ಸಾಂಸ್ಕೃತಿಕ ನಾಯಕ ಬಸವಣ್ಣ | ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.

ಬಸವಣ್ಣನೇ ತಾಯಿ, ಬಸವಣ್ಣನೇ ತಂದೆ,ಬಸವಣ್ಣನೇ ಪರಮಬಂಧುವೆನಗೆ.ವಸುಧೀಶ ಕಪಿಲಸಿದ್ಧಮಲ್ಲಿಕಾರ್ಜುನ,ನಿಮ್ಮ ಹೆಸರಿಟ್ಟ ಗುರು ಬಸವಣ್ಣನಯ್ಯಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-244/ವಚನ ಸಂಖ್ಯೆ-798) ಶಿವಯೋಗಿ ಸಿದ್ಧರಾಮರ ಈ ವಚನದೊಂದಿಗೆ ಬಸವಾದಿ ಶಿವಶರಣರನ್ನು ಸ್ಮರಿಸುತ್ತ ಸರ್ವ ಶರಣ ಸಂಕುಲಕ್ಕೆ ಬಸವ ಜಯಂತಿಯ ಶುಭಾಶಯಗಳು ಬಸವ, ಬಸವಣ್ಣ, ಬಸವೇಶ್ವರ ಎಂಬ ಹೆಸರೇ ಒಂದು ಬಗೆಯ ರೋಮಾಂಚನ. ಸಮ ಸಮಾಜದ ಕನಸುಗಾರ, ಪ್ರಗತಿಪರ ಚಿಂತಕ, ಶರಣ ಪರಂಪರೆಯ ಹರಿಕಾರ ವಚನ ಸಾಹಿತ್ಯದ ನೇತಾರ. ಕನ್ನಡ ಭಾಷೆಗೆ ಅಸಾಮಾನ್ಯ ಶಕ್ತಿ ತುಂಬಿದ ವಿದ್ವಾಂಸ. ಜನರ ಆಡು ಭಾಷೆಯಲ್ಲಿ ವಚನಗಳ ಮೂಲಕ ಜನಪದವೂ ಬಸವಣ್ಣನೆ. ಹೀಗೆ ಬಸವಣ್ಣನವರು ನಮ್ಮ…

0 Comments

ಓಂ ಶ್ರೀ ಗುರು ಬಸವಲಿಂಗಾಯ ನಮಃ | ನಾವು ಮತ್ತು ನಮ್ಮ ಪ್ರಾರ್ಥನೆ | ಶ್ರೀ. ವಿಜಯ ತೇಲಿ, ಬೆಳಗಾವಿ

ಇಂದು ದೇಶ ವಿದೇಶಗಳೆಲ್ಲಡೆಯೂ ಶರಣ ಧರ್ಮ, ಶರಣ ಸಂಸ್ಕೃತಿ, ಶರಣ ಸಾಹಿತ್ಯ ಸಂಶೋಧನೆ, ವಚನ ತಾಡೋಲೆಗಳ ಡಿಜಿಟಲೀಕರಣ ಹೀಗೆ ಶರಣ ಧರ್ಮದ ವಿವಿಧ ಆಯಾಮಗಳ ಕುರಿತಾದ ಚರ್ಚೆ, ವ್ಯಾಖ್ಯಾನ, ವಿಚಾರ ಸಂಕೀರಣ, ಗ್ರಂಥ ಪ್ರಕಟಣೆಗಳು, Online Seminar ಗಳು ಹಾಗೂ Google Meet ಗಳಂತಹ ಚಟುವಟಿಕೆಗಳು ನಿತ್ಯವೂ ನಡೆಯುತ್ತಿವೆ. ಶರಣರ ವಚನಗಳು ಈಗಾಗಲೇ 37 ಕ್ಕಿಂತಲೂ ಹೆಚ್ಚು ಭಾಷೆಗಳಿಗೆ ಅನುವಾದಗೊಂಡಿವೆ ಮತ್ತು ಇನ್ನೂ ನಡೆದಿವೆ. ಹೀಗೆ ಶರಣ ಧರ್ಮದ ಕುರಿತಾದ ಕಾರ್ಯಕ್ರಮ ಹಾಗೂ ವಿವಿಧ ಚಟುವಟಿಕೆಗಳ ವಾರ್ತೆಗಳು ಜಗತ್ತಿನಾದ್ಯಂತ ಪ್ರಸಾರವಾಗುತ್ತಿದೆ. ಶರಣ ಧರ್ಮದ ಉದ್ಧಾರಕ್ಕೆಂದೇ ಜಾಗತಿಕ ಮಟ್ಟದ…

0 Comments

ಅಕ್ಕನ ಆಧ್ಯಾತ್ಮಿಕ ಆದರ್ಶ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಭಾರತೀಯ ಭಕ್ತಿ ಸಾಹಿತ್ಯದ ಪರಂಪರೆಯಲ್ಲಿ ವಚನ ಸಾಹಿತ್ಯಕ್ಕೆ ತನ್ನದೇ ಆದ ಹೆಗ್ಗಳಿಕೆ ಇದೆ. ಚಂಪೂ ಸಾಹಿತ್ಯದ ನಂತರ ಸಾಮಾನ್ಯರಿಗೂ ಅರ್ಥವಾಗುವ ದೇಸೀ ಭಾಷೆಯಲ್ಲಿ ಸಮಾಜದ ಹತ್ತಿರಕ್ಕೆ ತಂದವರೆಂದರೆ ವಚನಕಾರರು. ಶರಣರ ನೇರ, ಸರಳ, ಭಕ್ತಿ ನಿಷ್ಠೆ ಈ ಎಲ್ಲಾ ಮೌಲ್ಯ ಆದರ್ಶಗಳು ವಚನ ಸಾಹಿತ್ಯದಲ್ಲಿ ಮಾತ್ರ ಕಾಣಲು ಸಾದ್ಯ. ಈ ಕಾಲ ಕ್ರಾಂತಿಯುಗವೂ ಹೌದು. ಭಕ್ತಿ ಚಳುವಳಿಯ ಕಾಲವೂ ಹೌದು. ಅಂದು ಭಾರತೀಯ ಚರಿತ್ರೆಯಲ್ಲಿ ನಿರಂತರವಾಗಿ ಮಹಿಳಾ ಶೋಷಣೆಗೆ ಒಳಗಾದ ಸಂದರ್ಭದಲ್ಲಿ ಅಕ್ಕ ಮಹಾದೇವಿ ಸ್ಥ್ರೀ ಶಕ್ತಿ ಪ್ರತೀಕವಾಗಿ ಪುರುಷ ಪ್ರಧಾನ ವ್ಯವಸ್ತೆಯನ್ನು ಕೆಡವಿ ಹೊಸ ಮುನ್ನುಡಿಗೆ…

0 Comments

ವಚನ ಸಾಹಿತ್ಯ-ಸಂಶೋಧನೆಯ ಸವಾಲುಗಳು | ಡಾ. ವೀರೇಶ ಬಡಿಗೇರ, ಕನ್ನಡ ವಿಶ್ವವಿದ್ಯಾಲಯ, ಹಂಪಿ.

“No Source, No Research” ಎನ್ನುವಂತೆ ಸಂಶೋಧನೆಗೆ ಆಕರಗಳೇ ಪ್ರಮುಖ ಎಂದು ನಂಬಲಾಗಿದೆ. ಇದರಲ್ಲಿ ಎರಡು ಪ್ರಕಾರಗಳನ್ನು ಗುರುತಿಸಬಹುದು. ಬೌದ್ಧಿಕ ಆಕರಗಳು. ವಚನಗಳ ಅಂತಃಸಂಭಾವ್ಯತೆಗಳು. ವಚನಕಾರರಿಗೆ ಸಂಬಂಧಿಸಿದಂತೆ ಶಾಸನಗಳು, ಐತಿಹ್ಯಗಳು, ಸ್ಥಳ ಪುರಾಣಗಳು, ಸಂಪ್ರದಾಯಗಳು, ಇತಿಹಾಸದ ಆಕರಗಳು, ಜನಪದ ಹಾಗೂ ಶಿಷ್ಟ ಪುರಾಣಗಳು ಒಂದು ರೀತಿಯ ಆಕರಗಳಾದರೆ, ವಚನಗಳೇ ಕಟ್ಟಿಕೊಡುವ ಆಂತರಿಕ ಸಾಕ್ಷ್ಯಗಳು ಇನ್ನೊಂದು ರೀತಿಯ ಆಕರಗಳು. ಇದನ್ನೇ ಅಂತರ್‌ಸಂಭಾವ್ಯತೆ, ಅಂತರ್‌ಪಠ್ಯೀಕರಣ ಎಂದು ಕರೆಯಲಾಗುತ್ತದೆ. ಒಂದು ವಚನವೇ ಪಠ್ಯವಾಗುವ, ಆ ಪಠ್ಯದಲ್ಲಿಯೇ ಹಲವು ಪಠ್ಯಗಳಿರುವ ಹಲವು ಆಲೋಚನೆಗಳಿರುವ ಸಂಗತಿಯನ್ನು ಗಮನಿಸಬಹುದು. ಸಮಸ್ಯೆ ಒಂದು ಸಾಮಾನ್ಯವಾಗಿ ವಚನ ಸಂಸ್ಕೃತಿಯನ್ನು…

0 Comments

ಶ್ರೀ. ಮಲ್ಲಿಕಾರ್ಜುನ ಪಂಡಿತಾರಾಧ್ಯ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಬಸವಣ್ಣ ಎಂಬ ಹೆಸರೇ ಮಂತ್ರಮುಗ್ಧವಾದದ್ದು. ಬಸವಣ್ಣನವರು 12 ನೇ ಶತಮಾನದ ಉತ್ಸಾಹದ ಚಿಲುಮೆ ಎಂತೊ 21 ನೇ ಶತಮಾನದಲ್ಲಿ ಅವರ ಹೆಸರೇ ಚೇತೋಹಾರಿಯಾದದ್ದು. ಯುಗದ ಉತ್ಸಾಹ, ಯುಗ ಪುರುಷ, ವಿಭೂತಿ ಪುರುಷ, ವಿಶ್ವಗುರು, ಜಗಜ್ಯೋತಿ ಎಂಬ ಮಾತುಗಳು ಬಸವಣ್ಣನವರಿಗೆ ಅಲಂಕಾರಿಕವಾಗಿ ತೊಡಿಸುವ ಪದಗಳಲ್ಲ. ಅವುಗಳು ಅತಿಶಯೋಕ್ತಿ ಪದಗಳೂ ಅಲ್ಲ. 12 ನೇ ಶತಮಾನದಲ್ಲಿ ಅವರ ಪ್ರಭಾವಕ್ಕೊಳಗಾಗಿ ಶಿವ-ಶರಣರು ತಮ್ಮ ವಚನಗಳಲ್ಲಿ ಬಸವಣ್ಣನವರನ್ನು ಸ್ಮರಿಸಿಕೊಂಡದ್ದನ್ನು ನಾವು ನೋಡಿದರೆ ಒಂದು ಕಾಲಘಟ್ಟದಲ್ಲಿ ಒಬ್ಬ ವ್ಯಕ್ತಿ ಎಷ್ಟು ಪ್ರಭಾವಶಾಲಿಯಾಗಿದ್ದರು ಎಂಬುದು ತಿಳಿಯುತ್ತದೆ. ಸುಖವೊಂದು ಕೊಟ್ಯಾನುಕೋಟಿ ಬಂದಲ್ಲಿ ಬಸವಣ್ಣನ ನೆನೆವೆ.ದುಃಖವೊಂದು ಕೊಟ್ಯಾನುಕೋಟಿ ಬಂದಲ್ಲಿ…

1 Comment

ವೈರಾಗ್ಯನಿಧಿ ಅಕ್ಕ ಮಹಾದೇವಿಯವರ ವಚನಗಳಲ್ಲಿ “ಮಾಯೆ” | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಹೆಣ್ಣು ಸಂಸಾರದ ಕಣ್ಣು ಎನ್ನುವಂತೆ, ಆಕೆ ತಾಳ್ಮೆಯ ಪ್ರತಿರೂಪ. ಹಾಗೆಯೇ ಶಕ್ತಿಯ ಸಂಕೇತದ ಉಗ್ರರೂಪಕ್ಕೂ ಸಾಕ್ಷಿಯಾಗಿದ್ದಾಳೆ. ಕ್ಷಮಯಾ ಧರಿತ್ರಿಯಾದರೂ ಚಂಚಲತೆಯ ಸ್ವಭಾವವುಳ್ಳವಳೂ ಸಹ. 12 ನೇ ಶತಮಾನದ ಸಮಾಜದಲ್ಲಿ ಬಸವಣ್ಣನವರಿಂದ ಶ್ರೇಣೀಕೃತ ಸಮಾಜದಲ್ಲಿನ ದೀನ ದಲಿತರನ್ನು ಮೇಲೆತ್ತುವುದರ ಜೊತೆ ಜೊತೆಗೆ ಕಡೆಗಣಿಸಲ್ಪಟ್ಟ ಮಹಿಳೆಯರನ್ನು ಬೆಳಕಿಗೆ ತರುವಂಥಾ ಕೆಲಸ ಆಯಿತು. ಬಸವಣ್ಣನವರ ಈ ಕ್ರಾಂತಿಯಲ್ಲಿ ಕರ್ನಾಟಕವು ಅಭೂತಪೂರ್ವ ಅನುಪಮ ಮಹಿಳಾ ವಚನಕಾರ್ತಿಯರನ್ನು ಕಂಡಿತು. ಪುರುಷರಿಗೆ ಸರಿ ಸಮಾನರಾಗಿ ಸಾಮಜೋ-ಧಾರ್ಮಿಕ ಮತ್ತು ಸಾಹಿತ್ಯ ಕೇತ್ರಗಳಲ್ಲಿ ಪಾಲ್ಗೊಂಡರು. ಆಧ್ಯಾತ್ಮಿಕ ಅನುಭಾವದ ಅಭಿವ್ಯಕ್ತಿಯಲ್ಲಿ ಶರಣೆಯರು ಯಾರಿಗೂ ಕಡಿಮೆಯಿಲ್ಲದಂತೆ ಕೆಲಸ ಮಾಡಿದರು. ಮಹಿಳೆಯರಿಗೆ ಗೌರವ…

0 Comments

ವಿಶ್ವದ ಬೆರಗು ಅಲ್ಲಮ / ಶ್ರೀಮತಿ. ಸುನಿತಾ ಮೂರಶಿಳ್ಳಿ, ಧಾರವಾಡ.

ಹನ್ನೆರಡನೇ ಶತಮಾನದ ಶರಣ ಕ್ರಾಂತಿಗೆ ಅಧಿಕೃತ ಸ್ವರೂಪದ ಮುದ್ರೆಯನೊತ್ತಿದವರು ಅಲ್ಲಮರು.  ಆ ಕ್ರಾಂತಿಯ ರೂವಾರಿ ಬಸವಣ್ಣನವರಾದರೆ ಅದರ ಜೀವಾಳ ಅಲ್ಲಮರು.  ವಿಶ್ವದ ಬೆಳಕು ಬಸವಣ್ಣನವರಾದರೆ ವಿಶ್ವದ ಬೆರಗು ಅಲ್ಲಮ.  ಜ್ಞಾನದ ಮೇರು ಶಿಖರ ವ್ಯೋಮಕಾಯ ಅಲ್ಲಮರ ಮಹತಿ ನಿಸ್ಸೀಮವಾದರೂ ಅರಿಕೆಗೆ ಸಿಕ್ಕಿದ್ದು ತೃಣ ಮಾತ್ರ.  ಇವರ ವ್ಯಕ್ತಿಗತ ಬದುಕು ಕಾವ್ಯ ಪುರಾಣಗಳಲ್ಲಿ ಒಂದೊಂದು ರೀತಿಯಾಗಿ ಚಿತ್ರಿತವಾಗಿದೆ.    ಅವರು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಚಿಕ್ಕ ಗ್ರಾಮ ಬಳ್ಳಿಗಾವಿ.  ಅವರು ಬಾಲ್ಯದಿಂದಲೇ ಮದ್ದಳೆ ಪ್ರವೀಣರಾಗಿದ್ದರು ಎಂಬುದು ವಿದಿತ. ಆದರೆ ಅವರು ಕಾಮಲತೆಯೆಂಬ ರಾಜಕುವರಿಯನ್ನು ಪ್ರೀತಿಸಿ ಮದುವೆ ಆಗಿದ್ದರು.…

0 Comments

ಶರಣರ ಸಮನ್ವಯ ಸಂಸ್ಕೃತಿ / ಡಾ. ಬಸವರಾಜ ಕಡ್ಡಿ, ಜಮಖಂಡಿ.

ಸಮನ್ವಯತೆ ಎಂದರೆ ಒಂದಾಗಿಸಿಕೊಳ್ಳುವಿಕೆ. ಬದುಕು-ಬರಹ ಒಂದೆಯಾಗಿದ್ದರೆ ಬರಹಕ್ಕೆ ಬೆಲೆ ಬರುತ್ತದೆ. ಬದುಕಿದಂತೆ ಬರೆದ ಬರಹ ಬಹುಕಾಲ ಬದುಕುತ್ತದೆ. ಅದಕ್ಕಾಗಿ ಶರಣರು ತಾವು ಬದುಕಿದಂತೆ ಬರೆದ ವಚನಗಳು ಇನ್ನೂ ನಮ್ಮ ಮಧ್ಯೆದಲ್ಲಿವೆ. ಯಾವಾಗಲೂ ಇರುತ್ತವೆ. ವೈಜ್ಞಾನಿಕ, ವೈಚಾರಿಕ ಆಧಾರವಿಲ್ಲದ ಪವಾಡ, ಪುರಾಣಗಳಂತಹ ಸಾಹಿತ್ಯ ಪರೀಕ್ಷೆಗೊಳಪಡುತ್ತ ಹಂತ ಹಂತವಾಗಿ ಅಳಿಯುತ್ತದೆ. ಶರಣರದು ಜ್ಞಾನ-ಕ್ರಿಯೆ, ನಡೆ-ನುಡಿ, ಲೌಕಿಕ-ಪಾರಮಾರ್ಥ, ಅಂತರಂಗಕೃಷಿ-ಬಹಿರಂಗಕೃಷಿ, ಆತ್ಮಕಲ್ಯಾಣ-ಸಮಾಜಕಲ್ಯಾಣಗಳನ್ನು ಒಂದಾಗಿಸಿಕೊಂಡ ಸಮನ್ವಯಸಂಸ್ಕೃತಿಯಾಗಿದೆ. ಜ್ಞಾನ-ಕ್ರಿಯೆಗಳ ಸಮನ್ವಯತೆ: ಶರಣರು ಕೇವಲ ಅರಿವು (ಜ್ಞಾನ) ಬೆಳೆಸಿಕೊಂಡವರಲ್ಲ. ಅರಿವು, ಆಚಾರ ಎರಡನ್ನೂ ಸಮೀಕರಿಸಿಕೊಂಡವರು. ಆಚಾರದ ಮೂಲಕ ಅರಿವಿಗೆ ಮನ್ನಣೆ ನೀಡಿದವರು. ಜ್ಞಾನವೆಂದರೆ ತಿಳಿಯುವುದು. ಕ್ರಿಯೆಯೆಂದರೆ ತಿಳಿದಂತೆ…

0 Comments

ಸನ್ನಡತೆಯ ಭೃತ್ಯಾಚಾರ ಗುಹೇಶ್ವರನಿಗೆ ಅರ್ಪಿತ / ಡಾ.ಸರ್ವಮಂಗಳ ಸಕ್ರಿ, ರಾಯಚೂರು.

ಅಲ್ಲಮ‌ಪ್ರಭುಗಳು ವಚನ ಸಾಹಿತ್ಯದ ಸಾರ್ವಕಾಲಿಕ ಎಚ್ಚರದ ಪ್ರತೀಕ. ಅಲ್ಲಮರಿಗೆ ಇರಬಹುದಾದ ಮೂಲ ಮಾತೃಕೆ ಯಾವುದೆಂದರೆ ತಾತ್ವಿಕ ಚರ್ಚೆಗೆ ಆಸ್ಪದ ನೀಡುವಂತಾದ್ದು. ಕನ್ನಡದ ಆದ್ಯಾತ್ಮಿಕತೆಯನ್ನು ರೂಪಿಸುವಲ್ಲಿ ವಚನ ಸಾಹಿತ್ಯ ಪರಂಪರೆಯ ಕೊಡುಗೆ ನಿಸ್ಸಂಶಯವಾಗಿ ಘನವಾದದ್ದು. ಕನ್ನಡ ಮನಸ್ಸನ್ನು ಎಚ್ಚರಿಸುವ ಎತ್ತರವನ್ನು ವಚನಗಳು ಸೂಚಿಸುತ್ತವೆ. ಅಲ್ಲಮಪ್ರಭುವಿನ ದರ್ಶನವು ಕನ್ನಡವನ್ನು ವಿಶ್ವದ ಯಾವುದೇ ಭಾಷೆಯ ಜೊತೆಗಿಡಲು ಸಾದ್ಯವಾಗುವಂತೆ ಮಾಡಿವೆ. ವಚನಗಳಾಗಲಿ, ಜನಪದ ಕಾವ್ಯಗಳಾಗಲಿ, ತತ್ವಪದಗಳಾಗಲಿ ಕಾವ್ಯವೆಂದು ಪರಿಗಣಿತವಾಗಲಿಲ್ಲ. ಕನ್ನಡ ಮೀಮಾಂಸೆಯು ಇದಕ್ಕೆ ಹೊರತಲ್ಲ. ಶರಣರ ಕಾಲ ಸಂಕೀರ್ಣವಾದ ರಾಜಕೀಯ, ಸಾಮಾಜಿಕ ಮತ್ತು ಸಂಘರ್ಷಗಳ ಸಮಯ. ಬೌದ್ಧ, ನಾಥ, ಜೈನ ತಾತ್ವಿಕತೆಗಳ ಎದುರು…

1 Comment

ಶರಣರ ದೃಷ್ಟಿಯಲ್ಲಿ ನೇಮ-ಶೀಲ | .ಬಸವರಾಜ ಕಡ್ಡಿ, ಜಮಖಂಡಿ.

ನೇಮವೆಂದರೆ ಕಟ್ಟಾಚರಣೆ. ಕೆಲವರು ದೇವರಿಗೆ ವಿಶೇಷ ಪದಾರ್ಥಗಳನ್ನು ಅರ್ಪಿಸುವ ನೇಮ ಹಿಡಿದರೆ ಮತ್ತೆ ಕೆಲವರು ದೇವರ ಹೆಸರಿನಲ್ಲಿ ಕೆಲವು ಪದಾರ್ಥಗಳ ಬಿಡುವ ನೇಮ ಹಿಡಿದಿರುತ್ತಾರೆ. ಶೀಲವೆಂದರೆ ಮಡಿವಂತಿಕೆ. ಶರಣರು ಅರ್ಥವಿಲ್ಲದ ನೇಮ-ಶೀಲಗಳನ್ನು ನಿರಾಕರಿಸಿ ನಿಜವಾದ ನೇಮ-ಶೀಲಗಳನ್ನು ವಚನಗಳ ಮೂಲಕ ತಿಳಿಸಿದ್ದಾರೆ. ಅನೇಕರು ಅರ್ಥವಿಲ್ಲದ ವ್ರತ, ನೇಮ, ಶೀಲಗಳಲ್ಲಿ ಸಿಲುಕಿ ಅವುಗಳ ಆಚರಣೆಯಲ್ಲಿ ವ್ಯರ್ಥ ಪ್ರಯಾಸ ಪಡುತ್ತಿದ್ದಾರೆ. ಅಂಥವರ ಕುರಿತು ಸತ್ಯಕ್ಕನವರ ವಚನ: ಅರ್ಚನೆ ಪೂಜನೆ ನೇಮವಲ್ಲ;ಮಂತ್ರ ತಂತ್ರ ನೇಮವಲ್ಲ;ಧೂಪ ದೀಪಾರತಿ ನೇಮವಲ್ಲ;ಪರಧನ ಪರಸ್ತ್ರೀ ಪರದೈವಗಳಿಗೆರಗದಿಪ್ಪುದೆ ನೇಮ.ಶಂಭುಜಕ್ಕೇಶ್ವರನಲ್ಲಿ ಇವು ಕಾಣಿರಣ್ಣಾ ನಿತ್ಯನೇಮ.(ಸಮಗ್ರ ವಚನ ಸಂಪುಟ: ಐದು-2021/ಪುಟ ಸಂಖ್ಯೆ-438/ವಚನ ಸಂಖ್ಯೆ-1205)…

0 Comments