ಅರಿವಿನ ಪೂಜಾವಿಧಾನ | ಡಾ. ಬಸವರಾಜ ಸಾದರ, ಬೆಂಗಳೂರು.
ಕೆರೆಯ ನೀರು, ಮರದ ಪುಷ್ಪ ಧರಿಸಿದಡೇನು ಅಯ್ಯಾ,ಆಗುವುದೆ ಆಗುವುದೆ ಲಿಂಗಾರ್ಚನೆ?ನೀರೆರೆಯಲಿಕ್ಕಾತನೇನು ಬಿಸಿಲಿನಿಂದ ಬಳಲಿದನೆ?ಪುಷ್ಪದಿಂದ ಧರಿಸಲಿಕ್ಕಾತನೇನು ವಿಟರಾಜನೆ?ನಿನ್ನ ಮನವೆಂಬ ನೀರಿಂದ,ಜ್ಞಾನವೆಂಬ ಪುಷ್ಪದಿಂದ ಪೂಜಿಸಬಲ್ಲಡೆಭಕ್ತನೆಂಬೆ, ಮಹೇಶ್ವರನೆಂಬೆ ನೋಡಾ,ಕಪಿಲಸಿದ್ಧಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ನಾಲ್ಕು-2021/ಪುಟ ಸಂಖ್ಯೆ-439/ವಚನ ಸಂಖ್ಯೆ-1401) ನಮ್ಮ ಪರಂಪರಾಗತ ಪೂಜಾ ವಿಧಾನಗಳು ಬಹುತೇಕ ಬಾಹ್ಯಾಡಂಬರದ ಆಚರಣೆಗಳಾಗಿವೆ. ಇಂಥ ಪೂಜೆಗಳು ಪೂಜಿಸುವವರ ಒಳಗನ್ನು ಬೆಳಗಿಸುವುದಕ್ಕಿಂತ ಹೆಚ್ಚಾಗಿ, ನೋಡುವವರ ಕಣ್ಣುಗಳಿಗೆ ಆಕರ್ಷಕ ಮತ್ತು ವರ್ಣರಂಜಿತವಾಗಿ ಕಾಣಬೇಕೇಂಬ ಬಯಕೆಯಿಂದಲೇ ನಡೆಯುವಂಥವು. ನಮ್ಮ ಕೋಟಿ ಕೋಟಿ ದೇವಾಲಯಗಳಲ್ಲಿರುವ ಮೂರ್ತಿಗಳಿಗೆ ನಿತ್ಯವೂ ನಡೆಸಲಾಗುವ ವಿವಿಧ ಪೂಜೆ, ಅಭಿಷೇಕ ಮತ್ತು ಮಾಡುವ ಹೂವಿನ ಅಲಂಕಾರಗಳು ಇದನ್ನೇ ಸಾಕ್ಷೀಕರಿಸುತ್ತವೆ. ಇದು ಎಲ್ಲ…