ಬಸವಣ್ಣನವರ ವಚನ “ಆಯುಷ್ಯವುಂಟು, ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ” / ಪ್ರೊ. ಜಿ. ಎ. ತಿಗಡಿ.
ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ;ಆಯುಷ್ಯ ತೀರಿ ಪ್ರಳಯವು ಬಂದಡೆ ಆ ಅರ್ಥವನುಂಬುವರಿಲ್ಲಾ.ನೆಲನನಗೆದು ಮಡುಗದಿರಾ, ನೆಲ ನುಂಗಿದೊಡುಗುಳುವುದೆ?ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ!ನಿನ್ನ ಮಡದಿಗಿರಲೆಂದಡೆ, ಮಡದಿಯ ಕೃತಕ ಬೇರೆ;ನಿನ್ನ ಒಡಲು ಕೆಡೆಯಲು ಮತ್ತೊಬ್ಬನಲ್ಲಿಗೆ ಅಡಕೆದೆ ಮಾಣ್ಬಳೆ?ಹೆರರಿಗಿಕ್ಕಿ ಹೆಗ್ಗುರಿಯಾಗಬೇಡಾ,ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-26 / ವಚನ ಸಂಖ್ಯೆ-201) ನನಗೆ ಸಾಕಷ್ಟು ಆಯುಷ್ಯವಿದೆ, ಜಗತ್ತಿನ ಪ್ರಳಯವೆಂಬುದು ಸುಳ್ಳು ಎಂದು ಭಾವಿಸಿ, ಸಂಪತ್ತನ್ನು ಬಚ್ಚಿಡುವಿರಿ. ಆದರೆ ನಿಮ್ಮ ಆಯುಷ್ಯ ಮುಗಿದು ತೀರಿದ ಮೇಲೆ ಪ್ರಳಯವಾದರೆ ನೀವು ಮುಚ್ಚಿಟ್ಟ ಆ ಸಂಪತ್ತನ್ನು ಅನುಭೋಗಿಸುವವರೇ ಇಲ್ಲವಾಗುತ್ತದೆ.…





Total views : 59314