಬರ, ಡಂಭಾಚಾರ, ಮೂಢನಂಬಿಕೆಗಳನ್ನು ಕಂಡರೆ ಕಟು ಮಾತುಗಳಲ್ಲಿ ನಿಂದಿಸಿ ‌ಸರಿ ದಾರಿಗೆ ತರುವ ಹಾಗೂ ದಾರಿ ತಪ್ಪಿದ ಯಾರನ್ನು ಬಿಡದೆ ತಪ್ಪು ದಾರಿಗಳೆವ ಗುರುಗಳನ್ನು ಟೀಕಿಸುತ್ತಿದ್ದರು. ಆದರೆ ಅವರ ಮಾತುಗಳಲ್ಲಿ ದ್ವೇಷ ಅಸೂಯೆಗಳಿರಲಿಲ್ಲ. ತಿದ್ದಿ ಸತ್ಯದ ಆಚರಣೆಗೆ ತರುತ್ತಿದ್ದರು. ತಮ್ಮ ಆಚಾರ ವಿಚಾರ…

0 Comments

ಭಾವೈಕ್ಯತೆಯ ಮತ್ತು ಜೀವಪ್ರೀತಿಯ ಸೆಲೆ ಸಿದ್ಧಗಂಗೆ | ಡಾ. ವಿಜಯಕುಮಾರ ಕಮ್ಮಾರ,ತುಮಕೂರು.

ಹರನ ಕರುಣೋದಯದ ತೆರದಲಿ ಬೆಳಗು ತೆರೆಯುವ ಹೊತ್ತಿಗೆವೇದಘೋಷದ ದಿವ್ಯಲಹರಿಯು ಮನವು ತೊಳೆಯಲು ಮೆಲ್ಲಗೆಬರುವ ಶ್ರೀಗುರು ಪಾದುಕೆಯ ದನಿ ಅನುರಣಿತವಾಗಲು ಮೌನಕೆಸಿದ್ಧಗಂಗೆಯ ನೆಲವು ಜಲವೂ ನಮಿಸಿ ನಿಲುವುದು ಸುಮ್ಮಗೆ || 01 || ಬೆಟ್ಟ ಬಂಡೆಯ ನಡುವೆ ಗಿಡ ಮರ ಹೂವನೆತ್ತಿರೆ ಪೂಜೆಗೆದೇಗುಲದ ಪೂಜಾರತಿಯ ಗಂಟೆಯ ಮೊಳಗು ಮುಟ್ಟಲು ಬಾನಿಗೆಧೂಪಗಂಧವು ಮಂದಮಂದಾನಿಲ ಜೊತೆಯೊಳು ಮನಸಿಗೆಸಂಭ್ರಮವನುಕ್ಕಿಸೆ ಬೆಳಗು ಇಳಿವುದು ಸಿದ್ಧಗಂಗೆಯ ಕ್ಷೇತ್ರಕೆ || 02 || ಇಲ್ಲಿ ಇಲ್ಲ ಪವಾಡದದ್ಭುತ ಅಥವ ಉತ್ಸವದಬ್ಬರಮುಡಿಯನೆತ್ತಿದೆ ಸರಳ ಸಾಧಾರಣ ನದುಕಿನ ಗೋಪುರದರ ಮೇಲಿದೆ ತ್ಯಾಗಧ್ವಜ ಕೈಬೀಸಿ ಕರೆವುದು ಪಥಿಕರಪರಮ ನಿರಪೇಕ್ಷೆಯಲ್ಲಿ ದಿನವೂ ಸೇವೆಗಾಗಿದೆ…

0 Comments

ಶ್ರೀಮನ್ಮಹಾದಾಸೋಹಿ ಪರಮ ಪೂಜ್ಯ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು | ಡಾ. ಡಿ. ಎನ್. ಯೋಗೀಶ್ವರಪ್ಪ | ತುಮಕೂರು.

ಜನಮಾನಸದಲ್ಲಿ ನಡೆದಾಡುವ ದೇವರೆಂದೇ ಭಾವಿಸಲ್ಪಟ್ಟ ಪದ್ಮಭೂಷಣ ಕರ್ನಾಟಕ ರತ್ನ ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾಗಿ ಇಂದಿಗೆ ಆರು ವರ್ಷಗಳು ಕಳೆದಿದೆ. ಕರ್ನಾಟಕ ಸರ್ಕಾರ ಸ್ವಾಮೀಜಿಯವರು ಸಮಾಜದ ಉನ್ನತಿಗಾಗಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗೌರವಿಸಿ ಜನವರಿ 21 ನ್ನು ದಾಸೋಹ ದಿನವೆಂದು ಘೋಷಿಸಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ದಾಸೋಹ ಎಂಬುದು ಹನ್ನೆರಡನೇ ಶತಮಾನದಲ್ಲಿ ಬಸವಾದಿ ಶರಣರಿಂದ ರೂಪುಗೊಂಡ ವಿಶಿಷ್ಟವಾದ ಪರಿಕಲ್ಪನೆ. ಇದು ದಾನಕ್ಕೆ ಪರ್ಯಾಯವಾಗಿ ಹುಟ್ಟಿಕೊಂಡ ವ್ಯವಸ್ಥೆಯಾಗಿದೆ. ಅಂದು ವ್ಯಕ್ತಿಯೊಬ್ಬ ತನ್ನ ಜೀವನದಲ್ಲಿ ತಾನು ಗಳಿಸಿದ್ದರಲ್ಲಿ ಒಂದು ಪಾಲನ್ನು ದೇವರಿಗಾಗಲೀ ಅಥವಾ ಪುರೋಹಿತ ವರ್ಗಕ್ಕಾಗಲೀ ದಾನ…

0 Comments

ಪರ್ಯಾಯ ವ್ಯವಸ್ಥೆಯ ಪ್ರತಿಸೂರ್ಯ/ಡಾ. ಸುಜಾತಾ ಅಕ್ಕಿ,ಮೈಸೂರು.

ಜಾನಪದ ಸಾಹಿತ್ಯವನ್ನು ಸೃಜನಶೀಲ ಮನಸ್ಸುಗಳು ಮೌಖಿಕ ಪರಂಪರೆಯನ್ನು ಸೃಷ್ಟಿಸಿ ಆ ಮೂಲಕ ಸಂಸ್ಕೃತಿ, ಪರಂಪರೆ, ಜಾನಪದ ಸಾಹಿತ್ಯವನ್ನು ಹುಲುಸಾಗಿ ಬೆಳೆಸಿವೆ. ಜನಪದ ಸಾಹಿತ್ಯ ಒಬ್ಬ ಸೃಜನಶೀಲರಲ್ಲಿ ಹುಟ್ಟಿ ಅದು ಗುಂಪಿನಲ್ಲಿ ಬೆಳೆದು ಸಾಮುದಾಯಿಕ ಮನ್ನಣೆಯನ್ನು ಪಡೆದಿದೆ. ಆಯಾಯ ಕಾಲಘಟ್ಟದಲ್ಲಿ ಸೃಷ್ಟಿಯಾಗಿ ಮೌಖಿಕವಾಗಿ ಪರಂಪರೆಯಲ್ಲಿ ಹರಿದು ಬಂದ ಜ್ಞಾನಧಾರೆ ಜಾನಪದ ಸಾಹಿತ್ಯ. ಆ ಕಾಲದಲ್ಲಿ ಏನೇ ಘಟನೆ ಸಂಭವಿಸಿದರೂ ಅದನ್ನು ಮೌಖಿಕ ದಾಖಲೆ ಮಾಡಿದವರು ನಮ್ಮ ಜನಪದರು. ಏಕೆಂದರೆ ಸೃಜನಶೀಲ ಮನಸ್ಸು ಯಾವಾಗಲೂ ಹುಡುಕಾಟದಲ್ಲಿರುತ್ತದೆ. ಆ ಶೋಧನಾ ಆಸಕ್ತಿ ಇಂಥ ಜನಪದ ಸಾಹಿತ್ಯದ ಬೆಳವಣಿಗೆಗೆ ಪೂರಕವಾಗಿದೆ. ಅಂದರೆ ಜನಪದರು…

0 Comments