ಆ ಮಾತು ಈ ಮಾತು ಹೋ ಮಾತು / ಪ್ರೊ. ಜಿ ಎ. ತಿಗಡಿ, ಧಾರವಾಡ.

ಆ ಮಾತು, ಈ ಮಾತು, ಹೋ ಮಾತು- ಎಲ್ಲವೂ ನೆರೆದು ಹೋಯಿತ್ತಲ್ಲಾ.ಭಕ್ತಿ ನೀರಲ್ಲಿ ನೆರೆದು ಜಲವ ಕೂಡಿ ಹೋಯಿತ್ತಲ್ಲಾ.ಸಾವನ್ನಕ್ಕ [ಸರಸ] ಉಂಟೇ ಗುಹೇಶ್ವರಾ?(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-149 / ವಚನ ಸಂಖ್ಯೆ-133) ಲೌಕಿಕ ಜನರ ನಾಲಿಗೆಯ ಚಪಲದ ಮಾತುಗಳನ್ನು ಕುರಿತು ಅಲ್ಲಮರು ಈ ವಚನದಲ್ಲಿ ತುಂಬಾ ಮಾರ್ಮಿಕವಾಗಿ ವಿವರಿಸಿದ್ದಾರೆ. ಸಾಂಸಾರಿಕ ಜೀವನದಲ್ಲಾಗಲಿ ಪಾರಮಾರ್ಥಿಕ ಕ್ಷೇತ್ರದಲ್ಲಾಗಲಿ ಅನೇಕ ಜನ ಪುಂಖಾನು ಪುಂಖವಾಗಿ ಮಾತನಾಡುವುದನ್ನು ನೋಡುತ್ತೇವೆ. ನಿತ್ಯ ಜೀವನದಲ್ಲಿ ಆಡುವ ಕೆಲ ಮಾತುಗಳಿಂದ ಆಗುವ ಅನಾಹುತಗಳನ್ನೂ ಕಂಡಿದ್ದೇವೆ, ಕಾಣುತ್ತಲೇ ಇದ್ದೇವೆ. ಕಾರ್ಯಸಾಧನೆ, ಮುಖಸ್ತುತಿ, ನಿಂದನೆ, ಹೊಟ್ಟೆಕಿಚ್ಚು,…

1 Comment

ಶರಣ ಸಗರದ ಬೊಮ್ಮಣ್ಣನವರ ವಚನ ವಿಶ್ಲೇಷಣೆ / ಡಾ. ಪ್ರದೀಪಕುಮಾರ ಹೆಬ್ರಿ, ಮಂಡ್ಯ.

ಕಂಗಳ ಸೂತಕ ಹೋಯಿತ್ತು, ನಿಮ್ಮಂಗದ ದರ್ಶನದಿಂದ.ಮನದ ಸೂತಕ ಹೋಯಿತ್ತು. ನಿಮ್ಮ ನೆನಹು ವೇಧಿಸಿ,ಸಕಲಸೋಂಕಿನ ಭ್ರಾಂತು ಬಿಟ್ಟಿತ್ತು, ನಿಮ್ಮ ಹಿಂಗದ ಅರಿಕೆಯಲ್ಲಿ,ಇಂತೀ ನಾನಾವಿಧದ ಭೇದೋಪಭೇದಂಗಳೆಲ್ಲವು,ನಿಮ್ಮ ಕಾರುಣ್ಯದಲ್ಲಿಯೆ ಲಯ,ಸಗರದಬೊಮ್ಮನೊಡೆಯ ತನುಮನ ಸಂಗಮೇಶ್ವರಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1676 / ವಚನ ಸಂಖ್ಯೆ-520) ಇದು ಸಗರದ ಬೊಮ್ಮಣ್ಣ ನವರ ವಚನ. ಇವರು ಯಾದಗಿರಿ ಜಿಲ್ಲೆಯ “ಸಗರ” ಗ್ರಾಮದವರು. ಇವರ ಪತ್ನಿ ಶಿವದೇವಿ. ಶಿವನಿಲ್ಲದೆ ಅನ್ಯ ದೈವವಿಲ್ಲವೆಂಬ ವೀರ ನಿಷ್ಠೆಯವರಿವರು, “ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರ” ವಚನಾಂಕಿತದಿಂದ ಬರೆದ 92 ವಚನಗಳು ಇಲ್ಲಿಯವರೆಗೆ ಲಭ್ಯವಾಗಿವೆ. ಇವರ ಪ್ರಸ್ತುತ ಈ ವಚನದಲ್ಲಿ…

0 Comments

ಹಡಪದ ಅಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮನವರ ವಚನ ವಿಶ್ಲೇಷಣೆ / ಪ್ರೊ. ಜಿ. ಎ.ತಿಗಡಿ, ಧಾರವಾಡ.

ಮನವ ಗೆದ್ದೆಹೆನೆಂದು, ತನುವ ಕರಗಿಸಿ ಕಾಯವ ಮರುಗಿಸಿ,ನಿದ್ರೆಯ ಕೆಡಿಸಿ ವಿದ್ಯೆಯ ಕಲಿತೆಹೆನೆಂಬಬುದ್ಧಿಹೀನರಿರಾ ನೀವು ಕೇಳಿರೋ,ನಮ್ಮ ಶರಣರು ಮನವನೆಂತು ಗೆದ್ದಹರೆಂದಡೆಕಾಮ ಕ್ರೋಧವ ನೀಗಿ,ಲೋಭ ಮೋಹ ಮದ ಮತ್ಸರವ ಛೇದಿಸಿ,ಆಸೆ ರೋಷವಳಿದು, ಜಗದ ಪಾಶವ ಬಿಟ್ಟು,ಆ ಮರುಗಿಸುವ ಕಾಯವನೆಪ್ರಸಾದಕಾಯವ ಮಾಡಿ ಸಲಹಿದರು.ಕೆಡಿಸುವ ನಿದ್ರೆಯನೆ ಯೋಗಸಮಾಧಿಯ ಮಾಡಿ,ಸುಖವನೇಡಿಸಿ ಜಗವನೆ ಗೆದ್ದ ಶರಣರ ಬುದ್ಧಿಹೀನರೆತ್ತ ಬಲ್ಲರೊಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ?(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-917 / ವಚನ ಸಂಖ್ಯೆ-1242) ದೇಹವನ್ನು ದಂಡಿಸಿ ಮರುಗಿಸಿ, ನಿದ್ರಾಹೀನರಾಗಿ, ವಿದ್ಯೆ ಕಲಿತು ಮನವನ್ನು ಗೆದ್ದನೆಂಬ ಬುದ್ಧಿಹೀನರೇ, ನೀವು ಕೇಳಿರೋ! ಶರಣರು ಮನವ ಗೆಲುವ ರೀತಿಯನ್ನು. ಕಾಮ…

0 Comments

ಅಲ್ಲಮಪ್ರಭುದೇವರ ವಚನ ವಿಶ್ಲೇಷಣೆ / ಶ್ರೀ ಅಳಗುಂಡಿ ಅಂದಾನಯ್ಯ, ಬೆಳಗಾವಿ.

ಕೆಂಡದ ಗಿರಿಯ ಮೇಲೊಂದು,ಅರಗಿನ ಕಂಬವಿದ್ದಿತ್ತು ನೋಡಯ್ಯಾ.ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು.ಕಂಭ ಬೆಂದಿತ್ತು ಹಂಸೆ ಹಾರಿತ್ತು ಕೆಂಡ ಎತ್ತಲಡಗಿತ್ತು ಗುಹೇಶ್ವರಾ.(ಸಮಗ್ರ ವಚನ ಸಂಪುಟ-2 / 2021 / ಪುಟ. 186 / ವಚನ ಸಂಖ್ಯೆ. 605) ಅಲ್ಲಮಪ್ರಭುಗಳ ಬೆಡಗಿನ ನುಡಿಗಳ ಈ ವಚನವನ್ನು ಮೊದಲಿಗೆ ಸಹಜವಾಗಿ ಓದಿದಾಗ, ಅಲ್ಲಿ ಬಳಸಿರುವ ರೂಪಕದ ಭಾಷೆಯಲ್ಲಿರುವಂಥಾ ಆ ದೃಷ್ಟಾಂತದ ಪದಗಳು; ಸರ್ವೇ ಸಾಮಾನ್ಯವಾದ ಮತ್ತು ಸಿದ್ಧಮಾದರಿಯ ಹಾಗೂ ಜನಜನಿತವಾದ ಅರ್ಥವನ್ನು ನೀಡುತ್ತವೆ. ಅದುದರಿಂದ ಪ್ರತಿ ಸಾಲುಗಳು ನೀಡುವ ಚಿತ್ರಣವನ್ನು ಸುಲಭವಾಗಿ ಗ್ರಹಿಸಿಕೊಂಡು ರೂಪವಾದಂಥ ಒಂದು ಅರ್ಥವನ್ನಿಲ್ಲಿ ಸಹಜವಾಗಿ ಹೇಳಿ ಬಿಡಬಹುದೆಂದು ಖರೆ…

0 Comments

ಆಡುವಡೆ ಸದಾಚಾರಿಗಳ ಕೂಡೆ ಆಡುವುದು: ಶರಣ ಬಹುರೂಪಿ ಚೌಡಯ್ಯನವರ ವಚನ / ಡಾ. ಪ್ರದೀಪಕುಮಾರ ಹೆಬ್ರಿ, ಮಂಡ್ಯ.

ಆಡುವಡೆ ಸದಾಚಾರಿಗಳ ಕೂಡೆ ಆಡುವುದು.ನುಡಿವಡೆ ಜಂಗಮಪ್ರೇಮಿಯ ಕೂಡೆ ನುಡಿವುದು.ಮಾತಾಡುವಡೆ ಪ್ರಸಾದಿಯ ಕೂಡೆ ಮಾತನಾಡುವುದು.ಭಕ್ತಿಹೀನನ ಕಂಡಡೆ ಮನ ಮುನಿಸ ಮಾಡಿಸಾರೇಕಣ್ಣಪ್ರಿಯ ನಾಗಿನಾಥಾ(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1370 / ವಚನ ಸಂಖ್ಯೆ-131) ಇದು ಬಹುರೂಪಿ ಚೌಡಯ್ಯನವರ ವಚನ. ಇವರು ಬಹುರೂಪಿ ಕಾಯಕದ ಜನಪದ ಕಲಾವಿದರು. ರೇಕಳಿಕೆ ಗ್ರಾಮದಲ್ಲಿ ಹುಟ್ಟಿದ ಇವರ ಕಾರ್ಯಕ್ಷೇತ್ರ ಕಲ್ಯಾಣ, 'ರೇಕಣ್ಣಪ್ರಿಯ ನಾಗಿನಾಥಾ' ಇವರ ಅಂಕಿತ. ಇದು ಇವರ ದೀಕ್ಷಾಗುರು ರೇಕನಾಥ, ಜ್ಞಾನಗುರು ನಾಗಿನಾಥರ ಸಂಯುಕ್ತ ಹೆಸರಿನಿಂದ ಕೂಡಿದುದು. ಬಸವಣ್ಣನವರೆಂದರೆ ಇವರಿಗೆ ಪಂಚಪ್ರಾಣ. ಇವರ ವಚನಗಳಲ್ಲಿ ಲಿಂಗಾಂಗ ಸಾಮರಸ್ಯ, ಶರಣ ವಿಧೇಯತೆ, ಜಂಗಮ ನಿಷ್ಠೆ, ನೇರ ಹಾಗೂ ನಿಷ್ಠೂರ ಸ್ವಭಾವಗಳು ಕಂಡುಬರುತ್ತವೆ.…

0 Comments

ಬಸವಣ್ಣನವರ ವಚನ “ಆಯುಷ್ಯವುಂಟು, ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ” / ಪ್ರೊ. ಜಿ. ಎ. ತಿಗಡಿ.

ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ;ಆಯುಷ್ಯ ತೀರಿ ಪ್ರಳಯವು ಬಂದಡೆ ಆ ಅರ್ಥವನುಂಬುವರಿಲ್ಲಾ.ನೆಲನನಗೆದು ಮಡುಗದಿರಾ, ನೆಲ ನುಂಗಿದೊಡುಗುಳುವುದೆ?ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ!ನಿನ್ನ ಮಡದಿಗಿರಲೆಂದಡೆ, ಮಡದಿಯ ಕೃತಕ ಬೇರೆ;ನಿನ್ನ ಒಡಲು ಕೆಡೆಯಲು ಮತ್ತೊಬ್ಬನಲ್ಲಿಗೆ ಅಡಕೆದೆ ಮಾಣ್ಬಳೆ?ಹೆರರಿಗಿಕ್ಕಿ ಹೆಗ್ಗುರಿಯಾಗಬೇಡಾ,ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-26 / ವಚನ ಸಂಖ್ಯೆ-201) ನನಗೆ ಸಾಕಷ್ಟು ಆಯುಷ್ಯವಿದೆ, ಜಗತ್ತಿನ ಪ್ರಳಯವೆಂಬುದು ಸುಳ್ಳು ಎಂದು ಭಾವಿಸಿ, ಸಂಪತ್ತನ್ನು ಬಚ್ಚಿಡುವಿರಿ. ಆದರೆ ನಿಮ್ಮ ಆಯುಷ್ಯ ಮುಗಿದು ತೀರಿದ ಮೇಲೆ ಪ್ರಳಯವಾದರೆ ನೀವು ಮುಚ್ಚಿಟ್ಟ ಆ ಸಂಪತ್ತನ್ನು ಅನುಭೋಗಿಸುವವರೇ ಇಲ್ಲವಾಗುತ್ತದೆ.…

3 Comments

ಒಕ್ಕಲಿಗ ಮುದ್ದಣ್ಣನವರ “ದೊಡ್ಡವೆರಡು ಕಂಬದ ಮಧ್ಯದಲ್ಲಿ”ವಚನ ವಿಶ್ಲೇಷಣೆ

ದೊಡ್ಡವೆರಡು ಕಂಬದ ಮಧ್ಯದಲ್ಲಿ ಚಿಕ್ಕವೆರಡು ಕಂಬ,ಇಂತೀ ನಾಲ್ಕರ ಮಧ್ಯದ ಮನೆಗೆಅಸ್ಥಿಯ ಗಳು, ನರದ ಕಟ್ಟು, ಮಜ್ಜೆಯ ಸಾರ,ಮಾಂಸದ ಗೋಡೆ, ಚರ್ಮದ ಹೊದಿಕೆ,ಶ್ರೋಣಿತದ ಸಾರದ, ಕುಂಭದಿಂದಿಪ್ಪುದೊಂದುಚಿತ್ರದ ಮನೆ ನೋಡಯ್ಯ.ಆ ಮನೆಗೊಂಬತ್ತು ಬಾಗಿಲು,ಇಡಾ ಪಿಂಗಳವೆಂಬ ಗಾಳಿಯ ಬಾದಳ,ಮೃದು ಕಠಿಣವೆಂಬೆರಡು ಅಗುಳಿಯ ಭೇದ ನೋಡಾ,ಇತ್ತಲೆಯ ಮೇಲಿಪ್ಪ ಸುಷುಮ್ನಾನಾಳವ ಮುಟ್ಟಿ,ದಿವಾರಾತ್ರಿಯೆಂಬ ಅರುಹು ಮರೆಹಿನಉಭಯವ ಕದಕಿತ್ತು ನೋಡಯ್ಯಾ.ಮನೆ ನಷ್ಟವಾಗಿ ಹೋದಡೆಯೂಮನೆಯೊಡೆಯ ಮರಳಿ ಮತ್ತೊಂದು ಮನೆಗೆಬಪ್ಪುದು ತಪ್ಪದು ನೋಡಯ್ಯಾ.ಇಂತಪ್ಪ ಮನೆಗೆನ್ನ ಮರಳಿ ಬಾರದಂತೆ ಮಾಡಯ್ಯಾ,ಕಾಮಭೀಮ ಜೀವಧನದೊಡೆಯ ನಿಮ್ಮ ಧರ್ಮ ನಿಮ್ಮ ಧರ್ಮ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1167 / ವಚನ ಸಂಖ್ಯೆ-1731) ಈ…

4 Comments