ಶ್ರಾವಣ ಮಾಸದ ಚಿಂತನೆ-01 / ಅವಿರಳಜ್ಞಾನಿ ಚನ್ನಬಸವಣ್ಣನವರ ಜೀವನ ಮತ್ತು ಸಂದೇಶ / ಪ್ರಕಾಶ ಗಿರಿಮಲ್ಲನವರ, ಬೆಳಗಾವಿ.
(ಶ್ರಾವಣಮಾಸದ ನಿಮಿತ್ತ ನಾಡಿನಾದ್ಯಂತ ಪುರಾಣ ಪ್ರವಚನ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತವೆ. ಈ ಹಿನ್ನೆಲೆಯಲ್ಲಿ ಚನ್ನಬಸವಣ್ಣನವರ ಜೀವನ ಮತ್ತು ಸಂದೇಶ ಕುರಿತು ಶ್ರಾವಣ ಮಾಸದ ಪರ್ಯಂತ ಕೆಲವು ಚಿಂತನೆಗಳನ್ನು ಪ್ರಕಟಿಸಬೇಕೆಂಬ ಆಶಯ ನನ್ನದು. ಓದಿ ಅಭಿಪ್ರಾಯ, ಸಲಹೆ, ಸೂಚನೆ, ಮಾರ್ಗದರ್ಶನ ಮಾಡಬೇಕೆಂದು ವಿನಂತಿಸುವೆ) ಮರ್ತ್ಯಲೋಕದ ಭಕ್ತರ ಮನವಬೆಳಗಲೆಂದು ಇಳಿತಂದನಯ್ಯಾ ಶಿವನು.ಕತ್ತಲೆಯ ಪಾಳೆಯವ ರವಿ ಹೊಕ್ಕಂತಾಯಿತ್ತಯ್ಯಾ.ಚಿತ್ತದ ಪ್ರಕೃತಿಯ ಹಿಂಗಿಸಿ,ಮುಕ್ತಿಪಥವ ತೋರಿದನೆಲ್ಲ ಅಸಂಖ್ಯಾತ ಗಣಂಗಳಿಗೆ,ತನುವೆಲ್ಲ ಸ್ವಯಲಿಂಗ, ಮನವೆಲ್ಲ ಚರಲಿಂಗ.ಭಾವವೆಲ್ಲ ಮಹಾಘನದ ಬೆಳಗು.ಚೆನ್ನಮಲ್ಲಿಕಾರ್ಜುನಯ್ಯಾ,ನಿಮ್ಮ ಶರಣ ಸಮ್ಯಕ್ ಜ್ಞಾನಿ ಚೆನ್ನಬಸವಣ್ಣನಶ್ರೀಪಾದಕ್ಕೆ ಶರಣೆಂದುಎನ್ನ ಭವಂ ನಾಸ್ತಿಯಾಯಿತ್ತಯ್ಯಾ ಪ್ರಭುವೆ.(ಸಮಗ್ರ ವಚನ ಸಂಪುಟ: 5-2021 / ಪುಟ…