ವೀಣಾ ಬನ್ನಂಜೆಯವರೆ ಶರಣರು ವೇದ, ಶಾಸ್ತ್ರಗಳನ್ನು ತಿರಸ್ಕರಿಸಲಿಲ್ಲವೆ? / ಡಾ. ಬಸವರಾಜ ಕಡ್ಡಿ, ಜಮಖಂಡಿ.

ಇತ್ತೀಚೆಗೆ ಸಾಮಾಜಿಕ ಜಾಲತಾಣ ಯೂ-ಟ್ಯೂಬ್ ಚಾನಲ್‌ವೊಂದರಲ್ಲಿ “ಶ್ರೀಮದ್ಬಗವದ್ಗೀತೆ ಮತ್ತು ವಚನ” ಎಂಬ ವಿಷಯ ಕುರಿತು ವೀಣಾ ಬನ್ನಂಜೆ ಅವರು ಮಾತನಾಡುವಾಗ ಅಲ್ಲಮಪ್ರಭುದೇವರ ವಚನವೊಂದನ್ನು ವಿಶ್ಲೇಷಿಸಿದ ರೀತಿ ವ್ಯತಿರಿಕ್ತವಾಗಿದೆ. ಅಲ್ಲಮರ ವಚನ: ವೇದವೆಂಬುದು ಓದಿನ ಮಾತು;ಶಾಸ್ತ್ರವೆಂಬುದು ಸಂತೆಯ ಸುದ್ದಿ.ಪುರಾಣವೆಂಬುದು ಪುಂಡರ ಗೋಷ್ಠಿ.ಆಗಮವೆಂಬುದು ಅನೃತದ ನುಡಿ.ತರ್ಕವೆಂಬುದು ತಗರ ಹೋರಟೆ.ಭಕ್ತಿಯೆಂಬುದು ತೋರಿ ಉಂಬ ಲಾಭ.ಗುಹೇಶ್ವರನೆಂಬುದು ಮೀರಿದ ಘನವು(ಸಮಗ್ರ ವಚನ ಸಂಪುಟ: ಎರಡು-2021/ಪುಟ ಸಂಖ್ಯೆ-147/ವಚನ ಸಂಖ್ಯೆ-465) ಈ ವಚನ ಕುರಿತು ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಶ್ರೀಗಳು (ಅಲ್ಲಮಪ್ರಭುದೇವರ ವಚನ ನಿರ್ವಚನ ಸಂಪುಟ-2 ವಚನ ಸಂಖ್ಯೆ 464) ವಿಶ್ಲೇಷಿಸಿದ ರೀತಿ ಈ…

0 Comments

ವಚನ ದರ್ಶನ: ದುರುದ್ದೇಶ ಬಿಂಬಿಸುವ ಪುಸ್ತಕ | ಡಾ. ಶಿವಾನಂದ ಜಾಮದಾರ, ಬೆಂಗಳೂರು.

“ವಚನ ದರ್ಶನ” ಎಂಬ ಹೆಸರಿನ ಗ್ರಂಥವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಪಟಾಲಂನಿಂದ ಕಳೆದ ವರ್ಷದ ಜುಲೈ ತಿಂಗಳಿಂದ ಡಿಸೆಂಬರ್‌ವರೆಗೆ ಕರ್ನಾಟಕದ ಒಂಬತ್ತು ಸ್ಥಳಗಳಲ್ಲಿ ಮತ್ತು ದೆಹಲಿಯಲ್ಲಿ ಅಪಾರ ಖರ್ಚಿನಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. ಆ ಎಲ್ಲ ಸ್ಥಳಗಳಲ್ಲಿ ಸಂಘ ಪರಿವಾರದ ವಕ್ತಾರರು ಅತ್ಯಂತ ಪ್ರಚೋದನಕಾರಿ ಭಾಷಣಗಳನ್ನು ಮಾಡಿದರು. ಈ ಪುಸ್ತಕವು ಸಂಘ ಪರಿವಾರದ ದುರುದ್ದೇಶ ಮತ್ತು ದುರುಳತನವನ್ನು ಬಿಂಬಿಸುತ್ತದೆ. ಈ ಕೃತಿಯ ಕುರಿತಾಗಿ ಕೆಲವು ಮುಖ್ಯ ಅಂಶಗಳನ್ನು ಗಮನಿಸಬೇಕಿದೆ. ಮೊದಲನೆಯದು, “ವಚನ ದರ್ಶನ” ದ ಗೌರವ ಸಂಪಾದಕರಾಗಿರುವ ಸದಾಶಿವಾನಂದ ಸ್ವಾಮಿಗಳ ಯಾವುದೇ ಲೇಖನ, ಪ್ರಸ್ತಾವನೆ ಅಥವಾ ಮುನ್ನುಡಿ ಕೃತಿಯಲ್ಲಿ…

0 Comments

ಲಿಂಗಾಯತರ ಶಿವ ಅಂದರೆ ಯಾರು?  | ಡಾ. ವಿಜಯಕುಮಾರ ಕಮ್ಮಾರ, ತುಮಕೂರು

ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ,ಪಾತಾಳದಿಂದ ಅತ್ತತ್ತ ನಿಮ್ಮ ಶ್ರೀಚರಣ,ಬ್ರಹ್ಮಾಂಡದಿಂದವೆ ಅತ್ತತ್ತ ನಿಮ್ಮ ಶ್ರೀಮುಕುಟ,ಅಗಮ್ಯ ಅಗೋಚರ ಅಪ್ರತಿಮ ಲಿಂಗವೇ.ಕೂಡಲಸಂಗಮದೇವಯ್ಯಾ,ಎನ್ನ ಕರಸ್ಥಲಕ್ಕೆ ಬಂದು ಚುಳುಕಾದಿರಯ್ಯಾ.(ಸಮಗ್ರ ವಚನ ಸಂಪುಟ: ಒಂದು-2021/ಪುಟ ಸಂಖ್ಯೆ-202/ವಚನ ಸಂಖ್ಯೆ-744) ಲಿಂಗವನರಿಯದೆ ಏನನರಿತರೂ ಫಲವಿಲ್ಲ ಎನ್ನುವುದನ್ನು ಅರಿವಿನ ಮಾರಿತಂದೆಯವರು ತಮ್ಮ ಈ ವಚನದಲ್ಲಿ ನಿರೂಪಣೆ ಮಾಡುತ್ತಾರೆ. ಇಷ್ಟಲಿಂಗ ಪ್ರಾಣಲಿಂಗವೆಂದುಬೇರೊಂದು ಕಟ್ಟಳೆಯ ಮಾಡಬಹುದೇ ಅಯ್ಯಾ?ಬೀಜವೊಡೆದು ಮೊಳೆ ತಲೆದೋರುವಂತೆ,ಬೀಜಕ್ಕೂ ಅಂಕುರಕ್ಕೂ ಭಿನ್ನವುಂಟೆ ಅಯ್ಯಾ?ಇಷ್ಟದ ಕುರುಹಿನಲ್ಲಿ ಚಿತ್ತ ನಿಂದು ಮಿಕ್ಕ ಗುಣಂಗಳ ನರಿಯಬೇಕು.ಇದೇ ನಿಶ್ಚಯ, ಸದಾಶಿವಮೂರ್ತಿಲಿಂಗವು ತಾನಾಗಿ.(ಸಮಗ್ರ ವಚನ ಸಂಪುಟ: ಆರು-2021/ಪುಟ ಸಂಖ್ಯೆ-152/ವಚನ ಸಂಖ್ಯೆ-397) ಬಸವಾದಿ ಶಿವಶರಣರ  ಆರಾಧ್ಯದೈವ ಇಷ್ಟಲಿಂಗ. ಇದು ಅರಿವಿನ…

0 Comments

ಊಳಿಡುತ್ತಿರುವ ವಿಷಭಟ್ಟನ ಶ್ವಾನಗಳು | ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಅನುಭವ ಮಂಟಪ ಕುರಿತು ಡಾ. ಶಿವಾನಂದ ಜಾಮದಾರ ಅವರು, ಡಾ. ಬೆಲ್ದಾಳ ಶರಣರು, ಶ್ರೀ ರಂಜಾನ್ ದರ್ಗಾ ಅವರು, ಡಾ. ವಿಶ್ವಾರಾಧ್ಯ ಸತ್ಯಂಪೇಟೆ ಮುಂತಾದ ಅನೇಕ ವಚನ ಸಾಹಿತ್ಯದ ವಿದ್ವಾಂಸರುಗಳು ಸಾಕ್ಷೀ ಸಮೇತ ನಿರೂಪಿಸಿದ ಬಳಿಕವೂ ಈ ಥರಾ ಬರೆಯುವ ಅವಶ್ಯಕತೆ ಮತ್ತು ಇವರ ಉದ್ದೇಶವೇನು ಅಂತಾ ಅರ್ಥಾ ಆಗತಾ ಇಲ್ಲಾ. ಪ್ರಧಾನಿಗಳು ಹೊಸ ಸಂಸತ್ ಭವನಕ್ಕೆ ಅನುಭವ ಮಂಟಪವೇ ಮಾದರೀ ಅಂತ ಹೇಳಿದ್ದಕ್ಕೆ ಹೊಟ್ಟೆ ಉರೀನಾ ??? ಬಸವಣ್ಣ ಸಾಂಸ್ಕೃತಿಕ ನಾಯಕ ಅಂತಾ ಕರ್ನಾಟಕ ಸರ್ಕಾರ ಘೋಷಣೆ ಮಾಡಿದ್ದಕ್ಕೆ ಹೊಟ್ಟೆ ಉರೀನಾ ??? ಯಾಕೆ ಹೀಗೆ…

0 Comments

ವಚನಸಾಹಿತ್ಯ ಮಂದಾರ ಫೌಂಡೇಶನ್‌ “ಗ್ರಂಥಾಲಯ” ಕ್ಕೆ ಬಂದ ಪುಸ್ತಕಗಳ ದಾಸೋಹ.

"ವಚನಸಾಹಿತ್ಯ ಮಂದಾರ ಫೌಂಡೇಶನ್" ದ ಗ್ರಂಥಾಲಯ ಸ್ಥಾಪನೆ ಪ್ರಯುಕ್ತ ನಾಡಿನ ಹಲವಾರು ವಚನ ಸಾಹಿತ್ಯ ಪ್ರೇಮಿಗಳು, ಸಾಹಿತಿಗಳು ಹಾಗೂ ವಿದ್ವಾಂಸರುಗಳು ತಮ್ಮಲ್ಲಿರುವ ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯದ ಅತ್ಯಮೂಲ್ಯ ಗ್ರಂಥಗಳನ್ನು ದಾಸೋಹ ರೂಪದಲ್ಲಿ ಕಳುಹಿಸಿದ್ದಾರೆ. ಪ್ರಪ್ರಥಮವಾಗಿ ತಮ್ಮಲ್ಲಿರುವ ಅತ್ಯಮೂಲ್ಯ ಮತ್ತು ಅಪರೂಪದ ಪುಸ್ತಕಗಳನ್ನು ದಾಸೋಹ ಮಾಡಿದ ಧಾರವಾಡದ ಶ್ರೀ ನಟರಾಜ ಮೂರಶಿಳ್ಳಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುನಿತಾ ಮೂರಶಿಳ್ಳಿಯವರಿಗೆ ಕೃತಜ್ಞತೆಗಳು. ಇಂದಿನವರೆಗೆ ಸುಮಾರು 2,000 ಪುಸ್ತಕಗಳು ಬಂದಿವೆ. ಈಗ ವಚನಸಾಹಿತ್ಯ ಮಂದಾರ ಫೌಂಡೇಶನ್ ಗ್ರಂಥಾಲಯದಲ್ಲಿ 5,000 ಕ್ಕೂ ಹೆಚ್ಚು ಪುಸ್ತಕಗಳ ಸಂಗ್ರಹ ಆಗಿದೆ. ಈ…

0 Comments

ಅನುಭವ ಮಂಟಪ | ಶ್ರೀ. ರಂಜಾನ್ ದರ್ಗಾ, ಧಾರವಾಡ.

ಅನುಭವ ಮಂಟಪದ ನಿರ್ಮಾಣಕ್ಕೆ ಸಂಬಂಧಿಸಿದ ಶಿಫಾರಸು ಸಮಿತಿಯ ಮೊದಲ ಸಭೆಯ ಅಜೆಂಡಾದಲ್ಲಿ ಮೊದಲ ಪಾಯಿಂಟ್ "ಅನುಭವ ಮಂಟಪ ಕಾಲ್ಪನಿಕ" ಎಂದು ಸಮಿತಿಯ ಅಧ್ಯಕ್ಷರಾಗಿದ್ದ ಗೊ. ರು. ಚನ್ನಬಸಪ್ಪ ಅವರು ಬರೆದಿದ್ದರು. ನಾನು ಕೂಡಲೆ, ನೀಲಮ್ಮನವರ ವಚನವೊಂದರಲ್ಲಿ ಅನುಭವ ಮಂಟಪದ ಕುರಿತು ಹೇಳಿದ್ದನ್ನು ಹೇಳಿ ಆ ಪಾಯಿಂಟ್ ತೆಗೆಸಿದೆ. ಆ ವಚನ ಬಹಳ ದೀರ್ಘವಾಗಿದೆ. ಹಾಗಾಗಿ ಅದರ ಮೊದಲೆರಡು ಸಾಲುಗಳನ್ನು ಹಾಗೂ ಅನುಭವ ಮಂಟಪದ ಎರಡು ಸಾಲುಗಳನ್ನು ಇಲ್ಲಿ ಬರೆದಿದ್ದೇನೆ. ಆದಿಯಾಧಾರವಿಲ್ಲದಂದು, ಕಳೆಮೊಳೆದೋರದಂದು,ಕಾಮ ನಿಃಕಾಮವಿಲ್ಲದಂದು, ವೀರವಿತರಣವಿಲ್ಲದಂದು,… … … … … … … … … ……

0 Comments

ಭಾಗ-03: ಸಂಪಾದಕೀಯ – ವಚನ ದರ್ಶನ ಎನ್ನುವ ಅಪಸವ್ಯ ಹಾಗೂ ಅಧ್ವಾನ / ಡಾ. ವಿಜಯಕುಮಾರ ಕಮ್ಮಾರ, ತುಮಕೂರು.

ಅರ್ಥ ಸನ್ಯಾಸಿಯಾದಡೇನಯ್ಯಾ,ಆವಂಗದಿಂದ ಬಂದಡೂ ಕೊಳದಿರಬೇಕು.ರುಚಿ ಸನ್ಯಾಸಿಯಾದಡೇನಯ್ಯಾ,ಜಿಹ್ವೆಯ ಕೊನೆಯಲ್ಲಿ ಮಧುರವನರಿಯದಿರಬೇಕು.ಸ್ತ್ರೀ ಸನ್ಯಾಸಿಯಾದಡೇನಯ್ಯಾ,ಜಾಗ್ರ ಸ್ವಪ್ನ ಸುಷುಪ್ತಿಯಲ್ಲಿ ತಟ್ಟಿಲ್ಲದಿರಬೇಕು.ದಿಗಂಬರಿಯಾದಡೇನಯ್ಯಾ,ಮನ ಬತ್ತಲೆಯಾಗಿರಬೇಕು.ಇಂತೀ ಚತುರ್ವಿಧದ ಹೊಲಬನರಿಯದೆ ವೃಥಾ ಕೆಟ್ಟರುಕಾಣಾ ಚನ್ನಮಲ್ಲಿಕಾರ್ಜುನಾ.(ಸಮಗ್ರ ವಚನ ಸಂಪುಟ: ಒಂದು-2016 / ಪುಟ ಸಂಖ್ಯೆ-791 / ವಚನ ಸಂಖ್ಯೆ-45) ಈ ಒಂದೇ ಒಂದು ವಚನವನ್ನು ಅರ್ಥ ಮಾಡಿಕೊಂಡಿದ್ದರೆ “ವಚನ ದರ್ಶನ” ಎನ್ನುವ ಪುಸ್ತಕದ ಪ್ರಧಾನ ಸಂಪಾದಕ ಸದಾಶಿವಾನಂದ ಮತ್ತು ಸಂಪಾದಕರಾದ ಜನಮೇಜಯ ಉಮರ್ಜಿ, ನಿರಂಜನ ಪೂಜಾರ, ಚಂದ್ರಪ್ಪ ಬಾರಂಗಿ ಹಾಗೂ ಸಂತೋಷಕುಮಾರ ಅವರುಗಳು ಬೌದ್ಧಿಕ ದಿವಾಳಿಯಿಂದ ವಚನ ಸಾಹಿತ್ಯವನ್ನು ಹೀಯಾಳಿಸುವ ಮತ್ತು ವೈಷ್ಣವೀಕರಣದತ್ತ ತಿರುಚುವ ಪ್ರಯತ್ನವನ್ನು ಮಾಡುತ್ತಿರಲಿಲ್ಲ ಎನ್ನುವುದು ಸಾರಸ್ವತ…

0 Comments

891ನೇಯ ಬಸವ ಜಯಂತಿ ಪ್ರಯುಕ್ತ ಗಣಕರಂಗ (ರಿ), ಧಾರವಾಡ ಆಯೋಜಿಸಿರುವ “ಬಸವಣ್ಣ: ಕರುನಾಡಿನ ಸಾಂಸ್ಕೃತಿಕ ನಾಯಕ”ಲೇಖನ ಸ್ಪರ್ಧೆ

891ನೇಯ ಬಸವ ಜಯಂತಿ ಪ್ರಯುಕ್ತ ಗಣಕರಂಗ (ರಿ), ಧಾರವಾಡ ಆಯೋಜಿಸಿರುವ "ಬಸವಣ್ಣ: ಕರುನಾಡಿನ ಸಾಂಸ್ಕೃತಿಕ ನಾಯಕ" ಲೇಖನ ಸ್ಪರ್ಧೆಯ ಕೊನೆಯ ದಿನಾಂಕ : 10-05-2024ರ ವರೆಗೆ ವಿಸ್ತರಿಸಲಾಗಿದೆ. ಗಮನಿಸಿರಿ:ಪ್ರಥಮ : ರೂ. 10,000/-ದ್ವಿತೀಯ : ರೂ. 5,000/-ತೃತೀಯ : ರೂ. 2,500/-ಮತ್ತು ಮೆಚ್ಚುಗೆ ಬಹುಮಾನಗಳು.ನಗದು ಬಹುಮಾನಗಳ ಪ್ರಾಯೋಜಕರು: ಶ್ರೀ. ಎಸ್‌ ಎಸ್‌ ಪಾಟೀಲ, ಮಾಜಿ ಸಹಕಾರಿ ಮತ್ತು ಅರಣ್ಯ ಸಚಿವರು, ಕರ್ನಾಟಕ ಸರ್ಕಾರ, ಕಲಕೇರಿ, ಮುಂಡರಗಿ ತಾಲೂಕ, ಗದಗ ಜಿಲ್ಲೆ. “ವಚನ ಮಂದಾರ” ವೇದಿಕೆ, ತುಮಕೂರು. ದಿವಂಗತ ಶ್ರೀ ಬಿ. ಕೆ. ಮೋಹನ ಸಿಂಗ್‌ ಸ್ಮರಣಾರ್ಥ ಶ್ರೀ…

0 Comments

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ

ಮೈಸೂರು : ಬಸವಣ್ಣನವರು ಜನಸಾಮಾನ್ಯರ ಧ್ವನಿಯಾದುದರಿಂದ ವಿಶ್ವಗುರುವಾದರು ಎಂದು ನಿವೃತ ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಶಿವಮಾದಪ್ಪ ಹೇಳಿದರು. ಶರಣು ವಿಶ್ವವಚನ ಫೌಂಡೇಷನ್ ವತಿಯಿಂದ ಮೈಸೂರಿನ ಬೋಗಾದಿಯ ಶಾರದಾನಗರ ರೈಲ್ವೆ ಬಡಾವಣೆಯ ಶರಣು ಕುಟೀರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು ಬಸವಣ್ಣನವರ ತತ್ವವನ್ನು ಪಾಲನೆ ಮಾಡಿದ ಸಿದ್ಧಗಂಗೆಯ ಶ್ರೀ ಶಿವಕುಮಾರಸ್ವಾಮಿಗಳು ,ಬಸವಣ್ಣನವರ ನಾಟಕವನ್ನು ಒಂದು ಸಾವಿರಕ್ಕೂ ಹೆಚ್ಚು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರದರ್ಶನ ಮಾಡಿಸಿ ಜೊತೆಗೆ ಮಠದಲ್ಲಿ ಜಾತ್ಯಾತೀತವಾಗಿ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ೧೧೧ ವರ್ಷಗಳ ಸಾರ್ಥಕ…

1 Comment

ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ, ಜ್ಞಾನಪ್ರಸಾರದ ಮಹಾವಿದ್ಯಾಲಯ / ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ

ಸಿದ್ಧಗಂಗೆ :ಸಿದ್ಧಗಂಗಾ ಎಂಬ ಹೆಸರೇ ಮಂತ್ರಪೂರ್ಣ. ಪರಿಶುದ್ಧಾತ್ಮರ ದಿವ್ಯ ತಪಸ್ಸು, ಶ್ರದ್ಧೆ ಮತ್ತು ನಿಷ್ಠೆಗಳ ಭದ್ರ ಬುನಾದಿಯ ಮೇಲೆ ನೆಲೆಗೊಂಡಿರುವಂತಹ ಒಂದು ಪವಿತ್ರ ಕ್ಷೇತ್ರ ಎಂದು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ಡಾ. ವಚನ ಕುಮಾರಸ್ವಾಮಿ ಹೇಳಿದರು. ಶ್ರೀ ಸಿದ್ಧಗಂಗಾ ಮಠದಲ್ಲಿ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ೧೧೭ನೇ ಜಯಂತಿ ನಿಮಿತ್ತ ಮಂಡ್ಯದ ಕಾಯಕಯೋಗಿ ಫೌಂಡೇಷನ್ ಮತ್ತು ಮೈಸೂರಿನ ಶರಣು ವಿಶ್ವವಚನ ಫೌಂಡೇಷನ್ ಸಹಯೋಗದೊಂದಿಗೆ ಶ್ರೀ ಶಿವಕುಮಾರಮಹಾಶಿವಯೋಗಿಗಳವರ ಬಗ್ಗೆ ಆಯೋಜಿಸಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಆಶಯ ಭಾಷಣ ಮಾಡಿ ಮಾತನಾಡಿ "ಸಿದ್ಧಗಂಗಾ ಎನ್ನುವ ಶಬ್ದವೇ ಪವಿತ್ರವಾದುದು ಈ ಪದವನ್ನು ಕೇಳಿದ ಕೂಡಲೇ…

0 Comments