ಜೀವನ ಮೌಲ್ಯಗಳು – ಶರಣರ ಕೊಡುಗೆ / ಶ್ರೀಮತಿ. ಅನುಪಮಾ ಪಾಟೀಲ, ಹುಬ್ಬಳ್ಳಿ.
ಶರಣರು ಅವರ ಹಿರಿಮ ಗರಿಮೆಗಳನ್ನು ಅವರ ಹಾಗೆಯೇ ಇರುವವರೇ ಬಲ್ಲರು. ಅವರು ನಿಜವನರಿದದ ನಿಶ್ಚಿಂತರು. ಮರಣವನ್ನೇ ಗೆಲಿದ ಮಹಂತರು. ಘನವ ಕಂಡ ಮಹಿಮರು. ಬಯಲು ಬಿತ್ತಿ ಬಯಲು ಬೆಳೆದು ಬಯಲನುಂಡು ಬಯಲಾದ ಬಯಲಯೋಗಿಗಳು. ಶರಣರ ಮಾತುಗಳೂ ಹಾಗೆಯ, ಮಧುರ, ಜೇನು ಬೆರೆಸಿದ ಹಾಲಿನಂತೆ ಸವಿ, ಕೆಲವೊಮ್ಮೆ ಕಠಿಣ, ಕೆಲವೂಮ್ಮೆ ಕಹಿ. ಅದರಕ್ಕೆ ಕಹಿಯಾದರು ಉದರಕ್ಕೆ ಸಿಹಿ. ಅವು ಮನದ ಕತ್ತಲೆಉನ್ನು ಕಳೆಯುವ ಜ್ಯೋತಿಗಳು. ಅವುಗಳಲ್ಲಿ ಹದವಾದ ಹಾಗೂ ಹಸನಾದ ಬದುಕಿಗೆ ಬೇಕಾಗುವ ಅವಶ್ಯಕವಾದವುಗಳೆಲ್ಲ ಇವೆ. ಹೊರಗೆ ಕಾವ್ಯದ ಸೊಬಗು, ಒಳಗೆ ಅನುಭವದ ಜೇನು - ಅನುಭಾವದ ಅಮೃತ.…





Total views : 51417