ಬಸವಣ್ಣನವರ ವಚನ “ಶರಣ ನಿದ್ರೆಗೈದೊಡೆ ಜಪ ಕಾಣಿರೋ”ವಚನ ವಿಶ್ಲೇಷಣೆ

ಶರಣ ನಿದ್ರೆಗೈದಡೆ ಜಪ ಕಾಣಿರೊ,ಶರಣನೆದ್ದು ಕುಳಿತಡೆ ಶಿವರಾತ್ರಿ ಕಾಣಿರೊ,ಶರಣ ನಡೆದುದೆ ಪಾವನ ಕಾಣಿರೊ,ಶರಣ ನುಡಿದುದೆ ಶಿವತತ್ವ ಕಾಣಿರೊ,ಕೂಡಲಸಂಗನ ಶರಣನ ಕಾಯವೆ ಕೈಲಾಸ ಕಾಣಿರೊ!(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-78 / ವಚನ ಸಂಖ್ಯೆ-873) ಶರಣನ ಶರಣಸ್ಥಲದ ವಿವರಣೆ ಇರುವ ಈ ವಚನ ಬಸವಣ್ಣನವರ ಬೆಡಗಿನ ಹಾಗೂ ಟೀಕಿನ ವಚನಗಳಲ್ಲೊಂದು. ಈ ವಚನದಲ್ಲಿ ಶರಣ, ನಿದ್ರೆ, ಜಪ, ತಪ, ಶಿವರಾತ್ರಿ, ನಡೆದುದು, ನುಡಿದುದು ಮತ್ತು ಕಾಯ ಕೈಲಾಸ ಎನ್ನುವ ಶಬ್ದಗಳನ್ನು ಬಳಸಿದ್ದಾರೆ. ಮಾನವನಾಗಿ ಮರ್ತ್ಯಕ್ಕೆ ಆಗಮಿಸಿ‌ ಶಿವಜ್ಞಾನ ಸಂಪನ್ನನಾಗಿ ಮಹದೇವನಾಗಿ ಮಹದಲ್ಲಿ ನಿಂದವನೇ ಶರಣ. ಅರಿವನ್ನೆ…

0 Comments

ಷಣ್ಮುಖಸ್ವಾಮಿಗಳ ವಚನ “ಎನ್ನ ಸ್ಥೂಲತನುವೆಂಬ ಮನೆಯಲ್ಲಿ”ವಚನ ವಿಶ್ಲೇಷಣೆ

ಎನ್ನ ಸ್ಥೂಲತನುವೆಂಬ ಮನೆಯಲ್ಲಿಲಿಂಗವೆಂಬ ಜ್ಯೋತಿಯ ತುಂಬಿದೆನಯ್ಯ.ಎನ್ನ ಸೂಕ್ಷ್ಮತನುವೆಂಬ ಮನೆಯಲ್ಲಿಮಂತ್ರವೆಂಬ ಜ್ಯೋತಿಯ ತುಂಬಿದೆನಯ್ಯ.ಎನ್ನ ಕಾರಣ ತನುವೆಂಬ ಮನೆಯಲ್ಲಿಜ್ಞಾನವೆಂಬ ಜ್ಯೋತಿಯ ತುಂಬಿದೆನಯ್ಯ.ಎನ್ನ ಒಳಹೊರಗೆ ತುಂಬಿ ಬೆಳಗುವಜ್ಯೋತಿಯ ಬೆಳಗಿನೊಳಗೆ ಸುಳಿಯುತಿರ್ದೆನಯ್ಯ.ಅಖಂಡೇಶ್ವರಾ.(ಸಮಗ್ರ ವಚನ ಸಂಪುಟ: ಎರಡು-2016 / ಪುಟ ಸಂಖ್ಯೆ-1035 / ವಚನ ಸಂಖ್ಯೆ-237) ಬಸವೋತ್ತರ ಯುಗದ ಪ್ರಮುಖ ವಚನಕಾರರು ಶ್ರೀ ಷಣ್ಮುಖಸ್ವಾಮಿಗಳು. 17 ನೇ ಶತಮಾನದ ಅಂತ್ಯಭಾಗದಲ್ಲಿದ್ದ ಇವರ ಜೀವಿತದ ಕಾಲಘಟ್ಟ ಸುಮಾರು ಕ್ರಿ. ಶ. 1639 ರಿಂದ ಕ್ರಿ. ಶ. 1711 ಎಂದು ತಿಳಿದು ಬರುತ್ತದೆ. ಇವರು ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನವರಾದ ಇವರ ತಂದೆ ಶರಣ ಮಲ್ಲಪ್ಪ ಶೆಟ್ಟಿ…

0 Comments

ಅಲ್ಲಮರ ವಚನಗಳಲ್ಲಿ “ಲಿಂಗಾಚಾರ” / ಸುನಿತಾ ಮೂರಶಿಳ್ಳಿ, ಧಾರವಾಡ.

ಅನಾದಿ ಕಾಲದಿಂದಲೂ ಲಿಂಗವೆಂಬುದು ಮೂರ್ತರೂಪದಲ್ಲಿ ಸ್ಥಾವರಲಿಂಗವಾಗಿ ಚರಲಿಂಗವಾಗಿ ಪೂಜಿಸುತ್ತಾ ಬಂದಿದೆ. ಆದರೆ ಲಿಂಗವೆಂಬುದನ್ನು ಚೈತನ್ಯದ ಕುರುಹಾಗಿ ಸಮಷ್ಟಿಯ ಕುರುಹಾಗಿ ಇಷ್ಟಲಿಂಗವೆಂದು ಕರಸ್ಥಲಕ್ಕೆ ತಂದುಕೊಟ್ಟವರು ಬಸವಣ್ಣನವರು.  ಲಿಂಗವೇ ಬಸವ ಧರ್ಮದ ಬುನಾದಿ. ಸರ್ವಸಮಾನತೆಯ ಪಾತಳಿಯ ಮೇಲೆ ನಿಂತು ಎಲ್ಲ ಅಸಮಾನತೆಗಳನ್ನು ತೊಡೆದು ಹಾಕಿದ ಈ ಲಿಂಗದ ಪರಿಕಲ್ಪನೆ ವ್ಯಷ್ಟಿ ಹಾಗೂ ಸಮಷ್ಟಿಗಳ ವಿಕಾಸದ ಮಧ್ಯದ ಸೇತುವೆ ಆಗಿದೆ. ಅಂಗದಿಂದ ಲಿಂಗವಾಗುವ ಪಯಣವೇ ಬಯಲ ಪಯಣ, ಲಿಂಗ ಪಯಣ, ಸತ್ಯದ ಗಂತವ್ಯ. ವ್ಯಕ್ತಿಯ ಆತ್ಮೋನ್ನತಿಗಾಗಿ ತನ್ಮೂಲಕ ಜಗದ ಒಳಿತಿಗೆ ಹಾಕಿದ ನೈತಿಕ ಚೌಕಟ್ಟುಗಳೇ ಪಂಚಾಚಾರಗಳು. ಅದರಲ್ಲಿ ಲಿಂಗಾಚಾರವು ಸರ್ವಾಂಗೀಣ ಅಭಿವೃದ್ಧಿಯ…

0 Comments

ಕರಗಿ ಮಾಡಲಿಬಲ್ಲ ಒರೆದು ನೋಡಲಿಬಲ್ಲ / ಮೌನೇಶ್ವರರ ವಚನ / ಡಾ. ವೀರೇಶ ಬಡಿಗೇರ, ಹಂಪಿ.

ಕರಗಿ ಮಾಡಲಿಬಲ್ಲ ಒರೆದು ನೋಡಲಿಬಲ್ಲಪರಿಪರಿಯ ವಸ್ತು ಒಡವೆ ದೇವರಾಭರಣಜಡಿದು ಮಾಡುವ ಗುಣಮಣಿ ಚಿಂತಾಮಣಿಧರೆಗಿಳಿದ ಚೆನ್ನಬಸವಣ್ಣ, ಬಸವಣ್ಣ.(ತಿಂತಿಣಿ ಮೌನೇಶ್ವರರ ವಚನಗಳು-2016 / ಡಾ. ವೀರೇಶ ಬಡಿಗೇರ / ಪುಟ ಸಂ. 7 / ವ. ಸಂ. 14) ಕಾಸಿ ನೋಡಲಿ ಬಲ್ಲ ಕೀಸಿ ನೋಡಲಿಬಲ್ಲ. ವಿಶ್ವಕರ್ಮರ ಕುಲಕಸುಬುಗಳು ಜ್ಞಾನ ಮತ್ತು ಕೌಶಲ್ಯದ ರೂಪಗಳು. ಲೋಹವನ್ನು ಕರಗಿಸುವ, ಅರಗಿಸುವ, ಒರೆದು ನೋಡುವ, ಬಡಿದು ಬಗ್ಗಿಸುವ ಮೂಲಕ ಹಲವು ಬಗೆಯ ವಸ್ತು ಒಡವೆ, ದೇವರ ಆಭರಣಗಳನ್ನು ಸೃಜಿಸುವ, ಆಕೃತಿಗೊಳಿಸುವ ಗುಣಮಣಿಗಳು. ಬೇಡಿದ್ದನ್ನು ಕೌಶಲ್ಯಯುತವಾಗಿ ಮಾಡಿ ಕೊಡುವ ಚಿಂತಾಮಣಿಗಳು. ಅಕ್ಕಸಾಲಿಯರ ಪ್ರತಿನಿಧಿಯಾದ ಮೌನಯ್ಯನವರು…

1 Comment

ಆ ಮಾತು ಈ ಮಾತು ಹೋ ಮಾತು / ಪ್ರೊ. ಜಿ ಎ. ತಿಗಡಿ, ಧಾರವಾಡ.

ಆ ಮಾತು, ಈ ಮಾತು, ಹೋ ಮಾತು- ಎಲ್ಲವೂ ನೆರೆದು ಹೋಯಿತ್ತಲ್ಲಾ.ಭಕ್ತಿ ನೀರಲ್ಲಿ ನೆರೆದು ಜಲವ ಕೂಡಿ ಹೋಯಿತ್ತಲ್ಲಾ.ಸಾವನ್ನಕ್ಕ [ಸರಸ] ಉಂಟೇ ಗುಹೇಶ್ವರಾ?(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-149 / ವಚನ ಸಂಖ್ಯೆ-133) ಲೌಕಿಕ ಜನರ ನಾಲಿಗೆಯ ಚಪಲದ ಮಾತುಗಳನ್ನು ಕುರಿತು ಅಲ್ಲಮರು ಈ ವಚನದಲ್ಲಿ ತುಂಬಾ ಮಾರ್ಮಿಕವಾಗಿ ವಿವರಿಸಿದ್ದಾರೆ. ಸಾಂಸಾರಿಕ ಜೀವನದಲ್ಲಾಗಲಿ ಪಾರಮಾರ್ಥಿಕ ಕ್ಷೇತ್ರದಲ್ಲಾಗಲಿ ಅನೇಕ ಜನ ಪುಂಖಾನು ಪುಂಖವಾಗಿ ಮಾತನಾಡುವುದನ್ನು ನೋಡುತ್ತೇವೆ. ನಿತ್ಯ ಜೀವನದಲ್ಲಿ ಆಡುವ ಕೆಲ ಮಾತುಗಳಿಂದ ಆಗುವ ಅನಾಹುತಗಳನ್ನೂ ಕಂಡಿದ್ದೇವೆ, ಕಾಣುತ್ತಲೇ ಇದ್ದೇವೆ. ಕಾರ್ಯಸಾಧನೆ, ಮುಖಸ್ತುತಿ, ನಿಂದನೆ, ಹೊಟ್ಟೆಕಿಚ್ಚು,…

1 Comment

ಶರಣ ಸಗರದ ಬೊಮ್ಮಣ್ಣನವರ ವಚನ ವಿಶ್ಲೇಷಣೆ / ಡಾ. ಪ್ರದೀಪಕುಮಾರ ಹೆಬ್ರಿ, ಮಂಡ್ಯ.

ಕಂಗಳ ಸೂತಕ ಹೋಯಿತ್ತು, ನಿಮ್ಮಂಗದ ದರ್ಶನದಿಂದ.ಮನದ ಸೂತಕ ಹೋಯಿತ್ತು. ನಿಮ್ಮ ನೆನಹು ವೇಧಿಸಿ,ಸಕಲಸೋಂಕಿನ ಭ್ರಾಂತು ಬಿಟ್ಟಿತ್ತು, ನಿಮ್ಮ ಹಿಂಗದ ಅರಿಕೆಯಲ್ಲಿ,ಇಂತೀ ನಾನಾವಿಧದ ಭೇದೋಪಭೇದಂಗಳೆಲ್ಲವು,ನಿಮ್ಮ ಕಾರುಣ್ಯದಲ್ಲಿಯೆ ಲಯ,ಸಗರದಬೊಮ್ಮನೊಡೆಯ ತನುಮನ ಸಂಗಮೇಶ್ವರಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1676 / ವಚನ ಸಂಖ್ಯೆ-520) ಇದು ಸಗರದ ಬೊಮ್ಮಣ್ಣ ನವರ ವಚನ. ಇವರು ಯಾದಗಿರಿ ಜಿಲ್ಲೆಯ “ಸಗರ” ಗ್ರಾಮದವರು. ಇವರ ಪತ್ನಿ ಶಿವದೇವಿ. ಶಿವನಿಲ್ಲದೆ ಅನ್ಯ ದೈವವಿಲ್ಲವೆಂಬ ವೀರ ನಿಷ್ಠೆಯವರಿವರು, “ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರ” ವಚನಾಂಕಿತದಿಂದ ಬರೆದ 92 ವಚನಗಳು ಇಲ್ಲಿಯವರೆಗೆ ಲಭ್ಯವಾಗಿವೆ. ಇವರ ಪ್ರಸ್ತುತ ಈ ವಚನದಲ್ಲಿ…

0 Comments

ಹಡಪದ ಅಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮನವರ ವಚನ ವಿಶ್ಲೇಷಣೆ / ಪ್ರೊ. ಜಿ. ಎ.ತಿಗಡಿ, ಧಾರವಾಡ.

ಮನವ ಗೆದ್ದೆಹೆನೆಂದು, ತನುವ ಕರಗಿಸಿ ಕಾಯವ ಮರುಗಿಸಿ,ನಿದ್ರೆಯ ಕೆಡಿಸಿ ವಿದ್ಯೆಯ ಕಲಿತೆಹೆನೆಂಬಬುದ್ಧಿಹೀನರಿರಾ ನೀವು ಕೇಳಿರೋ,ನಮ್ಮ ಶರಣರು ಮನವನೆಂತು ಗೆದ್ದಹರೆಂದಡೆಕಾಮ ಕ್ರೋಧವ ನೀಗಿ,ಲೋಭ ಮೋಹ ಮದ ಮತ್ಸರವ ಛೇದಿಸಿ,ಆಸೆ ರೋಷವಳಿದು, ಜಗದ ಪಾಶವ ಬಿಟ್ಟು,ಆ ಮರುಗಿಸುವ ಕಾಯವನೆಪ್ರಸಾದಕಾಯವ ಮಾಡಿ ಸಲಹಿದರು.ಕೆಡಿಸುವ ನಿದ್ರೆಯನೆ ಯೋಗಸಮಾಧಿಯ ಮಾಡಿ,ಸುಖವನೇಡಿಸಿ ಜಗವನೆ ಗೆದ್ದ ಶರಣರ ಬುದ್ಧಿಹೀನರೆತ್ತ ಬಲ್ಲರೊಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ?(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-917 / ವಚನ ಸಂಖ್ಯೆ-1242) ದೇಹವನ್ನು ದಂಡಿಸಿ ಮರುಗಿಸಿ, ನಿದ್ರಾಹೀನರಾಗಿ, ವಿದ್ಯೆ ಕಲಿತು ಮನವನ್ನು ಗೆದ್ದನೆಂಬ ಬುದ್ಧಿಹೀನರೇ, ನೀವು ಕೇಳಿರೋ! ಶರಣರು ಮನವ ಗೆಲುವ ರೀತಿಯನ್ನು. ಕಾಮ…

0 Comments

ಅಲ್ಲಮಪ್ರಭುದೇವರ ವಚನ ವಿಶ್ಲೇಷಣೆ / ಶ್ರೀ ಅಳಗುಂಡಿ ಅಂದಾನಯ್ಯ, ಬೆಳಗಾವಿ.

ಕೆಂಡದ ಗಿರಿಯ ಮೇಲೊಂದು,ಅರಗಿನ ಕಂಬವಿದ್ದಿತ್ತು ನೋಡಯ್ಯಾ.ಅರಗಿನ ಕಂಬದ ಮೇಲೆ ಹಂಸೆಯಿದ್ದಿತ್ತು.ಕಂಭ ಬೆಂದಿತ್ತು ಹಂಸೆ ಹಾರಿತ್ತು ಕೆಂಡ ಎತ್ತಲಡಗಿತ್ತು ಗುಹೇಶ್ವರಾ.(ಸಮಗ್ರ ವಚನ ಸಂಪುಟ-2 / 2021 / ಪುಟ. 186 / ವಚನ ಸಂಖ್ಯೆ. 605) ಅಲ್ಲಮಪ್ರಭುಗಳ ಬೆಡಗಿನ ನುಡಿಗಳ ಈ ವಚನವನ್ನು ಮೊದಲಿಗೆ ಸಹಜವಾಗಿ ಓದಿದಾಗ, ಅಲ್ಲಿ ಬಳಸಿರುವ ರೂಪಕದ ಭಾಷೆಯಲ್ಲಿರುವಂಥಾ ಆ ದೃಷ್ಟಾಂತದ ಪದಗಳು; ಸರ್ವೇ ಸಾಮಾನ್ಯವಾದ ಮತ್ತು ಸಿದ್ಧಮಾದರಿಯ ಹಾಗೂ ಜನಜನಿತವಾದ ಅರ್ಥವನ್ನು ನೀಡುತ್ತವೆ. ಅದುದರಿಂದ ಪ್ರತಿ ಸಾಲುಗಳು ನೀಡುವ ಚಿತ್ರಣವನ್ನು ಸುಲಭವಾಗಿ ಗ್ರಹಿಸಿಕೊಂಡು ರೂಪವಾದಂಥ ಒಂದು ಅರ್ಥವನ್ನಿಲ್ಲಿ ಸಹಜವಾಗಿ ಹೇಳಿ ಬಿಡಬಹುದೆಂದು ಖರೆ…

0 Comments

ಆಡುವಡೆ ಸದಾಚಾರಿಗಳ ಕೂಡೆ ಆಡುವುದು: ಶರಣ ಬಹುರೂಪಿ ಚೌಡಯ್ಯನವರ ವಚನ / ಡಾ. ಪ್ರದೀಪಕುಮಾರ ಹೆಬ್ರಿ, ಮಂಡ್ಯ.

ಆಡುವಡೆ ಸದಾಚಾರಿಗಳ ಕೂಡೆ ಆಡುವುದು.ನುಡಿವಡೆ ಜಂಗಮಪ್ರೇಮಿಯ ಕೂಡೆ ನುಡಿವುದು.ಮಾತಾಡುವಡೆ ಪ್ರಸಾದಿಯ ಕೂಡೆ ಮಾತನಾಡುವುದು.ಭಕ್ತಿಹೀನನ ಕಂಡಡೆ ಮನ ಮುನಿಸ ಮಾಡಿಸಾರೇಕಣ್ಣಪ್ರಿಯ ನಾಗಿನಾಥಾ(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-1370 / ವಚನ ಸಂಖ್ಯೆ-131) ಇದು ಬಹುರೂಪಿ ಚೌಡಯ್ಯನವರ ವಚನ. ಇವರು ಬಹುರೂಪಿ ಕಾಯಕದ ಜನಪದ ಕಲಾವಿದರು. ರೇಕಳಿಕೆ ಗ್ರಾಮದಲ್ಲಿ ಹುಟ್ಟಿದ ಇವರ ಕಾರ್ಯಕ್ಷೇತ್ರ ಕಲ್ಯಾಣ, 'ರೇಕಣ್ಣಪ್ರಿಯ ನಾಗಿನಾಥಾ' ಇವರ ಅಂಕಿತ. ಇದು ಇವರ ದೀಕ್ಷಾಗುರು ರೇಕನಾಥ, ಜ್ಞಾನಗುರು ನಾಗಿನಾಥರ ಸಂಯುಕ್ತ ಹೆಸರಿನಿಂದ ಕೂಡಿದುದು. ಬಸವಣ್ಣನವರೆಂದರೆ ಇವರಿಗೆ ಪಂಚಪ್ರಾಣ. ಇವರ ವಚನಗಳಲ್ಲಿ ಲಿಂಗಾಂಗ ಸಾಮರಸ್ಯ, ಶರಣ ವಿಧೇಯತೆ, ಜಂಗಮ ನಿಷ್ಠೆ, ನೇರ ಹಾಗೂ ನಿಷ್ಠೂರ ಸ್ವಭಾವಗಳು ಕಂಡುಬರುತ್ತವೆ.…

0 Comments

ಬಸವಣ್ಣನವರ ವಚನ “ಆಯುಷ್ಯವುಂಟು, ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ” / ಪ್ರೊ. ಜಿ. ಎ. ತಿಗಡಿ.

ಆಯುಷ್ಯವುಂಟು ಪ್ರಳಯವಿಲ್ಲೆಂದು ಅರ್ಥವ ಮಡುಗುವಿರಿ;ಆಯುಷ್ಯ ತೀರಿ ಪ್ರಳಯವು ಬಂದಡೆ ಆ ಅರ್ಥವನುಂಬುವರಿಲ್ಲಾ.ನೆಲನನಗೆದು ಮಡುಗದಿರಾ, ನೆಲ ನುಂಗಿದೊಡುಗುಳುವುದೆ?ಕಣ್ಣಿನಲ್ಲಿ ನೋಡಿ, ಮಣ್ಣಿನಲ್ಲಿ ನೆರಹಿ, ಉಣ್ಣದೆ ಹೋಗದಿರಾ!ನಿನ್ನ ಮಡದಿಗಿರಲೆಂದಡೆ, ಮಡದಿಯ ಕೃತಕ ಬೇರೆ;ನಿನ್ನ ಒಡಲು ಕೆಡೆಯಲು ಮತ್ತೊಬ್ಬನಲ್ಲಿಗೆ ಅಡಕೆದೆ ಮಾಣ್ಬಳೆ?ಹೆರರಿಗಿಕ್ಕಿ ಹೆಗ್ಗುರಿಯಾಗಬೇಡಾ,ಕೂಡಲಸಂಗನ ಶರಣರಿಗೆ ಒಡನೆ ಸವೆಸುವುದು.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-26 / ವಚನ ಸಂಖ್ಯೆ-201) ನನಗೆ ಸಾಕಷ್ಟು ಆಯುಷ್ಯವಿದೆ, ಜಗತ್ತಿನ ಪ್ರಳಯವೆಂಬುದು ಸುಳ್ಳು ಎಂದು ಭಾವಿಸಿ, ಸಂಪತ್ತನ್ನು ಬಚ್ಚಿಡುವಿರಿ. ಆದರೆ ನಿಮ್ಮ ಆಯುಷ್ಯ ಮುಗಿದು ತೀರಿದ ಮೇಲೆ ಪ್ರಳಯವಾದರೆ ನೀವು ಮುಚ್ಚಿಟ್ಟ ಆ ಸಂಪತ್ತನ್ನು ಅನುಭೋಗಿಸುವವರೇ ಇಲ್ಲವಾಗುತ್ತದೆ.…

3 Comments