ಜೇಡರ ದಾಸಿಮಯ್ಯ ಶರಣರ ವಚನ ನಿರ್ವಚನ | ಶ್ರೀಮತಿ. ವಿಜಯಲಕ್ಷ್ಮಿ ಎಂ. ಪಾಟೀಲ, ಕಲಬುರಗಿ.

ವಚನ:ತಾಯ ಗರ್ಭದ ಶಿಶು ತಾಯ ಕುರುಹನರಿಯದು.ಆ ತಾಯಿ ಶಿಶುವಿನ ಕುರುಹನೆಂದೂ ಅರಿಯಳು.ಮಾಯಾಮೋಹದಲ್ಲಿಪ್ಪ ಭಕ್ತರು ದೇವರನರಿಯರು.ಆ ದೇವರು ಆ ಭಕ್ತರನೆಂದೂ ಅರಿಯನು ಕಾಣಾ!ರಾಮನಾಥ.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-282/ವಚನ ಸಂಖ್ಯೆ-801) ಆದ್ಯ ವಚನಕಾರರೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ವಚನಕಾರರು ಜೇಡರ ದಾಸಿಮಯ್ಯ ಶರಣರು. ಬಸವಣ್ಣನವರ ಹಿರಿಯ ಸಮಕಾಲೀನರಾದ ಈ ಶರಣರು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮುದನೂರು (ಬಿ) ಗ್ರಾಮದಲ್ಲಿ ಜನಿಸಿದವರು. ತಂದೆ ಕಾಮಯ್ಯ ಹಾಗೂ ತಾಯಿ ಶಂಕರಿ ಮತ್ತು ಮಡದಿ ವಚನಕಾರ್ತಿ ಶರಣೆ ದುಗ್ಗಳೆ. ಕುಲ ಕಾಯಕ ನೇಕಾರಿಕೆಯೇ ಈ ಶರಣರ ಕಾಯಕವಾಗಿತ್ತು. “ರಾಮನಾಥ” ಎನ್ನುವ ಅಂಕಿತನಾಮದಲ್ಲಿ ಇವರ…

0 Comments

ಶರಣ ಘಟ್ಟಿವಾಳಯ್ಯನವರ ವಚನ ನಿರ್ವಚನ | ಶ್ರೀಮತಿ. ಶಶಿಕಲಾ. ಬಿ. ಕೆ. ಬೆಂಗಳೂರು.

ನೀರೊಳಗೆ ಕಿಚ್ಚಿರ್ದು ನೆಳಲ ಸುಟ್ಟಿತ್ತು!ನೆಳಲ ಸುಟ್ಟ ಬೂದಿಯನಿಟ್ಟು ಕೊಂಡಡೆ ಭೂಮಿ ಸತ್ತಿತ್ತು!ಆಕಾಶ ಹೊತ್ತಿತ್ತು! ದೇವನ ದೇವತ್ವ ಕೆಟ್ಟಿತ್ತು!ದೇವಿಯ ಒಕತನ ಮುರಿಯಿತ್ತು!ಕೇಳಬಾರದ ಠಾವಿನಲ್ಲಿ ಕಾಣಬಾರದ ಲಿಂಗ ಮೂರ್ತಿಗೊಂಡಿರೆನೋಡಬಾರದ ಪೂಜೆಯಾಯಿತ್ತು!ಚಿಕ್ಕಯ್ಯಪ್ರಿಯ ಸಿದ್ಧಲಿಂಗಾಪ್ರಭುದೇವ[ರ] ನಿಲವ ಕಂಡು ಇಲ್ಲ ಇಲ್ಲವೆನುತಿರ್ದೆನು.(ಸಮಗ್ರ ವಚನ ಸಂಪುಟ: ಏಳು-2021/ಪುಟ ಸಂಖ್ಯೆ-188/ವಚನ ಸಂಖ್ಯೆ-490) ಘಟ್ಟಿವಾಳಯ್ಯ ಶರಣರು ಅನುಭವ ಮಂಟಪದ ಅನುಭಾವಿಗಳು. ಧೀರೋದಾತ್ತ ನಡೆ ನುಡಿಯ ಗಟ್ಟಿಗ ಶರಣರಿವರು. ಶಿವಮೊಗ್ಗ ಜಿಲ್ಲೆಯ ಬಳ್ಳಿಗಾವೆಯವರೆಂಬುದು ಸಂಶೋಧಕರ ಅಭಿಪ್ರಾಯ. ಅಲ್ಲಿರುವ ಮಧುಕೇಶ್ವರ ದೇವಾಲಯದಲ್ಲಿ ಮದ್ದಳೆ  ಬಾರಿಸುವ ಕಾಯಕ ಕೈಗೊಂಡವರು. ಸಂಸಾರಿಗಳಾಗಿದ್ದ ಈ ಶರಣರು ಸಂತೋಷದಿಂದಲೆ ಸಂಸಾರ ಮಾಡಿದವರಾಗಿದ್ದವರು. ಆದರೆ ಮುಂದೆ ಮಡದಿ ಮಾಡಿದ…

0 Comments

ಗೋಲ್ಲಾಳೇಶ್ವರ ಶರಣರ ವಚನ ನಿರ್ವಚನ | ಶ್ರೀಮತಿ ರೇಣುಕಾ ಮೈಸಲಿಗೆ, ಕಲಬುರಗಿ.

ಕಲ್ಲು ಲಿಂಗವಲ್ಲ, ಉಳಿಯ ಮೊನೆಯಲ್ಲಿ ಒಡೆಯಿತ್ತು.ಮರ ದೇವರಲ್ಲ, ಉರಿಯಲ್ಲಿ ಬೆಂದಿತ್ತು.ಮಣ್ಣು ದೇವರಲ್ಲ, ನೀರಿನ ಕೊನೆಯಲ್ಲಿ ಕದಡಿತ್ತು.ಇಂತಿವನೆಲ್ಲವನರಿವ ಚಿತ್ತ ದೇವರಲ್ಲ.ಕರಣಂಗಳ ಮೊತ್ತದೊಳಗಾಗಿ ಸತ್ವಗೆಟ್ಟಿತ್ತು.ಇಂತಿವ ಕಳೆದುಳಿದ ವಸ್ತುವಿಪ್ಪೆಡೆ ಯಾವುದೆಂದಡೆ:ಕಂಡವರೊಳಗೆ ಕೈಕೊಂಡಾಡದೆ,ಕೊಂಡ ವ್ರತದಲ್ಲಿ ಮತ್ತೊಂದನೊಡಗೂಡಿ ಬೆರೆಯದೆ,ವಿಶ್ವಾಸ ಗ್ರಹಿಸಿ ನಿಂದಲ್ಲಿ ಆ ನಿಜಲಿಂಗವಲ್ಲದೆ,ಮತ್ತೊಂದು ಪೆರತನರಿಯದೆ ನಿಂದಾತನೆ ಸರ್ವಾಂಗಲಿಂಗಿ,ವೀರಬೀರೇಶ್ವರಲಿಂಗದೊಳಗಾದ ಶರಣ.(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-35/ವಚನ ಸಂಖ್ಯೆ-88) ಅನುಭವ ಮಂಟಪದ ಮೇರು ಅನುಭಾವಿ ಶರಣರು ಗೋಲ್ಲಾಳೇಶ್ವರರು. ಇವರ ಜನ್ಮ ಸ್ಥಳ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗೋಲಗೇರಿ ಎಂಬ ಗ್ರಾಮ. ತಂದೆ ಬಲ್ಲುಗ ತಾಯಿ ದುಗ್ಗಳೆ. ಇವರ ಕಾಯಕ ಕುರಿ ಕಾಯುವದು. "ವೀರ ಬೀರೇಶ್ವರ"…

0 Comments

ಮಹಾ ಪ್ರಸಾದಿ ಬಿಬ್ಬಿ ಬಾಚಯ್ಯ ಶರಣರ ವಚನ ನಿರ್ವಚನ | ಶ್ರೀಮತಿ ಮೈತ್ರಾ ಎಂ. ಕುಣಚಿ, ಕಲಬುರಗಿ.

ಆಕಾಶದುರಿ, ನೆಲದ ಮಡಕೆಯಲ್ಲಿಬಯಲ ನೀರ ತುಂಬಿ, ಇಲ್ಲದ ಅಕ್ಕಿಯ ಹಾಕಿಮೂರು ನೆಲೆಯಲ್ಲಿ ಕುದಿವುತ್ತಿದ್ದಿತ್ತು.ಪಾವಕನರಿದು ನೀರ ಹೊಯಿದು, ಗಂಜಿ ಅಲ್ಲಿ ಇಂಗಿತ್ತು,ಏಣಾಂಕಧರ ಸೋಮೇಶ್ವರಲಿಂಗಕ್ಕೆ ಓಗರವಾಗಬೇಕೆಂದು.(ಸಮಗ್ರ ವಚನ ಸಂಪುಟ: ಎಂಟು-2021/ಪುಟ ಸಂಖ್ಯೆ-135/ವಚನ ಸಂಖ್ಯೆ-323) ಅನುಭವಮಂಟಪದ ಅನುಭಾವಿಗಳು ಬಿಬ್ಬಿ ಬಾಚಯ್ಯ ಶರಣರು. ಮೊದಲು ಬ್ರಾಹ್ಮಣರಾಗಿದ್ದು ತದನಂತರ ಕಲ್ಯಾಣಕ್ಕೆ ಬಂದು ಶರಣ ಧರ್ಮ ಸ್ವೀಕಾರ ಮಾಡಿ ವಚನಕಾರರಾದವರು. ಇವರು ಮೂಲತಃ ರಾಯಚೂರು ಹತ್ತಿರದ ಗೊಬ್ಬೂರು ಗ್ರಾಮದವರು ಎಂದು ಒಮ್ಮತದ ಅಭಿಪ್ರಾಯವಿದೆ. ಇಲ್ಲಿರುವ ಅರ್ಪಣಾ ಕಟ್ಟೆ ಅದು ಈ ಶರಣರ ಸಮಾಧಿ ಎಂದು ಗುರುತಿಸುತ್ತಾರೆ. ಇವರ ತಂದೆಯ ಹೆಸರು  ಭಾಸ್ಕರ, ಇವರು ತಮ್ಮ ಹುಟ್ಟೂರು…

0 Comments

ಗಡಿಗೆಯ ತುಪ್ಪ ಹೆಡಿಗೆಯ ಮೃಷ್ಟಾನ್ನ | ಶರಣೆ ಅಕ್ಕಮ್ಮನವರ ವಚನ ವಿಶ್ಲೇಷಣೆ | ಡಾ. ಸರ್ವಮಂಗಳ ಸಕ್ರಿ, ರಾಯಚೂರು.

ಶರಣೆ ಅಕ್ಕಮ್ಮನವರು ಯಾದಗಿರಿ ಜಿಲ್ಲೆಯ ಏಲೇರಿ ಗ್ರಾಮದವರೆಂಬುದು ವಿದ್ವಾಂಸರ ಒಮ್ಮತದ ಅಭಿಪ್ರಾಯವಾಗಿದೆ. ಇದೇ ಊರಿನ ಶರಣ ಏಲೇರಿ ಕೇತಯ್ಯನವರ ಪ್ರಭಾವ ಅಕ್ಕಮ್ಮನವರ ಮೇಲೆ ಆಗಿರಬಹುದು. “ಆಚಾರವೇ ಪ್ರಾಣವಾದ ರಾಮೇಶ್ವರಲಿಂಗ” ಅಂಕಿತದಿಂದ 154 ವಚನಗಳು ಪ್ರಕಟವಾಗಿವೆ. ಅಕ್ಕಮ್ಮನ ಜೀವನ ಚರಿತ್ರೆಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲ. ಅಕ್ಕಮ್ಮನವರ ವಚನಗ ಳನ್ನು ಓದಿದರೆ ಕೃಷಿ ಕಾಯಕದ ಶರಣೆ ಆಗಿರಬೇಕೆಂದು ಊಹಿಸಬಹುದು. ಒಡೆಯರ ಕಟ್ಟಳೆಯ ಮಾಡಿಕೊಂಡು ಆಡುವ ತನಕಅಂಗಳ ಬಾಗಿಲಲ್ಲಿ ಗುಡಿಗೂರಿ ಎನಬಹುದೇ?ಒಡೆಯರಂತೆ, ಮನೆಗೊಡೆಯನಂತೆ,ಗಡಿ ತಡಿಯಲ್ಲಿ ಕಾಯಲುಂಟೆ!ಅದು ತುಡುಗುಣಿಕಾರರ ನೇಮ. ಒಡೆಯರತ್ತ ನಾವಿತ್ತ.ಗಡಿಗೆಯ ತುಪ್ಪ, ಹೆಡಿಗೆಯ ಮೃಷ್ಟಾನ್ನ,ತುಡುಗುಣಿಯಂತೆ ತಿಂಬವಂಗೆಮತ್ತೊಡೆಯರ ಕಟ್ಟಳೆಯೆ?ಇಂತೀ ಕೆಡುಕರ…

0 Comments

ನಿಜಸುಖಿ ಹಡಪದ ಅಪ್ಪಣ್ಣನವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಓದಲೇಕೋ ಲಿಂಗದ ಭೇದಾದಿಭೇದವನರಿದವಂಗೆ?ಹಾಡಲೇಕೊ ಹರನ ಕಂಡಾತಂಗೆ?ಬೇಡಿ ಕಾಡಲೇಕೊ ನೋಡುವಕಂಗಳಿಗೆ ತೃಪ್ತಿಯಾದವಂಗೆ?ನೀಡಿ ಮಾಡಲೇಕೊ ಉಡುವಾತನುಉಂಬುವಾತನು ಏಕವಾದ ಮೇಲೆ.ಮುಂದು ನೋಡುವರಾರುಂಟು ಹೇಳಾ,ಬಸವಪ್ರಿಯ ಕೂಡಲ ಚನ್ನಬಸವಣ್ಣಾ?(ಸಮಗ್ರ ವಚನ ಸಂಪುಟ: ಒಂಭತ್ತು-2021/ಪುಟ ಸಂಖ್ಯೆ-372/ವಚನ ಸಂಖ್ಯೆ-919) ಪ್ರಸ್ತುತ ಅರ್ಥಗರ್ಭಿತವಾದ ವಚನ ನಿಜ ಶರಣರಾದ ಹಡಪದ ಅಪ್ಪಣ್ಣನವರದು. ಹಡಪದರು ಎಂದರೆ ಕ್ಷೌರಿಕರು ಎಂಬ ಸಮಾನ ಪದಗಳು ಬಳಕೆಯಲ್ಲಿವೆ. ಗ್ರಾಮೀಣ ಪ್ರದೇಶಗಳಲ್ಲಿ, ಸಂಕುಚಿತ ಮನದವರಲ್ಲಿ ಹಡಪದರು ಎದುರು ಬಂದರೆ ಅಪಶಕುನವೆಂದು ತರಗುಟ್ಟುತ್ತಿದ್ದ ಕಾಲಘಟ್ಟದಲ್ಲಿ ಹಡಪದ ಅಪ್ಪಣ್ಣನವರನ್ನೇ ತಮ್ಮ ಆಪ್ತ ಕಾರ್ಯದರ್ಶಿಯನ್ನಾಗಿಸಿಕೊಂಡು ಪ್ರಾಣದಂತೆ ಅವರೊಂದಿಗೆ ಸದಾ ಒಡನಾಡಿದವರು ವಿಶ್ವಗುರು ಬಸವಣ್ಣನವರು. ವ್ಯಕ್ತಿಗೂ ಮತ್ತು ವೃತ್ತಿಗೂ ಏಕಕಾಲಕ್ಕೆ ಗೌರವ ಸಲ್ಲುವಂತಹ…

0 Comments

ವ್ಯೋಮಕಾಯ ಅಲ್ಲಮ ಪ್ರಭುದೇವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ಜಂಗಮವೆ ಹೊರಗಿರಲು ಲಿಂಗಾರ್ಚನೆ ಏವುದಯ್ಯಾ?ಪ್ರಾಣನ ಹೊರಗಿರಿಸಿ ಎಡೆಯಾಡುವ ದೇಹವುಂಟೆ?ಶರಣರು ಬಂದು ಬಾಗಿಲಲ್ಲಿ ನಿಂದಿರಲುತನ್ನ ತಾ ಮರೆದಿಪ್ಪವರ ಕಂಡಡೆನಮ್ಮ ಗುಹೇಶ್ವರ ಲಿಂಗ ಒಡೆಯ ಹಾಯ್ಕದೆ ಮಾಣ್ಬನೆ?(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-440/ವಚನ ಸಂಖ್ಯೆ-1184) ಜಂಗಮಮೂರ್ತಿಯಾದ ಅಲ್ಲಮ ಪ್ರಭುಗಳು ಜ್ಞಾನ ವೈರಾಗ್ಯದ ಎತ್ತರ ಶಿಬರ. ಇವರು ನಿಜವಾದ ಅನುಭಾವಿಗಳು. ಇವರು ಉಸುರಿದ ಅನುಭಾವದ ಒಲವಿನ ನಿಲುವಿನ ನುಡಿಗಳು ಅತ್ಯಂತ ಗಹನವಾದುದು. ತಮ್ಮ ಗುರುವಾದ ಅನಿಮಿಷಯೋಗಿಯಿಂದ ಲಿಂಗದೀಕ್ಷೆ ಪಡೆದುಕೊಂಡು ಲಿಂಗದೊಂದಿಗೆ ಅನುಸಂಧಾನಗೊಳ್ಳುತ್ತಾ ಅಲ್ಲಮ ಪ್ರಭುಗಳು ಶಿವಯೋಗಿಯಾಗಿ, ಮಹಾ ಅನುಭಾವಿಯಾಗಿ ರೂಪುಗೊಳ್ಳುತ್ತಾರೆ. ಲೋಕ ಸಂಚಾರ ಮಾಡುತ್ತಾ ದೀನ-ದುರ್ಬಲರನ್ನು ಸಂತೈಸುತ್ತಾ, ಅಜ್ಞಾನಿಗಳನ್ನು ಎಚ್ಚರಿಸುತ್ತಾ, ಸಾಧಕರಿಗೆ…

0 Comments

ವ್ಯೋಮಕಾಯ ಅಲ್ಲಮ ಪ್ರಭುದೇವರ ವಚನ ವಿಶ್ಲೇಷಣೆ | ಡಾ. ಪುಷ್ಪಾವತಿ ಶಲವಡಿಮಠ, ಹಾವೇರಿ.

ನಿರ್ಣಯವನರಿಯದ ಮನವೆ,ದುಗಡವನಾಹಾರಗೊಂಡೆಯಲ್ಲಾ.ಮಾಯಾ ಸೂತ್ರವಿದೇನೊ!ಕಂಗಳೊಳ[ಗಣ] ಕತ್ತಲೆ ತಿಳಿಯದಲ್ಲಾ!ಬೆಳಗಿನೊಳಗಣ ಶೃಂಗಾರ ಬಳಲುತ್ತಿದ್ದುದು,ಗುಹೇಶ್ವರಾ (ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-19/ವಚನ ಸಂಖ್ಯೆ-45) ಅಲ್ಲಮ ಪ್ರಭುದೇವರು “ಯೌಗಿಕ ಮಹಾಪುರುಷರು” ಹಾಗೂ ಲೋಕ ಸಂಚಾರಿಗಳು. ವಿಶ್ವದ ಉದಾತ್ತ ತತ್ವಜ್ಞಾನಿಗಳಲ್ಲಿ ಪ್ರಭುದೇವರು ಶ್ರೇಷ್ಠರಾದವರು. ಪ್ರಭುಗಳ ವೈಚಾರಿಕತೆ, ಯೌಗಿಕ ನಿಲುವು, ಆಧ್ಯಾತ್ಮದ ಔನ್ನತ್ಯಗಳು ಬೆರಗುಗೊಳಿಸುವಂತಹವು. ಲೋಕ ಸಂಚಾರಿಗಳಾಗಿ ಲೋಕದ ಅನುಭವಗಳ ಮೂಲಕ ಸತ್ಯದರ್ಶನವನ್ನು ಕಂಡುಕೊಂಡ ಸಿದ್ಧಪುರುಷರಿವರು. ಅಲ್ಲಮ ಪ್ರಭುಗಳು ವಚನಗಳ ತಾತ್ವಿಕ ಅಧ್ಯಯನ ಕೈಗೊಂಡವರಿಗೆ ತಿಳಿಯುವ ಸಂಗತಿಯೆಂದರೆ ಪ್ರಭುಗಳ ಭಾವುಕತೆಗೆ ಒಳಗಾಗದ ವೈಚಾರಿಕ ಮನಸ್ಥಿತಿಯವರು ಎಂಬುದು. ಪ್ರಭುದೇವರು ಮೃದಂಗವಾದನದಂತಹ ಕಲೆಯಲ್ಲಿ ನಿಪುಣರಾದ ಒಬ್ಬ ಕಲಾವಿದ. ಹೀಗಾಗಿ ತಮ್ಮ…

0 Comments

ಚಿಙ್ಮಯಜ್ಞಾನಿ ಚೆನ್ನಬಸವಣ್ಣನವರ ವಚನ – ನಿರ್ವಚನ | ಶ್ರೀಮತಿ. ಲಲಿತಾ ಇಬ್ರಾಹಿಂಪೂರ, ಕಲಬುರಗಿ.

ಆಕಾಶದಲ್ಲಾಡುವ ಪಟಕ್ಕಾದಡೆಯೂಮೂಲಸೂತ್ರವಿರಬೇಕು.ಕಲಿಯಾದಡೆಯೂ ಕಜ್ಜವಿಲ್ಲದೆ ಆಗದು.ಭೂಮಿಯಿಲ್ಲದೆ ಬಂಡಿ ನಡೆವುದೆ?ಅಂಗಕ್ಕೆ ಲಿಂಗವಿಲ್ಲದೆ ನಿಸ್ಸಂಗವಾಗಬಾರದು.ಕೂಡಲಚೆನ್ನಸಂಗಮದೇವರಲ್ಲಿ ಸಂಗವಿಲ್ಲದೆನಿಸ್ಸಂಗಿಯೆಂದು ನುಡಿಯಬಹುದೆ ಪ್ರಭುವೆ?(ಸಮಗ್ರ ವಚನ ಸಂಪುಟ: ಮೂರು-2021/ಪುಟ ಸಂಖ್ಯೆ-419/ವಚನ ಸಂಖ್ಯೆ-990) ಷಟ್‌ಸ್ಥಲ ಚಕ್ರವರ್ತಿಯೆಂದೇ ಪ್ರಸಿದ್ಧರಾಗಿರುವ ಮಹಾಜ್ಞಾನಿ ಚೆನ್ನಬಸವಣ್ಣನವರ ವಚನವಿದು. ಇವರು ಶರಣೆ ಅಕ್ಕನಾಗಮ್ಮನವರ ಮತ್ತು ಶರಣ ಶಿವಸ್ವಾಮಿಯವರ ಸುಪುತ್ರರು. ಬಸವಣ್ನನವರ ಸೋದರಳಿಯ. ಕೂಡಲಸಂಗಮದಲ್ಲಿ ಜನಿಸಿದ ಇವರು ಕಲ್ಯಾಣದಲ್ಲಿ ಅನುಭವ ಮಂಟಪದ ಜವಾಬ್ದಾರಿಯನ್ನು ಹೊತ್ತಿದ್ದವರು. ಕಲ್ಯಾಣ ಕ್ರಾಂತಿಯ ನಂತರ ವಚನ ಸಾಹಿತ್ಯದ ಉಳುವಿಗಾಗಿ ಹೋರಾಟ ಮಾಡಿದವರು. ಉಳುವಿಯಲ್ಲಿ ಲೀಂಗೈಕ್ಯರಾದವರು. ಕೂಡಲ ಚೆನ್ನಸಂಗಮದೇವಾ ಎನ್ನುವ ವಚನಾಂಕಿತದಿಂದ ವಚನಗಳನ್ನು ಬರೆದಿದ್ದಾರೆ. ಇಲ್ಲಿಯವರೆಗೆ 1792 ವಚನಗಳು ಲಭ್ಯವಾಗಿವೆ.   ನಿರ್ವಚನ:ಅಲ್ಲಮ ಪ್ರಭುಗಳು…

0 Comments

ಶರಣೆ ಆಮುಗೆ ರಾಯಮ್ಮ | ಡಾ. ಸರ್ವಮಂಗಳ ಸಕ್ರಿ, ರಾಯಚೂರು,

ಭಕ್ತಿ ಜ್ಞಾನ ವೈರಾಗ್ಯದಿಂದ ವಿರಕ್ತನಾಗಿನನ್ನವರು ತನ್ನವರೆಂದು ನುಡಿವ ಕುನ್ನಿಗಳವಿರಕ್ತರೆಂಬೆನೆ ಅಯ್ಯಾ?ಪಕ್ಷ ಪರಪಕ್ಷಂಗಳನರಿತುಹೇಹಂಗಳ ಜರಿಯಬಲ್ಲಡೆ ವಿರಕ್ತನೆಂಬೆನು.ತ್ರಿವಿಧವನತಿಗಳೆದು ವಿರಕ್ತನಾದ ಬಳಿಕತ್ರಿವಿಧವ ಹಿಡಿದ ಗುರುವ ಕಂಡಡೆ,ಅವನ ಅಡಿಗೆರಗಿದೆನಾದಡೆಅಘೋರ ನರಕ ತಪ್ಪದು, ಅದೇನು ಕಾರಣವೆಂದಡೆಭವಪಾಶಂಗಳ ಹರಿದು ಅವಿರಳನಾದ ಕಾರಣ,ವ್ರತಭ್ರಷ್ಟ ಲಿಂಗಬಾಹ್ಯನ ಮುಖವ ನೋಡೆನು.ಹೊನ್ನು ಹೆಣ್ಣು ಮಣ್ಣು ಹಿಡಿವರ ಕಂಡಡೆ,ಎನ್ನ ಗುರುವೆಂದು ಅಡಿಗೆರಗೆನು,ಬಸವಣ್ಣನೆ ಸಾಕ್ಷಿಯಾಗಿ ಅಮುಗೇಶ್ವರಲಿಂಗವೆ.(ಸಮಗ್ರ ವಚನ ಸಂಪುಟ: ಐದು-2021/ಪುಟ ಸಂಖ್ಯೆ-255/ವಚನ ಸಂಖ್ಯೆ-668)  ಶರಣೆ ಆಮುಗೆ ರಾಯಮ್ಮ: ಶರಣ ಅಮುಗೆ ದೇವಯ್ಯನವರ ಧರ್ಮಪತ್ನಿ ಶರಣೆ ಅಮುಗೆ ರಾಯಮ್ಮನವರು ವಿಜಯಪುರ ಜಿಲ್ಲೆಯ ಪುಳಜೆ ಎಂಬ ಗ್ರಾಮದವರು. ಇವರು ಕಂಬಳಿ ನೇಯಗೆ ಕಾಯಕದಲ್ಲಿ ತೊಡಗಿಸಿಕೊಂಡವರು. ಶರಣೆ ಅಮಗೆ ರಾಯಮ್ಮನವರ ಮೊದಲ ಹೆಸರು…

0 Comments