ಕಲ್ಯಾಣವೆಂಬ ಪ್ರಣತಿ; ಬಿಂಬ-ಪ್ರತಿಬಿಂಬ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.
ಕಲ್ಯಾಣವೆಂಬ ಪ್ರಣತೆಯಲ್ಲಿ ಭಕ್ತಿರಸವೆಂಬ ತೈಲವನೆರೆದು,ಆಚಾರವೆಂಬ ಬತ್ತಿಯಲ್ಲಿ ಬಸವಣ್ಣನೆಂಬ ಜ್ಯೋತಿಯ ಮುಟ್ಟಿಸಲು,ತೊಳಗಿ ಬೆಳಗುತ್ತಿದ್ದಿತ್ತಯ್ಯಾ ಶಿವನ ಪ್ರಕಾಶ!ಆ ಬೆಳಗಿನೊಳಗೆ ಒಪ್ಪುತ್ತಿದ್ದರಯ್ಯಾ ಅಸಂಖ್ಯಾತ ಭಕ್ತಗಣಂಗಳು.ಶಿವಭಕ್ತರಿರ್ದ ಕ್ಷೇತ್ರವೆ ಅವಿಮುಕ್ತಕ್ಷೇತ್ರವೆಂಬುದು ಹುಸಿಯೆ?ಶಿವಭಕ್ತರಿರ್ದ ದೇಶ ಪಾವನವೆಂಬುದು ಹುಸಿಯೆ?ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಕಂಡುಬದುಕಿದೆನು ಕಾಣಾ ಸಿದ್ಧರಾಮಯ್ಯಾ.… … ವ್ಯೋಮಕಾಯ ಅಲ್ಲಮ ಪ್ರಭುಗಳು. ಕಲ್ಯಾಣವನ್ನು ಅವಿಮುಕ್ತ ಕ್ಷೇತ್ರವನ್ನಾಗಿಸಿದ ಬಸವಣ್ಣನವರನ್ನು ಜ್ಞಾನ ವೈರಾಗ್ಯನಿಧಿ ಅಲ್ಲಮ ಪ್ರಭುಗಳು ಗುಹೇಶ್ವರ ಲಿಂಗದಲ್ಲಿ ದರ್ಶಿಸುತ್ತಾರೆ. ಶಿವಯೋಗಿ ಸಿದ್ಧರಾಮೇಶ್ವರರನ್ನು ಉದ್ದೇಶಿಸಿ ಹೇಳಿದ ಮಾತು "ಗುಹೇಶ್ವರಲಿಂಗದಲ್ಲಿ ಎನ್ನ ಪರಮಾರಾಧ್ಯ ಸಂಗನಬಸವಣ್ಣನ ಕಂಡು ಬದುಕಿದೆನು ಕಾಣಾ ಸಿದ್ಧರಾಮಯ್ಯಾ” ಎನ್ನುವುದು ಇಡೀ ವಚನ ಚಳುವಳಿಯ ನೇತಾರರಾದ ಬಸವಣ್ಣನವರನ್ನು ಕೇಂದ್ರೀಕರಿಸಿಕೊಳ್ಳುತ್ತಾ…





Total views : 59314